Homeಕರ್ನಾಟಕಗೋವಿಂದ ಕಾರಜೋಳಗೆ ಹೀನಾಯ ಸೋಲು; ಗೆಲುವಿನ ದಡ ಸೇರಿದ ತಿಮ್ಮಾಪೂರ

ಗೋವಿಂದ ಕಾರಜೋಳಗೆ ಹೀನಾಯ ಸೋಲು; ಗೆಲುವಿನ ದಡ ಸೇರಿದ ತಿಮ್ಮಾಪೂರ

- Advertisement -
- Advertisement -

ಬಾಗಲಕೋಟೆ ಜಿಲ್ಲೆಯ ಭಾರೀ ಜಿದ್ದಾಜಿದ್ದಿನ ಕ್ಷೇತ್ರವಾಗಿರುವ ಮುಧೋಳದಲ್ಲಿ ಹಳೆ ಹುರಿಯಾಳುಗಳ ಕಾದಾಟದಲ್ಲಿ ಬಿಜೆಪಿಯ ಗೋವಿಂದ ಕಾರಜೋಳ ಸೋಲು ಕಂಡಿದ್ದಾರೆ. ಕಾಂಗ್ರೆಸ್‌ನಿಂದ ಆರ್.ಬಿ ತಿಮ್ಮಾಪೂರ ಸ್ಪರ್ಧೆ ಮಾಡಿದ್ದರು.

ತಿಮ್ಮಾಪೂರ ಹಾಗೂ ಕಾರಜೋಳ ನಡುವೆ ಭಾರೀ ಪೈಪೋಟಿ ನಡೆದಿತ್ತು. ಅಂತಿಮವಾಗಿ ಆರ್‌ಬಿ ತಿಮ್ಮಾಪೂರ ಅವರು 70,478 ಮತಗಳನ್ನು ಪಡೆದು, ಗೋವಿಂದ್ ಕಾರಜೋಳ ಅವರನ್ನು 16,396ಮತಗಳ ಅಂತರದಲ್ಲಿ ಹೀನಾಯವಾಗಿ ಸೋಲಿಸಿದ್ದಾರೆ. ಗೋವಿಂದ್ ಕಾರಜೋ:ಳ ಅವರು 54,082 ಮತಗಳನ್ನು ಪಡೆದಿದ್ದಾರೆ. ಇನ್ನೂ ಪಕ್ಷೇತರರಾಗಿ ಕಣಕ್ಕಿಳಿದಿರುವ ಸತೀಶ್ ಬಂಡಿವಡ್ಡರ ಅವರು 16,747 ಮತ ಪಡೆಯುವ ಮೂಲಕ 3ನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ. ಈ ಹಿಂದೆ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿ ಸೋಲು ಕಂಡಿದ್ದರು. ಇದೀಗ ಕಾಂಗ್ರೆಸ್ ತೊರೆದು ಪಕ್ಷೇತರರಾಗಿ ಕಣದಲ್ಲಿದ್ದಾರೆ.

2004ರ ಚುನಾವಣೆಯಲ್ಲಿ 71,814 ಮತ ಪಡೆಯುವ ಮೂಲಕ ಗೋವಿಂದ ಕಾರಜೋಳ ಅವರು ಕಾಂಗ್ರೆಸ್‌ನ ಆರ್.ಬಿ ತಿಮ್ಮಾಪೂರ ವಿರುದ್ಧ 32,942 ಮತಗಳ ಅಂತರದಿಂದ ದೊಡ್ಡ ಗೆಲುವು ಸಾಧಿಸಿದರು. 2008ರಲ್ಲೂ ಕಾಂಗ್ರೆಸ್‌ನ ತಿಮ್ಮಾಪೂರ ಹಾಗೂ ಬಿಜೆಪಿಯ ಕಾರಜೋಳ ನಡುವೆಯೇ ಫೈಟ್ ಮುಂದುವರೆಯಿತು. ಕಾರಜೋಳ ಗೆಲುವಿನ ಓಟವನ್ನು ಮುಂದುವರೆಸಿದರು.ತಿಮ್ಮಾಪೂರ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟರು. ಈ ಚುನಾವಣೆಯಲ್ಲಿ ಇಬ್ಬರ ನಡುವಿನ ಮತಗಳಿಕೆಯ ಅಂತರ ಕೇವಲ 7,378 ಆಗಿತ್ತು.

2013ರ ಚುನಾವಣೆಯಲ್ಲೂ ಕೈ-ಕಮಲದಿಂದ ಸಾಂಪ್ರದಾಯಿಕ ಎದುರಾಳಿಗಳಾದ ಕಾರಜೋಳ ಹಾಗೂ ತಿಮ್ಮಾಪೂರ ಸ್ಪರ್ಧೆಗಿಳಿದರು. ಈ ಬಾರಿಯ ಮತಗಳಿಕೆಯ ಅಂತರ ಕಡಿಮೆಯಾಯಿತೇ ವಿನಃ ಗೆಲುವು-ಸೋಲಿನಲ್ಲಿ ವ್ಯತ್ಯಾಸವಾಗಲಿಲ್ಲ. ಕಾರಜೋಳ ಅವರು ಕೇವಲ 5,178 ಮತಗಳಿಂದ ಗೆಲುವು ಸಾಧಿಸಿದರು.

