Homeದಲಿತ್ ಫೈಲ್ಸ್ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

- Advertisement -
- Advertisement -

ಪ್ರಾರ್ಥನೆ ಸಲ್ಲಿಸಲು ದೇವಸ್ಥಾನಕ್ಕೆ ಪ್ರವೇಶಿಸಿದ ದಲಿತ ವ್ಯಕ್ತಿಯೊಬ್ಬನ ಮೇಲೆ ಜನರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಉತ್ತರಖಾಂಡ್‌ ರಾಜ್ಯದಲ್ಲಿ ನಡೆದಿದೆ. ಇಲ್ಲಿನ ಉತ್ತರಕಾಶಿ ಜಿಲ್ಲೆಯ ಮೋರಿ ಪ್ರದೇಶದ ಸಾಲ್ರಾ ಗ್ರಾಮದಲ್ಲಿ ಘಟನೆಯಾಗಿದ್ದು, ಸುಡುವ ಕೋಲುಗಳಿಂದ ವ್ಯಕ್ತಿಗೆ ಹೊಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೈನೋಲ್ ಗ್ರಾಮದ ನಿವಾಸಿಯಾಗಿರುವ 22 ವರ್ಷದ ಆಯುಷ್ ಜನವರಿ 9 ರಂದು ದೇವಸ್ಥಾನಕ್ಕೆ ತೆರಳಿದ್ದನು. ಈ ವೇಳೆ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ. ದೇವಸ್ಥಾನದಲ್ಲಿ ಸವರ್ಣೀಯ ಜಾತಿಗೆ ಸೇರಿದ ಕೆಲವರು ತನ್ನ ಮೇಲೆ ಹಲ್ಲೆ ನಡೆಸಿದ್ದಲ್ಲದೇ, ನನ್ನನ್ನು ಕಟ್ಟಿಹಾಕಿ ರಾತ್ರಿಯಿಡೀ ಸುಡುವ ಕೋಲುಗಳಿಂದ ಹೊಡೆದಿದ್ದಾರೆ ಎಂದು ಸಂತ್ರಸ್ತ ಯುವಕ ಪೊಲೀಸರಿಗೆ ನೀಡಿದ ದೂರಿನಲ್ಲಿ ವಿವರಿಸಿದ್ದಾನೆ.

ಈ ಬಗ್ಗೆ ಮಾತನಾಡಿರುವ ಅಧಿಕಾರಿಗಳು, “ಹಲ್ಲೆಗೊಳಗಾದ ಆಯುಷ್‌ನನ್ನು ಜನವರಿ 10ರಂದು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಅಲ್ಲಿಂದ ಉತ್ತಮ ಚಿಕಿತ್ಸೆಗಾಗಿ ಮತ್ತೊಂದು ಆರೋಗ್ಯ ಕೇಂದ್ರಕ್ಕೆ ಶಿಫಾರಸು ಮಾಡಲಾಗಿದೆ” ಎಂದಿದ್ದಾರೆ.

ದಲಿತನೊಬ್ಬ ದೇವಸ್ಥಾನ ಪ್ರವೇಶಿಸಿದ್ದಾನೆ ಎನ್ನುವ ಕಾರಣಕ್ಕೆ ಸವರ್ಣೀಯ ಜಾತಿಯ ಜನರು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ದೂರಿನ ಆಧಾರದ ಮೇಲೆ, ಗ್ರಾಮದ ಐವರ ವಿರುದ್ಧ ಎಸ್‌ಸಿ/ಎಸ್‌ಟಿಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಉತ್ತರಕಾಶಿ ಪೊಲೀಸ್ ವರಿಷ್ಠಾಧಿಕಾರಿ ಅರ್ಪಣ್ ಯದುವಂಶಿ ಮಾಹಿತಿ ನೀಡಿದ್ದಾರೆ. ಈ ಪ್ರಕರಣದ ತನಿಖೆಯನ್ನು ಸರ್ಕಲ್ ಆಫೀಸರ್ ಪ್ರಶಾಂತ್ ಕುಮಾರ್ ಅವರಿಗೆ ವಹಿಸಲಾಗಿದೆ.

