Homeಕರ್ನಾಟಕಸಿಎಂ ಪುತ್ರನ ಭ್ರಷ್ಟಾಚಾರದ ಬಗ್ಗೆ ನಿರಂತರ ವರದಿ ಮಾಡಿದ ಪವರ್‌ ಟಿವಿ MD ಮನೆ ಮೇಲೆ...

ಸಿಎಂ ಪುತ್ರನ ಭ್ರಷ್ಟಾಚಾರದ ಬಗ್ಗೆ ನಿರಂತರ ವರದಿ ಮಾಡಿದ ಪವರ್‌ ಟಿವಿ MD ಮನೆ ಮೇಲೆ ಪೊಲೀಸರ ದಾಳಿ!

ಪವರ್ ಟಿವಿಯ ಪ್ರಿನ್ಸಿಪಲ್ ಎಡಿಟರ್‌ ರಹಮಾನ್ ಹಾಸನ್ ಅವರನ್ನು ವಿಚಾರಣೆಗೆಂದು ಪೊಲೀಸ್ ಠಾಣೆಗೆ ಕರೆದು ಕಿರುಕುಳ ನೀಡಲಾಗುತ್ತಿದೆ. ಮುಖ್ಯಮಂತ್ರಿಗಳು ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಪವರ್‌ ಟಿವಿ ಆರೋಪಿಸಿದೆ.

- Advertisement -
- Advertisement -

ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ಭ್ರಷ್ಟಾಚಾರ ನಡೆಸಿದ್ದಾರೆಂದು ಕಳೆದ ಹಲವು ದಿನಗಳಿಂದ ಸತತ ದಾಖಲೆ ಸಹಿತ ವರದಿ ಮಾಡಿ ರಾಜ್ಯದ ಗಮನ ಸೆಳೆದಿದ್ದ ಕನ್ನಡದ ಸುದ್ದಿ ಮಾಧ್ಯಮ ಪವರ್‌ ಟಿವಿ ಮುಖ್ಯಸ್ಥರ ಮನೆ ಮೇಲೆ ಇಂದು ಪೊಲೀಸರು ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಕುಟುಂಬ ಭಾರಿ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಸಾಕ್ಷಿ ಸಮೇತ ನಿರಂತರ ಸುದ್ದಿ ಪ್ರಸಾರ ಮಾಡಿದ್ದಕ್ಕೆ ಪೊಲೀಸರಿಂದ ದಾಳಿ ಮಾಡಿಸಿ ಬೆದರಿಸುವ ಹುನ್ನಾರವಿದು ಎಂದು ಪವರ್ ಟಿವಿ ಪ್ರತಿಕ್ರಿಯಿಸಿದೆ.

“ಪವರ್‌ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿ ಅವರ ಮನೆ ಮೇಲೆ ಸಿಸಿಬಿ ಪೊಲೀಸರು ಎಂದು ಹೇಳಿಕೊಂಡು ಕೆ.ಪಿ ಅಗ್ರಹಾರದ ಪೊಲೀಸರು ದಾಳಿ ಮಾಡಿದ್ದಾರೆ. ಮೊದಲು ಕೊರಿಯರ್‌ ಬಾಯ್ ಎಂದುಕೊಂಡು ಒಬ್ಬರು ಮನೆಗೆ ಬರುತ್ತಾರೆ. ನಂತರ ಉಳಿದ ಪೊಲೀಸರು ಬಂದು ದಾಳಿ ನಡೆಸುತ್ತಾರೆ. ಯಾವುದೇ ವಾರೆಂಟ್ ಇಲ್ಲದೇ ದಾಳಿ ನಡೆಸಿದ್ದಾರೆ. ಮನೆಯವರು ವಾರೆಂಟ್ ಕೇಳಿದ ಮೇಲೆ ಕೈಬರಹದ ನೋಟಿಸ್ ನೀಡುತ್ತಾರೆ. ಮೊದಲು ಬಂದ 8 ಮಂದಿ ಪೊಲಿಸರು ಮನೆಯವರ ಮತ್ತು ಅಪಾರ್ಟ್‌ಮೆಂಟ್ ಬಳಿಯಿದ್ದವರ ಮೊಬೈಲ್ ಫೋನ್‌ಗಳನ್ನು ಕಸಿದುಕೊಂಡಿದ್ದಾರೆ. ಒಟ್ಟು 15 ಮಂದಿ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ಪವರ್‌ ಟಿವಿ ತಿಳಿಸಿದೆ.

