Homeಮುಖಪುಟನಾಪತ್ತೆಯಾಗಿದ್ದ ಕೊರೊನಾ ರೋಗಿ 8 ದಿನಗಳ ನಂತರ ಆಸ್ಪತ್ರೆ ಶೌಚಾಲಯದಲ್ಲಿ ಶವವಾಗಿ ಪತ್ತೆ!

ನಾಪತ್ತೆಯಾಗಿದ್ದ ಕೊರೊನಾ ರೋಗಿ 8 ದಿನಗಳ ನಂತರ ಆಸ್ಪತ್ರೆ ಶೌಚಾಲಯದಲ್ಲಿ ಶವವಾಗಿ ಪತ್ತೆ!

- Advertisement -
- Advertisement -

ಮುಂಬೈಯ ಜಲ್ಗಾಂವ್ ಆಸ್ಪತ್ರೆಯಲ್ಲಿ ಕಾಣೆಯಾಗಿದ್ದ ಕೊರೊನಾ ರೋಗಿಯೊಬ್ಬರು ಆಸ್ಪತ್ರೆಯ ಶೌಚಾಲಯದಲ್ಲಿ 8 ದಿನಗಳ ನಂತರ ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರು ಸಂಬಂಧಪಟ್ಟ ಸಿಬ್ಬಂದಿಗಳ ವಿರುದ್ಧ ‘ನಿರ್ಲಕ್ಷ್ಯ’ಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಘಟನೆಯು ಸರ್ಕಾರಿ ಆಸ್ಪತ್ರೆಗಳಲ್ಲಿರುವ ಅವ್ಯವಸ್ಥೆಯ ಬಗ್ಗೆ ಬೆಳಕು ಚೆಲ್ಲಿದೆ.

ಮೃತಪಟ್ಟ 82 ವರ್ಷದ ಮಹಿಳೆ ಹಾಗೂ ಅವರ ಸೊಸೆಗೆ ಕೊರೊನಾ ಸೋಂಕು ತಗುಲಿದ್ದರಿಂದ ಜಲ್ಗಾಂವ್ ಜಿಲ್ಲಾ ಸಿವಿಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಯು ಮಹಿಳೆ ನಾಪತ್ತೆಯಾಗಿದ್ದಾರೆ ಎಂದು ಪ್ರಕಟಿಸಿದ ಎಂಟು ದಿನಗಳ ನಂತರ ಶವ ಶೌಚಾಲಯದೊಳಗೆ ಪತ್ತೆಯಾಗಿದೆ.

ಭೂಸಾವಲ್‌ನಲ್ಲಿ ವಾಸಿಸುತ್ತಿದ್ದ ಮಹಿಳೆ, ಅವರ ಮಗ ಹಾಗೂ ಸೊಸೆಗೆ ಮೇ ಕೊನೆಯ ವಾರದಲ್ಲಿ ವೈರಸ್ ಇರುವುದು ಪತ್ತಯಾಗಿತ್ತು. ಮಹಿಳೆ ಮತ್ತು ಸೊಸೆ ಜಲ್ಗಾಂವ್ ಸಿವಿಲ್ ಆಸ್ಪತ್ರೆಗೆ ಹೋಗಿದ್ದರೂ, ಐಸಿಯು ಹಾಸಿಗೆಗೆ ಕಾಯುತ್ತಾ ಮೇ 31 ರಂದು ಉಸಿರಾಟದ ಸಮಸ್ಯೆಯಾಗಿ ಸೊಸೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ಮಹಿಳೆಯ ಮೊಮ್ಮಗ, ಐಸಿಯು ಹಾಸಿಗೆ ಲಭ್ಯವಿಲ್ಲದ ಕಾರಣ ಅವರು ಆಸ್ಪತ್ರೆಯ ರಿಸೆಪ್ಷನ್ ನಲ್ಲಿ ಆರು ಗಂಟೆಗಳ ಕಾಲ ಕಾಯಬೇಕಾಗಿ ಬಂದಿತ್ತು ಎಂದು ಆರೋಪಿಸಿದ್ದಾರೆ.

ಇದಕ್ಕಿಂತಲೂ ಅಘಾತಕಾರಿಯಾದುದ್ದು ಎಂದರೆ ಮಯಸ್ಸಾದ ಮಹಿಳೆಯೂ ಶೌಚಾಲಯದಲ್ಲಿ ಮೃತಪಟ್ಟಿದ್ದರೂ ಸಹ ಎಂದು ಜೂನ್ 10 ರವರೆಗೆ ಆಸ್ಪತ್ರೆಯ ಸಿಬ್ಬಂದಿ ತಿಳಿದಿರಲೇ ಇಲ್ಲ ಎಂಬುದಾಗಿದೆ.

