Homeಮುಖಪುಟ'ಸೆಂಗೊಲ್ ಜಾಗದಲ್ಲಿ ಸಂವಿಧಾನ ಪ್ರತಿ ಇರಿಸಬೇಕು..': ಸ್ಪೀಕರ್‌ಗೆ ಪತ್ರ ಬರೆದ ಸಮಾಜವಾದಿ ಪಕ್ಷದ ಸಂಸದ

‘ಸೆಂಗೊಲ್ ಜಾಗದಲ್ಲಿ ಸಂವಿಧಾನ ಪ್ರತಿ ಇರಿಸಬೇಕು..’: ಸ್ಪೀಕರ್‌ಗೆ ಪತ್ರ ಬರೆದ ಸಮಾಜವಾದಿ ಪಕ್ಷದ ಸಂಸದ

- Advertisement -
- Advertisement -

ಲೋಕಸಭೆಯಲ್ಲಿ ಸ್ಪೀಕರ್ ಕುರ್ಚಿಯ ಪಕ್ಕದಲ್ಲಿ ಸ್ಥಾಪಿಸಲಾಗಿರುವ ‘ಸೆಂಗೊಲ್’ ಬದಲಿಗೆ ಸಂವಿಧಾನ ಪ್ರತಿ ಇರಿಸಬೇಕುಎ ಂದು ಆಗ್ರಹಿಸಿರು ಸಮಾಜವಾದಿ ಪಕ್ಷದ ಸಂಸದರು, “ಪ್ರಜಾಪ್ರಭುತ್ವದಲ್ಲಿ ಅದರ ಪ್ರಸ್ತುತತೆ” ಏನು ಎಂದು ಪ್ರಶ್ನಿಸಿದ್ದು, “ಬಿಜೆಪಿಯು ಭಾರತೀಯ ಸಂಸ್ಕೃತಿಯನ್ನು ಅಗೌರವಗೊಳಿಸುತ್ತಿದೆ” ಎಂದು ಆರೋಪಿಸಿದ್ದಾರೆ.

ಸಮಾಜವಾದಿ ಪಕ್ಷದ ಸಂಸದ ಆರ್‌ಕೆ ಚೌಧರಿ ಅವರು ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದು, ಸುಮಾರು 5 ಅಡಿ ಉದ್ದದ ಕರಕುಶಲ, ಚಿನ್ನದ ಲೇಪಿತ ರಾಜದಂಡದ ‘ಸೆಂಗೊಲ್’ ಕುರಿತು ನಡೆಯುತ್ತಿರುವ ಚರ್ಚೆ ಮತ್ತೆ ಮುನ್ನಲೆಗೆ ಬಂದಿದೆ. ಉತ್ತರ ಪ್ರದೇಶದ ಮೋಹನ್‌ಲಾಲ್‌ಗಂಜ್‌ನ ಸಂಸದರು ‘ಸೆಂಗೊಲ್’ ಜಾಗದಲ್ಲಿ ಸಂವಿಧಾನದ ಪ್ರತಿ ಬದಲಾಯಿಸಬೇಕು ಎಂದು ಹೇಳಿದ್ದಾರೆ.

“ಸಂವಿಧಾನದ ಅಂಗೀಕಾರವು ದೇಶದಲ್ಲಿ ಪ್ರಜಾಪ್ರಭುತ್ವದ ಆರಂಭವನ್ನು ಗುರುತಿಸಿದೆ ಮತ್ತು ಸಂವಿಧಾನವು ಅದರ ಸಂಕೇತವಾಗಿದೆ. ಬಿಜೆಪಿ ಸರ್ಕಾರವು ತನ್ನ ಕೊನೆಯ ಅವಧಿಯಲ್ಲಿ ಸ್ಪೀಕರ್ ಕುರ್ಚಿಯ ಪಕ್ಕದಲ್ಲಿ ‘ಸೆಂಗೊಲ್’ ಅನ್ನು ಸ್ಥಾಪಿಸಿತು. ಸೆಂಗೋಲ್ ಎಂಬುದು ತಮಿಳು ಪದವಾಗಿದೆ, ಇದರರ್ಥ ರಾಜದಂಡ; ರಾಜನ ಕಾಲದ ನಂತರ ನಾವು ಸ್ವತಂತ್ರರಾಗಿದ್ದೇವೆ ಎಂದರ್ಥ, ಪ್ರಜಾಪ್ರಭುತ್ವವನ್ನು ಉಳಿಸಲು, ‘ಸೆಂಗೊಲ್’ ಅನ್ನು ಸಂವಿಧಾನದ ಪ್ರತಿಯಿಂದ ಬದಲಾಯಿಸಬೇಕು” ಎಂದು ಅವರು ಒತ್ತಾಯಿಸಿದರು.

