Homeಮುಖಪುಟನರೇಂದ್ರ ಮೋದಿಯಷ್ಟು ಕೆಟ್ಟವನಾಗುವ ಸಾಮಥ್ರ್ಯ ರಾಹುಲ್ ಗಾಂಧಿಗೆ ಇಲ್ಲ.

ನರೇಂದ್ರ ಮೋದಿಯಷ್ಟು ಕೆಟ್ಟವನಾಗುವ ಸಾಮಥ್ರ್ಯ ರಾಹುಲ್ ಗಾಂಧಿಗೆ ಇಲ್ಲ.

- Advertisement -
- Advertisement -

| ಎ.ಕೆ.ಸುಬ್ಬಯ್ಯ | ಹಿರಿಯ ಚಿಂತಕರು.

ನರೇಂದ್ರ ಮೋದಿಯ ವ್ಯಕ್ತಿಚಿತ್ರದ ಎದುರಾಗಿ ರಾಹುಲ್ ಗಾಂಧಿಯನ್ನು ನಿಲ್ಲಿಸೋಣ. ರಾಹುಲ್ ಗಾಂಧಿಯನ್ನು ನರೇಂದ್ರ ಮೋದಿಗಿಂತ ಕೆಟ್ಟವನು ಎಂದು ಹೇಳಲು ಸಾಧ್ಯವೇ ಇಲ್ಲ. ಅಥವಾ ನರೇಂದ್ರ ಮೋದಿ ರಾಹುಲ್ ಗಾಂಧಿಯಷ್ಟು ಒಳ್ಳೆಯವನು ಎಂದು ಹೇಳಲು ಸಾಧ್ಯವಿಲ್ಲ. ಎಷ್ಟೇ ಪ್ರಯತ್ನ ಪಟ್ಟರೂ ರಾಹುಲ್ ಗಾಂಧಿಯಿಂದ ನರೇಂದ್ರ ಮೋದಿ ಆಗಲು ಸಾಧ್ಯವಿಲ್ಲ. ನರೇಂದ್ರ ಮೋದಿಯಿಂದ ರಾಹುಲ್ ಗಾಂಧಿ ಆಗಲು ಸಾಧ್ಯವಿಲ್ಲ.

ನರೇಂದ್ರ ಮೋದಿಯ ಸ್ಥಾನದಲ್ಲಿ ರಾಹುಲ್ ಗಾಂಧಿ ಇದ್ದಿದ್ದರೆ ಗುಜರಾತ್ ಹತ್ಯಾಕಾಂಡ ನಡೆಯುತ್ತಿತ್ತೇ? ಅದರ ನಂತರ ಸಿಬಿಐ ಅನ್ನು ವಶ ಮಾಡಿಕೊಂಡು ಅದರ ಮೂಲಕ ಕ್ರಿಮಿನಲ್‍ಗಳನ್ನೆಲ್ಲಾ ಪಾರು ಮಾಡುವ ಮಟ್ಟಕ್ಕೆ ರಾಹುಲ್ ಗಾಂಧಿ ಹೋಗುತ್ತಿದ್ದರಾ? ಯಾವ ಕಾರಣದಿಂದಲೂ, ಯಾವ ದೃಷ್ಟಿಕೋನದಿಂದಲೂ ನರೇಂದ್ರ ಮೋದಿಯಷ್ಟು ದುಷ್ಟತನದಿಂದ ಕೂಡಿದ, ಕ್ರೋಧ, ಅಸೂಯೆ, ಪ್ರತಿಕಾರ ಮನೋಭಾವನೆಯಿಂದ ಕೂಡಿದ ಒಬ್ಬ ವ್ಯಕ್ತಿ ಆಗಲು ರಾಹುಲ್ ಗಾಂಧಿಗೆ ಸಾಧ್ಯವೇ ಇಲ್ಲ.

