Homeಮುಖಪುಟನಾಪತ್ತೆಯಾಗಿದ್ದ ಕೊರೊನಾ ರೋಗಿ 8 ದಿನಗಳ ನಂತರ ಆಸ್ಪತ್ರೆ ಶೌಚಾಲಯದಲ್ಲಿ ಶವವಾಗಿ ಪತ್ತೆ!

ನಾಪತ್ತೆಯಾಗಿದ್ದ ಕೊರೊನಾ ರೋಗಿ 8 ದಿನಗಳ ನಂತರ ಆಸ್ಪತ್ರೆ ಶೌಚಾಲಯದಲ್ಲಿ ಶವವಾಗಿ ಪತ್ತೆ!

- Advertisement -
- Advertisement -

ಮುಂಬೈಯ ಜಲ್ಗಾಂವ್ ಆಸ್ಪತ್ರೆಯಲ್ಲಿ ಕಾಣೆಯಾಗಿದ್ದ ಕೊರೊನಾ ರೋಗಿಯೊಬ್ಬರು ಆಸ್ಪತ್ರೆಯ ಶೌಚಾಲಯದಲ್ಲಿ 8 ದಿನಗಳ ನಂತರ ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರು ಸಂಬಂಧಪಟ್ಟ ಸಿಬ್ಬಂದಿಗಳ ವಿರುದ್ಧ ‘ನಿರ್ಲಕ್ಷ್ಯ’ಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಘಟನೆಯು ಸರ್ಕಾರಿ ಆಸ್ಪತ್ರೆಗಳಲ್ಲಿರುವ ಅವ್ಯವಸ್ಥೆಯ ಬಗ್ಗೆ ಬೆಳಕು ಚೆಲ್ಲಿದೆ.

ಮೃತಪಟ್ಟ 82 ವರ್ಷದ ಮಹಿಳೆ ಹಾಗೂ ಅವರ ಸೊಸೆಗೆ ಕೊರೊನಾ ಸೋಂಕು ತಗುಲಿದ್ದರಿಂದ ಜಲ್ಗಾಂವ್ ಜಿಲ್ಲಾ ಸಿವಿಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯು ಮಹಿಳೆ ನಾಪತ್ತೆಯಾಗಿದ್ದಾರೆ ಎಂದು ಪ್ರಕಟಿಸಿದ ಎಂಟು ದಿನಗಳ ನಂತರ ಶವ ಶೌಚಾಲಯದೊಳಗೆ ಪತ್ತೆಯಾಗಿದೆ.

ಭೂಸಾವಲ್‌ನಲ್ಲಿ ವಾಸಿಸುತ್ತಿದ್ದ ಮಹಿಳೆ, ಅವರ ಮಗ ಹಾಗೂ ಸೊಸೆಗೆ ಮೇ ಕೊನೆಯ ವಾರದಲ್ಲಿ ವೈರಸ್ ಇರುವುದು ಪತ್ತಯಾಗಿತ್ತು. ಮಹಿಳೆ ಮತ್ತು ಸೊಸೆ ಜಲ್ಗಾಂವ್ ಸಿವಿಲ್ ಆಸ್ಪತ್ರೆಗೆ ಹೋಗಿದ್ದರೂ, ಐಸಿಯು ಹಾಸಿಗೆಗೆ ಕಾಯುತ್ತಾ ಮೇ 31 ರಂದು ಉಸಿರಾಟದ ಸಮಸ್ಯೆಯಾಗಿ ಸೊಸೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ಮಹಿಳೆಯ ಮೊಮ್ಮಗ, ಐಸಿಯು ಹಾಸಿಗೆ ಲಭ್ಯವಿಲ್ಲದ ಕಾರಣ ಅವರು ಆಸ್ಪತ್ರೆಯ ರಿಸೆಪ್ಷನ್ ನಲ್ಲಿ ಆರು ಗಂಟೆಗಳ ಕಾಲ ಕಾಯಬೇಕಾಗಿ ಬಂದಿತ್ತು ಎಂದು ಆರೋಪಿಸಿದ್ದಾರೆ.

ಇದಕ್ಕಿಂತಲೂ ಅಘಾತಕಾರಿಯಾದುದ್ದು ಎಂದರೆ ಮಯಸ್ಸಾದ ಮಹಿಳೆಯೂ ಶೌಚಾಲಯದಲ್ಲಿ ಮೃತಪಟ್ಟಿದ್ದರೂ ಸಹ ಎಂದು ಜೂನ್ 10 ರವರೆಗೆ ಆಸ್ಪತ್ರೆಯ ಸಿಬ್ಬಂದಿ ತಿಳಿದಿರಲೇ ಇಲ್ಲ ಎಂಬುದಾಗಿದೆ.