ಅಲ್ಲದೇ ಪವರ್ ಟಿವಿಯ ಪ್ರಿನ್ಸಿಪಲ್ ಎಡಿಟರ್‌ ರಹಮಾನ್ ಹಾಸನ್ ಅವರನ್ನು ವಿಚಾರಣೆಗೆಂದು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಲಾಗಿದೆ. ವಿಚಾರಣೆ ನೆಪದಲ್ಲಿ ನಮ್ಮ ಸಿಬ್ಬಂದಿಗೆ ಕಿರುಕುಳ ನೀಡಲಾಗುತ್ತಿದೆ. ಮುಖ್ಯಮಂತ್ರಿಗಳು ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಪವರ್‌ ಟಿವಿ ಆರೋಪಿಸಿದೆ.

ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಸುದ್ದಿ ಮಾಡಿದರೆ, ಭ್ರಷ್ಟಾಚಾರ ಪ್ರಕರಣಗಳನ್ನು ಬಯಲಿಗೆಳೆದರೆ ಸರ್ಕಾರ ಈ ರೀತಿ ಪೊಲೀಸರಿಂದ ದಾಳಿ ಸೇಡು ತೀರಿಸಿಕೊಳ್ಳುವ ಮಟ್ಟಕ್ಕೆ ಇಳಿದಿದೆ. ಪವರ್ ಟಿವಿ ತಾನು ಮಾಡಿದ ಆರೋಪಗಳಿಗೆ ದಾಖಲೆ ಒದಗಿಸಿದೆ. ಇದು ಪ್ರಜಾಪ್ರಭುತ್ವವೇ? ಮಾಧ್ಯಮ ಸಂಸ್ಥೆಯ ಮೇಲಿನ ಈ ದಾಳಿಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹಲವರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇತ್ತ ಪೊಲೀಸರು ಕಂಟ್ರಾಕ್ಟರ್‌ ಚಂದ್ರಕಾಂತ್ ಎಂಬುವರು ರಾಕೇಶ್ ಶೆಟ್ಟಿ ಮೇಲೆ ಬೆದರಿಕೆ ಆರೋಪ ಹೊರಿಸಿ ‍ನೀಡಿದ್ದ ದೂರಿನ ಹಿನ್ನೆಲೆ ದಾಳಿ ಮಾಡಲಾಗಿದೆ ಎಂದಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

ಇದನ್ನೂ ಓದಿ: ಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಯಡಿಯೂರಪ್ಪ: ಸಿದ್ದರಾಮಯ್ಯ

ಪವರ್ ಟಿವಿಯ ವರದಿಯ ಆಧಾರದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದಾಖಲೆಗಳನ್ನು ಇಟ್ಟುಕೊಂಡು ಸದನದಲ್ಲಿ “ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಮಗ, ಮೊಮ್ಮಗ ಸೇರಿದಂತೆ ತನ್ನ ಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಕ್ಷಣ ರಾಜೀನಾಮೆ ನೀಡಬೇಕು. ಈ ಇಡೀ ಹಗರಣದ ಬಗ್ಗೆ ನ್ಯಾಯಾಲಯದ ನಿಗಾದಲ್ಲಿ ತನಿಖೆಗೆ ವಿಶೇಷ ತನಿಖಾದಳವನ್ನು ರಚಿಸಬೇಕು” ಎಂದು ಆಗ್ರಹಿಸಿದ್ದರು.

ಮಗ, ಮೊಮ್ಮಗ ಸೇರಿದಂತೆ ತನ್ನ ಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಕ್ಷಣ ರಾಜೀನಾಮೆ…

Posted by Siddaramaiah on Wednesday, September 23, 2020

ಇನ್ನೂ ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ಬಿ.ವೈ ವಿಜಯೇಂದ್ರ ಮತ್ತು ಮೊಮ್ಮಗ ಶಶಿಧರ ಮರಡಿಯವರ ವಿರುದ್ಧ ಸುಲಿಗೆ ಮತ್ತು ವಸೂಲಿ ದಂಧೆ ನಡೆಸಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ದೂರು ಕೂಡ ದಾಖಲಿಸಲಾಗಿದೆ.

ಜನಾಧಿಕಾರ ಸಂಘರ್ಷ ಪರಿಷತ್‌ನ ಪದಾಧಿಕಾರಿಗಳಾದ ಆದರ್ಶ್ ಆರ್ ಅಯ್ಯರ್, ಪ್ರಕಾಶ್ ಬಾಬು ಬಿ.ಕೆ, ವಿಶ್ವನಾಥ್‌ ಬಿ.ವಿಯವರು ದೂರು ನೀಡಿದ್ದು, ಪೊಲೀಸ್ ಮಹಾ ನಿರ್ದೇಶಕರು, ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೂ ಸಹ ದೂರು ನೀಡಲಾಗಿದೆ.


ಇದನ್ನೂ ಓದಿ: ಸುಲಿಗೆ, ವಸೂಲಿ ದಂಧೆ ಆರೋಪ: ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ವಿರುದ್ಧ ಕ್ರಿಮಿನಲ್ ದೂರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...