Homeಕರ್ನಾಟಕಲಂಕೇಶರ ಊರಿನಲ್ಲಿ

ಲಂಕೇಶರ ಊರಿನಲ್ಲಿ

- Advertisement -
- Advertisement -

ಮಾರ್ಚ್ 8ನೇ ತಾರೀಖು ಲಂಕೇಶರು ಹುಟ್ಟಿದ ದಿನ. ಅವರಿದ್ದಷ್ಟು ಕಾಲ ಆ ದಿನವನ್ನು ಲಂಕೇಶರ ಆಫೀಸು ಮತ್ತು ತೋಟದ ಮನೆಯಲ್ಲಿ ತುಂಬ ಅರ್ಥಪೂರ್ಣವಾಗಿ ಆಚರಿಸಿಕೊಂಡು ಬರಲಾಯ್ತು. ಅವರ ನಿರ್ಗಮನದ ನಂತರ ಅವರ ಅಭಿಮಾನಿಗಳಲ್ಲಿ ಅನೇಕರು ಅಲ್ಲಿಇಲ್ಲಿ ನಡೆಸಿಕೊಂಡು ಬರುತ್ತಿದ್ದಾರೆ. ಶಿವಮೊಗ್ಗದಲ್ಲೂ ನಡೆದಿದೆ. ಕಳೆದ ವರ್ಷ ನಾಟಕ ನಿರ್ದೇಶಕ ಸಾಸ್ವೆಹಳ್ಳಿ ಸತೀಶ್ ಸಾಹಿತ್ಯಾಸಕ್ತ ಕಾಲೇಜು ವಿದ್ಯಾರ್ಥಿ(ನಿ)ಗಳನ್ನು ಗುರುತಿಸಿ ಅವರನ್ನ ಕರೆದು ಕಥಾ ಕಮ್ಮಟ ಏರ್ಪಡಿಸಿದ್ದರು ಮತ್ತು ಅವರಿಗೆಲ್ಲಾ ಕಥೆ ಬರೆಯಲು ಪ್ರೇರೇಪಿಸಿದ್ದರು. ಇದರಿಂದ ಹೊಸ ತಲೆಮಾರು ಏನನ್ನ ಬರೆಯಲು ಯೋಚಿಸುತ್ತಿದೆ ಎಂಬುದು ಅರಿವಾಯ್ತು. ಸಂಜೆ ದಿಢೀರನೆ ಪ್ರತ್ಯಕ್ಷವಾದ ನಟರಾಜ್ ಹುಳಿಯಾರ್ ಲಂಕೇಶರನ್ನ ಕುರಿತು ಮಾತನಾಡಿ ಹೊಸ ತಲೆಮಾರಿಗೆ ಲಂಕೇಶ್ ಎಂತಹ ಲೇಖಕ ಎಂಬುದರ ಬಗ್ಗೆ ಒಂದು ಅಪರೂಪದ ವ್ಯಕ್ತಿಚಿತ್ರ ಹಿಡಿದುಕೊಟ್ಟರು. ಸೇರಿದ್ದ 70 ಜನ ವಿದ್ಯಾರ್ಥಿಗಳಿಗೆ ಲಂಕೇಶರ ಒಂದೊಂದು ಕೃತಿಯನ್ನ ಕೊಟ್ಟೆವು. ಅವನ್ನು ಲಂಕೇಶರ ಪತ್ನಿ ಇಂದಿರಮ್ಮ ಒದಗಿಸಿದ್ದರು.