ಸಿವಿಲ್ ಆಸ್ಪತ್ರೆಯ ಹಿರಿಯ ಅಧಿಕಾರಿಯೊಬ್ಬರು, ಕೊರೊನಾ ರೋಗಿಗಳೊಂದಿಗೆ ವ್ಯವಹರಿಸಲು ಅರೆವೈದ್ಯಕೀಯ ಸಿಬ್ಬಂದಿ ಹೆದರುತ್ತಾರೆ. “ಕೊರೊನಾ ರೋಗಿಗಳಿಗೆ ಸೇವೆ ಸಲ್ಲಿಸಲು ಹಿಂಜರಿಯುತ್ತಿರುವುದರಿಂದ ವೈದ್ಯಕೀಯ ಸಿಬ್ಬಂದಿಯೊಂದಿಗೆ ವಾಗ್ವಾದಗಳು ನಡೆದಿವೆ” ಎಂದು ಹೇಳಿದ್ದಾರೆ.

ಕೆಳಮಹಡಿಯಲ್ಲಿ ಕೇವಲ ಐದು ಶೌಚಾಲಯಗಳಿವೆ ಎಂದಿರುವ ಜಿಲ್ಲಾಧಿಕಾರಿ ಧಾಕಾನೆ, “ಇದರರ್ಥ ಆಸ್ಪತ್ರೆಯಿಂದ ಯಾರೂ ಎಂಟು ದಿನಗಳವರೆಗೆ ಶೌಚಾಲಯವನ್ನು ಸ್ವಚ್ಛಗೊಳಿಸಲು ಹೋಗಲಿಲ್ಲ. ಒಳಗಿನಿಂದ ಬರುವ ದುರ್ವಾಸನೆ ಬರುತ್ತಿರುವುದರಿಂದ ಇತರ ರೋಗಿಗಳು ಅಧಿಕಾರಿಗಳನ್ನು ಕರೆಸಿದರು” ಎಂದು ಅವರು ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಯ ಡೀನ್ ಡಾ ಬಿ ಎಸ್ ಖೈರ್ ಅವರನ್ನು ಬುಧವಾರ ತಡರಾತ್ರಿ ಅಮಾನತುಗೊಳಿಸಲಾಗಿದೆ.

ಗುರುವಾರ, ಐಪಿಸಿಯ ಸೆಕ್ಷನ್ 304 (ಎ) ಮತ್ತು 188 ಅಡಿಯಲ್ಲಿ ಸಂಬಂಧಪಟ್ಟ ವೈದ್ಯರು, ದಾದಿಯರು, ವಾರ್ಡ್ ಬಾಯ್ಸ್, ಸ್ವೀಪರ್ಗಳು ಮತ್ತು ಇತರ ಸಿಬ್ಬಂದಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

“ಜೂನ್ 1 ರಿಂದ 10 ರವರೆಗೆ ವಾರ್ಡ್ 7 ರಲ್ಲಿ ನಿಯೋಜಿಸಲ್ಪಟ್ಟ ವೈದ್ಯರು, ದಾದಿಯರು ಮತ್ತು ಇತರ ಸಿಬ್ಬಂದಿಯ ಪಾತ್ರವನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ” ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್, 82 ವರ್ಷದ ಮಹಿಳೆಯ ಸಾವಿಗೆ ಕಾರಣರಾದ ಜನರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

“ನಾವು ಈ ಘಟನೆಯ ಬಗ್ಗೆ ಗಂಭೀರವಾದ ಕ್ರಮ ತೆಗೆದುಕೊಳ್ಳುತ್ತೇವೆ. ಈ ಕ್ರಿಮಿನಲ್ ಅಪರಾಧಕ್ಕಾಗಿ ಈಗಾಗಲೇ ಕೆಲವು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ” ಎಂದು ಸಚಿವರು ಹೇಳಿದ್ದಾರೆ.


ಓದಿ: ಮುಗಿಬಿದ್ದು ಬಸ್‌ ಹತ್ತುವ ಜನರ ಈ ವಿಡಿಯೋ ಮುಂಬೈದಲ್ಲ, ಪಶ್ಚಿಮ ಬಂಗಾಳದ್ದು: ಫ್ಯಾಕ್ಟ್‌ಚೆಕ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...