ಉತ್ತರ ಪ್ರದೇಶದಲ್ಲಿ 37 ಸ್ಥಾನಗಳನ್ನು ಗೆಲ್ಲುವ ಮೂಲಕ ಅಖಿಲೇಶ್ ಯಾದವ್ ನಾಯಕತ್ವದ ನಂತರ ಸಮಾಜವಾದಿ ಪಕ್ಷವು ಈ ಲೋಕಸಭೆಯಲ್ಲಿ ಮೂರನೇ ಅತಿದೊಡ್ಡ ಪಕ್ಷವಾಗಿದೆ.

ತಮ್ಮ ಪಕ್ಷದ ಸಂಸದರ ಟೀಕೆಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಯಾದವ್, “ಸೆಂಗೊಲ್ ಅನ್ನು ಸ್ಥಾಪಿಸಿದಾಗ, ಪ್ರಧಾನಿ ಅದಕ್ಕೆ ತಲೆಬಾಗಿದ್ದರು. ಆದರೆ, ಈ ಬಾರಿ ಪ್ರಮಾಣ ವಚನ ಸ್ವೀಕರಿಸುವಾಗ ಅವರು ನಮಸ್ಕರಿಸುವುದನ್ನು ಮರೆತಿದ್ದಾರೆ. ನಮ್ಮ ಸಂಸದರು ಅದನ್ನು ಪ್ರಧಾನಿಗೆ ನೆನಪಿಸಲು ಬಯಸಿದ್ದರು ಎಂಬುದನ್ನು ನಾನು ಭಾವಿಸುತ್ತೇನೆ” ಎಂದರು.

ಹಿರಿಯ ಕಾಂಗ್ರೆಸ್ ನಾಯಕ ಮತ್ತು ಸಂಸದ ಬಿ ಮಾಣಿಕಂ ಟ್ಯಾಗೋರ್ ಅವರು ‘ಸೆಂಗೊಲ್’ ಗದ್ದಲದಲ್ಲಿ ಸಮಾಜವಾದಿ ಪಕ್ಷದ ಸಂಸದರನ್ನು ಪ್ರತಿಧ್ವನಿಸಿದರು. “ಸೆಂಗೊಲ್ ರಾಜತ್ವವನ್ನು ಸಂಕೇತಿಸುತ್ತದೆ ಮತ್ತು ಸಾಮ್ರಾಜ್ಯದ ಯುಗವು ಮುಗಿದಿದೆ ಎಂದು ನಾವು ಸ್ಪಷ್ಟವಾಗಿ ಹೇಳಿದ್ದೇವೆ. ನಾವು ಜನರ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಆಚರಿಸಬೇಕು” ಎಂದು ಅವರು ಸುದ್ದಿವಾಹಿನಿಯೊಂದಕ್ಕೆ ತಿಳಿಸಿದ್ದಾರೆ.

