Homeಕರ್ನಾಟಕಗೋವಿಂದ ಕಾರಜೋಳಗೆ ಹೀನಾಯ ಸೋಲು; ಗೆಲುವಿನ ದಡ ಸೇರಿದ ತಿಮ್ಮಾಪೂರ

ಗೋವಿಂದ ಕಾರಜೋಳಗೆ ಹೀನಾಯ ಸೋಲು; ಗೆಲುವಿನ ದಡ ಸೇರಿದ ತಿಮ್ಮಾಪೂರ

- Advertisement -
- Advertisement -

ಬಾಗಲಕೋಟೆ ಜಿಲ್ಲೆಯ ಭಾರೀ ಜಿದ್ದಾಜಿದ್ದಿನ ಕ್ಷೇತ್ರವಾಗಿರುವ ಮುಧೋಳದಲ್ಲಿ ಹಳೆ ಹುರಿಯಾಳುಗಳ ಕಾದಾಟದಲ್ಲಿ ಬಿಜೆಪಿಯ ಗೋವಿಂದ ಕಾರಜೋಳ ಸೋಲು ಕಂಡಿದ್ದಾರೆ. ಕಾಂಗ್ರೆಸ್‌ನಿಂದ ಆರ್.ಬಿ ತಿಮ್ಮಾಪೂರ ಸ್ಪರ್ಧೆ ಮಾಡಿದ್ದರು.

ತಿಮ್ಮಾಪೂರ ಹಾಗೂ ಕಾರಜೋಳ ನಡುವೆ ಭಾರೀ ಪೈಪೋಟಿ ನಡೆದಿತ್ತು. ಅಂತಿಮವಾಗಿ ಆರ್‌ಬಿ ತಿಮ್ಮಾಪೂರ ಅವರು 70,478 ಮತಗಳನ್ನು ಪಡೆದು, ಗೋವಿಂದ್ ಕಾರಜೋಳ ಅವರನ್ನು 16,396ಮತಗಳ ಅಂತರದಲ್ಲಿ ಹೀನಾಯವಾಗಿ ಸೋಲಿಸಿದ್ದಾರೆ. ಗೋವಿಂದ್ ಕಾರಜೋ:ಳ ಅವರು 54,082 ಮತಗಳನ್ನು ಪಡೆದಿದ್ದಾರೆ. ಇನ್ನೂ ಪಕ್ಷೇತರರಾಗಿ ಕಣಕ್ಕಿಳಿದಿರುವ ಸತೀಶ್ ಬಂಡಿವಡ್ಡರ ಅವರು 16,747 ಮತ ಪಡೆಯುವ ಮೂಲಕ 3ನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ. ಈ ಹಿಂದೆ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿ ಸೋಲು ಕಂಡಿದ್ದರು. ಇದೀಗ ಕಾಂಗ್ರೆಸ್ ತೊರೆದು ಪಕ್ಷೇತರರಾಗಿ ಕಣದಲ್ಲಿದ್ದಾರೆ.

2004ರ ಚುನಾವಣೆಯಲ್ಲಿ 71,814 ಮತ ಪಡೆಯುವ ಮೂಲಕ ಗೋವಿಂದ ಕಾರಜೋಳ ಅವರು ಕಾಂಗ್ರೆಸ್‌ನ ಆರ್.ಬಿ ತಿಮ್ಮಾಪೂರ ವಿರುದ್ಧ 32,942 ಮತಗಳ ಅಂತರದಿಂದ ದೊಡ್ಡ ಗೆಲುವು ಸಾಧಿಸಿದರು. 2008ರಲ್ಲೂ ಕಾಂಗ್ರೆಸ್‌ನ ತಿಮ್ಮಾಪೂರ ಹಾಗೂ ಬಿಜೆಪಿಯ ಕಾರಜೋಳ ನಡುವೆಯೇ ಫೈಟ್ ಮುಂದುವರೆಯಿತು. ಕಾರಜೋಳ ಗೆಲುವಿನ ಓಟವನ್ನು ಮುಂದುವರೆಸಿದರು.ತಿಮ್ಮಾಪೂರ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟರು. ಈ ಚುನಾವಣೆಯಲ್ಲಿ ಇಬ್ಬರ ನಡುವಿನ ಮತಗಳಿಕೆಯ ಅಂತರ ಕೇವಲ 7,378 ಆಗಿತ್ತು.

2013ರ ಚುನಾವಣೆಯಲ್ಲೂ ಕೈ-ಕಮಲದಿಂದ ಸಾಂಪ್ರದಾಯಿಕ ಎದುರಾಳಿಗಳಾದ ಕಾರಜೋಳ ಹಾಗೂ ತಿಮ್ಮಾಪೂರ ಸ್ಪರ್ಧೆಗಿಳಿದರು. ಈ ಬಾರಿಯ ಮತಗಳಿಕೆಯ ಅಂತರ ಕಡಿಮೆಯಾಯಿತೇ ವಿನಃ ಗೆಲುವು-ಸೋಲಿನಲ್ಲಿ ವ್ಯತ್ಯಾಸವಾಗಲಿಲ್ಲ. ಕಾರಜೋಳ ಅವರು ಕೇವಲ 5,178 ಮತಗಳಿಂದ ಗೆಲುವು ಸಾಧಿಸಿದರು.

