Homeಮುಖಪುಟ'ಸೆಂಗೊಲ್ ಜಾಗದಲ್ಲಿ ಸಂವಿಧಾನ ಪ್ರತಿ ಇರಿಸಬೇಕು..': ಸ್ಪೀಕರ್‌ಗೆ ಪತ್ರ ಬರೆದ ಸಮಾಜವಾದಿ ಪಕ್ಷದ ಸಂಸದ

‘ಸೆಂಗೊಲ್ ಜಾಗದಲ್ಲಿ ಸಂವಿಧಾನ ಪ್ರತಿ ಇರಿಸಬೇಕು..’: ಸ್ಪೀಕರ್‌ಗೆ ಪತ್ರ ಬರೆದ ಸಮಾಜವಾದಿ ಪಕ್ಷದ ಸಂಸದ

- Advertisement -
- Advertisement -

ಲೋಕಸಭೆಯಲ್ಲಿ ಸ್ಪೀಕರ್ ಕುರ್ಚಿಯ ಪಕ್ಕದಲ್ಲಿ ಸ್ಥಾಪಿಸಲಾಗಿರುವ ‘ಸೆಂಗೊಲ್’ ಬದಲಿಗೆ ಸಂವಿಧಾನ ಪ್ರತಿ ಇರಿಸಬೇಕುಎ ಂದು ಆಗ್ರಹಿಸಿರು ಸಮಾಜವಾದಿ ಪಕ್ಷದ ಸಂಸದರು, “ಪ್ರಜಾಪ್ರಭುತ್ವದಲ್ಲಿ ಅದರ ಪ್ರಸ್ತುತತೆ” ಏನು ಎಂದು ಪ್ರಶ್ನಿಸಿದ್ದು, “ಬಿಜೆಪಿಯು ಭಾರತೀಯ ಸಂಸ್ಕೃತಿಯನ್ನು ಅಗೌರವಗೊಳಿಸುತ್ತಿದೆ” ಎಂದು ಆರೋಪಿಸಿದ್ದಾರೆ.

ಸಮಾಜವಾದಿ ಪಕ್ಷದ ಸಂಸದ ಆರ್‌ಕೆ ಚೌಧರಿ ಅವರು ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದು, ಸುಮಾರು 5 ಅಡಿ ಉದ್ದದ ಕರಕುಶಲ, ಚಿನ್ನದ ಲೇಪಿತ ರಾಜದಂಡದ ‘ಸೆಂಗೊಲ್’ ಕುರಿತು ನಡೆಯುತ್ತಿರುವ ಚರ್ಚೆ ಮತ್ತೆ ಮುನ್ನಲೆಗೆ ಬಂದಿದೆ. ಉತ್ತರ ಪ್ರದೇಶದ ಮೋಹನ್‌ಲಾಲ್‌ಗಂಜ್‌ನ ಸಂಸದರು ‘ಸೆಂಗೊಲ್’ ಜಾಗದಲ್ಲಿ ಸಂವಿಧಾನದ ಪ್ರತಿ ಬದಲಾಯಿಸಬೇಕು ಎಂದು ಹೇಳಿದ್ದಾರೆ.

“ಸಂವಿಧಾನದ ಅಂಗೀಕಾರವು ದೇಶದಲ್ಲಿ ಪ್ರಜಾಪ್ರಭುತ್ವದ ಆರಂಭವನ್ನು ಗುರುತಿಸಿದೆ ಮತ್ತು ಸಂವಿಧಾನವು ಅದರ ಸಂಕೇತವಾಗಿದೆ. ಬಿಜೆಪಿ ಸರ್ಕಾರವು ತನ್ನ ಕೊನೆಯ ಅವಧಿಯಲ್ಲಿ ಸ್ಪೀಕರ್ ಕುರ್ಚಿಯ ಪಕ್ಕದಲ್ಲಿ ‘ಸೆಂಗೊಲ್’ ಅನ್ನು ಸ್ಥಾಪಿಸಿತು. ಸೆಂಗೋಲ್ ಎಂಬುದು ತಮಿಳು ಪದವಾಗಿದೆ, ಇದರರ್ಥ ರಾಜದಂಡ; ರಾಜನ ಕಾಲದ ನಂತರ ನಾವು ಸ್ವತಂತ್ರರಾಗಿದ್ದೇವೆ ಎಂದರ್ಥ, ಪ್ರಜಾಪ್ರಭುತ್ವವನ್ನು ಉಳಿಸಲು, ‘ಸೆಂಗೊಲ್’ ಅನ್ನು ಸಂವಿಧಾನದ ಪ್ರತಿಯಿಂದ ಬದಲಾಯಿಸಬೇಕು” ಎಂದು ಅವರು ಒತ್ತಾಯಿಸಿದರು.

