Homeಕರ್ನಾಟಕಕೆಜಿಎಫ್: ದಲಿತ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ- 10 ದಿನ ಕಳೆದರೂ ಆರೋಪಿಗಳನ್ನು ಬಂಧಿಸದ ಪೊಲೀಸರು!

ಕೆಜಿಎಫ್: ದಲಿತ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ- 10 ದಿನ ಕಳೆದರೂ ಆರೋಪಿಗಳನ್ನು ಬಂಧಿಸದ ಪೊಲೀಸರು!

“ಇದು ತುಂಬಾ ಸೂಕ್ಷ್ಮವಾದ ವಿಷಯವಾಗಿದ್ದು, ತನಿಖೆಯಿಂದ ಸತ್ಯಾಂಶ ಹೊರ ಬರಲಿದೆ. ಅದಕ್ಕೂ ಮೊದಲೇ ಏನನ್ನೂ ಹೇಳಲು ಇಚ್ಚಿಸುವುದಿಲ್ಲ” ಎಂದು ಕೆಜಿಎಫ್ ಶಾಸಕರಾದ ರೂಪ ಶಶಿಧರ್ ಹೇಳಿದ್ದಾರೆ.

- Advertisement -
- Advertisement -

ದಲಿತರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ, ಜಾತಿ ನಿಂದನೆ ಮಾಡಿರುವ ಘಟನೆ ಕೆಜಿಎಫ್ ನ ಕೆ.ಸಿ.ರೆಡ್ಡಿ ಗಾಂಡ್ಲ ಹಳ್ಳಿಯಲ್ಲಿ ನಡೆದಿದೆ ಎಂದು ತಾಲೂಕಿನ ಆಂಡರ್‌ಸನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಲ್ಲೆಗೊಳಗಾದ ವ್ಯಕ್ತಿ ಶಿವರಾಮಪ್ಪ, ಈ ಸಂಬಂಧ ತನ್ನದೇ ಗ್ರಾಮದವರಾದ ಮಂಜುನಾಥ ರೆಡ್ಡಿ ಮತ್ತು ಚಂದ್ರಾ ರೆಡ್ಡಿ ಎಂಬುವವರ ಮೇಲೆ ದೂರು ನೀಡಿದ್ದು, ಐಪಿಸಿ ಸೆಕ್ಷನ್ 323, 324, 504, 506 ಮತ್ತು 34 ಹಾಗೂ SC, ST ದೌರ್ಜನ್ಯ ಪ್ರತಿಬಂಧಕ ಕಾಯ್ದೆ-2005 (ತಿದ್ದುಪಡಿ)ರ ಅಡಿಯಲ್ಲಿ ಎಫ್.ಐ.ಆರ್ ದಾಖಲಾಗಿದೆ.

ಆಗಸ್ಟ್ 29, 2020 ರಂದು ಪ್ರಕರಣ ದಾಖಲಿಸಿದ್ದರೂ ಸಹ, ಆರೋಪಿಗಳನ್ನು ಇನ್ನೂ ಬಂಧಿಸಲಾಗಿಲ್ಲ ಎಂದು ಶಿವರಾಮಪ್ಪನವರ ಸಹೋದರರಾದ ನಾರಾಯಣ್ ಕ್ಯಾಸಂಬಳ್ಳಿ ಆರೋಪಿಸಿದ್ದಾರೆ.

“ಆಗಸ್ಟ್ 29 ರಂದು ಬೆಳಿಗ್ಗೆ 9 ಗಂಟಗೆ ಈ ಪ್ರಕರಣದ ದೂರನ್ನು ಪೊಲೀಸ್ ಠಾಣೆಗೆ ನೀಡಿದ್ದರೂ, ಅಂದು ಸಂಜೆಯವರೆಗೂ ಯಾವುದೇ ರೀತಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳದೇ, ಯಾವುದೇ ಕ್ರಮ ಕೈಗೊಂಡಿರಲಿಲ್ಲ. ನಂತರ ಉನ್ನತ ಅಧಿಕಾರಿಗಳಿಂದ ಒತ್ತಡ ಹಾಕಿಸಿದ್ದರಿಂದ ಅಂದು ರಾತ್ರಿ 11 ಗಂಟೆಗೆ ಪ್ರಕರಣ ದಾಖಲಿಸಿ ಎಫ್.ಐ.ಆರ್ ಹಾಕಿದ್ದಾರೆ” ಎಂದು ಅವರು ಹೇಳಿದರು.

