Homeಕರ್ನಾಟಕಗೋವಿಂದ ಕಾರಜೋಳಗೆ ಹೀನಾಯ ಸೋಲು; ಗೆಲುವಿನ ದಡ ಸೇರಿದ ತಿಮ್ಮಾಪೂರ

ಗೋವಿಂದ ಕಾರಜೋಳಗೆ ಹೀನಾಯ ಸೋಲು; ಗೆಲುವಿನ ದಡ ಸೇರಿದ ತಿಮ್ಮಾಪೂರ

- Advertisement -
- Advertisement -

ಬಾಗಲಕೋಟೆ ಜಿಲ್ಲೆಯ ಭಾರೀ ಜಿದ್ದಾಜಿದ್ದಿನ ಕ್ಷೇತ್ರವಾಗಿರುವ ಮುಧೋಳದಲ್ಲಿ ಹಳೆ ಹುರಿಯಾಳುಗಳ ಕಾದಾಟದಲ್ಲಿ ಬಿಜೆಪಿಯ ಗೋವಿಂದ ಕಾರಜೋಳ ಸೋಲು ಕಂಡಿದ್ದಾರೆ. ಕಾಂಗ್ರೆಸ್‌ನಿಂದ ಆರ್.ಬಿ ತಿಮ್ಮಾಪೂರ ಸ್ಪರ್ಧೆ ಮಾಡಿದ್ದರು.

ತಿಮ್ಮಾಪೂರ ಹಾಗೂ ಕಾರಜೋಳ ನಡುವೆ ಭಾರೀ ಪೈಪೋಟಿ ನಡೆದಿತ್ತು. ಅಂತಿಮವಾಗಿ ಆರ್‌ಬಿ ತಿಮ್ಮಾಪೂರ ಅವರು 70,478 ಮತಗಳನ್ನು ಪಡೆದು, ಗೋವಿಂದ್ ಕಾರಜೋಳ ಅವರನ್ನು 16,396ಮತಗಳ ಅಂತರದಲ್ಲಿ ಹೀನಾಯವಾಗಿ ಸೋಲಿಸಿದ್ದಾರೆ. ಗೋವಿಂದ್ ಕಾರಜೋ:ಳ ಅವರು 54,082 ಮತಗಳನ್ನು ಪಡೆದಿದ್ದಾರೆ. ಇನ್ನೂ ಪಕ್ಷೇತರರಾಗಿ ಕಣಕ್ಕಿಳಿದಿರುವ ಸತೀಶ್ ಬಂಡಿವಡ್ಡರ ಅವರು 16,747 ಮತ ಪಡೆಯುವ ಮೂಲಕ 3ನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ. ಈ ಹಿಂದೆ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿ ಸೋಲು ಕಂಡಿದ್ದರು. ಇದೀಗ ಕಾಂಗ್ರೆಸ್ ತೊರೆದು ಪಕ್ಷೇತರರಾಗಿ ಕಣದಲ್ಲಿದ್ದಾರೆ.

2004ರ ಚುನಾವಣೆಯಲ್ಲಿ 71,814 ಮತ ಪಡೆಯುವ ಮೂಲಕ ಗೋವಿಂದ ಕಾರಜೋಳ ಅವರು ಕಾಂಗ್ರೆಸ್‌ನ ಆರ್.ಬಿ ತಿಮ್ಮಾಪೂರ ವಿರುದ್ಧ 32,942 ಮತಗಳ ಅಂತರದಿಂದ ದೊಡ್ಡ ಗೆಲುವು ಸಾಧಿಸಿದರು. 2008ರಲ್ಲೂ ಕಾಂಗ್ರೆಸ್‌ನ ತಿಮ್ಮಾಪೂರ ಹಾಗೂ ಬಿಜೆಪಿಯ ಕಾರಜೋಳ ನಡುವೆಯೇ ಫೈಟ್ ಮುಂದುವರೆಯಿತು. ಕಾರಜೋಳ ಗೆಲುವಿನ ಓಟವನ್ನು ಮುಂದುವರೆಸಿದರು.ತಿಮ್ಮಾಪೂರ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟರು. ಈ ಚುನಾವಣೆಯಲ್ಲಿ ಇಬ್ಬರ ನಡುವಿನ ಮತಗಳಿಕೆಯ ಅಂತರ ಕೇವಲ 7,378 ಆಗಿತ್ತು.