ಸಾಸ್ವೆಹಳ್ಳಿ ಸತೀಶ್

ಈ ವರ್ಷ ಲಂಕೇಶರ ಗದ್ಯ ಸಾಹಿತ್ಯದ ಅಧ್ಯಯನ ಎಂಬ ವಿಷಯವನ್ನಿಟ್ಟುಕೊಂಡು ನಟರಾಜ್ ಹುಳಿಯಾರ್ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಮಾಡಲು ಹೊರಟೆವು. ಆದರೆ ವಿದ್ಯಾರ್ಥಿಗಳಿಗೆ ಆ ಸಮಯದಲ್ಲಿ ಪರೀಕ್ಷೆ ನಡೆಯುವ ಕಾರಣಕ್ಕೆ ಕೈಬಿಟ್ಟೆವು. ಆದರೆ ಲಂಕೇಶರ ಹುಟ್ಟೂರಾದ ಕೊನಗವಳ್ಳಿಯಲ್ಲಿ ಅವರ ಕುರಿತು ಸಭೆಯಿದೆ ಎಂಬ ಸುದ್ದಿ ಬಂತು. ಕತ್ತಿಗೆ ಚನ್ನಪ್ಪ ಮತ್ತು ಶಂಕರಪ್ಪ ಏರ್ಪಡಿಸಿದ್ದಾರೆ, ಅವರ ಮಗ ಬರುತ್ತಾರೆ ಎಂದು ತಿಳಿದುಬಂತು. ಇನ್ನು ಅಲ್ಲಿ ನಮಗೇನು ಕೆಲಸ ಎಂದು ಸುಮ್ಮನಾದೆ. ಆದರೆ ಲಂಕೇಶರ ಮಗ ಹೈದರಾಬಾದಲ್ಲಿ ಶೂಟಿಂಗ್ ನಡೆಸುತ್ತಿರುವುದರಿಂದ ಬರುವುದಿಲ್ಲವಂತೆ ಎಂಬ ವರ್ತಮಾನ ಬಂತು. ಕೂಡಲೇ ನಾನು ಸಾಸ್ವೆಹಳ್ಳಿ ಸತೀಶ್ ಕೊನಗವಳ್ಳಿಗೆ ಹೊರಟೆವು.

ಕೊನಗವಳ್ಳಿಯಲ್ಲಿ ಕರಿಯವ್ವನ ಗುಡಿ ನೋಡಿ ಲಂಕೇಶರ ಮನೆ ಹಿಂದಿನ ಉಡೇವು ನೋಡಿ ಕಾರ್ಯಕ್ರಮ ನಡೆಯಲಿರುವ ಲಂಕೇಶ್ ಸಮುದಾಯಕ್ಕೆ ಬಂದೆವು. ಸಭೆ ಆರಂಭವಾಯ್ತು. ನಿರೂಪಕ ಪ್ರಸ್ತಾವನೆಯನ್ನ ದೀರ್ಘವಾಗಿ ಮಾಡಿ ನಮಗೆಲ್ಲಾ ಐದು ನಿಮಿಷ ಸಾಕು ಎಂದರು. ಲಂಕೇಶರ ಸಂಬಂಧಿ ಶಂಕರಪ್ಪ ಸುದೀರ್ಘವಾಗಿ ಮಾತನಾಡಿದರು. ಇವರು ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿದ್ದರು. ಜನಗಳೇ ಇಲ್ಲದ ಜಿಲ್ಲಾ ಸಾಹಿತ್ಯ ಸಮ್ಮೇಳನ ಮಾಡುವುದು, ಪುಸ್ತಕದ ಮಳಿಗೆಗಳಿಲ್ಲದ ಸಾಹಿತ್ಯ ಸಮಾರಂಭ ಮಾಡುವುದರಲ್ಲಿ ಎತ್ತಿದ ಕೈ. ವೇದಿಕೆ ಮೇಲೆ ಎಷ್ಟು ಜನ ಇರುತ್ತಾರೊ ಅಷ್ಟೇ ಜನ ಸಭಾಂಗಣದಲ್ಲಿದ್ದರೆ ಇವರಿಗೇನೂ ಸಮಾಧಾನ. ಕೇಳಿದರೆ “ಜನ ಬರಲಿಲ್ಲ ಅಂದ್ರೆ ನಾನೇಮಾಡಕ್ಯಾತಿ” ಎನ್ನುತ್ತಿದ್ದರು. ಒಳ್ಳೆಯ ವ್ಯಕ್ತಿಯಾದ್ದರಿಂದ ಸಹಿಸಿಕೊಂಡೆವು. ಆದರೆ ಕಳೆದ ಚುನಾವಣೆಯಲ್ಲಿ ಇವರನ್ನ ಕರೆದುಕೊಂಡು ಹೋದ ಆರ್‌ಎಸ್‌ಎಸ್ಸಿಗರು ತಮ್ಮ ನಡುವೆ ಕೂರಿಸಿಕೊಂಡು ನೀವು ಗೆದ್ದಾಯ್ತು ಎಂದು ಉಬ್ಬಿಸಿದರು. ಲೋಕಸಭಾ ಸದಸ್ಯ ರಾಘವೇಂದ್ರ ಶಂಕರಪ್ಪನಿಗೆ ಮತಹಾಕುವಂತೆ ಸ್ವತಃ ಆಜ್ಞಾಪಿಸಿದರು. ಲಿಂಗಾಯಿತ ಉಪ ಜಾತಿಗಳೆಲ್ಲಾ ಒಟ್ಟಾಗಿ ಶಂಕರಪ್ಪನ ಬೆಂಬಲಕ್ಕೆ ನಿಂತರು. ಇದರಿಂದ ಎಚ್ಚೆತ್ತುಕೊಂಡ ಸಾಹಿತ್ಯ ಪರಿಷತ್ ಮತದಾರರು ಒಟ್ಟಾಗಿ ಡಿ. ಮಂಜುನಾಥರನ್ನ ಬೆಂಬಲಿಸಿ ಗೆಲ್ಲಿಸಿದರು. ಆದರೆ ಶಂಕರಪ್ಪನಿಗೆ ಜ್ಞಾನೋದಯವಾದಂತೆ ಕಾಣಲಿಲ್ಲ.