ಉತ್ತರ ಪ್ರದೇಶದಲ್ಲಿ 37 ಸ್ಥಾನಗಳನ್ನು ಗೆಲ್ಲುವ ಮೂಲಕ ಅಖಿಲೇಶ್ ಯಾದವ್ ನಾಯಕತ್ವದ ನಂತರ ಸಮಾಜವಾದಿ ಪಕ್ಷವು ಈ ಲೋಕಸಭೆಯಲ್ಲಿ ಮೂರನೇ ಅತಿದೊಡ್ಡ ಪಕ್ಷವಾಗಿದೆ.

ತಮ್ಮ ಪಕ್ಷದ ಸಂಸದರ ಟೀಕೆಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಯಾದವ್, “ಸೆಂಗೊಲ್ ಅನ್ನು ಸ್ಥಾಪಿಸಿದಾಗ, ಪ್ರಧಾನಿ ಅದಕ್ಕೆ ತಲೆಬಾಗಿದ್ದರು. ಆದರೆ, ಈ ಬಾರಿ ಪ್ರಮಾಣ ವಚನ ಸ್ವೀಕರಿಸುವಾಗ ಅವರು ನಮಸ್ಕರಿಸುವುದನ್ನು ಮರೆತಿದ್ದಾರೆ. ನಮ್ಮ ಸಂಸದರು ಅದನ್ನು ಪ್ರಧಾನಿಗೆ ನೆನಪಿಸಲು ಬಯಸಿದ್ದರು ಎಂಬುದನ್ನು ನಾನು ಭಾವಿಸುತ್ತೇನೆ” ಎಂದರು.

ಹಿರಿಯ ಕಾಂಗ್ರೆಸ್ ನಾಯಕ ಮತ್ತು ಸಂಸದ ಬಿ ಮಾಣಿಕಂ ಟ್ಯಾಗೋರ್ ಅವರು ‘ಸೆಂಗೊಲ್’ ಗದ್ದಲದಲ್ಲಿ ಸಮಾಜವಾದಿ ಪಕ್ಷದ ಸಂಸದರನ್ನು ಪ್ರತಿಧ್ವನಿಸಿದರು. “ಸೆಂಗೊಲ್ ರಾಜತ್ವವನ್ನು ಸಂಕೇತಿಸುತ್ತದೆ ಮತ್ತು ಸಾಮ್ರಾಜ್ಯದ ಯುಗವು ಮುಗಿದಿದೆ ಎಂದು ನಾವು ಸ್ಪಷ್ಟವಾಗಿ ಹೇಳಿದ್ದೇವೆ. ನಾವು ಜನರ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಆಚರಿಸಬೇಕು” ಎಂದು ಅವರು ಸುದ್ದಿವಾಹಿನಿಯೊಂದಕ್ಕೆ ತಿಳಿಸಿದ್ದಾರೆ.