ಶಿವರಾಮಪ್ಪನವರು ತಮಗೆ ಸೇರಿದ ಖಾಲಿ ನಿವೇಶನದಲ್ಲಿ ಕಲ್ಲುಗಳಿಂದ ಕಾಂಪೌಂಡ್ ಕಟ್ಟುತ್ತಿದ್ದ ವೇಳೆ ಅದೇ ಊರಿನ ರಘುರಾಮ ರೆಡ್ಡಿ ಎಂಬುವವರ ಮಕ್ಕಳಾದ ಮಂಜುನಾಥ ರೆಡ್ಡಿ ಮತ್ತು ಚಂದ್ರಾ ರೆಡ್ಡಿ ಎಂಬುವವರು, ಶಿವರಾಮಪ್ಪನವರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಸೈಜುಗಲ್ಲು ಎತ್ತಿ ಹಾಕಿ ದೊಣ್ಣೆ ಮತ್ತು ಮಚ್ಚುಗಳಿಂದ ಮಾರಣಾಂತಿಕವಾದ ಹಲ್ಲೆ ನಡೆಸಿದ್ದಾರೆ ಎಂದು ದೂರು ದಾಖಲಾಗಿದೆ.

ಇದನ್ನೂ ಓದಿ: ಮೋದಿ ಜಿಂದಾಬಾದ್, ಜೈ ಶ್ರೀ ರಾಮ್ ಎನ್ನಲು ನಿರಾಕರಿಸಿದ ಮುಸ್ಲಿಂ ಆಟೋ ಡ್ರೈವರ್ ಮೇಲೆ ಹಲ್ಲೆ

“ದೂರು ದಾಖಲಾಗಿ 10 ದಿನಗಳು ಕಳೆದರೂ, ಈವರೆಗೆ ಆರೋಪಿಗಳನ್ನು ಬಂಧಿಸದ ಪೋಲಿಸರ ವರ್ತನೆಯನ್ನು ಖಂಡಿಸಿ, ಜಿಲ್ಲೆ ಮತ್ತು ತಾಲ್ಲೂಕಿನ ದಸಂಸ ಮತ್ತು ಇತರ ದಲಿತ ಸಂಘಟನೆಗಳು ಕಳೆದ 8 ದಿನಗಳಿಂದ ಪ್ರತಿಭಟನೆ ಮಾಡುತ್ತಿದೆ. ಇಂದೂ ಕೂಡ ಕೆಜಿಎಫ್ ನ ತಾಲ್ಲೂಕು ಕಛೇರಿ ಮುಂಭಾಗ ದಲಿತ ಸಂಘಟನೆಗಳು ಜಂಟಿಯಾಗಿ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು. ಎಲ್ಲಾ ಅಗತ್ಯ ದಾಖಲೆಗಳೂ ಹಲ್ಲೆಗೊಳಗಾದವರ ಪರವಾಗಿವೆ ಎಂದು ತಹಶೀಲ್ದಾರ್ ಅವರೇ ಹೇಳಿದ್ದಾರೆ. ಆದರೂ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ” ಎಂದು ನಾರಾಯಣ ಕ್ಯಾಸಂಬಳ್ಳಿ ಆರೋಪಿಸಿದ್ದಾರೆ.

ಈ ನಡುವೆ ಕೋಲಾರ ಜಿಲ್ಲಾ ಅಟ್ರಾಸಿಟಿ ಕಾಯ್ದೆಯಡಿ ದಲಿತ ದೌರ್ಜನ್ಯ ತಡೆ ಸಮಿತಿ ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡಿದೆ‌. ದೌರ್ಜನ್ಯಕ್ಕೆ ಒಳಗಾದ ಶಿವರಾಮಪ್ಪ ಕುಟುಂಬದವರಿಗೆ ಧೈರ್ಯವನ್ನು ತುಂಬಿದೆ.