ಲಂಕೇಶರ ಸಭೆಗೆ ಬಂದು ಮಾತನಾಡುತ್ತ “ಲಂಕೇಶ್ ನನ್ನತ್ರ ಏನೇಳಿದ್ರು ಅಂದ್ರೆ ಈ ಯಡಿಯೂರಪ್ಪ ಮುಖ್ಯಮಂತ್ರಿಯಾಗಬೇಕು ಕಣಯ್ಯ ಅಂದಿದ್ರು” ಎಂದರು. ಮೊನ್ನೆಯವರೆಗೂ ಚೆನ್ನಾಗಿದ್ದ ಶಂಕರಪ್ಪ ಒಂದು ಸಭೆಯಲ್ಲಿ ಹೇಳಿದ ಸುಳ್ಳಿಗೆ ಬೆಚ್ಚುವಂತಾಯ್ತು. ಮುಂದುವರಿದ ಶಂಕರಪ್ಪ, “ನಾನು ಸಾಹಿತ್ಯ ಸಮ್ಮೇಳನ ಮಾಡ್ತಿನಿ ದುಡ್ಡು ಕೊಡಿ ಅಂತ ಇಪ್ಪತ್ತೈದು ಲಕ್ಷ ಕೇಳಿದ್ರೆ ಐವತ್ತು ಲಕ್ಷ ಕೊಟ್ರು” ಎಂದರು. ಹೀಗೆ ಶಂಕರಪ್ಪ ಲಂಕೇಶರನ್ನ ಸುಳ್ಳುಸುಳ್ಳೇ ಯಡಿಯೂರಪ್ಪನ ಅಭಿಮಾನಿ ಮಾಡಿಬಿಟ್ಟರು. ಇದಕ್ಕಿಂತ ಮೊದಲು “ಲಂಕೇಶರಿಗೆ ನಮ್ಮ ಜನ ಕಂಡ್ರೆ ಭಾಳ ಪ್ರೀತಿ, ನನ್ನ ತಮ್ಮನಿಗೆ ಎಮ್ಮೆಲ್ಲೆ ಟಿಕೆಟ್ ಕೊಡಿಸಿದ್ರು” ಎಂದಿದ್ದರು. “ನನ್ನ ತಮ್ಮನಿಗೆ ಟಿಕೆಟ್ ಕೊಡಿಸಲು ಸಹಾಯ ಮಾಡಲಿಲ್ಲ, ಮೆಚ್ಚಿ ಬರೆಯಲಿಲ್ಲ. ನಮ್ಮ ಏಳಿಗೆನ ಸಹಿಸಲ್ಲ ನೀವು” ಎಂದು ಟೀಕಿಸಿ ಬರೆದ ಪತ್ರ ಲಂಕೇಶರ ಟೇಬಲ್ ಮೇಲಿದ್ದುದನ್ನ ನಾನು ನೋಡಿದ್ದೆ.

