Homeಕರ್ನಾಟಕಲಂಕೇಶರ ಊರಿನಲ್ಲಿ

ಲಂಕೇಶರ ಊರಿನಲ್ಲಿ

- Advertisement -
- Advertisement -

ಮಾರ್ಚ್ 8ನೇ ತಾರೀಖು ಲಂಕೇಶರು ಹುಟ್ಟಿದ ದಿನ. ಅವರಿದ್ದಷ್ಟು ಕಾಲ ಆ ದಿನವನ್ನು ಲಂಕೇಶರ ಆಫೀಸು ಮತ್ತು ತೋಟದ ಮನೆಯಲ್ಲಿ ತುಂಬ ಅರ್ಥಪೂರ್ಣವಾಗಿ ಆಚರಿಸಿಕೊಂಡು ಬರಲಾಯ್ತು. ಅವರ ನಿರ್ಗಮನದ ನಂತರ ಅವರ ಅಭಿಮಾನಿಗಳಲ್ಲಿ ಅನೇಕರು ಅಲ್ಲಿಇಲ್ಲಿ ನಡೆಸಿಕೊಂಡು ಬರುತ್ತಿದ್ದಾರೆ. ಶಿವಮೊಗ್ಗದಲ್ಲೂ ನಡೆದಿದೆ. ಕಳೆದ ವರ್ಷ ನಾಟಕ ನಿರ್ದೇಶಕ ಸಾಸ್ವೆಹಳ್ಳಿ ಸತೀಶ್ ಸಾಹಿತ್ಯಾಸಕ್ತ ಕಾಲೇಜು ವಿದ್ಯಾರ್ಥಿ(ನಿ)ಗಳನ್ನು ಗುರುತಿಸಿ ಅವರನ್ನ ಕರೆದು ಕಥಾ ಕಮ್ಮಟ ಏರ್ಪಡಿಸಿದ್ದರು ಮತ್ತು ಅವರಿಗೆಲ್ಲಾ ಕಥೆ ಬರೆಯಲು ಪ್ರೇರೇಪಿಸಿದ್ದರು. ಇದರಿಂದ ಹೊಸ ತಲೆಮಾರು ಏನನ್ನ ಬರೆಯಲು ಯೋಚಿಸುತ್ತಿದೆ ಎಂಬುದು ಅರಿವಾಯ್ತು. ಸಂಜೆ ದಿಢೀರನೆ ಪ್ರತ್ಯಕ್ಷವಾದ ನಟರಾಜ್ ಹುಳಿಯಾರ್ ಲಂಕೇಶರನ್ನ ಕುರಿತು ಮಾತನಾಡಿ ಹೊಸ ತಲೆಮಾರಿಗೆ ಲಂಕೇಶ್ ಎಂತಹ ಲೇಖಕ ಎಂಬುದರ ಬಗ್ಗೆ ಒಂದು ಅಪರೂಪದ ವ್ಯಕ್ತಿಚಿತ್ರ ಹಿಡಿದುಕೊಟ್ಟರು. ಸೇರಿದ್ದ 70 ಜನ ವಿದ್ಯಾರ್ಥಿಗಳಿಗೆ ಲಂಕೇಶರ ಒಂದೊಂದು ಕೃತಿಯನ್ನ ಕೊಟ್ಟೆವು. ಅವನ್ನು ಲಂಕೇಶರ ಪತ್ನಿ ಇಂದಿರಮ್ಮ ಒದಗಿಸಿದ್ದರು.