ಕಾರಜೋಳ ಸೋಲಿಗೆ ಕಾರಣವೇನು?

ಹಾಲಿ ನೀರಾವರಿ ಸಚಿವರಾಗಿರುವ ಗೋವಿಂದ ಕಾರಜೋಳ ರಾಜ್ಯದ ಉಪಮುಖ್ಯಮಂತ್ರಿ ಸ್ಥಾನವನ್ನೂ ಅಲಂಕರಿಸಿದ್ದರು. ಬಿಜೆಪಿಯಲ್ಲಿ ಪ್ರಬಲ ದಲಿತ ಸಮುದಾಯದ ಮುಖಂಡರಾಗಿರುವ ಅವರು 6 ಬಾರಿ ಸ್ಪರ್ಧಿಸಿ 5 ಬಾರಿ ಗೆಲುವು ಸಾಧಿಸಿದ್ದು, ಒಂದು ಬಾರಿ ಸೋಲು ಕಂಡಿದ್ದರು. ಸತತವಾಗಿ ಗೆಲುವು ಸಾಧಿಸಿದ್ದ ಕಾರಜೋಳ ಇದೀಗ ಸೋಲು ಕಂಡಿದ್ದಾರೆ.

ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳ ಮೂಲಕ ಒಳ್ಳೆಯ ಹೆಸರು ಗಳಿಸಿದ್ದ ಕಾರಜೋಳ, ಜನಸಂಪರ್ಕದಿಂದ ದೂರ ಉಳಿದಿದ್ದಾರೆ ಎನ್ನುವ ಆರೋಪಗಳನ್ನು ಎದುರಿಸುತ್ತಿದ್ದರು. ಇನ್ನು ಈ ಕ್ಷೇತ್ರದಲ್ಲಿ ರೆಡ್ಡಿ ಸಮುದಾಯದ ಮತದಾರರ ಒಲವು ಯಾರ ಕಡೆ ಇರುತ್ತದೋ ಆ ಅಭ್ಯರ್ಥಿಯ ಗೆಲುವು ನಿಶ್ಚಿತ. ಕಾರಜೋಳ ಅವರು ಈ ರೆಡ್ಡಿ ಸಮುದಾಯದೊಂದಿಗೆ ಇಷ್ಟು ವರ್ಷಗಳೊಂದಿಗೆ ಉತ್ತಮ ಸಂಬಂಧ ಹೊಂದಿದ್ದರು ಎನ್ನುವ ಕಾರಣಕ್ಕೆ ಗೆಲುವು ಸಾಧ್ಯವಾಗಿತ್ತು. ಆದರೆ ಈ ಬಾರಿ ರೆಡ್ಡಿ ಸಮುದಾಯವು ಕಾರಜೋಳ ಅವರನ್ನು ಕೈ ಬಿಟ್ಟು ಪಕ್ಷೇತರ ಅಭ್ಯರ್ಥಿ ಸತೀಶ್ ಪರ ಒಲವು ತೋರಿದ್ದಾರೆ.

ಈ ಭಾಗದಲ್ಲಿ ಕಬ್ಬು ಬೆಳೆಗಾರರ ಸಂಖ್ಯೆ ಅತ್ಯಧಿಕವಾಗಿದ್ದು, ಕಾರಜೋಳ ಅವರ ರನ್ನ ಕಾರ್ಖಾನೆಯಿಂದ ರೈತರಿಗೆ ಅನ್ಯಾಯವಾಗಿದೆ ಎನ್ನುವ ಆರೋಪಗಳು ಕೇಳಿಬಂದಿದ್ದವು. ಇದರಿಂದ ಕಾರಜೋಳಗೆ ಹೊಡೆತ ಬಿದ್ದಿದೆ ಎಂದು ಹೇಳಬಹುದು. ಇನ್ನು ಕಾರಜೋಳ ಆಪ್ತರಾಗಿದ್ದ ತಳೆವಾಡ ಬ್ರದರ್ಸ್ ಈ ಬಾರಿ ಬಿಜೆಪಿ ತೊರೆದಿರುವುದು ಕಾರಜೋಳಗೆ ದೊಡ್ಡಮಟ್ಟದ ನಷ್ಟವಾಗಿದೆ.

ಕಾರಜೋಳ ತಮ್ಮ ರಾಜಕೀಯ ಜೀವನದುದ್ದಕ್ಕೂ ಸಂಘಪರಿವಾರದಿಂದ ಅಂತರ ಕಾಯ್ದುಕೊಂಡು ಬಂದಿದ್ದಾರೆ. ಪಕ್ಷದ ಚಿಹ್ನೆಯನ್ನು ಅವಲಂಬಿಸಿಯೇ ಸಂಘಪರಿವಾರದ ಮತಗಳನ್ನು ಗಳಿಸಿದ್ದರು. ಆದರೆ ಈ ಬಾರಿ ಸಂಘ ಪರಿವಾರದ ಮತಗಳು ಬಿಜೆಪಿ ಕೈತಪ್ಪಿ, ಪಕ್ಷೇತರನ ಪಾಲಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...