ರಾಹುಲ್ ಗಾಂಧಿ ಎಂದೊಡನೆ ಕುಟುಂಬ ರಾಜಕಾರಣ, ಅಪ್ಪು, ಪಪ್ಪು ಎಂದು ಗೇಲಿ ಮಾಡುತ್ತಾ ಆತನ ನೈತಿಕ ಬಲವನ್ನು ಕುಗ್ಗಿಸುವ ಪ್ರಯತ್ನವನ್ನು ಉದ್ದೇಶಪೂರ್ವಕವಾಗಿ ಮಾಡುತ್ತಿದ್ದಾರೆಂದುದನ್ನು ಬಿಟ್ಟರೆ, ರಾಹುಲ್ ಗಾಂಧಿ ವಿರುದ್ಧ ಗಂಭೀರ ಆರೋಪ ಮಾಡಲು ಬೇರೆನೂ ಇಲ್ಲದೇ ಇದನ್ನೇ ಪದೇ ಪದೇ ಹೇಳುತ್ತಿದ್ದಾರೆ ಎಂದರೆ ಏನು ಅರ್ಥ?


ಭ್ರಷ್ಟಾಚಾರ ವಿರೋಧಿ ನರೇಂದ್ರ ಮೋದಿ ಎಂದು ಹೇಳುತ್ತಿದ್ದಾರಲ್ಲ, ರಾಫೇಲ್ ಪ್ರಕರಣದಲ್ಲಿ ಮೋದಿ ಇಂದು ಬೆತ್ತಲಾಗಿ ಬೀದಿಯಲ್ಲಿ ನಿಂತಿದ್ದಾರಲ್ಲವೇ? ದೇಶದ ಜನ ಇದನ್ನು ಅರ್ಥ ಮಾಡಿಕೊಂಡಿದ್ದಾರಲ್ಲವೇ? ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ, ಈ ಹಿಂದೆ ಯುಪಿಎ ಸಂದರ್ಭದಲ್ಲಿ ಜೈಲಿಗೆ ಹೋದ ಹಲವರು ಹೊರಗೆ ಬಂದರು. ಅವರು ರಾಬರ್ಟ್ ವಾದ್ರಾ ಸೇರಿದಂತೆ ಯಾರ್ಯಾರ ಮೇಲೆ ಆರೋಪವನ್ನು ಮಾಡಿದರೋ ಅವರ್ಯಾರೂ ಜೈಲಿಗೆ ಹೋಗಲಿಲ್ಲ.

ಎಲ್ಲ ರಾಷ್ಟ್ರೀಯ ಪಕ್ಷಗಳೂ ದೇಶವನ್ನು ಆಳಿದ್ದಾರೆ. ಅಧಿಕಾರ ಅನುಭವಿಸಿದಂತಹ ಪಕ್ಷಗಳೇ ಇರುವುದು. ಇವರೆಲ್ಲರ ಪೈಕಿ ಇಡೀ ದೇಶ ಗುರುತಿಸುವಂತಹ ಒಬ್ಬ ರಾಷ್ಟ್ರ ನಾಯಕ ಅಂದ್ರೆ ಯಾರಿದಾರೆ? ಮೋದಿ, ಮೋದಿಯ ನಂತರ.. .. ರಾಹುಲ್ ಗಾಂಧಿ ಬಿಟ್ಟರೆ ಇನ್ಯಾರಾದರೂ ಕಣ್ಣಿಗೆ ಕಾಣುತ್ತಾರಾ? ಇದ್ದಾರೆ, ವಾಮಪಂಥೀಯರಿದಾರೆ. ಸದ್ಗುಣ ಸಂಪನ್ನರಿದಾರೆ. ಆದರೆ ಅವರು ಸಮಾಜದಲ್ಲಿ ಹೆಚ್ಚು ಚಲಾವಣೆ ಆಗುತ್ತಿಲ್ಲ. ಅವರು ಅವರನ್ನು ತಿದ್ದಿಕೊಂಡು, ಇಡೀ ಇಂಡಿಯಾದ ನೇತೃತ್ವವನ್ನು ತಮ್ಮದಾಗಿಸಿಕೊಳ್ಳುವಂತಹ ಪ್ರಯತ್ನವನ್ನೇ ಮಾಡುವುದಿಲ್ಲವಲ್ಲ. ಈ ರೀತಿ ನಾವು ತುಂಬ ಅಸಹಾಯಕರಾಗಿದ್ದೀವಿ. ಆ ದೃಷ್ಟಿಯಲ್ಲಿ ರಾಹುಲ್ ಗಾಂಧಿಯೇ ನಮಗೆ ಸ್ವೀಕಾರಾರ್ಹ.