ಸಾಸ್ವೆಹಳ್ಳಿ ಸತೀಶ್

ಈ ವರ್ಷ ಲಂಕೇಶರ ಗದ್ಯ ಸಾಹಿತ್ಯದ ಅಧ್ಯಯನ ಎಂಬ ವಿಷಯವನ್ನಿಟ್ಟುಕೊಂಡು ನಟರಾಜ್ ಹುಳಿಯಾರ್ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಮಾಡಲು ಹೊರಟೆವು. ಆದರೆ ವಿದ್ಯಾರ್ಥಿಗಳಿಗೆ ಆ ಸಮಯದಲ್ಲಿ ಪರೀಕ್ಷೆ ನಡೆಯುವ ಕಾರಣಕ್ಕೆ ಕೈಬಿಟ್ಟೆವು. ಆದರೆ ಲಂಕೇಶರ ಹುಟ್ಟೂರಾದ ಕೊನಗವಳ್ಳಿಯಲ್ಲಿ ಅವರ ಕುರಿತು ಸಭೆಯಿದೆ ಎಂಬ ಸುದ್ದಿ ಬಂತು. ಕತ್ತಿಗೆ ಚನ್ನಪ್ಪ ಮತ್ತು ಶಂಕರಪ್ಪ ಏರ್ಪಡಿಸಿದ್ದಾರೆ, ಅವರ ಮಗ ಬರುತ್ತಾರೆ ಎಂದು ತಿಳಿದುಬಂತು. ಇನ್ನು ಅಲ್ಲಿ ನಮಗೇನು ಕೆಲಸ ಎಂದು ಸುಮ್ಮನಾದೆ. ಆದರೆ ಲಂಕೇಶರ ಮಗ ಹೈದರಾಬಾದಲ್ಲಿ ಶೂಟಿಂಗ್ ನಡೆಸುತ್ತಿರುವುದರಿಂದ ಬರುವುದಿಲ್ಲವಂತೆ ಎಂಬ ವರ್ತಮಾನ ಬಂತು. ಕೂಡಲೇ ನಾನು ಸಾಸ್ವೆಹಳ್ಳಿ ಸತೀಶ್ ಕೊನಗವಳ್ಳಿಗೆ ಹೊರಟೆವು.

ಕೊನಗವಳ್ಳಿಯಲ್ಲಿ ಕರಿಯವ್ವನ ಗುಡಿ ನೋಡಿ ಲಂಕೇಶರ ಮನೆ ಹಿಂದಿನ ಉಡೇವು ನೋಡಿ ಕಾರ್ಯಕ್ರಮ ನಡೆಯಲಿರುವ ಲಂಕೇಶ್ ಸಮುದಾಯಕ್ಕೆ ಬಂದೆವು. ಸಭೆ ಆರಂಭವಾಯ್ತು. ನಿರೂಪಕ ಪ್ರಸ್ತಾವನೆಯನ್ನ ದೀರ್ಘವಾಗಿ ಮಾಡಿ ನಮಗೆಲ್ಲಾ ಐದು ನಿಮಿಷ ಸಾಕು ಎಂದರು. ಲಂಕೇಶರ ಸಂಬಂಧಿ ಶಂಕರಪ್ಪ ಸುದೀರ್ಘವಾಗಿ ಮಾತನಾಡಿದರು. ಇವರು ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿದ್ದರು. ಜನಗಳೇ ಇಲ್ಲದ ಜಿಲ್ಲಾ ಸಾಹಿತ್ಯ ಸಮ್ಮೇಳನ ಮಾಡುವುದು, ಪುಸ್ತಕದ ಮಳಿಗೆಗಳಿಲ್ಲದ ಸಾಹಿತ್ಯ ಸಮಾರಂಭ ಮಾಡುವುದರಲ್ಲಿ ಎತ್ತಿದ ಕೈ. ವೇದಿಕೆ ಮೇಲೆ ಎಷ್ಟು ಜನ ಇರುತ್ತಾರೊ ಅಷ್ಟೇ ಜನ ಸಭಾಂಗಣದಲ್ಲಿದ್ದರೆ ಇವರಿಗೇನೂ ಸಮಾಧಾನ. ಕೇಳಿದರೆ “ಜನ ಬರಲಿಲ್ಲ ಅಂದ್ರೆ ನಾನೇಮಾಡಕ್ಯಾತಿ” ಎನ್ನುತ್ತಿದ್ದರು. ಒಳ್ಳೆಯ ವ್ಯಕ್ತಿಯಾದ್ದರಿಂದ ಸಹಿಸಿಕೊಂಡೆವು. ಆದರೆ ಕಳೆದ ಚುನಾವಣೆಯಲ್ಲಿ ಇವರನ್ನ ಕರೆದುಕೊಂಡು ಹೋದ ಆರ್‌ಎಸ್‌ಎಸ್ಸಿಗರು ತಮ್ಮ ನಡುವೆ ಕೂರಿಸಿಕೊಂಡು ನೀವು ಗೆದ್ದಾಯ್ತು ಎಂದು ಉಬ್ಬಿಸಿದರು. ಲೋಕಸಭಾ ಸದಸ್ಯ ರಾಘವೇಂದ್ರ ಶಂಕರಪ್ಪನಿಗೆ ಮತಹಾಕುವಂತೆ ಸ್ವತಃ ಆಜ್ಞಾಪಿಸಿದರು. ಲಿಂಗಾಯಿತ ಉಪ ಜಾತಿಗಳೆಲ್ಲಾ ಒಟ್ಟಾಗಿ ಶಂಕರಪ್ಪನ ಬೆಂಬಲಕ್ಕೆ ನಿಂತರು. ಇದರಿಂದ ಎಚ್ಚೆತ್ತುಕೊಂಡ ಸಾಹಿತ್ಯ ಪರಿಷತ್ ಮತದಾರರು ಒಟ್ಟಾಗಿ ಡಿ. ಮಂಜುನಾಥರನ್ನ ಬೆಂಬಲಿಸಿ ಗೆಲ್ಲಿಸಿದರು. ಆದರೆ ಶಂಕರಪ್ಪನಿಗೆ ಜ್ಞಾನೋದಯವಾದಂತೆ ಕಾಣಲಿಲ್ಲ.

