Homeಕರ್ನಾಟಕಗೋವಿಂದ ಕಾರಜೋಳಗೆ ಹೀನಾಯ ಸೋಲು; ಗೆಲುವಿನ ದಡ ಸೇರಿದ ತಿಮ್ಮಾಪೂರ

ಗೋವಿಂದ ಕಾರಜೋಳಗೆ ಹೀನಾಯ ಸೋಲು; ಗೆಲುವಿನ ದಡ ಸೇರಿದ ತಿಮ್ಮಾಪೂರ

- Advertisement -
- Advertisement -

ಬಾಗಲಕೋಟೆ ಜಿಲ್ಲೆಯ ಭಾರೀ ಜಿದ್ದಾಜಿದ್ದಿನ ಕ್ಷೇತ್ರವಾಗಿರುವ ಮುಧೋಳದಲ್ಲಿ ಹಳೆ ಹುರಿಯಾಳುಗಳ ಕಾದಾಟದಲ್ಲಿ ಬಿಜೆಪಿಯ ಗೋವಿಂದ ಕಾರಜೋಳ ಸೋಲು ಕಂಡಿದ್ದಾರೆ. ಕಾಂಗ್ರೆಸ್‌ನಿಂದ ಆರ್.ಬಿ ತಿಮ್ಮಾಪೂರ ಸ್ಪರ್ಧೆ ಮಾಡಿದ್ದರು.

ತಿಮ್ಮಾಪೂರ ಹಾಗೂ ಕಾರಜೋಳ ನಡುವೆ ಭಾರೀ ಪೈಪೋಟಿ ನಡೆದಿತ್ತು. ಅಂತಿಮವಾಗಿ ಆರ್‌ಬಿ ತಿಮ್ಮಾಪೂರ ಅವರು 70,478 ಮತಗಳನ್ನು ಪಡೆದು, ಗೋವಿಂದ್ ಕಾರಜೋಳ ಅವರನ್ನು 16,396ಮತಗಳ ಅಂತರದಲ್ಲಿ ಹೀನಾಯವಾಗಿ ಸೋಲಿಸಿದ್ದಾರೆ. ಗೋವಿಂದ್ ಕಾರಜೋ:ಳ ಅವರು 54,082 ಮತಗಳನ್ನು ಪಡೆದಿದ್ದಾರೆ. ಇನ್ನೂ ಪಕ್ಷೇತರರಾಗಿ ಕಣಕ್ಕಿಳಿದಿರುವ ಸತೀಶ್ ಬಂಡಿವಡ್ಡರ ಅವರು 16,747 ಮತ ಪಡೆಯುವ ಮೂಲಕ 3ನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ. ಈ ಹಿಂದೆ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿ ಸೋಲು ಕಂಡಿದ್ದರು. ಇದೀಗ ಕಾಂಗ್ರೆಸ್ ತೊರೆದು ಪಕ್ಷೇತರರಾಗಿ ಕಣದಲ್ಲಿದ್ದಾರೆ.

2004ರ ಚುನಾವಣೆಯಲ್ಲಿ 71,814 ಮತ ಪಡೆಯುವ ಮೂಲಕ ಗೋವಿಂದ ಕಾರಜೋಳ ಅವರು ಕಾಂಗ್ರೆಸ್‌ನ ಆರ್.ಬಿ ತಿಮ್ಮಾಪೂರ ವಿರುದ್ಧ 32,942 ಮತಗಳ ಅಂತರದಿಂದ ದೊಡ್ಡ ಗೆಲುವು ಸಾಧಿಸಿದರು. 2008ರಲ್ಲೂ ಕಾಂಗ್ರೆಸ್‌ನ ತಿಮ್ಮಾಪೂರ ಹಾಗೂ ಬಿಜೆಪಿಯ ಕಾರಜೋಳ ನಡುವೆಯೇ ಫೈಟ್ ಮುಂದುವರೆಯಿತು. ಕಾರಜೋಳ ಗೆಲುವಿನ ಓಟವನ್ನು ಮುಂದುವರೆಸಿದರು.ತಿಮ್ಮಾಪೂರ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟರು. ಈ ಚುನಾವಣೆಯಲ್ಲಿ ಇಬ್ಬರ ನಡುವಿನ ಮತಗಳಿಕೆಯ ಅಂತರ ಕೇವಲ 7,378 ಆಗಿತ್ತು.

2013ರ ಚುನಾವಣೆಯಲ್ಲೂ ಕೈ-ಕಮಲದಿಂದ ಸಾಂಪ್ರದಾಯಿಕ ಎದುರಾಳಿಗಳಾದ ಕಾರಜೋಳ ಹಾಗೂ ತಿಮ್ಮಾಪೂರ ಸ್ಪರ್ಧೆಗಿಳಿದರು. ಈ ಬಾರಿಯ ಮತಗಳಿಕೆಯ ಅಂತರ ಕಡಿಮೆಯಾಯಿತೇ ವಿನಃ ಗೆಲುವು-ಸೋಲಿನಲ್ಲಿ ವ್ಯತ್ಯಾಸವಾಗಲಿಲ್ಲ. ಕಾರಜೋಳ ಅವರು ಕೇವಲ 5,178 ಮತಗಳಿಂದ ಗೆಲುವು ಸಾಧಿಸಿದರು.

