Homeಕರ್ನಾಟಕಲಂಕೇಶರ ಊರಿನಲ್ಲಿ

ಲಂಕೇಶರ ಊರಿನಲ್ಲಿ

- Advertisement -
- Advertisement -

ಮಾರ್ಚ್ 8ನೇ ತಾರೀಖು ಲಂಕೇಶರು ಹುಟ್ಟಿದ ದಿನ. ಅವರಿದ್ದಷ್ಟು ಕಾಲ ಆ ದಿನವನ್ನು ಲಂಕೇಶರ ಆಫೀಸು ಮತ್ತು ತೋಟದ ಮನೆಯಲ್ಲಿ ತುಂಬ ಅರ್ಥಪೂರ್ಣವಾಗಿ ಆಚರಿಸಿಕೊಂಡು ಬರಲಾಯ್ತು. ಅವರ ನಿರ್ಗಮನದ ನಂತರ ಅವರ ಅಭಿಮಾನಿಗಳಲ್ಲಿ ಅನೇಕರು ಅಲ್ಲಿಇಲ್ಲಿ ನಡೆಸಿಕೊಂಡು ಬರುತ್ತಿದ್ದಾರೆ. ಶಿವಮೊಗ್ಗದಲ್ಲೂ ನಡೆದಿದೆ. ಕಳೆದ ವರ್ಷ ನಾಟಕ ನಿರ್ದೇಶಕ ಸಾಸ್ವೆಹಳ್ಳಿ ಸತೀಶ್ ಸಾಹಿತ್ಯಾಸಕ್ತ ಕಾಲೇಜು ವಿದ್ಯಾರ್ಥಿ(ನಿ)ಗಳನ್ನು ಗುರುತಿಸಿ ಅವರನ್ನ ಕರೆದು ಕಥಾ ಕಮ್ಮಟ ಏರ್ಪಡಿಸಿದ್ದರು ಮತ್ತು ಅವರಿಗೆಲ್ಲಾ ಕಥೆ ಬರೆಯಲು ಪ್ರೇರೇಪಿಸಿದ್ದರು. ಇದರಿಂದ ಹೊಸ ತಲೆಮಾರು ಏನನ್ನ ಬರೆಯಲು ಯೋಚಿಸುತ್ತಿದೆ ಎಂಬುದು ಅರಿವಾಯ್ತು. ಸಂಜೆ ದಿಢೀರನೆ ಪ್ರತ್ಯಕ್ಷವಾದ ನಟರಾಜ್ ಹುಳಿಯಾರ್ ಲಂಕೇಶರನ್ನ ಕುರಿತು ಮಾತನಾಡಿ ಹೊಸ ತಲೆಮಾರಿಗೆ ಲಂಕೇಶ್ ಎಂತಹ ಲೇಖಕ ಎಂಬುದರ ಬಗ್ಗೆ ಒಂದು ಅಪರೂಪದ ವ್ಯಕ್ತಿಚಿತ್ರ ಹಿಡಿದುಕೊಟ್ಟರು. ಸೇರಿದ್ದ 70 ಜನ ವಿದ್ಯಾರ್ಥಿಗಳಿಗೆ ಲಂಕೇಶರ ಒಂದೊಂದು ಕೃತಿಯನ್ನ ಕೊಟ್ಟೆವು. ಅವನ್ನು ಲಂಕೇಶರ ಪತ್ನಿ ಇಂದಿರಮ್ಮ ಒದಗಿಸಿದ್ದರು.

ಸಾಸ್ವೆಹಳ್ಳಿ ಸತೀಶ್

ಈ ವರ್ಷ ಲಂಕೇಶರ ಗದ್ಯ ಸಾಹಿತ್ಯದ ಅಧ್ಯಯನ ಎಂಬ ವಿಷಯವನ್ನಿಟ್ಟುಕೊಂಡು ನಟರಾಜ್ ಹುಳಿಯಾರ್ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ಮಾಡಲು ಹೊರಟೆವು. ಆದರೆ ವಿದ್ಯಾರ್ಥಿಗಳಿಗೆ ಆ ಸಮಯದಲ್ಲಿ ಪರೀಕ್ಷೆ ನಡೆಯುವ ಕಾರಣಕ್ಕೆ ಕೈಬಿಟ್ಟೆವು. ಆದರೆ ಲಂಕೇಶರ ಹುಟ್ಟೂರಾದ ಕೊನಗವಳ್ಳಿಯಲ್ಲಿ ಅವರ ಕುರಿತು ಸಭೆಯಿದೆ ಎಂಬ ಸುದ್ದಿ ಬಂತು. ಕತ್ತಿಗೆ ಚನ್ನಪ್ಪ ಮತ್ತು ಶಂಕರಪ್ಪ ಏರ್ಪಡಿಸಿದ್ದಾರೆ, ಅವರ ಮಗ ಬರುತ್ತಾರೆ ಎಂದು ತಿಳಿದುಬಂತು. ಇನ್ನು ಅಲ್ಲಿ ನಮಗೇನು ಕೆಲಸ ಎಂದು ಸುಮ್ಮನಾದೆ. ಆದರೆ ಲಂಕೇಶರ ಮಗ ಹೈದರಾಬಾದಲ್ಲಿ ಶೂಟಿಂಗ್ ನಡೆಸುತ್ತಿರುವುದರಿಂದ ಬರುವುದಿಲ್ಲವಂತೆ ಎಂಬ ವರ್ತಮಾನ ಬಂತು. ಕೂಡಲೇ ನಾನು ಸಾಸ್ವೆಹಳ್ಳಿ ಸತೀಶ್ ಕೊನಗವಳ್ಳಿಗೆ ಹೊರಟೆವು.