ಲಂಕೇಶರ ಸಭೆಗೆ ಬಂದು ಮಾತನಾಡುತ್ತ “ಲಂಕೇಶ್ ನನ್ನತ್ರ ಏನೇಳಿದ್ರು ಅಂದ್ರೆ ಈ ಯಡಿಯೂರಪ್ಪ ಮುಖ್ಯಮಂತ್ರಿಯಾಗಬೇಕು ಕಣಯ್ಯ ಅಂದಿದ್ರು” ಎಂದರು. ಮೊನ್ನೆಯವರೆಗೂ ಚೆನ್ನಾಗಿದ್ದ ಶಂಕರಪ್ಪ ಒಂದು ಸಭೆಯಲ್ಲಿ ಹೇಳಿದ ಸುಳ್ಳಿಗೆ ಬೆಚ್ಚುವಂತಾಯ್ತು. ಮುಂದುವರಿದ ಶಂಕರಪ್ಪ, “ನಾನು ಸಾಹಿತ್ಯ ಸಮ್ಮೇಳನ ಮಾಡ್ತಿನಿ ದುಡ್ಡು ಕೊಡಿ ಅಂತ ಇಪ್ಪತ್ತೈದು ಲಕ್ಷ ಕೇಳಿದ್ರೆ ಐವತ್ತು ಲಕ್ಷ ಕೊಟ್ರು” ಎಂದರು. ಹೀಗೆ ಶಂಕರಪ್ಪ ಲಂಕೇಶರನ್ನ ಸುಳ್ಳುಸುಳ್ಳೇ ಯಡಿಯೂರಪ್ಪನ ಅಭಿಮಾನಿ ಮಾಡಿಬಿಟ್ಟರು. ಇದಕ್ಕಿಂತ ಮೊದಲು “ಲಂಕೇಶರಿಗೆ ನಮ್ಮ ಜನ ಕಂಡ್ರೆ ಭಾಳ ಪ್ರೀತಿ, ನನ್ನ ತಮ್ಮನಿಗೆ ಎಮ್ಮೆಲ್ಲೆ ಟಿಕೆಟ್ ಕೊಡಿಸಿದ್ರು” ಎಂದಿದ್ದರು. “ನನ್ನ ತಮ್ಮನಿಗೆ ಟಿಕೆಟ್ ಕೊಡಿಸಲು ಸಹಾಯ ಮಾಡಲಿಲ್ಲ, ಮೆಚ್ಚಿ ಬರೆಯಲಿಲ್ಲ. ನಮ್ಮ ಏಳಿಗೆನ ಸಹಿಸಲ್ಲ ನೀವು” ಎಂದು ಟೀಕಿಸಿ ಬರೆದ ಪತ್ರ ಲಂಕೇಶರ ಟೇಬಲ್ ಮೇಲಿದ್ದುದನ್ನ ನಾನು ನೋಡಿದ್ದೆ.