ಸಿವಿಲ್ ಆಸ್ಪತ್ರೆಯ ಹಿರಿಯ ಅಧಿಕಾರಿಯೊಬ್ಬರು, ಕೊರೊನಾ ರೋಗಿಗಳೊಂದಿಗೆ ವ್ಯವಹರಿಸಲು ಅರೆವೈದ್ಯಕೀಯ ಸಿಬ್ಬಂದಿ ಹೆದರುತ್ತಾರೆ. “ಕೊರೊನಾ ರೋಗಿಗಳಿಗೆ ಸೇವೆ ಸಲ್ಲಿಸಲು ಹಿಂಜರಿಯುತ್ತಿರುವುದರಿಂದ ವೈದ್ಯಕೀಯ ಸಿಬ್ಬಂದಿಯೊಂದಿಗೆ ವಾಗ್ವಾದಗಳು ನಡೆದಿವೆ” ಎಂದು ಹೇಳಿದ್ದಾರೆ.

ಕೆಳಮಹಡಿಯಲ್ಲಿ ಕೇವಲ ಐದು ಶೌಚಾಲಯಗಳಿವೆ ಎಂದಿರುವ ಜಿಲ್ಲಾಧಿಕಾರಿ ಧಾಕಾನೆ, “ಇದರರ್ಥ ಆಸ್ಪತ್ರೆಯಿಂದ ಯಾರೂ ಎಂಟು ದಿನಗಳವರೆಗೆ ಶೌಚಾಲಯವನ್ನು ಸ್ವಚ್ಛಗೊಳಿಸಲು ಹೋಗಲಿಲ್ಲ. ಒಳಗಿನಿಂದ ಬರುವ ದುರ್ವಾಸನೆ ಬರುತ್ತಿರುವುದರಿಂದ ಇತರ ರೋಗಿಗಳು ಅಧಿಕಾರಿಗಳನ್ನು ಕರೆಸಿದರು” ಎಂದು ಅವರು ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಯ ಡೀನ್ ಡಾ ಬಿ ಎಸ್ ಖೈರ್ ಅವರನ್ನು ಬುಧವಾರ ತಡರಾತ್ರಿ ಅಮಾನತುಗೊಳಿಸಲಾಗಿದೆ.

ಗುರುವಾರ, ಐಪಿಸಿಯ ಸೆಕ್ಷನ್ 304 (ಎ) ಮತ್ತು 188 ಅಡಿಯಲ್ಲಿ ಸಂಬಂಧಪಟ್ಟ ವೈದ್ಯರು, ದಾದಿಯರು, ವಾರ್ಡ್ ಬಾಯ್ಸ್, ಸ್ವೀಪರ್ಗಳು ಮತ್ತು ಇತರ ಸಿಬ್ಬಂದಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

“ಜೂನ್ 1 ರಿಂದ 10 ರವರೆಗೆ ವಾರ್ಡ್ 7 ರಲ್ಲಿ ನಿಯೋಜಿಸಲ್ಪಟ್ಟ ವೈದ್ಯರು, ದಾದಿಯರು ಮತ್ತು ಇತರ ಸಿಬ್ಬಂದಿಯ ಪಾತ್ರವನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ” ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್, 82 ವರ್ಷದ ಮಹಿಳೆಯ ಸಾವಿಗೆ ಕಾರಣರಾದ ಜನರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

“ನಾವು ಈ ಘಟನೆಯ ಬಗ್ಗೆ ಗಂಭೀರವಾದ ಕ್ರಮ ತೆಗೆದುಕೊಳ್ಳುತ್ತೇವೆ. ಈ ಕ್ರಿಮಿನಲ್ ಅಪರಾಧಕ್ಕಾಗಿ ಈಗಾಗಲೇ ಕೆಲವು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ” ಎಂದು ಸಚಿವರು ಹೇಳಿದ್ದಾರೆ.


ಓದಿ: ಮುಗಿಬಿದ್ದು ಬಸ್‌ ಹತ್ತುವ ಜನರ ಈ ವಿಡಿಯೋ ಮುಂಬೈದಲ್ಲ, ಪಶ್ಚಿಮ ಬಂಗಾಳದ್ದು: ಫ್ಯಾಕ್ಟ್‌ಚೆಕ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...