Homeಕರ್ನಾಟಕಲಂಕೇಶರ ಊರಿನಲ್ಲಿ

ಲಂಕೇಶರ ಊರಿನಲ್ಲಿ

- Advertisement -
- Advertisement -

ಮಾರ್ಚ್ 8ನೇ ತಾರೀಖು ಲಂಕೇಶರು ಹುಟ್ಟಿದ ದಿನ. ಅವರಿದ್ದಷ್ಟು ಕಾಲ ಆ ದಿನವನ್ನು ಲಂಕೇಶರ ಆಫೀಸು ಮತ್ತು ತೋಟದ ಮನೆಯಲ್ಲಿ ತುಂಬ ಅರ್ಥಪೂರ್ಣವಾಗಿ ಆಚರಿಸಿಕೊಂಡು ಬರಲಾಯ್ತು. ಅವರ ನಿರ್ಗಮನದ ನಂತರ ಅವರ ಅಭಿಮಾನಿಗಳಲ್ಲಿ ಅನೇಕರು ಅಲ್ಲಿಇಲ್ಲಿ ನಡೆಸಿಕೊಂಡು ಬರುತ್ತಿದ್ದಾರೆ. ಶಿವಮೊಗ್ಗದಲ್ಲೂ ನಡೆದಿದೆ. ಕಳೆದ ವರ್ಷ ನಾಟಕ ನಿರ್ದೇಶಕ ಸಾಸ್ವೆಹಳ್ಳಿ ಸತೀಶ್ ಸಾಹಿತ್ಯಾಸಕ್ತ ಕಾಲೇಜು ವಿದ್ಯಾರ್ಥಿ(ನಿ)ಗಳನ್ನು ಗುರುತಿಸಿ ಅವರನ್ನ ಕರೆದು ಕಥಾ ಕಮ್ಮಟ ಏರ್ಪಡಿಸಿದ್ದರು ಮತ್ತು ಅವರಿಗೆಲ್ಲಾ ಕಥೆ ಬರೆಯಲು ಪ್ರೇರೇಪಿಸಿದ್ದರು. ಇದರಿಂದ ಹೊಸ ತಲೆಮಾರು ಏನನ್ನ ಬರೆಯಲು ಯೋಚಿಸುತ್ತಿದೆ ಎಂಬುದು ಅರಿವಾಯ್ತು. ಸಂಜೆ ದಿಢೀರನೆ ಪ್ರತ್ಯಕ್ಷವಾದ ನಟರಾಜ್ ಹುಳಿಯಾರ್ ಲಂಕೇಶರನ್ನ ಕುರಿತು ಮಾತನಾಡಿ ಹೊಸ ತಲೆಮಾರಿಗೆ ಲಂಕೇಶ್ ಎಂತಹ ಲೇಖಕ ಎಂಬುದರ ಬಗ್ಗೆ ಒಂದು ಅಪರೂಪದ ವ್ಯಕ್ತಿಚಿತ್ರ ಹಿಡಿದುಕೊಟ್ಟರು. ಸೇರಿದ್ದ 70 ಜನ ವಿದ್ಯಾರ್ಥಿಗಳಿಗೆ ಲಂಕೇಶರ ಒಂದೊಂದು ಕೃತಿಯನ್ನ ಕೊಟ್ಟೆವು. ಅವನ್ನು ಲಂಕೇಶರ ಪತ್ನಿ ಇಂದಿರಮ್ಮ ಒದಗಿಸಿದ್ದರು.

