Homeಕರ್ನಾಟಕಕೆಜಿಎಫ್: ದಲಿತ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ- 10 ದಿನ ಕಳೆದರೂ ಆರೋಪಿಗಳನ್ನು ಬಂಧಿಸದ ಪೊಲೀಸರು!

ಕೆಜಿಎಫ್: ದಲಿತ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ- 10 ದಿನ ಕಳೆದರೂ ಆರೋಪಿಗಳನ್ನು ಬಂಧಿಸದ ಪೊಲೀಸರು!

“ಇದು ತುಂಬಾ ಸೂಕ್ಷ್ಮವಾದ ವಿಷಯವಾಗಿದ್ದು, ತನಿಖೆಯಿಂದ ಸತ್ಯಾಂಶ ಹೊರ ಬರಲಿದೆ. ಅದಕ್ಕೂ ಮೊದಲೇ ಏನನ್ನೂ ಹೇಳಲು ಇಚ್ಚಿಸುವುದಿಲ್ಲ” ಎಂದು ಕೆಜಿಎಫ್ ಶಾಸಕರಾದ ರೂಪ ಶಶಿಧರ್ ಹೇಳಿದ್ದಾರೆ.

- Advertisement -
- Advertisement -

ದಲಿತರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ, ಜಾತಿ ನಿಂದನೆ ಮಾಡಿರುವ ಘಟನೆ ಕೆಜಿಎಫ್ ನ ಕೆ.ಸಿ.ರೆಡ್ಡಿ ಗಾಂಡ್ಲ ಹಳ್ಳಿಯಲ್ಲಿ ನಡೆದಿದೆ ಎಂದು ತಾಲೂಕಿನ ಆಂಡರ್‌ಸನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಲ್ಲೆಗೊಳಗಾದ ವ್ಯಕ್ತಿ ಶಿವರಾಮಪ್ಪ, ಈ ಸಂಬಂಧ ತನ್ನದೇ ಗ್ರಾಮದವರಾದ ಮಂಜುನಾಥ ರೆಡ್ಡಿ ಮತ್ತು ಚಂದ್ರಾ ರೆಡ್ಡಿ ಎಂಬುವವರ ಮೇಲೆ ದೂರು ನೀಡಿದ್ದು, ಐಪಿಸಿ ಸೆಕ್ಷನ್ 323, 324, 504, 506 ಮತ್ತು 34 ಹಾಗೂ SC, ST ದೌರ್ಜನ್ಯ ಪ್ರತಿಬಂಧಕ ಕಾಯ್ದೆ-2005 (ತಿದ್ದುಪಡಿ)ರ ಅಡಿಯಲ್ಲಿ ಎಫ್.ಐ.ಆರ್ ದಾಖಲಾಗಿದೆ.

ಆಗಸ್ಟ್ 29, 2020 ರಂದು ಪ್ರಕರಣ ದಾಖಲಿಸಿದ್ದರೂ ಸಹ, ಆರೋಪಿಗಳನ್ನು ಇನ್ನೂ ಬಂಧಿಸಲಾಗಿಲ್ಲ ಎಂದು ಶಿವರಾಮಪ್ಪನವರ ಸಹೋದರರಾದ ನಾರಾಯಣ್ ಕ್ಯಾಸಂಬಳ್ಳಿ ಆರೋಪಿಸಿದ್ದಾರೆ.

“ಆಗಸ್ಟ್ 29 ರಂದು ಬೆಳಿಗ್ಗೆ 9 ಗಂಟಗೆ ಈ ಪ್ರಕರಣದ ದೂರನ್ನು ಪೊಲೀಸ್ ಠಾಣೆಗೆ ನೀಡಿದ್ದರೂ, ಅಂದು ಸಂಜೆಯವರೆಗೂ ಯಾವುದೇ ರೀತಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳದೇ, ಯಾವುದೇ ಕ್ರಮ ಕೈಗೊಂಡಿರಲಿಲ್ಲ. ನಂತರ ಉನ್ನತ ಅಧಿಕಾರಿಗಳಿಂದ ಒತ್ತಡ ಹಾಕಿಸಿದ್ದರಿಂದ ಅಂದು ರಾತ್ರಿ 11 ಗಂಟೆಗೆ ಪ್ರಕರಣ ದಾಖಲಿಸಿ ಎಫ್.ಐ.ಆರ್ ಹಾಕಿದ್ದಾರೆ” ಎಂದು ಅವರು ಹೇಳಿದರು.