ಪ್ರಸ್ತುತ ಪ್ರಕರಣದ ವಿವಾದಿತ ಖಾಲಿ ನಿವೇಶನವನ್ನು ಶಿವರಾಮಪ್ಪನವರ ಸಹೋದರರಾದ ಸತ್ಯಮೂರ್ತಿ ಅವರು 2013 ರಲ್ಲಿಯೇ ಖರೀದಿಸಿದ್ದರು. ಈ ನಿವೇಶನವು ಅದೇ ಗ್ರಾಮದವರಾದ ಕದಿರೆಪ್ಪ ಎಂಬುವವರಿಗೆ 1975ರಲ್ಲಿ ಪಂಚಾಯಿತಿಯ ಕಡೆಯಿಂದ ಮಂಜೂರಾಗಿದ್ದು, ಆಗಲೇ ಇದಕ್ಕೆ ಸಂಬಂಧಿಸಿದ ಹಕ್ಕು ಪತ್ರವನ್ನು ಪಡೆದುಕೊಂಡಿದ್ದರು.

“ಆದರೆ ಈಗ, ಆರೋಪಿಗಳು ಈ ಸ್ಥಳ ತಮಗೆ ಸೇರಿದ್ದೆಂದು ಹಲವು ದಿನಗಳಿಂದ ತೊಂದರೆ ಕೊಡುತ್ತಿದ್ದರು. ಇಲ್ಲಿ ನಾವು ಸಾವಿತ್ರಿಭಾಯಿ ಫುಲೆ ಅವರ ಹೆಸರಿನಲ್ಲಿ ಗ್ರಂಥಾಲಯವೊಂದನ್ನು ಕಟ್ಟಿಸಿ, ಪ್ರಗತಿಪರ ಚಟುವಟಿಕೆಗಳ ತಾಣವನ್ನಾಗಿ ಮಾಡಬೇಕು ಎಂಬ ಬಯಕೆಯನ್ನು ಹೊಂದಿದ್ದೆವು. ಆದರೆ ಆರೋಪಿಗಳು ಬಂದು ಇಲ್ಲಿ ದೇವಸ್ಥಾನ ಕಟ್ಟಿಸಬೇಕು ಎಂದು ದಲಿತರನ್ನೇ ದಲಿತರ ಮೇಲೆ ಎತ್ತಿಕಟ್ಟಿ ಪರಿಸ್ಥಿತಿ ಬಿಗಡಾಯಿಸುವಂತೆ ಮಾಡಿದ್ದಾರೆ” ಎಂದು ನಾರಾಯಣ್ ಕ್ಯಾಸಂಬಳ್ಳಿ ಹೇಳಿದ್ದಾರೆ.