2013ರ ಚುನಾವಣೆಯಲ್ಲೂ ಕೈ-ಕಮಲದಿಂದ ಸಾಂಪ್ರದಾಯಿಕ ಎದುರಾಳಿಗಳಾದ ಕಾರಜೋಳ ಹಾಗೂ ತಿಮ್ಮಾಪೂರ ಸ್ಪರ್ಧೆಗಿಳಿದರು. ಈ ಬಾರಿಯ ಮತಗಳಿಕೆಯ ಅಂತರ ಕಡಿಮೆಯಾಯಿತೇ ವಿನಃ ಗೆಲುವು-ಸೋಲಿನಲ್ಲಿ ವ್ಯತ್ಯಾಸವಾಗಲಿಲ್ಲ. ಕಾರಜೋಳ ಅವರು ಕೇವಲ 5,178 ಮತಗಳಿಂದ ಗೆಲುವು ಸಾಧಿಸಿದರು.

ಕಾರಜೋಳ ಸೋಲಿಗೆ ಕಾರಣವೇನು?

ಹಾಲಿ ನೀರಾವರಿ ಸಚಿವರಾಗಿರುವ ಗೋವಿಂದ ಕಾರಜೋಳ ರಾಜ್ಯದ ಉಪಮುಖ್ಯಮಂತ್ರಿ ಸ್ಥಾನವನ್ನೂ ಅಲಂಕರಿಸಿದ್ದರು. ಬಿಜೆಪಿಯಲ್ಲಿ ಪ್ರಬಲ ದಲಿತ ಸಮುದಾಯದ ಮುಖಂಡರಾಗಿರುವ ಅವರು 6 ಬಾರಿ ಸ್ಪರ್ಧಿಸಿ 5 ಬಾರಿ ಗೆಲುವು ಸಾಧಿಸಿದ್ದು, ಒಂದು ಬಾರಿ ಸೋಲು ಕಂಡಿದ್ದರು. ಸತತವಾಗಿ ಗೆಲುವು ಸಾಧಿಸಿದ್ದ ಕಾರಜೋಳ ಇದೀಗ ಸೋಲು ಕಂಡಿದ್ದಾರೆ.

ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳ ಮೂಲಕ ಒಳ್ಳೆಯ ಹೆಸರು ಗಳಿಸಿದ್ದ ಕಾರಜೋಳ, ಜನಸಂಪರ್ಕದಿಂದ ದೂರ ಉಳಿದಿದ್ದಾರೆ ಎನ್ನುವ ಆರೋಪಗಳನ್ನು ಎದುರಿಸುತ್ತಿದ್ದರು. ಇನ್ನು ಈ ಕ್ಷೇತ್ರದಲ್ಲಿ ರೆಡ್ಡಿ ಸಮುದಾಯದ ಮತದಾರರ ಒಲವು ಯಾರ ಕಡೆ ಇರುತ್ತದೋ ಆ ಅಭ್ಯರ್ಥಿಯ ಗೆಲುವು ನಿಶ್ಚಿತ. ಕಾರಜೋಳ ಅವರು ಈ ರೆಡ್ಡಿ ಸಮುದಾಯದೊಂದಿಗೆ ಇಷ್ಟು ವರ್ಷಗಳೊಂದಿಗೆ ಉತ್ತಮ ಸಂಬಂಧ ಹೊಂದಿದ್ದರು ಎನ್ನುವ ಕಾರಣಕ್ಕೆ ಗೆಲುವು ಸಾಧ್ಯವಾಗಿತ್ತು. ಆದರೆ ಈ ಬಾರಿ ರೆಡ್ಡಿ ಸಮುದಾಯವು ಕಾರಜೋಳ ಅವರನ್ನು ಕೈ ಬಿಟ್ಟು ಪಕ್ಷೇತರ ಅಭ್ಯರ್ಥಿ ಸತೀಶ್ ಪರ ಒಲವು ತೋರಿದ್ದಾರೆ.