ಶಿವರಾಮಪ್ಪನವರು ತಮಗೆ ಸೇರಿದ ಖಾಲಿ ನಿವೇಶನದಲ್ಲಿ ಕಲ್ಲುಗಳಿಂದ ಕಾಂಪೌಂಡ್ ಕಟ್ಟುತ್ತಿದ್ದ ವೇಳೆ ಅದೇ ಊರಿನ ರಘುರಾಮ ರೆಡ್ಡಿ ಎಂಬುವವರ ಮಕ್ಕಳಾದ ಮಂಜುನಾಥ ರೆಡ್ಡಿ ಮತ್ತು ಚಂದ್ರಾ ರೆಡ್ಡಿ ಎಂಬುವವರು, ಶಿವರಾಮಪ್ಪನವರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಸೈಜುಗಲ್ಲು ಎತ್ತಿ ಹಾಕಿ ದೊಣ್ಣೆ ಮತ್ತು ಮಚ್ಚುಗಳಿಂದ ಮಾರಣಾಂತಿಕವಾದ ಹಲ್ಲೆ ನಡೆಸಿದ್ದಾರೆ ಎಂದು ದೂರು ದಾಖಲಾಗಿದೆ.

ಇದನ್ನೂ ಓದಿ: ಮೋದಿ ಜಿಂದಾಬಾದ್, ಜೈ ಶ್ರೀ ರಾಮ್ ಎನ್ನಲು ನಿರಾಕರಿಸಿದ ಮುಸ್ಲಿಂ ಆಟೋ ಡ್ರೈವರ್ ಮೇಲೆ ಹಲ್ಲೆ

“ದೂರು ದಾಖಲಾಗಿ 10 ದಿನಗಳು ಕಳೆದರೂ, ಈವರೆಗೆ ಆರೋಪಿಗಳನ್ನು ಬಂಧಿಸದ ಪೋಲಿಸರ ವರ್ತನೆಯನ್ನು ಖಂಡಿಸಿ, ಜಿಲ್ಲೆ ಮತ್ತು ತಾಲ್ಲೂಕಿನ ದಸಂಸ ಮತ್ತು ಇತರ ದಲಿತ ಸಂಘಟನೆಗಳು ಕಳೆದ 8 ದಿನಗಳಿಂದ ಪ್ರತಿಭಟನೆ ಮಾಡುತ್ತಿದೆ. ಇಂದೂ ಕೂಡ ಕೆಜಿಎಫ್ ನ ತಾಲ್ಲೂಕು ಕಛೇರಿ ಮುಂಭಾಗ ದಲಿತ ಸಂಘಟನೆಗಳು ಜಂಟಿಯಾಗಿ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು. ಎಲ್ಲಾ ಅಗತ್ಯ ದಾಖಲೆಗಳೂ ಹಲ್ಲೆಗೊಳಗಾದವರ ಪರವಾಗಿವೆ ಎಂದು ತಹಶೀಲ್ದಾರ್ ಅವರೇ ಹೇಳಿದ್ದಾರೆ. ಆದರೂ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ” ಎಂದು ನಾರಾಯಣ ಕ್ಯಾಸಂಬಳ್ಳಿ ಆರೋಪಿಸಿದ್ದಾರೆ.

ಈ ನಡುವೆ ಕೋಲಾರ ಜಿಲ್ಲಾ ಅಟ್ರಾಸಿಟಿ ಕಾಯ್ದೆಯಡಿ ದಲಿತ ದೌರ್ಜನ್ಯ ತಡೆ ಸಮಿತಿ ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದೆ‌. ದೌರ್ಜನ್ಯಕ್ಕೆ ಒಳಗಾದ ಶಿವರಾಮಪ್ಪ ಕುಟುಂಬದವರಿಗೆ ಧೈರ್ಯವನ್ನು ತುಂಬಿದೆ.