ಇದನ್ನೂ ಓದಿ: ಪೊಲೀಸರ ಎದುರೇ ದಲಿತರ ಮೇಲೆ ಹಲ್ಲೆ ಆರೋಪ: ಠಾಣೆ ಎದುರು ಪ್ರತಿಭಟನೆ

“ಸುಮಾರು 10 ದಿನಗಳಿಂದ ಇಷ್ಟೆಲ್ಲಾ ಬೆಳವಣಿಗೆಗಳಾದರೂ ಯಾವುದೇ ಜನಪ್ರತಿನಿಧಿಗಳು ಗ್ರಾಮದತ್ತ ಸುಳಿದು ಸಾಂತ್ವನ ಹೇಳುವ‌ ಕೆಲಸ ಮಾಡಿಲ್ಲ. ಆದರೆ ಕಳೆದ ಸೆಪ್ಟಂಬರ್ 4 ರಂದು ತನ್ನ ಬೆಂಬಲಿಗರೊಂದಿಗೆ ನಾಲ್ಕಾರು ಕಾರುಗಳಲ್ಲಿ ಗ್ರಾಮಕ್ಕೆ ದಿಢೀರ್ ಭೇಟಿಕೊಟ್ಟ ಕೆಜಿಎಫ್ ಕ್ಷೇತ್ರದ MLA ರೂಪ ಶಶಿಧರ್ ಅವರು, ನಮ್ಮನ್ನಾಗಲಿ ಅಥವಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವರಾಮಪ್ಪ ಅವರನ್ನಾಗಲಿ ಸೌಜನ್ಯಕ್ಕೂ ಭೇಟಿ ಮಾಡದೆ, ಆರೋಪಿಗಳ ತಂದೆಯಾದ ರಘುರಾಮ ರೆಡ್ಡಿ ಮತ್ತು ಅವರ ಬೆಂಬಲಿತರೂ ಸೇರಿದಂತೆ ಗ್ರಾಮದ ಸವರ್ಣೀಯ ಸಮುದಾಯದವರೊಂದಿಗೆ ಪಂಚಾಯತಿ ಮಾಡಿ ಹಲ್ಲೆಗೊಳಗಾದವರು ಕೇಸು ದಾಖಲಿಸಿದ್ದೇ ತಪ್ಪು ಎಂಬಂತೆ ಮಾತನಾಡಿರುವುದು ನಿಜಕ್ಕೂ ದುರಂತ” ಎಂದು ಕುಟುಂಬಸ್ಥರು ತಮ್ಮ ಅಳಲು ತೋಡಿಕೊಂಡಿದ್ದಾರೆ.

“ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆದು ರಕ್ಷಣೆ ನೀಡಬೇಕಾದ, ಸ್ವತಃ ದಲಿತ ಸಮುದಾಯದವರೇ ಆದ ಶಾಸಕರೇ ಹಲ್ಲೆಮಾಡಿದ ಆರೋಪಿಗಳ ಪರವಾಗಿ ನಿಂತಿರುವುದು ಅಮಾನವೀಯ ಮತ್ತು ಖಂಡನೀಯ. ಆರೋಪಿಗಳಾದ ಮಂಜುನಾಥ ರೆಡ್ಡಿ ಮತ್ತು ಚಂದ್ರಾ ರೆಡ್ಡಿ ಮತ್ತು ಅವರ ಕುಟುಂಬಕ್ಕೆ ಬೆಂಬಲವಾಗಿ ನಿಂತಿರುವ MLA ರೂಪ ಶಶಿಧರ್ ಅವರ ದಲಿತ ವಿರೋಧಿ ನಡೆಯನ್ನು ಖಂಡಿಸಬೇಕಿದೆ” ಎಂದು ಕುಟುಂಬದವರು ಆರೋಪಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂಗೆ ಪ್ರತಿಕ್ರಿಯಿಸಿದ ಕೆಜಿಎಫ್ ಶಾಸಕರಾದ ರೂಪ ಶಶಿಧರ್ ಅವರು, “ಇದು ತುಂಬಾ ಸೂಕ್ಷ್ಮವಾದ ವಿಷಯವಾಗಿದ್ದು, ತನಿಖೆಯಿಂದ ಸತ್ಯಾಂಶ ಹೊರ ಬರಲಿದೆ. ಅದಕ್ಕೂ ಮೊದಲೇ ಏನನ್ನೂ ಹೇಳಲು ಇಚ್ಚಿಸುವುದಿಲ್ಲ” ಎಂದು ಹೇಳಿದರು.