ಈ ಭಾಗದಲ್ಲಿ ಕಬ್ಬು ಬೆಳೆಗಾರರ ಸಂಖ್ಯೆ ಅತ್ಯಧಿಕವಾಗಿದ್ದು, ಕಾರಜೋಳ ಅವರ ರನ್ನ ಕಾರ್ಖಾನೆಯಿಂದ ರೈತರಿಗೆ ಅನ್ಯಾಯವಾಗಿದೆ ಎನ್ನುವ ಆರೋಪಗಳು ಕೇಳಿಬಂದಿದ್ದವು. ಇದರಿಂದ ಕಾರಜೋಳಗೆ ಹೊಡೆತ ಬಿದ್ದಿದೆ ಎಂದು ಹೇಳಬಹುದು. ಇನ್ನು ಕಾರಜೋಳ ಆಪ್ತರಾಗಿದ್ದ ತಳೆವಾಡ ಬ್ರದರ್ಸ್ ಈ ಬಾರಿ ಬಿಜೆಪಿ ತೊರೆದಿರುವುದು ಕಾರಜೋಳಗೆ ದೊಡ್ಡಮಟ್ಟದ ನಷ್ಟವಾಗಿದೆ.

ಕಾರಜೋಳ ತಮ್ಮ ರಾಜಕೀಯ ಜೀವನದುದ್ದಕ್ಕೂ ಸಂಘಪರಿವಾರದಿಂದ ಅಂತರ ಕಾಯ್ದುಕೊಂಡು ಬಂದಿದ್ದಾರೆ. ಪಕ್ಷದ ಚಿಹ್ನೆಯನ್ನು ಅವಲಂಬಿಸಿಯೇ ಸಂಘಪರಿವಾರದ ಮತಗಳನ್ನು ಗಳಿಸಿದ್ದರು. ಆದರೆ ಈ ಬಾರಿ ಸಂಘ ಪರಿವಾರದ ಮತಗಳು ಬಿಜೆಪಿ ಕೈತಪ್ಪಿ, ಪಕ್ಷೇತರನ ಪಾಲಾಗಿವೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚರ್ಚ್‌ಗಳಲ್ಲಿ ‘ದಿ ಕೇರಳ ಸ್ಟೋರಿ’ ಪ್ರದರ್ಶನ: ಕೋಮು ಅಜೆಂಡಾ ಬಗ್ಗೆ ಎಚ್ಚರಿಸಿದ ತಲಶ್ಶೇರಿ ಬಿಷಪ್

0
ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಕೇರಳದ ಕೆಲ ಚರ್ಚ್‌ಗಳಲ್ಲಿ ವಿವಾದಿತ 'ದಿ ಕೇರಳ ಸ್ಟೋರಿ' ಸಿನಿಮಾ ಪ್ರದರ್ಶನ ಮಾಡಲಾಗಿತ್ತು. ಮುಸ್ಲಿಮರ ಬಗ್ಗೆ ಸುಳ್ಳು ಪ್ರತಿಪಾದಿತ ಈ ಸಿನಿಮಾ ಪ್ರದರ್ಶನದ ಮೂಲಕ ಮುಸ್ಲಿಮರ ಬಗ್ಗೆ ಕ್ರಿಶ್ಚಿಯನ್ನರಲ್ಲಿ...