ಸಾಸ್ವೆಹಳ್ಳಿ ಸತೀಶ್

ಈ ವರ್ಷ ಲಂಕೇಶರ ಗದ್ಯ ಸಾಹಿತ್ಯದ ಅಧ್ಯಯನ ಎಂಬ ವಿಷಯವನ್ನಿಟ್ಟುಕೊಂಡು ನಟರಾಜ್ ಹುಳಿಯಾರ್ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಮಾಡಲು ಹೊರಟೆವು. ಆದರೆ ವಿದ್ಯಾರ್ಥಿಗಳಿಗೆ ಆ ಸಮಯದಲ್ಲಿ ಪರೀಕ್ಷೆ ನಡೆಯುವ ಕಾರಣಕ್ಕೆ ಕೈಬಿಟ್ಟೆವು. ಆದರೆ ಲಂಕೇಶರ ಹುಟ್ಟೂರಾದ ಕೊನಗವಳ್ಳಿಯಲ್ಲಿ ಅವರ ಕುರಿತು ಸಭೆಯಿದೆ ಎಂಬ ಸುದ್ದಿ ಬಂತು. ಕತ್ತಿಗೆ ಚನ್ನಪ್ಪ ಮತ್ತು ಶಂಕರಪ್ಪ ಏರ್ಪಡಿಸಿದ್ದಾರೆ, ಅವರ ಮಗ ಬರುತ್ತಾರೆ ಎಂದು ತಿಳಿದುಬಂತು. ಇನ್ನು ಅಲ್ಲಿ ನಮಗೇನು ಕೆಲಸ ಎಂದು ಸುಮ್ಮನಾದೆ. ಆದರೆ ಲಂಕೇಶರ ಮಗ ಹೈದರಾಬಾದಲ್ಲಿ ಶೂಟಿಂಗ್ ನಡೆಸುತ್ತಿರುವುದರಿಂದ ಬರುವುದಿಲ್ಲವಂತೆ ಎಂಬ ವರ್ತಮಾನ ಬಂತು. ಕೂಡಲೇ ನಾನು ಸಾಸ್ವೆಹಳ್ಳಿ ಸತೀಶ್ ಕೊನಗವಳ್ಳಿಗೆ ಹೊರಟೆವು.

ಕೊನಗವಳ್ಳಿಯಲ್ಲಿ ಕರಿಯವ್ವನ ಗುಡಿ ನೋಡಿ ಲಂಕೇಶರ ಮನೆ ಹಿಂದಿನ ಉಡೇವು ನೋಡಿ ಕಾರ್ಯಕ್ರಮ ನಡೆಯಲಿರುವ ಲಂಕೇಶ್ ಸಮುದಾಯಕ್ಕೆ ಬಂದೆವು. ಸಭೆ ಆರಂಭವಾಯ್ತು. ನಿರೂಪಕ ಪ್ರಸ್ತಾವನೆಯನ್ನ ದೀರ್ಘವಾಗಿ ಮಾಡಿ ನಮಗೆಲ್ಲಾ ಐದು ನಿಮಿಷ ಸಾಕು ಎಂದರು. ಲಂಕೇಶರ ಸಂಬಂಧಿ ಶಂಕರಪ್ಪ ಸುದೀರ್ಘವಾಗಿ ಮಾತನಾಡಿದರು. ಇವರು ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿದ್ದರು. ಜನಗಳೇ ಇಲ್ಲದ ಜಿಲ್ಲಾ ಸಾಹಿತ್ಯ ಸಮ್ಮೇಳನ ಮಾಡುವುದು, ಪುಸ್ತಕದ ಮಳಿಗೆಗಳಿಲ್ಲದ ಸಾಹಿತ್ಯ ಸಮಾರಂಭ ಮಾಡುವುದರಲ್ಲಿ ಎತ್ತಿದ ಕೈ. ವೇದಿಕೆ ಮೇಲೆ ಎಷ್ಟು ಜನ ಇರುತ್ತಾರೊ ಅಷ್ಟೇ ಜನ ಸಭಾಂಗಣದಲ್ಲಿದ್ದರೆ ಇವರಿಗೇನೂ ಸಮಾಧಾನ. ಕೇಳಿದರೆ “ಜನ ಬರಲಿಲ್ಲ ಅಂದ್ರೆ ನಾನೇಮಾಡಕ್ಯಾತಿ” ಎನ್ನುತ್ತಿದ್ದರು. ಒಳ್ಳೆಯ ವ್ಯಕ್ತಿಯಾದ್ದರಿಂದ ಸಹಿಸಿಕೊಂಡೆವು. ಆದರೆ ಕಳೆದ ಚುನಾವಣೆಯಲ್ಲಿ ಇವರನ್ನ ಕರೆದುಕೊಂಡು ಹೋದ ಆರ್‌ಎಸ್‌ಎಸ್ಸಿಗರು ತಮ್ಮ ನಡುವೆ ಕೂರಿಸಿಕೊಂಡು ನೀವು ಗೆದ್ದಾಯ್ತು ಎಂದು ಉಬ್ಬಿಸಿದರು. ಲೋಕಸಭಾ ಸದಸ್ಯ ರಾಘವೇಂದ್ರ ಶಂಕರಪ್ಪನಿಗೆ ಮತಹಾಕುವಂತೆ ಸ್ವತಃ ಆಜ್ಞಾಪಿಸಿದರು. ಲಿಂಗಾಯಿತ ಉಪ ಜಾತಿಗಳೆಲ್ಲಾ ಒಟ್ಟಾಗಿ ಶಂಕರಪ್ಪನ ಬೆಂಬಲಕ್ಕೆ ನಿಂತರು. ಇದರಿಂದ ಎಚ್ಚೆತ್ತುಕೊಂಡ ಸಾಹಿತ್ಯ ಪರಿಷತ್ ಮತದಾರರು ಒಟ್ಟಾಗಿ ಡಿ. ಮಂಜುನಾಥರನ್ನ ಬೆಂಬಲಿಸಿ ಗೆಲ್ಲಿಸಿದರು. ಆದರೆ ಶಂಕರಪ್ಪನಿಗೆ ಜ್ಞಾನೋದಯವಾದಂತೆ ಕಾಣಲಿಲ್ಲ.

