Homeಕರ್ನಾಟಕಗೋವಿಂದ ಕಾರಜೋಳಗೆ ಹೀನಾಯ ಸೋಲು; ಗೆಲುವಿನ ದಡ ಸೇರಿದ ತಿಮ್ಮಾಪೂರ

ಗೋವಿಂದ ಕಾರಜೋಳಗೆ ಹೀನಾಯ ಸೋಲು; ಗೆಲುವಿನ ದಡ ಸೇರಿದ ತಿಮ್ಮಾಪೂರ

- Advertisement -
- Advertisement -

ಬಾಗಲಕೋಟೆ ಜಿಲ್ಲೆಯ ಭಾರೀ ಜಿದ್ದಾಜಿದ್ದಿನ ಕ್ಷೇತ್ರವಾಗಿರುವ ಮುಧೋಳದಲ್ಲಿ ಹಳೆ ಹುರಿಯಾಳುಗಳ ಕಾದಾಟದಲ್ಲಿ ಬಿಜೆಪಿಯ ಗೋವಿಂದ ಕಾರಜೋಳ ಸೋಲು ಕಂಡಿದ್ದಾರೆ. ಕಾಂಗ್ರೆಸ್‌ನಿಂದ ಆರ್.ಬಿ ತಿಮ್ಮಾಪೂರ ಸ್ಪರ್ಧೆ ಮಾಡಿದ್ದರು.

ತಿಮ್ಮಾಪೂರ ಹಾಗೂ ಕಾರಜೋಳ ನಡುವೆ ಭಾರೀ ಪೈಪೋಟಿ ನಡೆದಿತ್ತು. ಅಂತಿಮವಾಗಿ ಆರ್‌ಬಿ ತಿಮ್ಮಾಪೂರ ಅವರು 70,478 ಮತಗಳನ್ನು ಪಡೆದು, ಗೋವಿಂದ್ ಕಾರಜೋಳ ಅವರನ್ನು 16,396ಮತಗಳ ಅಂತರದಲ್ಲಿ ಹೀನಾಯವಾಗಿ ಸೋಲಿಸಿದ್ದಾರೆ. ಗೋವಿಂದ್ ಕಾರಜೋ:ಳ ಅವರು 54,082 ಮತಗಳನ್ನು ಪಡೆದಿದ್ದಾರೆ. ಇನ್ನೂ ಪಕ್ಷೇತರರಾಗಿ ಕಣಕ್ಕಿಳಿದಿರುವ ಸತೀಶ್ ಬಂಡಿವಡ್ಡರ ಅವರು 16,747 ಮತ ಪಡೆಯುವ ಮೂಲಕ 3ನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ. ಈ ಹಿಂದೆ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿ ಸೋಲು ಕಂಡಿದ್ದರು. ಇದೀಗ ಕಾಂಗ್ರೆಸ್ ತೊರೆದು ಪಕ್ಷೇತರರಾಗಿ ಕಣದಲ್ಲಿದ್ದಾರೆ.

2004ರ ಚುನಾವಣೆಯಲ್ಲಿ 71,814 ಮತ ಪಡೆಯುವ ಮೂಲಕ ಗೋವಿಂದ ಕಾರಜೋಳ ಅವರು ಕಾಂಗ್ರೆಸ್‌ನ ಆರ್.ಬಿ ತಿಮ್ಮಾಪೂರ ವಿರುದ್ಧ 32,942 ಮತಗಳ ಅಂತರದಿಂದ ದೊಡ್ಡ ಗೆಲುವು ಸಾಧಿಸಿದರು. 2008ರಲ್ಲೂ ಕಾಂಗ್ರೆಸ್‌ನ ತಿಮ್ಮಾಪೂರ ಹಾಗೂ ಬಿಜೆಪಿಯ ಕಾರಜೋಳ ನಡುವೆಯೇ ಫೈಟ್ ಮುಂದುವರೆಯಿತು. ಕಾರಜೋಳ ಗೆಲುವಿನ ಓಟವನ್ನು ಮುಂದುವರೆಸಿದರು.ತಿಮ್ಮಾಪೂರ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟರು. ಈ ಚುನಾವಣೆಯಲ್ಲಿ ಇಬ್ಬರ ನಡುವಿನ ಮತಗಳಿಕೆಯ ಅಂತರ ಕೇವಲ 7,378 ಆಗಿತ್ತು.

2013ರ ಚುನಾವಣೆಯಲ್ಲೂ ಕೈ-ಕಮಲದಿಂದ ಸಾಂಪ್ರದಾಯಿಕ ಎದುರಾಳಿಗಳಾದ ಕಾರಜೋಳ ಹಾಗೂ ತಿಮ್ಮಾಪೂರ ಸ್ಪರ್ಧೆಗಿಳಿದರು. ಈ ಬಾರಿಯ ಮತಗಳಿಕೆಯ ಅಂತರ ಕಡಿಮೆಯಾಯಿತೇ ವಿನಃ ಗೆಲುವು-ಸೋಲಿನಲ್ಲಿ ವ್ಯತ್ಯಾಸವಾಗಲಿಲ್ಲ. ಕಾರಜೋಳ ಅವರು ಕೇವಲ 5,178 ಮತಗಳಿಂದ ಗೆಲುವು ಸಾಧಿಸಿದರು.