ಕಾರಜೋಳ ಸೋಲಿಗೆ ಕಾರಣವೇನು?

ಹಾಲಿ ನೀರಾವರಿ ಸಚಿವರಾಗಿರುವ ಗೋವಿಂದ ಕಾರಜೋಳ ರಾಜ್ಯದ ಉಪಮುಖ್ಯಮಂತ್ರಿ ಸ್ಥಾನವನ್ನೂ ಅಲಂಕರಿಸಿದ್ದರು. ಬಿಜೆಪಿಯಲ್ಲಿ ಪ್ರಬಲ ದಲಿತ ಸಮುದಾಯದ ಮುಖಂಡರಾಗಿರುವ ಅವರು 6 ಬಾರಿ ಸ್ಪರ್ಧಿಸಿ 5 ಬಾರಿ ಗೆಲುವು ಸಾಧಿಸಿದ್ದು, ಒಂದು ಬಾರಿ ಸೋಲು ಕಂಡಿದ್ದರು. ಸತತವಾಗಿ ಗೆಲುವು ಸಾಧಿಸಿದ್ದ ಕಾರಜೋಳ ಇದೀಗ ಸೋಲು ಕಂಡಿದ್ದಾರೆ.

ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳ ಮೂಲಕ ಒಳ್ಳೆಯ ಹೆಸರು ಗಳಿಸಿದ್ದ ಕಾರಜೋಳ, ಜನಸಂಪರ್ಕದಿಂದ ದೂರ ಉಳಿದಿದ್ದಾರೆ ಎನ್ನುವ ಆರೋಪಗಳನ್ನು ಎದುರಿಸುತ್ತಿದ್ದರು. ಇನ್ನು ಈ ಕ್ಷೇತ್ರದಲ್ಲಿ ರೆಡ್ಡಿ ಸಮುದಾಯದ ಮತದಾರರ ಒಲವು ಯಾರ ಕಡೆ ಇರುತ್ತದೋ ಆ ಅಭ್ಯರ್ಥಿಯ ಗೆಲುವು ನಿಶ್ಚಿತ. ಕಾರಜೋಳ ಅವರು ಈ ರೆಡ್ಡಿ ಸಮುದಾಯದೊಂದಿಗೆ ಇಷ್ಟು ವರ್ಷಗಳೊಂದಿಗೆ ಉತ್ತಮ ಸಂಬಂಧ ಹೊಂದಿದ್ದರು ಎನ್ನುವ ಕಾರಣಕ್ಕೆ ಗೆಲುವು ಸಾಧ್ಯವಾಗಿತ್ತು. ಆದರೆ ಈ ಬಾರಿ ರೆಡ್ಡಿ ಸಮುದಾಯವು ಕಾರಜೋಳ ಅವರನ್ನು ಕೈ ಬಿಟ್ಟು ಪಕ್ಷೇತರ ಅಭ್ಯರ್ಥಿ ಸತೀಶ್ ಪರ ಒಲವು ತೋರಿದ್ದಾರೆ.

ಈ ಭಾಗದಲ್ಲಿ ಕಬ್ಬು ಬೆಳೆಗಾರರ ಸಂಖ್ಯೆ ಅತ್ಯಧಿಕವಾಗಿದ್ದು, ಕಾರಜೋಳ ಅವರ ರನ್ನ ಕಾರ್ಖಾನೆಯಿಂದ ರೈತರಿಗೆ ಅನ್ಯಾಯವಾಗಿದೆ ಎನ್ನುವ ಆರೋಪಗಳು ಕೇಳಿಬಂದಿದ್ದವು. ಇದರಿಂದ ಕಾರಜೋಳಗೆ ಹೊಡೆತ ಬಿದ್ದಿದೆ ಎಂದು ಹೇಳಬಹುದು. ಇನ್ನು ಕಾರಜೋಳ ಆಪ್ತರಾಗಿದ್ದ ತಳೆವಾಡ ಬ್ರದರ್ಸ್ ಈ ಬಾರಿ ಬಿಜೆಪಿ ತೊರೆದಿರುವುದು ಕಾರಜೋಳಗೆ ದೊಡ್ಡಮಟ್ಟದ ನಷ್ಟವಾಗಿದೆ.

ಕಾರಜೋಳ ತಮ್ಮ ರಾಜಕೀಯ ಜೀವನದುದ್ದಕ್ಕೂ ಸಂಘಪರಿವಾರದಿಂದ ಅಂತರ ಕಾಯ್ದುಕೊಂಡು ಬಂದಿದ್ದಾರೆ. ಪಕ್ಷದ ಚಿಹ್ನೆಯನ್ನು ಅವಲಂಬಿಸಿಯೇ ಸಂಘಪರಿವಾರದ ಮತಗಳನ್ನು ಗಳಿಸಿದ್ದರು. ಆದರೆ ಈ ಬಾರಿ ಸಂಘ ಪರಿವಾರದ ಮತಗಳು ಬಿಜೆಪಿ ಕೈತಪ್ಪಿ, ಪಕ್ಷೇತರನ ಪಾಲಾಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...