ಲಂಕೇಶರ ಸಭೆಗೆ ಬಂದು ಮಾತನಾಡುತ್ತ “ಲಂಕೇಶ್ ನನ್ನತ್ರ ಏನೇಳಿದ್ರು ಅಂದ್ರೆ ಈ ಯಡಿಯೂರಪ್ಪ ಮುಖ್ಯಮಂತ್ರಿಯಾಗಬೇಕು ಕಣಯ್ಯ ಅಂದಿದ್ರು” ಎಂದರು. ಮೊನ್ನೆಯವರೆಗೂ ಚೆನ್ನಾಗಿದ್ದ ಶಂಕರಪ್ಪ ಒಂದು ಸಭೆಯಲ್ಲಿ ಹೇಳಿದ ಸುಳ್ಳಿಗೆ ಬೆಚ್ಚುವಂತಾಯ್ತು. ಮುಂದುವರಿದ ಶಂಕರಪ್ಪ, “ನಾನು ಸಾಹಿತ್ಯ ಸಮ್ಮೇಳನ ಮಾಡ್ತಿನಿ ದುಡ್ಡು ಕೊಡಿ ಅಂತ ಇಪ್ಪತ್ತೈದು ಲಕ್ಷ ಕೇಳಿದ್ರೆ ಐವತ್ತು ಲಕ್ಷ ಕೊಟ್ರು” ಎಂದರು. ಹೀಗೆ ಶಂಕರಪ್ಪ ಲಂಕೇಶರನ್ನ ಸುಳ್ಳುಸುಳ್ಳೇ ಯಡಿಯೂರಪ್ಪನ ಅಭಿಮಾನಿ ಮಾಡಿಬಿಟ್ಟರು. ಇದಕ್ಕಿಂತ ಮೊದಲು “ಲಂಕೇಶರಿಗೆ ನಮ್ಮ ಜನ ಕಂಡ್ರೆ ಭಾಳ ಪ್ರೀತಿ, ನನ್ನ ತಮ್ಮನಿಗೆ ಎಮ್ಮೆಲ್ಲೆ ಟಿಕೆಟ್ ಕೊಡಿಸಿದ್ರು” ಎಂದಿದ್ದರು. “ನನ್ನ ತಮ್ಮನಿಗೆ ಟಿಕೆಟ್ ಕೊಡಿಸಲು ಸಹಾಯ ಮಾಡಲಿಲ್ಲ, ಮೆಚ್ಚಿ ಬರೆಯಲಿಲ್ಲ. ನಮ್ಮ ಏಳಿಗೆನ ಸಹಿಸಲ್ಲ ನೀವು” ಎಂದು ಟೀಕಿಸಿ ಬರೆದ ಪತ್ರ ಲಂಕೇಶರ ಟೇಬಲ್ ಮೇಲಿದ್ದುದನ್ನ ನಾನು ನೋಡಿದ್ದೆ.