ದಲಿತರು ದೇವಸ್ಥಾನ ಪ್ರವೇಶಿಸಿದರು ಎನ್ನುವ ಕಾರಣಕ್ಕೆ ಹಲ್ಲೆ ನಡೆಸಿರುವ ಪ್ರಕರಣ ಇದೇ ಮೊದಲೇನಲ್ಲ. ನಿರಂತರವಾಗಿ ಇಂತಹ ಅಮಾನವೀಯ ಘಟನೆಗಳು ನಡೆಯುತ್ತಲೇ ಇವೆ. ಇತ್ತೀಚೆಗೆ ಬೆಂಗಳೂರಿನಲ್ಲೂ ದಲಿತ ಮಹಿಳೆಯ ಮೇಲೆ ಇದೇ ವಿಚಾರವಾಗಿ ಹಲ್ಲೆ ನಡೆದಿತ್ತು.

ಈ ದಲಿತ ಮಹಿಳೆಯ ಮೇಲೆ ಅರ್ಚಕರೇ ಹಲ್ಲೆ ನಡೆಸಿದ್ದರು. ಹಲ್ಲೆ ನಡೆಸಿದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಅಷ್ಟೇ ಅಲ್ಲದೇ ಹಲ್ಲೆ ನಡೆಸಿರುವ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗತ್ತು.

ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಹುಳೇರಹಳ್ಳಿಯಲ್ಲಿ ಗ್ರಾಮದೇವತೆಯ ಮೆರವಣಿಗೆಯ ವೇಳೆ ದಲಿತ ಬಾಲಕ ದೇವರಿಗೆ ಸಂಬಂಧಿಸಿದ ಕೋಲನ್ನು ಮುಟ್ಟಿದನೆಂದು ಆರೋಪಿಸಿ ಸವರ್ಣೀಯರು ಸಾಮಾಜಿಕ ಬಹಿಷ್ಕಾರ ಹಾಕಿದ್ದ ಘಟನೆ 2022ರ ಸೆಪ್ಟೆಂಬರ್‌ನಲ್ಲಿ ನಡೆದಿತ್ತು.

ಗ್ರಾಮದ ದಲಿತ ಬಾಲಕ ದೇವರ ಮೆರವಣಿಗೆಯ ವೇಳೆ ದೇವರ ಕೋಲನ್ನು ಮುಟ್ಟಿ ಮೈಲಿಗೆ ಮಾಡಿದ್ದಾನೆ ಎಂದು ಆರೋಪಿಸಿ ಹೊಡೆಯಲು ಮುಂದಾಗಿದ್ದರು. ಜೊತೆಗೆ ಬಾಲಕನ ಕುಟುಂಬವನ್ನು ಕರೆಸಿ ಅರವತ್ತು ಸಾವಿರ ರೂ. ದಂಡ ವಿಧಿಸಿದ್ದರು.

“ನೀನು ಇಲ್ಲಿಗೆ ಬರಬಾರದು. ದೇವರನ್ನು ಮುಟ್ಟಿ ಮೈಲಿಗೆ ಮಾಡಿದ್ದೀಯ. ಅರವತ್ತು ಸಾವಿರ ದಂಡ ಕಟ್ಟಿದರೆ ಮಾತ್ರ ಊರಿನೊಳಗೆ ನಿಮ್ಮ ಕುಟುಂಬ ಪ್ರವೇಶಿಸಬಹುದು” ಎಂದು ತಿಳಿಸಿರುವುದಾಗಿ ಬಾಲಕ ಹೇಳಿಕೆ ನೀಡಿದ್ದನು.

ಇದನ್ನು ಓದಿ:  ದೇವಸ್ಥಾನದಲ್ಲಿ ದಲಿತ ಮಹಿಳೆಗೆ ಹಲ್ಲೆ ನಡೆಸಿದ ಧರ್ಮದರ್ಶಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...