“ವಾಸ್ತವದಲ್ಲಿ ಏನಾಗಿದೆ ಎಂಬುದು ನನಗೂ ಗೊತ್ತಿಲ್ಲ. ಹಾಗಾಗಿ ನೀವು ಇದರ ಕುರಿತು ಪೊಲೀಸಿನವರನ್ನೇ ಕೇಳಬೇಕು. ಅವರು ಪ್ರಕರಣದ ಎಲ್ಲಾ ವಿಷಯಗಳ ವಿವರ ನೀಡುತ್ತಾರೆ. ಸಂಪೂರ್ಣವಾಗಿ ತಿಳಿದುಕೊಂಡು ನಂತರ ನನ್ನನ್ನು ಪ್ರಶ್ನಿಸಿ. ಅದಾಗ್ಯೂ, ದಲಿತರೊಬ್ಬರ ಮೇಲಿನ ಹಲ್ಲೆಯ ಈ ಪ್ರಕರಣವನ್ನು ಸೂಕ್ಷ್ಮವಾಗಿ ಬಗೆಹರಿಸಿ, ಯಾರಿಗೂ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಬೇಕು. ಈಗ ಇದಕ್ಕೆ ಸಂಬಂಧಿದಂತೆ ಹೋರಾಟ ಮಾಡುತ್ತಿರುವ ಸಂಘಟನೆಗಳಿಗೆ ಇದು ಬೇಕಿಲ್ಲ. ಈ ಸಮಸ್ಯೆಯನ್ನು ಗ್ರಾಮಸ್ಥರ ಸಮ್ಮುಖದಲ್ಲೇ ಬಗೆಹರಿಸಬಹುದಿತ್ತು. ಆದರೆ ಇದರ ಹಿಂದೆ ಬೇರೆ ಉದ್ದೇಶವೇ ಇದೆ. ಹಾಗಾಗಿ ಇದಕ್ಕೆ ಸಂಬಂಧಿಸಿದಂತೆ ಈಗ ನಾನು ಪ್ರತಿಕ್ರಿಯಿಸುವುದಿಲ್ಲ” ಎಂದು ಶಾಸಕಿ ರೂಪ ಶಶಿಧರ್ ಹೇಳಿದ್ದಾರೆ.

“ವಿಳಂಬವಾಗಿ ದೂರು ದಾಖಲಿಸಿಕೊಂಡಿದ್ದೇ ಅಲ್ಲದೆ ಆರೋಪಿಗಳನ್ನ ಬಂಧಿಸಲು ವಿಳಂಬ ಮಾಡುತ್ತಿರುವ, ಪರೋಕ್ಷವಾಗಿ ಆರೋಪಿಗಳಿಗೆ ಸಹಕರಿಸುತ್ತಿರುವ KGFನ ಆಂಡ್ರಸನ್ ಪೇಟೆ ಪೋಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಮುನಿಯಪ್ಪ ಅವರನ್ನು ಕೂಡಲೇ ಸೇವೆಯಿಂದ ಅಮಾನತು ಮಾಡಲು ಒತ್ತಾಯಿಸೋಣ. ಅಲ್ಲದೆ ದಲಿತರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ಮತ್ತು ಜಾತಿ ನಿಂದನೆ ಮಾಡಿರುವ ಆರೋಪಿಗಳಾದ ಮಂಜುನಾಥ ರೆಡ್ಡಿ ಮತ್ತು ಚಂದ್ರಾ ರೆಡ್ಡಿ ಅವರನ್ನು ಕೂಡಲೇ ಬಂಧಿಸಿ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು. ಹಲ್ಲೆಗೊಳಗಾದ ಶಿವರಾಮಪ್ಪ ಕುಟುಂಬಕ್ಕೆ ಸೂಕ್ತ ನ್ಯಾಯ ಮತ್ತು ರಕ್ಷಣೆಯನ್ನು ಒದಗಿಸಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (DSS), ಜಿಲ್ಲೆ ಮತ್ತು ತಾಲೂಕಿನ ಎಲ್ಲಾ ದಲಿತಪರ ಸಂಘಟನೆಗಳ ಒಕ್ಕೂಟ ಹಾಗೂ ದಲಿತ ಮಾನವ ಹಕ್ಕುಗಳ ವೇದಿಕೆ  ಒತ್ತಾಯಿಸುತ್ತದೆ. ಮತ್ತು ಮುಂದಿನ ದಿನಗಳಲ್ಲಿ ಉಗ್ರ ಹೋರಾಟಕ್ಕೆ ಮುಂದಾಗಲಿವೆ” ಎಂದು ಗೋವಿಂದರಾಜ ಬೈಚಗುಪ್ಪೆ ಹೇಳಿದ್ದಾರೆ.


ಇದನ್ನೂ ಓದಿ: ಜಾತಿ-ತಾರತಮ್ಯ: ವರದಿ ಮಾಡಿದ್ದ ತಮಿಳುನಾಡಿನ ಪತ್ರಕರ್ತನ ಮೇಲೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...