ಚೌಧರಿ ಅವರ ಬೇಡಿಕೆಯನ್ನು ಆರ್‌ಜೆಡಿ ಸಂಸದ ಮತ್ತು ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ಮಿಸಾ ಭಾರತಿ ಸಹ ಬೆಂಬಲಿಸಿದ್ದಾರೆ. ಯಾರೇ ಬೇಡಿಕೆ ಇಟ್ಟಿದ್ದರೂ ನಾನು ಸ್ವಾಗತಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಈ ಅಧಿವೇಶನದ ಆರಂಭದಿಂದಲೂ ಪ್ರತಿಪಕ್ಷಗಳ ಸಭೆಗಳಲ್ಲಿ ಸಂವಿಧಾನ ಸಾಮಾನ್ಯ ದೃಶ್ಯವಾಗಿದೆ. ಅಧಿವೇಶನದ ಮೊದಲ ದಿನ, ಭಾರತದ ಪ್ರಮುಖ ನಾಯಕರಾದ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತು ಅಖಿಲೇಶ್ ಯಾದವ್ ಸೇರಿದಂತೆ ಇತರರು ಸಂಸತ್ತಿನ ಆವರಣದಲ್ಲಿ ಸಂವಿಧಾನದ ಪ್ರತಿಗಳನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸಿದರು. ರಾಹುಲ್ ಗಾಂಧಿ ಮತ್ತು ಅಖಿಲೇಶ್ ಯಾದವ್ ಸೇರಿದಂತೆ ಇಂಡಿಯಾ ಬಣದ ಸಂಸದರು ಪ್ರಮಾಣವಚನ ಸ್ವೀಕರಿಸುವಾಗ ಸಂವಿಧಾನದ ಪ್ರತಿಗಳನ್ನು ಸಹ ಹಿಡಿದಿದ್ದರು.

ಈ ಬೆಳವಣಿಗೆಗಳ ನಡುವೆ, ಬಿಜೆಪಿ ತನ್ನ ‘ಸೆಂಗೊಲ್’ ಆಕ್ರಮಣದ ಬಗ್ಗೆ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದೆ. “ಸಮಾಜವಾದಿ ಪಕ್ಷವು ಈ ಹಿಂದೆ ರಾಮಚರಿತಮಾನಸ್ ಮತ್ತು ಈಗ ಭಾರತೀಯ ಸಂಸ್ಕೃತಿ ಮತ್ತು ವಿಶೇಷವಾಗಿ ತಮಿಳು ಸಂಸ್ಕೃತಿಯ ಭಾಗವಾಗಿರುವ ಸೆಂಗೋಲ್ ಮೇಲೆ ದಾಳಿ ಮತ್ತು ನಿಂದನೆ ಮಾಡಿದೆ. ಅವರು ಈ ‘ಸೆಂಗೊಲ್’ ಅವಮಾನವನ್ನು ಬೆಂಬಲಿಸಿದರೆ ಡಿಎಂಕೆ ಸ್ಪಷ್ಟಪಡಿಸಬೇಕು” ಎಂದು ಅವರು ಹೇಳಿದರು.

ಕಳೆದ ವರ್ಷ ಲೋಕಸಭೆಯಲ್ಲಿ ‘ಸೆಂಗೊಲ್ ಸ್ಥಾಪನೆಯ ಸಂದರ್ಭದಲ್ಲಿ, ಗೃಹ ಸಚಿವ ಅಮಿತ್ ಶಾ ಇದು ನಮ್ಮ ಸಂಸ್ಕೃತಿ ಸಂಪ್ರದಾಯಗಳನ್ನು ನಮ್ಮ ಆಧುನಿಕತೆಯೊಂದಿಗೆ ಜೋಡಿಸುವ ಪ್ರಯತ್ನ ಎಂದು ಹೇಳಿದ್ದರು. “ಆಡಳಿತವು ಕಾನೂನಿನ ನಿಯಮದಿಂದ ನಡೆಯಬೇಕೆಂದು ನಾವು ಬಯಸುತ್ತೇವೆ ಮತ್ತು ಇದು ಯಾವಾಗಲೂ ಅದನ್ನು ನಮಗೆ ನೆನಪಿಸುತ್ತದೆ” ಎಂದು ಅವರು ಹೇಳಿದರು.

ಇದನ್ನೂ ಓದಿ; ಭಾರತದಲ್ಲಿ ಮತಾಂತರ ವಿರೋಧಿ ಕಾನೂನು, ಅಲ್ಪಸಂಖ್ಯಾತರ ವಿರುದ್ಧ ದ್ವೇಷ ಭಾಷಣ ಹೆಚ್ಚಳ: ಯುಎಸ್ ವಿದೇಶಾಂಗ ಕಾರ್ಯದರ್ಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. OUR Parliament is not of one state or of region. Its respectable interiors must always display the entire Nation related natiomal subjects. OUR CONSTITUTION MUST BE IN THE PLACE OF PAST HISTORICAL MOMENTO/ RELIC.

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...