ಪ್ರಸ್ತುತ ಪ್ರಕರಣದ ವಿವಾದಿತ ಖಾಲಿ ನಿವೇಶನವನ್ನು ಶಿವರಾಮಪ್ಪನವರ ಸಹೋದರರಾದ ಸತ್ಯಮೂರ್ತಿ ಅವರು 2013 ರಲ್ಲಿಯೇ ಖರೀದಿಸಿದ್ದರು. ಈ ನಿವೇಶನವು ಅದೇ ಗ್ರಾಮದವರಾದ ಕದಿರೆಪ್ಪ ಎಂಬುವವರಿಗೆ 1975ರಲ್ಲಿ ಪಂಚಾಯಿತಿಯ ಕಡೆಯಿಂದ ಮಂಜೂರಾಗಿದ್ದು, ಆಗಲೇ ಇದಕ್ಕೆ ಸಂಬಂಧಿಸಿದ ಹಕ್ಕು ಪತ್ರವನ್ನು ಪಡೆದುಕೊಂಡಿದ್ದರು.

“ಆದರೆ ಈಗ, ಆರೋಪಿಗಳು ಈ ಸ್ಥಳ ತಮಗೆ ಸೇರಿದ್ದೆಂದು ಹಲವು ದಿನಗಳಿಂದ ತೊಂದರೆ ಕೊಡುತ್ತಿದ್ದರು. ಇಲ್ಲಿ ನಾವು ಸಾವಿತ್ರಿಭಾಯಿ ಫುಲೆ ಅವರ ಹೆಸರಿನಲ್ಲಿ ಗ್ರಂಥಾಲಯವೊಂದನ್ನು ಕಟ್ಟಿಸಿ, ಪ್ರಗತಿಪರ ಚಟುವಟಿಕೆಗಳ ತಾಣವನ್ನಾಗಿ ಮಾಡಬೇಕು ಎಂಬ ಬಯಕೆಯನ್ನು ಹೊಂದಿದ್ದೆವು. ಆದರೆ ಆರೋಪಿಗಳು ಬಂದು ಇಲ್ಲಿ ದೇವಸ್ಥಾನ ಕಟ್ಟಿಸಬೇಕು ಎಂದು ದಲಿತರನ್ನೇ ದಲಿತರ ಮೇಲೆ ಎತ್ತಿಕಟ್ಟಿ ಪರಿಸ್ಥಿತಿ ಬಿಗಡಾಯಿಸುವಂತೆ ಮಾಡಿದ್ದಾರೆ” ಎಂದು ನಾರಾಯಣ್ ಕ್ಯಾಸಂಬಳ್ಳಿ ಹೇಳಿದ್ದಾರೆ.

