Homeಕರ್ನಾಟಕಮಂಗಳೂರಿನ ನಾಗರಿಕರಿಗೆ ಹೀಗೊಂದು ಸ್ಪರ್ಧೆ: ಸಮಸ್ಯೆ ತೋರಿಸಿ ಬಹುಮಾನ ಗೆಲ್ಲಿ!

ಮಂಗಳೂರಿನ ನಾಗರಿಕರಿಗೆ ಹೀಗೊಂದು ಸ್ಪರ್ಧೆ: ಸಮಸ್ಯೆ ತೋರಿಸಿ ಬಹುಮಾನ ಗೆಲ್ಲಿ!

- Advertisement -
- Advertisement -

ಮಂಗಳೂರಿನಲ್ಲಿರುವ ಅವ್ಯವಸ್ಥೆಯ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಾಗೂ ಅಭಿವೃದ್ಧಿಯತ್ತ ಜನಪ್ರತಿನಿಧಿಗಳ ಗಮನ ಸೆಳೆಯಲು ವಿಶೇಷವಾದ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.

ಮಂಗಳೂರಿನ ನಿವಾಸಿ, ಹೋರಾಟಗಾರ ಸುನಿಲ್ ಬಜಿಲಕೇರಿಯವರು ಈ ಸ್ಪರ್ಧೆಯನ್ನು ಆಯೋಜಿಸಿದ್ದು, ನಗರದ ಸಮಸ್ಯೆಗಳ ಕುರಿತು ವಿಡಿಯೊ ಮಾಡಿ ಕಳುಹಿಸುವಂತೆ ಕೋರಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗುಂಪು ಹಾಗೂ ವೈಯಕ್ತಿಕ ವಿಭಾಗದಲ್ಲಿ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಗುಂಪು ಸ್ಪರ್ಧೆಗೆ 10,000 ರೂ. ಪ್ರಥಮ ಬಹುಮಾನ, 5,000 ರೂ. ದ್ವಿತೀಯ ಬಹುಮಾನ, ವೈಯಕ್ತಿಕ ಸ್ಪರ್ಧೆಗೆ ಮೊದಲ ಬಹುಮಾನ 5,000 ರೂ., ಎರಡನೇ ಬಹುಮಾನ 2,500 ರೂ. ನಿಗದಿ ಮಾಡಲಾಗಿದೆ.

ಏನಿದು ಸ್ಪರ್ಧೆ?

ನಿಮ್ಮ ಗಮನಕ್ಕೆ ಬರುವ ರೋಡು, ತೋಡು, ಒಳಚರಂಡಿ ಇತ್ಯಾದಿ ಯಾವುದೇ ಸಮಸ್ಯೆ ಇದ್ದರೂ ಅದನ್ನು 3 ನಿಮಿಷಗಳ ವಿಡಿಯೋ ಮಾಡಿ, ನಿಮ್ಮ ಫೇಸ್‌ಬುಕ್‌ ಅಥವಾ ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಬೇಕು.

ಇಲ್ಲಿ ನೀವು ವೈಯಕ್ತಿಕವಾಗಿ ಪೋಸ್ಟ್‌ ಹಾಕಿದರೆ, ವೈಯಕ್ತಿಕ ಸ್ಪರ್ಧೆ ಎಂದು ಪರಿಗಣಿಸಲಾಗುವುದು. ಒಂದು ಊರಿನವರು/ ಸಂಸ್ಥೆಯವರು/ ಗುಂಪಿನವರು ಭಾಗವಹಿಸಿ ಹಾಕಿದರೆ ಅದನ್ನು ಗುಂಪು ಸ್ಪರ್ಧೆ ಎಂದು ಪರಿಗಣಿಸಲಾಗುವುದು.

ನೀವು ಪೋಸ್ಟ್ ಮಾಡಿದ ಬಳಿಕ ಪೋಸ್ಟ್‌ನ ಲಿಂಕ್‌ಅನ್ನು ವಾಟ್ಸಾಪ್ ನಂಬರ್ +91 99166 91455ಕ್ಕೆ ಕಳುಹಿಸಬೇಕು. ಇದು ಮಂಗಳೂರು ಮಹಾನಗರ ಪಾಲಿಕೆಯ 60 ವಾರ್ಡ್‌‌ಗಳಿಗೆ ಮಾತ್ರ ಸೀಮಿತವಾದ ಸ್ಪರ್ಧೆ. ಯಾವುದೇ ವ್ಯಕ್ತಿ ನಿಂದನೆ, ಜಾತಿ, ಮತದ ವಿಷಯದ ಮಾತುಗಳಿದ್ದರೆ ತಿರಸ್ಕರಿಸಲಾಗುವುದು.

“ಯಾರ ಪೋಸ್ಟ್ ಗೆ ಹೆಚ್ಚು ಲೈಕ್ ಬಂದಿದೆಯೋ ಅವರಿಗೆ ಈ ಎರಡು ಪ್ರಶಸ್ತಿ ನೀಡಲಾಗುವುದು. ದಿನಾಂಕ 21-7-22 ರಿಂದ 25-7-22ರ ತನಕ ನೀವು ಪೋಸ್ಟ್ ಮಾಡಿ ಲಿಂಕ್ ಕಳಿಸಬಹುದು. ಆನಂತರ ಸ್ವೀಕರಿಸಲಾಗದು. ನೀವು ಪೋಸ್ಟ್ ಮಾಡಿದ ದಿನಾಂಕದಿಂದ ಒಂದು ವಾರಗಳ ಕಾಲದ ಲೈಕ್ಅನ್ನು ಪರಿಗಣಿಸಿ ಬಹುಮಾನ ನೀಡಲಾಗುವುದು” ಎಂದು ಸುನಿಲ್‌ ಮಾಹಿತಿ ನೀಡಿದ್ದಾರೆ.

ಹೋರಾಟಗಾರ ಸುನಿಲ್ ಬಜಿಲಕೇರಿ

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಸುನಿಲ್‌ ಬಜಿಲಕೇರಿ ಅವರು, “ಮಂಗಳೂರಿನಲ್ಲಿ ಆಗಬೇಕಿರುವ ಅಭಿವೃದ್ಧಿಗಳ ಕುರಿತು ಗಮನ ಸೆಳೆಯಲು ಈ ಸ್ಪರ್ಧೆಯನ್ನು ಆಯೋಜಿಸಿದ್ದೇನೆ. ಜನ ಜಾಗೃತಿ ಮತ್ತು ನಮ್ಮ ಊರಿನ ಅಭಿವೃದ್ಧಿ ವಿಷಯದಲ್ಲಿ ಜನ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ” ಎಂದು ತಿಳಿಸಿದರು.

“ಸ್ಪರ್ಧೆಯನ್ನು ಘೋಷಿಸಿದ ಬಳಿಕ ಕರೆಗಳು ಬರಲು ಶುರುವಾಗಿವೆ. ಇದು ಜನರಿಂದ ಜನರಿಗಾಗಿ ಜನರಿಗೋಸ್ಕರವೇ ಮಾಡಿರುವ ಸ್ಪರ್ಧೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...