ಚೌಧರಿ ಅವರ ಬೇಡಿಕೆಯನ್ನು ಆರ್‌ಜೆಡಿ ಸಂಸದ ಮತ್ತು ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ಮಿಸಾ ಭಾರತಿ ಸಹ ಬೆಂಬಲಿಸಿದ್ದಾರೆ. ಯಾರೇ ಬೇಡಿಕೆ ಇಟ್ಟಿದ್ದರೂ ನಾನು ಸ್ವಾಗತಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಈ ಅಧಿವೇಶನದ ಆರಂಭದಿಂದಲೂ ಪ್ರತಿಪಕ್ಷಗಳ ಸಭೆಗಳಲ್ಲಿ ಸಂವಿಧಾನ ಸಾಮಾನ್ಯ ದೃಶ್ಯವಾಗಿದೆ. ಅಧಿವೇಶನದ ಮೊದಲ ದಿನ, ಭಾರತದ ಪ್ರಮುಖ ನಾಯಕರಾದ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತು ಅಖಿಲೇಶ್ ಯಾದವ್ ಸೇರಿದಂತೆ ಇತರರು ಸಂಸತ್ತಿನ ಆವರಣದಲ್ಲಿ ಸಂವಿಧಾನದ ಪ್ರತಿಗಳನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸಿದರು. ರಾಹುಲ್ ಗಾಂಧಿ ಮತ್ತು ಅಖಿಲೇಶ್ ಯಾದವ್ ಸೇರಿದಂತೆ ಇಂಡಿಯಾ ಬಣದ ಸಂಸದರು ಪ್ರಮಾಣವಚನ ಸ್ವೀಕರಿಸುವಾಗ ಸಂವಿಧಾನದ ಪ್ರತಿಗಳನ್ನು ಸಹ ಹಿಡಿದಿದ್ದರು.

ಈ ಬೆಳವಣಿಗೆಗಳ ನಡುವೆ, ಬಿಜೆಪಿ ತನ್ನ ‘ಸೆಂಗೊಲ್’ ಆಕ್ರಮಣದ ಬಗ್ಗೆ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದೆ. “ಸಮಾಜವಾದಿ ಪಕ್ಷವು ಈ ಹಿಂದೆ ರಾಮಚರಿತಮಾನಸ್ ಮತ್ತು ಈಗ ಭಾರತೀಯ ಸಂಸ್ಕೃತಿ ಮತ್ತು ವಿಶೇಷವಾಗಿ ತಮಿಳು ಸಂಸ್ಕೃತಿಯ ಭಾಗವಾಗಿರುವ ಸೆಂಗೋಲ್ ಮೇಲೆ ದಾಳಿ ಮತ್ತು ನಿಂದನೆ ಮಾಡಿದೆ. ಅವರು ಈ ‘ಸೆಂಗೊಲ್’ ಅವಮಾನವನ್ನು ಬೆಂಬಲಿಸಿದರೆ ಡಿಎಂಕೆ ಸ್ಪಷ್ಟಪಡಿಸಬೇಕು” ಎಂದು ಅವರು ಹೇಳಿದರು.

ಕಳೆದ ವರ್ಷ ಲೋಕಸಭೆಯಲ್ಲಿ ‘ಸೆಂಗೊಲ್ ಸ್ಥಾಪನೆಯ ಸಂದರ್ಭದಲ್ಲಿ, ಗೃಹ ಸಚಿವ ಅಮಿತ್ ಶಾ ಇದು ನಮ್ಮ ಸಂಸ್ಕೃತಿ ಸಂಪ್ರದಾಯಗಳನ್ನು ನಮ್ಮ ಆಧುನಿಕತೆಯೊಂದಿಗೆ ಜೋಡಿಸುವ ಪ್ರಯತ್ನ ಎಂದು ಹೇಳಿದ್ದರು. “ಆಡಳಿತವು ಕಾನೂನಿನ ನಿಯಮದಿಂದ ನಡೆಯಬೇಕೆಂದು ನಾವು ಬಯಸುತ್ತೇವೆ ಮತ್ತು ಇದು ಯಾವಾಗಲೂ ಅದನ್ನು ನಮಗೆ ನೆನಪಿಸುತ್ತದೆ” ಎಂದು ಅವರು ಹೇಳಿದರು.

ಇದನ್ನೂ ಓದಿ; ಭಾರತದಲ್ಲಿ ಮತಾಂತರ ವಿರೋಧಿ ಕಾನೂನು, ಅಲ್ಪಸಂಖ್ಯಾತರ ವಿರುದ್ಧ ದ್ವೇಷ ಭಾಷಣ ಹೆಚ್ಚಳ: ಯುಎಸ್ ವಿದೇಶಾಂಗ ಕಾರ್ಯದರ್ಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. OUR Parliament is not of one state or of region. Its respectable interiors must always display the entire Nation related natiomal subjects. OUR CONSTITUTION MUST BE IN THE PLACE OF PAST HISTORICAL MOMENTO/ RELIC.

LEAVE A REPLY

Please enter your comment!
Please enter your name here

- Advertisment -

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...