Homeಮುಖಪುಟನಾಪತ್ತೆಯಾಗಿದ್ದ ಕೊರೊನಾ ರೋಗಿ 8 ದಿನಗಳ ನಂತರ ಆಸ್ಪತ್ರೆ ಶೌಚಾಲಯದಲ್ಲಿ ಶವವಾಗಿ ಪತ್ತೆ!

ನಾಪತ್ತೆಯಾಗಿದ್ದ ಕೊರೊನಾ ರೋಗಿ 8 ದಿನಗಳ ನಂತರ ಆಸ್ಪತ್ರೆ ಶೌಚಾಲಯದಲ್ಲಿ ಶವವಾಗಿ ಪತ್ತೆ!

- Advertisement -
- Advertisement -

ಮುಂಬೈಯ ಜಲ್ಗಾಂವ್ ಆಸ್ಪತ್ರೆಯಲ್ಲಿ ಕಾಣೆಯಾಗಿದ್ದ ಕೊರೊನಾ ರೋಗಿಯೊಬ್ಬರು ಆಸ್ಪತ್ರೆಯ ಶೌಚಾಲಯದಲ್ಲಿ 8 ದಿನಗಳ ನಂತರ ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರು ಸಂಬಂಧಪಟ್ಟ ಸಿಬ್ಬಂದಿಗಳ ವಿರುದ್ಧ ‘ನಿರ್ಲಕ್ಷ್ಯ’ಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಘಟನೆಯು ಸರ್ಕಾರಿ ಆಸ್ಪತ್ರೆಗಳಲ್ಲಿರುವ ಅವ್ಯವಸ್ಥೆಯ ಬಗ್ಗೆ ಬೆಳಕು ಚೆಲ್ಲಿದೆ.

ಮೃತಪಟ್ಟ 82 ವರ್ಷದ ಮಹಿಳೆ ಹಾಗೂ ಅವರ ಸೊಸೆಗೆ ಕೊರೊನಾ ಸೋಂಕು ತಗುಲಿದ್ದರಿಂದ ಜಲ್ಗಾಂವ್ ಜಿಲ್ಲಾ ಸಿವಿಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯು ಮಹಿಳೆ ನಾಪತ್ತೆಯಾಗಿದ್ದಾರೆ ಎಂದು ಪ್ರಕಟಿಸಿದ ಎಂಟು ದಿನಗಳ ನಂತರ ಶವ ಶೌಚಾಲಯದೊಳಗೆ ಪತ್ತೆಯಾಗಿದೆ.

ಭೂಸಾವಲ್‌ನಲ್ಲಿ ವಾಸಿಸುತ್ತಿದ್ದ ಮಹಿಳೆ, ಅವರ ಮಗ ಹಾಗೂ ಸೊಸೆಗೆ ಮೇ ಕೊನೆಯ ವಾರದಲ್ಲಿ ವೈರಸ್ ಇರುವುದು ಪತ್ತಯಾಗಿತ್ತು. ಮಹಿಳೆ ಮತ್ತು ಸೊಸೆ ಜಲ್ಗಾಂವ್ ಸಿವಿಲ್ ಆಸ್ಪತ್ರೆಗೆ ಹೋಗಿದ್ದರೂ, ಐಸಿಯು ಹಾಸಿಗೆಗೆ ಕಾಯುತ್ತಾ ಮೇ 31 ರಂದು ಉಸಿರಾಟದ ಸಮಸ್ಯೆಯಾಗಿ ಸೊಸೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ಮಹಿಳೆಯ ಮೊಮ್ಮಗ, ಐಸಿಯು ಹಾಸಿಗೆ ಲಭ್ಯವಿಲ್ಲದ ಕಾರಣ ಅವರು ಆಸ್ಪತ್ರೆಯ ರಿಸೆಪ್ಷನ್ ನಲ್ಲಿ ಆರು ಗಂಟೆಗಳ ಕಾಲ ಕಾಯಬೇಕಾಗಿ ಬಂದಿತ್ತು ಎಂದು ಆರೋಪಿಸಿದ್ದಾರೆ.

ಇದಕ್ಕಿಂತಲೂ ಅಘಾತಕಾರಿಯಾದುದ್ದು ಎಂದರೆ ಮಯಸ್ಸಾದ ಮಹಿಳೆಯೂ ಶೌಚಾಲಯದಲ್ಲಿ ಮೃತಪಟ್ಟಿದ್ದರೂ ಸಹ ಎಂದು ಜೂನ್ 10 ರವರೆಗೆ ಆಸ್ಪತ್ರೆಯ ಸಿಬ್ಬಂದಿ ತಿಳಿದಿರಲೇ ಇಲ್ಲ ಎಂಬುದಾಗಿದೆ.