ಅದೇನಾದರೂ ಆಗಲಿ, ನಿನ್ನೆ ಮೊನ್ನೆಯವರೆಗೂ ಚೆನ್ನಾಗಿದ್ದ ಶಂಕರಪ್ಪನವರು ಬಿಜೆಪಿ ಸೇರಿದ ಕೂಡಲೇ ಸುಳ್ಳುಬುರುಕನಾಗಿ ಬದಲಾದದ್ದು ನಮಗಂತೂ ಆಶ್ಚರ್ಯ ಹುಟ್ಟಸಲಿಲ್ಲ. ಆದರೆ ಈತ ’ಯಡಿಯೂರಪ್ಪ ಒಮ್ಮೆ ಮುಖ್ಯಮಂತ್ರಿಯಾಗಬೇಕು ಅಂತ ಲಂಕೇಶ್ ಹೇಳಿದ್ದರು’ ಎಂಬ ಮಾತನ್ನ ಖಂಡಿಸಬೇಕಿದೆ. ಲಂಕೇಶ್ ಎಂದೂ ಯಡಿಯೂರಪ್ಪನ ಪರ ಮಾತನಾಡಿದ್ದಾಗಲಿ, ಒಂದು ಸಾಲನ್ನು ಬರೆದಿದ್ದಾಗಲಿ ಇಲ್ಲ. ಶಂಕರಪ್ಪ ಕನ್ನಡದ ಪ್ರಜ್ಞಾವಂತರ ಮನಸ್ಸಿನ ಒಂದು ಎಚ್ಚರವಾಗಿರುವ ಲಂಕೇಶರ ಬಗ್ಗೆ ಸುಳ್ಳುಗಳನ್ನ ನಿಲ್ಲಿಸುವುದು
ಅವರಿಗೇ ಒಳ್ಳೆಯದು.

ಬಿ. ಚಂದ್ರೇಗೌಡ

ಬಿ. ಚಂದ್ರೇಗೌಡ
ಲಂಕೇಶರ ಪತ್ರಿಕೆಯಲ್ಲಿ ಬಯಲುಸೀಮೆಯ ಕಟ್ಟೆ ಪುರಾಣದ ಮೂಲಕ ಕನ್ನಡಿಗರೆಲ್ಲರ ಗಮನಕ್ಕೆ ಬಂದ ಚಂದ್ರೇಗೌಡರು, ನಾಟಕಕಾರರು, ನಟರಷ್ಟೇ ಅಲ್ಲ ವಿಶಿಷ್ಟ ರಾಜಕೀಯ ನೋಟವುಳ್ಳವರೂ ಸಹಾ.
ಕರ್ನಾಟಕದ ಸಾಂಸ್ಕೃತಿಕ ಹಾಗೂ ರಾಜಕೀಯ ಇತಿಹಾಸದ ಆಗುಹೋಗುಗಳು ಅವರಲ್ಲಿ ದಾಖಲಾಗಿರುವ ಬಗೆಯೂ ವಿಶಿಷ್ಟವೇ..


ಇದನ್ನೂ ಓದಿ: ಜಾತಿ ದುರಹಂಕಾರ ಮತ್ತು ಮೀಸಲಾತಿ ಬಗ್ಗೆ ಗೌರಿ ಲಂಕೇಶ್‌ ಬರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...