ವ್ಯಕ್ತಿಚಿತ್ರವನ್ನು ತೆಗೆದುಕೊಂಡು ರಾಹುಲ್ ಗಾಂಧಿಯನ್ನು ಪದೇ ಪದೇ ಗೇಲಿ ಮಾಡೋದರ ಅರ್ಥ ರಾಹುಲ್ ಗಾಂಧಿ ಅಷ್ಟು ಸಣ್ಣವ ಅಂತಲ್ಲ. ರಾಹುಲ್ ಗಾಂಧಿಯನ್ನು ಸಣ್ಣದು ಮಾಡುವ ಪ್ರಯತ್ನ ಅದು. ಸಣ್ಣದು ಮಾಡುವುದರ ಹಿಂದೆ ಇರುವಂತದ್ದು ಭಯ, ರಾಹುಲ್ ಗಾಂಧಿಯ ಬಗ್ಗೆ ಇರುವ ಭಯ. ಇಷ್ಟೊಂದು ಸಣ್ಣ ವ್ಯಕ್ತಿಯ ಬಗ್ಗೆ ಭಯ ಏಕೆ? ಮೋದಿ ರಾಹುಲ್ ಗಾಂಧಿಯ ಭಜನೆ ಮಾಡದೇ ಯಾವುದಾದರೊಂದು ಭಾಷಣವನ್ನು ಅಂತ್ಯ ಮಾಡುತ್ತಾರಾ? ಒಬ್ಬ ಅಪ್ಪು, ಪಪ್ಪು, ಕೆಲಸಕ್ಕೆ ಬಾರದ ಸಣ್ಣ ವ್ಯಕ್ತಿಯ ಬಗ್ಗೆ ಯಾಕೆ ಭಯ ಪಡಬೇಕು? ಇದು ರಾಹುಲ್ ಗಾಂಧಿಯ ಬಗ್ಗೆ ಒಳಗೆ ಅಡಗಿಸಿಟ್ಟುಕೊಂಡಿರುವ ಭಯ. ಆದ್ದರಿಂದ ಇಡೀ ದೇಶದಲ್ಲಿ ನರೇಂದ್ರ ಮೋದಿಯ ವಿರುದ್ಧ ಗೆಲ್ಲಿಸಬೇಕಾದಂತಹ, ಸ್ವೀಕರಿಸಬೇಕಾದಂತಹ ಏಕೈಕ ವ್ಯಕ್ತಿ, ಎಲ್ಲ ಕೋನಗಳಿಂದ ರಾಹುಲ್ ಗಾಂಧೀ ಎಂದು ನನಗೆ ಅನಿಸುತ್ತದೆ.


ನಾನು ರಾಹುಲ್ ಗಾಂಧಿಯನ್ನು ಭಾರಿ ಪುರುಷೋತ್ತಮ ಎಂದು ಭಾವಿಸುತ್ತಿಲ್ಲ. ಮನುಷ್ಯನಲ್ಲಿ ಅಡಗಿರುವಂತಹ ಕೆಲವು ದೌರ್ಬಲ್ಯಗಳು ಅವನಲ್ಲಿಯೂ ಇವೆ. ಆದರೆ ನರೇಂದ್ರ ಮೋದಿಗೆ ಹೋಲಿಸಿದರೆ ರಾಹುಲ್ ಗಾಂಧಿ ಅಪರಂಜಿಯಾಗಿ ವಿಜೃಂಭಿಸುತ್ತಾನೆ. ಇದನ್ನು ಜನ ಆಳವಾಗಿ ಯೋಚನೆ ಮಾಡಿ, ಚಿಂತನೆ ಮಾಡಿ ಸರಿಕಂಡರೆ ಒಪ್ಪಿಕೊಳ್ಳಿ, ಇಲ್ಲವೆಂದರೆ ಬಿಟ್ಟುಬಿಡಿ. ಆದರೆ ಒಂದಂತೂ ನಿಜ, ನರೇಂದ್ರ ಮೋದಿಯಷ್ಟು ಕೆಟ್ಟವನಾಗುವ ಸಾಮಥ್ರ್ಯ ರಾಹುಲ್ ಗಾಂಧಿಗೆ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...