Homeಕರ್ನಾಟಕಮಂಗಳೂರಿನ ನಾಗರಿಕರಿಗೆ ಹೀಗೊಂದು ಸ್ಪರ್ಧೆ: ಸಮಸ್ಯೆ ತೋರಿಸಿ ಬಹುಮಾನ ಗೆಲ್ಲಿ!

ಮಂಗಳೂರಿನ ನಾಗರಿಕರಿಗೆ ಹೀಗೊಂದು ಸ್ಪರ್ಧೆ: ಸಮಸ್ಯೆ ತೋರಿಸಿ ಬಹುಮಾನ ಗೆಲ್ಲಿ!

- Advertisement -
- Advertisement -

ಮಂಗಳೂರಿನಲ್ಲಿರುವ ಅವ್ಯವಸ್ಥೆಯ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಾಗೂ ಅಭಿವೃದ್ಧಿಯತ್ತ ಜನಪ್ರತಿನಿಧಿಗಳ ಗಮನ ಸೆಳೆಯಲು ವಿಶೇಷವಾದ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.

ಮಂಗಳೂರಿನ ನಿವಾಸಿ, ಹೋರಾಟಗಾರ ಸುನಿಲ್ ಬಜಿಲಕೇರಿಯವರು ಈ ಸ್ಪರ್ಧೆಯನ್ನು ಆಯೋಜಿಸಿದ್ದು, ನಗರದ ಸಮಸ್ಯೆಗಳ ಕುರಿತು ವಿಡಿಯೊ ಮಾಡಿ ಕಳುಹಿಸುವಂತೆ ಕೋರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗುಂಪು ಹಾಗೂ ವೈಯಕ್ತಿಕ ವಿಭಾಗದಲ್ಲಿ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಗುಂಪು ಸ್ಪರ್ಧೆಗೆ 10,000 ರೂ. ಪ್ರಥಮ ಬಹುಮಾನ, 5,000 ರೂ. ದ್ವಿತೀಯ ಬಹುಮಾನ, ವೈಯಕ್ತಿಕ ಸ್ಪರ್ಧೆಗೆ ಮೊದಲ ಬಹುಮಾನ 5,000 ರೂ., ಎರಡನೇ ಬಹುಮಾನ 2,500 ರೂ. ನಿಗದಿ ಮಾಡಲಾಗಿದೆ.

ಏನಿದು ಸ್ಪರ್ಧೆ?

ನಿಮ್ಮ ಗಮನಕ್ಕೆ ಬರುವ ರೋಡು, ತೋಡು, ಒಳಚರಂಡಿ ಇತ್ಯಾದಿ ಯಾವುದೇ ಸಮಸ್ಯೆ ಇದ್ದರೂ ಅದನ್ನು 3 ನಿಮಿಷಗಳ ವಿಡಿಯೋ ಮಾಡಿ, ನಿಮ್ಮ ಫೇಸ್‌ಬುಕ್‌ ಅಥವಾ ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಬೇಕು.

ಇಲ್ಲಿ ನೀವು ವೈಯಕ್ತಿಕವಾಗಿ ಪೋಸ್ಟ್‌ ಹಾಕಿದರೆ, ವೈಯಕ್ತಿಕ ಸ್ಪರ್ಧೆ ಎಂದು ಪರಿಗಣಿಸಲಾಗುವುದು. ಒಂದು ಊರಿನವರು/ ಸಂಸ್ಥೆಯವರು/ ಗುಂಪಿನವರು ಭಾಗವಹಿಸಿ ಹಾಕಿದರೆ ಅದನ್ನು ಗುಂಪು ಸ್ಪರ್ಧೆ ಎಂದು ಪರಿಗಣಿಸಲಾಗುವುದು.

ನೀವು ಪೋಸ್ಟ್ ಮಾಡಿದ ಬಳಿಕ ಪೋಸ್ಟ್‌ನ ಲಿಂಕ್‌ಅನ್ನು ವಾಟ್ಸಾಪ್ ನಂಬರ್ +91 99166 91455ಕ್ಕೆ ಕಳುಹಿಸಬೇಕು. ಇದು ಮಂಗಳೂರು ಮಹಾನಗರ ಪಾಲಿಕೆಯ 60 ವಾರ್ಡ್‌‌ಗಳಿಗೆ ಮಾತ್ರ ಸೀಮಿತವಾದ ಸ್ಪರ್ಧೆ. ಯಾವುದೇ ವ್ಯಕ್ತಿ ನಿಂದನೆ, ಜಾತಿ, ಮತದ ವಿಷಯದ ಮಾತುಗಳಿದ್ದರೆ ತಿರಸ್ಕರಿಸಲಾಗುವುದು.

“ಯಾರ ಪೋಸ್ಟ್ ಗೆ ಹೆಚ್ಚು ಲೈಕ್ ಬಂದಿದೆಯೋ ಅವರಿಗೆ ಈ ಎರಡು ಪ್ರಶಸ್ತಿ ನೀಡಲಾಗುವುದು. ದಿನಾಂಕ 21-7-22 ರಿಂದ 25-7-22ರ ತನಕ ನೀವು ಪೋಸ್ಟ್ ಮಾಡಿ ಲಿಂಕ್ ಕಳಿಸಬಹುದು. ಆನಂತರ ಸ್ವೀಕರಿಸಲಾಗದು. ನೀವು ಪೋಸ್ಟ್ ಮಾಡಿದ ದಿನಾಂಕದಿಂದ ಒಂದು ವಾರಗಳ ಕಾಲದ ಲೈಕ್ಅನ್ನು ಪರಿಗಣಿಸಿ ಬಹುಮಾನ ನೀಡಲಾಗುವುದು” ಎಂದು ಸುನಿಲ್‌ ಮಾಹಿತಿ ನೀಡಿದ್ದಾರೆ.

ಹೋರಾಟಗಾರ ಸುನಿಲ್ ಬಜಿಲಕೇರಿ

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಸುನಿಲ್‌ ಬಜಿಲಕೇರಿ ಅವರು, “ಮಂಗಳೂರಿನಲ್ಲಿ ಆಗಬೇಕಿರುವ ಅಭಿವೃದ್ಧಿಗಳ ಕುರಿತು ಗಮನ ಸೆಳೆಯಲು ಈ ಸ್ಪರ್ಧೆಯನ್ನು ಆಯೋಜಿಸಿದ್ದೇನೆ. ಜನ ಜಾಗೃತಿ ಮತ್ತು ನಮ್ಮ ಊರಿನ ಅಭಿವೃದ್ಧಿ ವಿಷಯದಲ್ಲಿ ಜನ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ” ಎಂದು ತಿಳಿಸಿದರು.

“ಸ್ಪರ್ಧೆಯನ್ನು ಘೋಷಿಸಿದ ಬಳಿಕ ಕರೆಗಳು ಬರಲು ಶುರುವಾಗಿವೆ. ಇದು ಜನರಿಂದ ಜನರಿಗಾಗಿ ಜನರಿಗೋಸ್ಕರವೇ ಮಾಡಿರುವ ಸ್ಪರ್ಧೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...