ಇದನ್ನೂ ಓದಿ: ಪೊಲೀಸರ ಎದುರೇ ದಲಿತರ ಮೇಲೆ ಹಲ್ಲೆ ಆರೋಪ: ಠಾಣೆ ಎದುರು ಪ್ರತಿಭಟನೆ

“ಸುಮಾರು 10 ದಿನಗಳಿಂದ ಇಷ್ಟೆಲ್ಲಾ ಬೆಳವಣಿಗೆಗಳಾದರೂ ಯಾವುದೇ ಜನಪ್ರತಿನಿಧಿಗಳು ಗ್ರಾಮದತ್ತ ಸುಳಿದು ಸಾಂತ್ವನ ಹೇಳುವ‌ ಕೆಲಸ ಮಾಡಿಲ್ಲ. ಆದರೆ ಕಳೆದ ಸೆಪ್ಟಂಬರ್ 4 ರಂದು ತನ್ನ ಬೆಂಬಲಿಗರೊಂದಿಗೆ ನಾಲ್ಕಾರು ಕಾರುಗಳಲ್ಲಿ ಗ್ರಾಮಕ್ಕೆ ದಿಢೀರ್ ಭೇಟಿಕೊಟ್ಟ ಕೆಜಿಎಫ್ ಕ್ಷೇತ್ರದ MLA ರೂಪ ಶಶಿಧರ್ ಅವರು, ನಮ್ಮನ್ನಾಗಲಿ ಅಥವಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವರಾಮಪ್ಪ ಅವರನ್ನಾಗಲಿ ಸೌಜನ್ಯಕ್ಕೂ ಭೇಟಿ ಮಾಡದೆ, ಆರೋಪಿಗಳ ತಂದೆಯಾದ ರಘುರಾಮ ರೆಡ್ಡಿ ಮತ್ತು ಅವರ ಬೆಂಬಲಿತರೂ ಸೇರಿದಂತೆ ಗ್ರಾಮದ ಸವರ್ಣೀಯ ಸಮುದಾಯದವರೊಂದಿಗೆ ಪಂಚಾಯತಿ ಮಾಡಿ ಹಲ್ಲೆಗೊಳಗಾದವರು ಕೇಸು ದಾಖಲಿಸಿದ್ದೇ ತಪ್ಪು ಎಂಬಂತೆ ಮಾತನಾಡಿರುವುದು ನಿಜಕ್ಕೂ ದುರಂತ” ಎಂದು ಕುಟುಂಬಸ್ಥರು ತಮ್ಮ ಅಳಲು ತೋಡಿಕೊಂಡಿದ್ದಾರೆ.

“ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆದು ರಕ್ಷಣೆ ನೀಡಬೇಕಾದ, ಸ್ವತಃ ದಲಿತ ಸಮುದಾಯದವರೇ ಆದ ಶಾಸಕರೇ ಹಲ್ಲೆಮಾಡಿದ ಆರೋಪಿಗಳ ಪರವಾಗಿ ನಿಂತಿರುವುದು ಅಮಾನವೀಯ ಮತ್ತು ಖಂಡನೀಯ. ಆರೋಪಿಗಳಾದ ಮಂಜುನಾಥ ರೆಡ್ಡಿ ಮತ್ತು ಚಂದ್ರಾ ರೆಡ್ಡಿ ಮತ್ತು ಅವರ ಕುಟುಂಬಕ್ಕೆ ಬೆಂಬಲವಾಗಿ ನಿಂತಿರುವ MLA ರೂಪ ಶಶಿಧರ್ ಅವರ ದಲಿತ ವಿರೋಧಿ ನಡೆಯನ್ನು ಖಂಡಿಸಬೇಕಿದೆ” ಎಂದು ಕುಟುಂಬದವರು ಆರೋಪಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿದ ಕೆಜಿಎಫ್ ಶಾಸಕರಾದ ರೂಪ ಶಶಿಧರ್ ಅವರು, “ಇದು ತುಂಬಾ ಸೂಕ್ಷ್ಮವಾದ ವಿಷಯವಾಗಿದ್ದು, ತನಿಖೆಯಿಂದ ಸತ್ಯಾಂಶ ಹೊರ ಬರಲಿದೆ. ಅದಕ್ಕೂ ಮೊದಲೇ ಏನನ್ನೂ ಹೇಳಲು ಇಚ್ಚಿಸುವುದಿಲ್ಲ” ಎಂದು ಹೇಳಿದರು.