ಕಾರಜೋಳ ಸೋಲಿಗೆ ಕಾರಣವೇನು?

ಹಾಲಿ ನೀರಾವರಿ ಸಚಿವರಾಗಿರುವ ಗೋವಿಂದ ಕಾರಜೋಳ ರಾಜ್ಯದ ಉಪಮುಖ್ಯಮಂತ್ರಿ ಸ್ಥಾನವನ್ನೂ ಅಲಂಕರಿಸಿದ್ದರು. ಬಿಜೆಪಿಯಲ್ಲಿ ಪ್ರಬಲ ದಲಿತ ಸಮುದಾಯದ ಮುಖಂಡರಾಗಿರುವ ಅವರು 6 ಬಾರಿ ಸ್ಪರ್ಧಿಸಿ 5 ಬಾರಿ ಗೆಲುವು ಸಾಧಿಸಿದ್ದು, ಒಂದು ಬಾರಿ ಸೋಲು ಕಂಡಿದ್ದರು. ಸತತವಾಗಿ ಗೆಲುವು ಸಾಧಿಸಿದ್ದ ಕಾರಜೋಳ ಇದೀಗ ಸೋಲು ಕಂಡಿದ್ದಾರೆ.

ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳ ಮೂಲಕ ಒಳ್ಳೆಯ ಹೆಸರು ಗಳಿಸಿದ್ದ ಕಾರಜೋಳ, ಜನಸಂಪರ್ಕದಿಂದ ದೂರ ಉಳಿದಿದ್ದಾರೆ ಎನ್ನುವ ಆರೋಪಗಳನ್ನು ಎದುರಿಸುತ್ತಿದ್ದರು. ಇನ್ನು ಈ ಕ್ಷೇತ್ರದಲ್ಲಿ ರೆಡ್ಡಿ ಸಮುದಾಯದ ಮತದಾರರ ಒಲವು ಯಾರ ಕಡೆ ಇರುತ್ತದೋ ಆ ಅಭ್ಯರ್ಥಿಯ ಗೆಲುವು ನಿಶ್ಚಿತ. ಕಾರಜೋಳ ಅವರು ಈ ರೆಡ್ಡಿ ಸಮುದಾಯದೊಂದಿಗೆ ಇಷ್ಟು ವರ್ಷಗಳೊಂದಿಗೆ ಉತ್ತಮ ಸಂಬಂಧ ಹೊಂದಿದ್ದರು ಎನ್ನುವ ಕಾರಣಕ್ಕೆ ಗೆಲುವು ಸಾಧ್ಯವಾಗಿತ್ತು. ಆದರೆ ಈ ಬಾರಿ ರೆಡ್ಡಿ ಸಮುದಾಯವು ಕಾರಜೋಳ ಅವರನ್ನು ಕೈ ಬಿಟ್ಟು ಪಕ್ಷೇತರ ಅಭ್ಯರ್ಥಿ ಸತೀಶ್ ಪರ ಒಲವು ತೋರಿದ್ದಾರೆ.

ಈ ಭಾಗದಲ್ಲಿ ಕಬ್ಬು ಬೆಳೆಗಾರರ ಸಂಖ್ಯೆ ಅತ್ಯಧಿಕವಾಗಿದ್ದು, ಕಾರಜೋಳ ಅವರ ರನ್ನ ಕಾರ್ಖಾನೆಯಿಂದ ರೈತರಿಗೆ ಅನ್ಯಾಯವಾಗಿದೆ ಎನ್ನುವ ಆರೋಪಗಳು ಕೇಳಿಬಂದಿದ್ದವು. ಇದರಿಂದ ಕಾರಜೋಳಗೆ ಹೊಡೆತ ಬಿದ್ದಿದೆ ಎಂದು ಹೇಳಬಹುದು. ಇನ್ನು ಕಾರಜೋಳ ಆಪ್ತರಾಗಿದ್ದ ತಳೆವಾಡ ಬ್ರದರ್ಸ್ ಈ ಬಾರಿ ಬಿಜೆಪಿ ತೊರೆದಿರುವುದು ಕಾರಜೋಳಗೆ ದೊಡ್ಡಮಟ್ಟದ ನಷ್ಟವಾಗಿದೆ.

ಕಾರಜೋಳ ತಮ್ಮ ರಾಜಕೀಯ ಜೀವನದುದ್ದಕ್ಕೂ ಸಂಘಪರಿವಾರದಿಂದ ಅಂತರ ಕಾಯ್ದುಕೊಂಡು ಬಂದಿದ್ದಾರೆ. ಪಕ್ಷದ ಚಿಹ್ನೆಯನ್ನು ಅವಲಂಬಿಸಿಯೇ ಸಂಘಪರಿವಾರದ ಮತಗಳನ್ನು ಗಳಿಸಿದ್ದರು. ಆದರೆ ಈ ಬಾರಿ ಸಂಘ ಪರಿವಾರದ ಮತಗಳು ಬಿಜೆಪಿ ಕೈತಪ್ಪಿ, ಪಕ್ಷೇತರನ ಪಾಲಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...