Homeಕರ್ನಾಟಕಗೋವಿಂದ ಕಾರಜೋಳಗೆ ಹೀನಾಯ ಸೋಲು; ಗೆಲುವಿನ ದಡ ಸೇರಿದ ತಿಮ್ಮಾಪೂರ

ಗೋವಿಂದ ಕಾರಜೋಳಗೆ ಹೀನಾಯ ಸೋಲು; ಗೆಲುವಿನ ದಡ ಸೇರಿದ ತಿಮ್ಮಾಪೂರ

- Advertisement -
- Advertisement -

ಬಾಗಲಕೋಟೆ ಜಿಲ್ಲೆಯ ಭಾರೀ ಜಿದ್ದಾಜಿದ್ದಿನ ಕ್ಷೇತ್ರವಾಗಿರುವ ಮುಧೋಳದಲ್ಲಿ ಹಳೆ ಹುರಿಯಾಳುಗಳ ಕಾದಾಟದಲ್ಲಿ ಬಿಜೆಪಿಯ ಗೋವಿಂದ ಕಾರಜೋಳ ಸೋಲು ಕಂಡಿದ್ದಾರೆ. ಕಾಂಗ್ರೆಸ್‌ನಿಂದ ಆರ್.ಬಿ ತಿಮ್ಮಾಪೂರ ಸ್ಪರ್ಧೆ ಮಾಡಿದ್ದರು.

ತಿಮ್ಮಾಪೂರ ಹಾಗೂ ಕಾರಜೋಳ ನಡುವೆ ಭಾರೀ ಪೈಪೋಟಿ ನಡೆದಿತ್ತು. ಅಂತಿಮವಾಗಿ ಆರ್‌ಬಿ ತಿಮ್ಮಾಪೂರ ಅವರು 70,478 ಮತಗಳನ್ನು ಪಡೆದು, ಗೋವಿಂದ್ ಕಾರಜೋಳ ಅವರನ್ನು 16,396ಮತಗಳ ಅಂತರದಲ್ಲಿ ಹೀನಾಯವಾಗಿ ಸೋಲಿಸಿದ್ದಾರೆ. ಗೋವಿಂದ್ ಕಾರಜೋ:ಳ ಅವರು 54,082 ಮತಗಳನ್ನು ಪಡೆದಿದ್ದಾರೆ. ಇನ್ನೂ ಪಕ್ಷೇತರರಾಗಿ ಕಣಕ್ಕಿಳಿದಿರುವ ಸತೀಶ್ ಬಂಡಿವಡ್ಡರ ಅವರು 16,747 ಮತ ಪಡೆಯುವ ಮೂಲಕ 3ನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ. ಈ ಹಿಂದೆ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿ ಸೋಲು ಕಂಡಿದ್ದರು. ಇದೀಗ ಕಾಂಗ್ರೆಸ್ ತೊರೆದು ಪಕ್ಷೇತರರಾಗಿ ಕಣದಲ್ಲಿದ್ದಾರೆ.

2004ರ ಚುನಾವಣೆಯಲ್ಲಿ 71,814 ಮತ ಪಡೆಯುವ ಮೂಲಕ ಗೋವಿಂದ ಕಾರಜೋಳ ಅವರು ಕಾಂಗ್ರೆಸ್‌ನ ಆರ್.ಬಿ ತಿಮ್ಮಾಪೂರ ವಿರುದ್ಧ 32,942 ಮತಗಳ ಅಂತರದಿಂದ ದೊಡ್ಡ ಗೆಲುವು ಸಾಧಿಸಿದರು. 2008ರಲ್ಲೂ ಕಾಂಗ್ರೆಸ್‌ನ ತಿಮ್ಮಾಪೂರ ಹಾಗೂ ಬಿಜೆಪಿಯ ಕಾರಜೋಳ ನಡುವೆಯೇ ಫೈಟ್ ಮುಂದುವರೆಯಿತು. ಕಾರಜೋಳ ಗೆಲುವಿನ ಓಟವನ್ನು ಮುಂದುವರೆಸಿದರು.ತಿಮ್ಮಾಪೂರ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟರು. ಈ ಚುನಾವಣೆಯಲ್ಲಿ ಇಬ್ಬರ ನಡುವಿನ ಮತಗಳಿಕೆಯ ಅಂತರ ಕೇವಲ 7,378 ಆಗಿತ್ತು.

2013ರ ಚುನಾವಣೆಯಲ್ಲೂ ಕೈ-ಕಮಲದಿಂದ ಸಾಂಪ್ರದಾಯಿಕ ಎದುರಾಳಿಗಳಾದ ಕಾರಜೋಳ ಹಾಗೂ ತಿಮ್ಮಾಪೂರ ಸ್ಪರ್ಧೆಗಿಳಿದರು. ಈ ಬಾರಿಯ ಮತಗಳಿಕೆಯ ಅಂತರ ಕಡಿಮೆಯಾಯಿತೇ ವಿನಃ ಗೆಲುವು-ಸೋಲಿನಲ್ಲಿ ವ್ಯತ್ಯಾಸವಾಗಲಿಲ್ಲ. ಕಾರಜೋಳ ಅವರು ಕೇವಲ 5,178 ಮತಗಳಿಂದ ಗೆಲುವು ಸಾಧಿಸಿದರು.