ಅದೇನಾದರೂ ಆಗಲಿ, ನಿನ್ನೆ ಮೊನ್ನೆಯವರೆಗೂ ಚೆನ್ನಾಗಿದ್ದ ಶಂಕರಪ್ಪನವರು ಬಿಜೆಪಿ ಸೇರಿದ ಕೂಡಲೇ ಸುಳ್ಳುಬುರುಕನಾಗಿ ಬದಲಾದದ್ದು ನಮಗಂತೂ ಆಶ್ಚರ್ಯ ಹುಟ್ಟಸಲಿಲ್ಲ. ಆದರೆ ಈತ ’ಯಡಿಯೂರಪ್ಪ ಒಮ್ಮೆ ಮುಖ್ಯಮಂತ್ರಿಯಾಗಬೇಕು ಅಂತ ಲಂಕೇಶ್ ಹೇಳಿದ್ದರು’ ಎಂಬ ಮಾತನ್ನ ಖಂಡಿಸಬೇಕಿದೆ. ಲಂಕೇಶ್ ಎಂದೂ ಯಡಿಯೂರಪ್ಪನ ಪರ ಮಾತನಾಡಿದ್ದಾಗಲಿ, ಒಂದು ಸಾಲನ್ನು ಬರೆದಿದ್ದಾಗಲಿ ಇಲ್ಲ. ಶಂಕರಪ್ಪ ಕನ್ನಡದ ಪ್ರಜ್ಞಾವಂತರ ಮನಸ್ಸಿನ ಒಂದು ಎಚ್ಚರವಾಗಿರುವ ಲಂಕೇಶರ ಬಗ್ಗೆ ಸುಳ್ಳುಗಳನ್ನ ನಿಲ್ಲಿಸುವುದು
ಅವರಿಗೇ ಒಳ್ಳೆಯದು.

ಬಿ. ಚಂದ್ರೇಗೌಡ

ಬಿ. ಚಂದ್ರೇಗೌಡ
ಲಂಕೇಶರ ಪತ್ರಿಕೆಯಲ್ಲಿ ಬಯಲುಸೀಮೆಯ ಕಟ್ಟೆ ಪುರಾಣದ ಮೂಲಕ ಕನ್ನಡಿಗರೆಲ್ಲರ ಗಮನಕ್ಕೆ ಬಂದ ಚಂದ್ರೇಗೌಡರು, ನಾಟಕಕಾರರು, ನಟರಷ್ಟೇ ಅಲ್ಲ ವಿಶಿಷ್ಟ ರಾಜಕೀಯ ನೋಟವುಳ್ಳವರೂ ಸಹಾ.
ಕರ್ನಾಟಕದ ಸಾಂಸ್ಕೃತಿಕ ಹಾಗೂ ರಾಜಕೀಯ ಇತಿಹಾಸದ ಆಗುಹೋಗುಗಳು ಅವರಲ್ಲಿ ದಾಖಲಾಗಿರುವ ಬಗೆಯೂ ವಿಶಿಷ್ಟವೇ..


ಇದನ್ನೂ ಓದಿ: ಜಾತಿ ದುರಹಂಕಾರ ಮತ್ತು ಮೀಸಲಾತಿ ಬಗ್ಗೆ ಗೌರಿ ಲಂಕೇಶ್‌ ಬರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...