ಸಿವಿಲ್ ಆಸ್ಪತ್ರೆಯ ಹಿರಿಯ ಅಧಿಕಾರಿಯೊಬ್ಬರು, ಕೊರೊನಾ ರೋಗಿಗಳೊಂದಿಗೆ ವ್ಯವಹರಿಸಲು ಅರೆವೈದ್ಯಕೀಯ ಸಿಬ್ಬಂದಿ ಹೆದರುತ್ತಾರೆ. “ಕೊರೊನಾ ರೋಗಿಗಳಿಗೆ ಸೇವೆ ಸಲ್ಲಿಸಲು ಹಿಂಜರಿಯುತ್ತಿರುವುದರಿಂದ ವೈದ್ಯಕೀಯ ಸಿಬ್ಬಂದಿಯೊಂದಿಗೆ ವಾಗ್ವಾದಗಳು ನಡೆದಿವೆ” ಎಂದು ಹೇಳಿದ್ದಾರೆ.

ಕೆಳಮಹಡಿಯಲ್ಲಿ ಕೇವಲ ಐದು ಶೌಚಾಲಯಗಳಿವೆ ಎಂದಿರುವ ಜಿಲ್ಲಾಧಿಕಾರಿ ಧಾಕಾನೆ, “ಇದರರ್ಥ ಆಸ್ಪತ್ರೆಯಿಂದ ಯಾರೂ ಎಂಟು ದಿನಗಳವರೆಗೆ ಶೌಚಾಲಯವನ್ನು ಸ್ವಚ್ಛಗೊಳಿಸಲು ಹೋಗಲಿಲ್ಲ. ಒಳಗಿನಿಂದ ಬರುವ ದುರ್ವಾಸನೆ ಬರುತ್ತಿರುವುದರಿಂದ ಇತರ ರೋಗಿಗಳು ಅಧಿಕಾರಿಗಳನ್ನು ಕರೆಸಿದರು” ಎಂದು ಅವರು ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಯ ಡೀನ್ ಡಾ ಬಿ ಎಸ್ ಖೈರ್ ಅವರನ್ನು ಬುಧವಾರ ತಡರಾತ್ರಿ ಅಮಾನತುಗೊಳಿಸಲಾಗಿದೆ.

ಗುರುವಾರ, ಐಪಿಸಿಯ ಸೆಕ್ಷನ್ 304 (ಎ) ಮತ್ತು 188 ಅಡಿಯಲ್ಲಿ ಸಂಬಂಧಪಟ್ಟ ವೈದ್ಯರು, ದಾದಿಯರು, ವಾರ್ಡ್ ಬಾಯ್ಸ್, ಸ್ವೀಪರ್ಗಳು ಮತ್ತು ಇತರ ಸಿಬ್ಬಂದಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

“ಜೂನ್ 1 ರಿಂದ 10 ರವರೆಗೆ ವಾರ್ಡ್ 7 ರಲ್ಲಿ ನಿಯೋಜಿಸಲ್ಪಟ್ಟ ವೈದ್ಯರು, ದಾದಿಯರು ಮತ್ತು ಇತರ ಸಿಬ್ಬಂದಿಯ ಪಾತ್ರವನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ” ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್, 82 ವರ್ಷದ ಮಹಿಳೆಯ ಸಾವಿಗೆ ಕಾರಣರಾದ ಜನರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

“ನಾವು ಈ ಘಟನೆಯ ಬಗ್ಗೆ ಗಂಭೀರವಾದ ಕ್ರಮ ತೆಗೆದುಕೊಳ್ಳುತ್ತೇವೆ. ಈ ಕ್ರಿಮಿನಲ್ ಅಪರಾಧಕ್ಕಾಗಿ ಈಗಾಗಲೇ ಕೆಲವು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ” ಎಂದು ಸಚಿವರು ಹೇಳಿದ್ದಾರೆ.


ಓದಿ: ಮುಗಿಬಿದ್ದು ಬಸ್‌ ಹತ್ತುವ ಜನರ ಈ ವಿಡಿಯೋ ಮುಂಬೈದಲ್ಲ, ಪಶ್ಚಿಮ ಬಂಗಾಳದ್ದು: ಫ್ಯಾಕ್ಟ್‌ಚೆಕ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...