ಕಾರಜೋಳ ಸೋಲಿಗೆ ಕಾರಣವೇನು?

ಹಾಲಿ ನೀರಾವರಿ ಸಚಿವರಾಗಿರುವ ಗೋವಿಂದ ಕಾರಜೋಳ ರಾಜ್ಯದ ಉಪಮುಖ್ಯಮಂತ್ರಿ ಸ್ಥಾನವನ್ನೂ ಅಲಂಕರಿಸಿದ್ದರು. ಬಿಜೆಪಿಯಲ್ಲಿ ಪ್ರಬಲ ದಲಿತ ಸಮುದಾಯದ ಮುಖಂಡರಾಗಿರುವ ಅವರು 6 ಬಾರಿ ಸ್ಪರ್ಧಿಸಿ 5 ಬಾರಿ ಗೆಲುವು ಸಾಧಿಸಿದ್ದು, ಒಂದು ಬಾರಿ ಸೋಲು ಕಂಡಿದ್ದರು. ಸತತವಾಗಿ ಗೆಲುವು ಸಾಧಿಸಿದ್ದ ಕಾರಜೋಳ ಇದೀಗ ಸೋಲು ಕಂಡಿದ್ದಾರೆ.

ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳ ಮೂಲಕ ಒಳ್ಳೆಯ ಹೆಸರು ಗಳಿಸಿದ್ದ ಕಾರಜೋಳ, ಜನಸಂಪರ್ಕದಿಂದ ದೂರ ಉಳಿದಿದ್ದಾರೆ ಎನ್ನುವ ಆರೋಪಗಳನ್ನು ಎದುರಿಸುತ್ತಿದ್ದರು. ಇನ್ನು ಈ ಕ್ಷೇತ್ರದಲ್ಲಿ ರೆಡ್ಡಿ ಸಮುದಾಯದ ಮತದಾರರ ಒಲವು ಯಾರ ಕಡೆ ಇರುತ್ತದೋ ಆ ಅಭ್ಯರ್ಥಿಯ ಗೆಲುವು ನಿಶ್ಚಿತ. ಕಾರಜೋಳ ಅವರು ಈ ರೆಡ್ಡಿ ಸಮುದಾಯದೊಂದಿಗೆ ಇಷ್ಟು ವರ್ಷಗಳೊಂದಿಗೆ ಉತ್ತಮ ಸಂಬಂಧ ಹೊಂದಿದ್ದರು ಎನ್ನುವ ಕಾರಣಕ್ಕೆ ಗೆಲುವು ಸಾಧ್ಯವಾಗಿತ್ತು. ಆದರೆ ಈ ಬಾರಿ ರೆಡ್ಡಿ ಸಮುದಾಯವು ಕಾರಜೋಳ ಅವರನ್ನು ಕೈ ಬಿಟ್ಟು ಪಕ್ಷೇತರ ಅಭ್ಯರ್ಥಿ ಸತೀಶ್ ಪರ ಒಲವು ತೋರಿದ್ದಾರೆ.

ಈ ಭಾಗದಲ್ಲಿ ಕಬ್ಬು ಬೆಳೆಗಾರರ ಸಂಖ್ಯೆ ಅತ್ಯಧಿಕವಾಗಿದ್ದು, ಕಾರಜೋಳ ಅವರ ರನ್ನ ಕಾರ್ಖಾನೆಯಿಂದ ರೈತರಿಗೆ ಅನ್ಯಾಯವಾಗಿದೆ ಎನ್ನುವ ಆರೋಪಗಳು ಕೇಳಿಬಂದಿದ್ದವು. ಇದರಿಂದ ಕಾರಜೋಳಗೆ ಹೊಡೆತ ಬಿದ್ದಿದೆ ಎಂದು ಹೇಳಬಹುದು. ಇನ್ನು ಕಾರಜೋಳ ಆಪ್ತರಾಗಿದ್ದ ತಳೆವಾಡ ಬ್ರದರ್ಸ್ ಈ ಬಾರಿ ಬಿಜೆಪಿ ತೊರೆದಿರುವುದು ಕಾರಜೋಳಗೆ ದೊಡ್ಡಮಟ್ಟದ ನಷ್ಟವಾಗಿದೆ.

ಕಾರಜೋಳ ತಮ್ಮ ರಾಜಕೀಯ ಜೀವನದುದ್ದಕ್ಕೂ ಸಂಘಪರಿವಾರದಿಂದ ಅಂತರ ಕಾಯ್ದುಕೊಂಡು ಬಂದಿದ್ದಾರೆ. ಪಕ್ಷದ ಚಿಹ್ನೆಯನ್ನು ಅವಲಂಬಿಸಿಯೇ ಸಂಘಪರಿವಾರದ ಮತಗಳನ್ನು ಗಳಿಸಿದ್ದರು. ಆದರೆ ಈ ಬಾರಿ ಸಂಘ ಪರಿವಾರದ ಮತಗಳು ಬಿಜೆಪಿ ಕೈತಪ್ಪಿ, ಪಕ್ಷೇತರನ ಪಾಲಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...