ಅದೇನಾದರೂ ಆಗಲಿ, ನಿನ್ನೆ ಮೊನ್ನೆಯವರೆಗೂ ಚೆನ್ನಾಗಿದ್ದ ಶಂಕರಪ್ಪನವರು ಬಿಜೆಪಿ ಸೇರಿದ ಕೂಡಲೇ ಸುಳ್ಳುಬುರುಕನಾಗಿ ಬದಲಾದದ್ದು ನಮಗಂತೂ ಆಶ್ಚರ್ಯ ಹುಟ್ಟಸಲಿಲ್ಲ. ಆದರೆ ಈತ ’ಯಡಿಯೂರಪ್ಪ ಒಮ್ಮೆ ಮುಖ್ಯಮಂತ್ರಿಯಾಗಬೇಕು ಅಂತ ಲಂಕೇಶ್ ಹೇಳಿದ್ದರು’ ಎಂಬ ಮಾತನ್ನ ಖಂಡಿಸಬೇಕಿದೆ. ಲಂಕೇಶ್ ಎಂದೂ ಯಡಿಯೂರಪ್ಪನ ಪರ ಮಾತನಾಡಿದ್ದಾಗಲಿ, ಒಂದು ಸಾಲನ್ನು ಬರೆದಿದ್ದಾಗಲಿ ಇಲ್ಲ. ಶಂಕರಪ್ಪ ಕನ್ನಡದ ಪ್ರಜ್ಞಾವಂತರ ಮನಸ್ಸಿನ ಒಂದು ಎಚ್ಚರವಾಗಿರುವ ಲಂಕೇಶರ ಬಗ್ಗೆ ಸುಳ್ಳುಗಳನ್ನ ನಿಲ್ಲಿಸುವುದು
ಅವರಿಗೇ ಒಳ್ಳೆಯದು.

ಬಿ. ಚಂದ್ರೇಗೌಡ

ಬಿ. ಚಂದ್ರೇಗೌಡ
ಲಂಕೇಶರ ಪತ್ರಿಕೆಯಲ್ಲಿ ಬಯಲುಸೀಮೆಯ ಕಟ್ಟೆ ಪುರಾಣದ ಮೂಲಕ ಕನ್ನಡಿಗರೆಲ್ಲರ ಗಮನಕ್ಕೆ ಬಂದ ಚಂದ್ರೇಗೌಡರು, ನಾಟಕಕಾರರು, ನಟರಷ್ಟೇ ಅಲ್ಲ ವಿಶಿಷ್ಟ ರಾಜಕೀಯ ನೋಟವುಳ್ಳವರೂ ಸಹಾ.
ಕರ್ನಾಟಕದ ಸಾಂಸ್ಕೃತಿಕ ಹಾಗೂ ರಾಜಕೀಯ ಇತಿಹಾಸದ ಆಗುಹೋಗುಗಳು ಅವರಲ್ಲಿ ದಾಖಲಾಗಿರುವ ಬಗೆಯೂ ವಿಶಿಷ್ಟವೇ..


ಇದನ್ನೂ ಓದಿ: ಜಾತಿ ದುರಹಂಕಾರ ಮತ್ತು ಮೀಸಲಾತಿ ಬಗ್ಗೆ ಗೌರಿ ಲಂಕೇಶ್‌ ಬರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...