“ವಾಸ್ತವದಲ್ಲಿ ಏನಾಗಿದೆ ಎಂಬುದು ನನಗೂ ಗೊತ್ತಿಲ್ಲ. ಹಾಗಾಗಿ ನೀವು ಇದರ ಕುರಿತು ಪೊಲೀಸಿನವರನ್ನೇ ಕೇಳಬೇಕು. ಅವರು ಪ್ರಕರಣದ ಎಲ್ಲಾ ವಿಷಯಗಳ ವಿವರ ನೀಡುತ್ತಾರೆ. ಸಂಪೂರ್ಣವಾಗಿ ತಿಳಿದುಕೊಂಡು ನಂತರ ನನ್ನನ್ನು ಪ್ರಶ್ನಿಸಿ. ಅದಾಗ್ಯೂ, ದಲಿತರೊಬ್ಬರ ಮೇಲಿನ ಹಲ್ಲೆಯ ಈ ಪ್ರಕರಣವನ್ನು ಸೂಕ್ಷ್ಮವಾಗಿ ಬಗೆಹರಿಸಿ, ಯಾರಿಗೂ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಬೇಕು. ಈಗ ಇದಕ್ಕೆ ಸಂಬಂಧಿದಂತೆ ಹೋರಾಟ ಮಾಡುತ್ತಿರುವ ಸಂಘಟನೆಗಳಿಗೆ ಇದು ಬೇಕಿಲ್ಲ. ಈ ಸಮಸ್ಯೆಯನ್ನು ಗ್ರಾಮಸ್ಥರ ಸಮ್ಮುಖದಲ್ಲೇ ಬಗೆಹರಿಸಬಹುದಿತ್ತು. ಆದರೆ ಇದರ ಹಿಂದೆ ಬೇರೆ ಉದ್ದೇಶವೇ ಇದೆ. ಹಾಗಾಗಿ ಇದಕ್ಕೆ ಸಂಬಂಧಿಸಿದಂತೆ ಈಗ ನಾನು ಪ್ರತಿಕ್ರಿಯಿಸುವುದಿಲ್ಲ” ಎಂದು ಶಾಸಕಿ ರೂಪ ಶಶಿಧರ್ ಹೇಳಿದ್ದಾರೆ.

“ವಿಳಂಬವಾಗಿ ದೂರು ದಾಖಲಿಸಿಕೊಂಡಿದ್ದೇ ಅಲ್ಲದೆ ಆರೋಪಿಗಳನ್ನ ಬಂಧಿಸಲು ವಿಳಂಬ ಮಾಡುತ್ತಿರುವ, ಪರೋಕ್ಷವಾಗಿ ಆರೋಪಿಗಳಿಗೆ ಸಹಕರಿಸುತ್ತಿರುವ KGFನ ಆಂಡ್ರಸನ್ ಪೇಟೆ ಪೋಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಮುನಿಯಪ್ಪ ಅವರನ್ನು ಕೂಡಲೇ ಸೇವೆಯಿಂದ ಅಮಾನತು ಮಾಡಲು ಒತ್ತಾಯಿಸೋಣ. ಅಲ್ಲದೆ ದಲಿತರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಮತ್ತು ಜಾತಿ ನಿಂದನೆ ಮಾಡಿರುವ ಆರೋಪಿಗಳಾದ ಮಂಜುನಾಥ ರೆಡ್ಡಿ ಮತ್ತು ಚಂದ್ರಾ ರೆಡ್ಡಿ ಅವರನ್ನು ಕೂಡಲೇ ಬಂಧಿಸಿ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು. ಹಲ್ಲೆಗೊಳಗಾದ ಶಿವರಾಮಪ್ಪ ಕುಟುಂಬಕ್ಕೆ ಸೂಕ್ತ ನ್ಯಾಯ ಮತ್ತು ರಕ್ಷಣೆಯನ್ನು ಒದಗಿಸಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (DSS), ಜಿಲ್ಲೆ ಮತ್ತು ತಾಲೂಕಿನ ಎಲ್ಲಾ ದಲಿತಪರ ಸಂಘಟನೆಗಳ ಒಕ್ಕೂಟ ಹಾಗೂ ದಲಿತ ಮಾನವ ಹಕ್ಕುಗಳ ವೇದಿಕೆ  ಒತ್ತಾಯಿಸುತ್ತದೆ. ಮತ್ತು ಮುಂದಿನ ದಿನಗಳಲ್ಲಿ ಉಗ್ರ ಹೋರಾಟಕ್ಕೆ ಮುಂದಾಗಲಿವೆ” ಎಂದು ಗೋವಿಂದರಾಜ ಬೈಚಗುಪ್ಪೆ ಹೇಳಿದ್ದಾರೆ.


ಇದನ್ನೂ ಓದಿ: ಜಾತಿ-ತಾರತಮ್ಯ: ವರದಿ ಮಾಡಿದ್ದ ತಮಿಳುನಾಡಿನ ಪತ್ರಕರ್ತನ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...