ಕಾರಜೋಳ ಸೋಲಿಗೆ ಕಾರಣವೇನು?

ಹಾಲಿ ನೀರಾವರಿ ಸಚಿವರಾಗಿರುವ ಗೋವಿಂದ ಕಾರಜೋಳ ರಾಜ್ಯದ ಉಪಮುಖ್ಯಮಂತ್ರಿ ಸ್ಥಾನವನ್ನೂ ಅಲಂಕರಿಸಿದ್ದರು. ಬಿಜೆಪಿಯಲ್ಲಿ ಪ್ರಬಲ ದಲಿತ ಸಮುದಾಯದ ಮುಖಂಡರಾಗಿರುವ ಅವರು 6 ಬಾರಿ ಸ್ಪರ್ಧಿಸಿ 5 ಬಾರಿ ಗೆಲುವು ಸಾಧಿಸಿದ್ದು, ಒಂದು ಬಾರಿ ಸೋಲು ಕಂಡಿದ್ದರು. ಸತತವಾಗಿ ಗೆಲುವು ಸಾಧಿಸಿದ್ದ ಕಾರಜೋಳ ಇದೀಗ ಸೋಲು ಕಂಡಿದ್ದಾರೆ.

ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳ ಮೂಲಕ ಒಳ್ಳೆಯ ಹೆಸರು ಗಳಿಸಿದ್ದ ಕಾರಜೋಳ, ಜನಸಂಪರ್ಕದಿಂದ ದೂರ ಉಳಿದಿದ್ದಾರೆ ಎನ್ನುವ ಆರೋಪಗಳನ್ನು ಎದುರಿಸುತ್ತಿದ್ದರು. ಇನ್ನು ಈ ಕ್ಷೇತ್ರದಲ್ಲಿ ರೆಡ್ಡಿ ಸಮುದಾಯದ ಮತದಾರರ ಒಲವು ಯಾರ ಕಡೆ ಇರುತ್ತದೋ ಆ ಅಭ್ಯರ್ಥಿಯ ಗೆಲುವು ನಿಶ್ಚಿತ. ಕಾರಜೋಳ ಅವರು ಈ ರೆಡ್ಡಿ ಸಮುದಾಯದೊಂದಿಗೆ ಇಷ್ಟು ವರ್ಷಗಳೊಂದಿಗೆ ಉತ್ತಮ ಸಂಬಂಧ ಹೊಂದಿದ್ದರು ಎನ್ನುವ ಕಾರಣಕ್ಕೆ ಗೆಲುವು ಸಾಧ್ಯವಾಗಿತ್ತು. ಆದರೆ ಈ ಬಾರಿ ರೆಡ್ಡಿ ಸಮುದಾಯವು ಕಾರಜೋಳ ಅವರನ್ನು ಕೈ ಬಿಟ್ಟು ಪಕ್ಷೇತರ ಅಭ್ಯರ್ಥಿ ಸತೀಶ್ ಪರ ಒಲವು ತೋರಿದ್ದಾರೆ.

ಈ ಭಾಗದಲ್ಲಿ ಕಬ್ಬು ಬೆಳೆಗಾರರ ಸಂಖ್ಯೆ ಅತ್ಯಧಿಕವಾಗಿದ್ದು, ಕಾರಜೋಳ ಅವರ ರನ್ನ ಕಾರ್ಖಾನೆಯಿಂದ ರೈತರಿಗೆ ಅನ್ಯಾಯವಾಗಿದೆ ಎನ್ನುವ ಆರೋಪಗಳು ಕೇಳಿಬಂದಿದ್ದವು. ಇದರಿಂದ ಕಾರಜೋಳಗೆ ಹೊಡೆತ ಬಿದ್ದಿದೆ ಎಂದು ಹೇಳಬಹುದು. ಇನ್ನು ಕಾರಜೋಳ ಆಪ್ತರಾಗಿದ್ದ ತಳೆವಾಡ ಬ್ರದರ್ಸ್ ಈ ಬಾರಿ ಬಿಜೆಪಿ ತೊರೆದಿರುವುದು ಕಾರಜೋಳಗೆ ದೊಡ್ಡಮಟ್ಟದ ನಷ್ಟವಾಗಿದೆ.

ಕಾರಜೋಳ ತಮ್ಮ ರಾಜಕೀಯ ಜೀವನದುದ್ದಕ್ಕೂ ಸಂಘಪರಿವಾರದಿಂದ ಅಂತರ ಕಾಯ್ದುಕೊಂಡು ಬಂದಿದ್ದಾರೆ. ಪಕ್ಷದ ಚಿಹ್ನೆಯನ್ನು ಅವಲಂಬಿಸಿಯೇ ಸಂಘಪರಿವಾರದ ಮತಗಳನ್ನು ಗಳಿಸಿದ್ದರು. ಆದರೆ ಈ ಬಾರಿ ಸಂಘ ಪರಿವಾರದ ಮತಗಳು ಬಿಜೆಪಿ ಕೈತಪ್ಪಿ, ಪಕ್ಷೇತರನ ಪಾಲಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...