ಕೊನಗವಳ್ಳಿಯಲ್ಲಿ ಕರಿಯವ್ವನ ಗುಡಿ ನೋಡಿ ಲಂಕೇಶರ ಮನೆ ಹಿಂದಿನ ಉಡೇವು ನೋಡಿ ಕಾರ್ಯಕ್ರಮ ನಡೆಯಲಿರುವ ಲಂಕೇಶ್ ಸಮುದಾಯಕ್ಕೆ ಬಂದೆವು. ಸಭೆ ಆರಂಭವಾಯ್ತು. ನಿರೂಪಕ ಪ್ರಸ್ತಾವನೆಯನ್ನ ದೀರ್ಘವಾಗಿ ಮಾಡಿ ನಮಗೆಲ್ಲಾ ಐದು ನಿಮಿಷ ಸಾಕು ಎಂದರು. ಲಂಕೇಶರ ಸಂಬಂಧಿ ಶಂಕರಪ್ಪ ಸುದೀರ್ಘವಾಗಿ ಮಾತನಾಡಿದರು. ಇವರು ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿದ್ದರು. ಜನಗಳೇ ಇಲ್ಲದ ಜಿಲ್ಲಾ ಸಾಹಿತ್ಯ ಸಮ್ಮೇಳನ ಮಾಡುವುದು, ಪುಸ್ತಕದ ಮಳಿಗೆಗಳಿಲ್ಲದ ಸಾಹಿತ್ಯ ಸಮಾರಂಭ ಮಾಡುವುದರಲ್ಲಿ ಎತ್ತಿದ ಕೈ. ವೇದಿಕೆ ಮೇಲೆ ಎಷ್ಟು ಜನ ಇರುತ್ತಾರೊ ಅಷ್ಟೇ ಜನ ಸಭಾಂಗಣದಲ್ಲಿದ್ದರೆ ಇವರಿಗೇನೂ ಸಮಾಧಾನ. ಕೇಳಿದರೆ “ಜನ ಬರಲಿಲ್ಲ ಅಂದ್ರೆ ನಾನೇಮಾಡಕ್ಯಾತಿ” ಎನ್ನುತ್ತಿದ್ದರು. ಒಳ್ಳೆಯ ವ್ಯಕ್ತಿಯಾದ್ದರಿಂದ ಸಹಿಸಿಕೊಂಡೆವು. ಆದರೆ ಕಳೆದ ಚುನಾವಣೆಯಲ್ಲಿ ಇವರನ್ನ ಕರೆದುಕೊಂಡು ಹೋದ ಆರ್‌ಎಸ್‌ಎಸ್ಸಿಗರು ತಮ್ಮ ನಡುವೆ ಕೂರಿಸಿಕೊಂಡು ನೀವು ಗೆದ್ದಾಯ್ತು ಎಂದು ಉಬ್ಬಿಸಿದರು. ಲೋಕಸಭಾ ಸದಸ್ಯ ರಾಘವೇಂದ್ರ ಶಂಕರಪ್ಪನಿಗೆ ಮತಹಾಕುವಂತೆ ಸ್ವತಃ ಆಜ್ಞಾಪಿಸಿದರು. ಲಿಂಗಾಯಿತ ಉಪ ಜಾತಿಗಳೆಲ್ಲಾ ಒಟ್ಟಾಗಿ ಶಂಕರಪ್ಪನ ಬೆಂಬಲಕ್ಕೆ ನಿಂತರು. ಇದರಿಂದ ಎಚ್ಚೆತ್ತುಕೊಂಡ ಸಾಹಿತ್ಯ ಪರಿಷತ್ ಮತದಾರರು ಒಟ್ಟಾಗಿ ಡಿ. ಮಂಜುನಾಥರನ್ನ ಬೆಂಬಲಿಸಿ ಗೆಲ್ಲಿಸಿದರು. ಆದರೆ ಶಂಕರಪ್ಪನಿಗೆ ಜ್ಞಾನೋದಯವಾದಂತೆ ಕಾಣಲಿಲ್ಲ.

ಲಂಕೇಶರ ಸಭೆಗೆ ಬಂದು ಮಾತನಾಡುತ್ತ “ಲಂಕೇಶ್ ನನ್ನತ್ರ ಏನೇಳಿದ್ರು ಅಂದ್ರೆ ಈ ಯಡಿಯೂರಪ್ಪ ಮುಖ್ಯಮಂತ್ರಿಯಾಗಬೇಕು ಕಣಯ್ಯ ಅಂದಿದ್ರು” ಎಂದರು. ಮೊನ್ನೆಯವರೆಗೂ ಚೆನ್ನಾಗಿದ್ದ ಶಂಕರಪ್ಪ ಒಂದು ಸಭೆಯಲ್ಲಿ ಹೇಳಿದ ಸುಳ್ಳಿಗೆ ಬೆಚ್ಚುವಂತಾಯ್ತು. ಮುಂದುವರಿದ ಶಂಕರಪ್ಪ, “ನಾನು ಸಾಹಿತ್ಯ ಸಮ್ಮೇಳನ ಮಾಡ್ತಿನಿ ದುಡ್ಡು ಕೊಡಿ ಅಂತ ಇಪ್ಪತ್ತೈದು ಲಕ್ಷ ಕೇಳಿದ್ರೆ ಐವತ್ತು ಲಕ್ಷ ಕೊಟ್ರು” ಎಂದರು. ಹೀಗೆ ಶಂಕರಪ್ಪ ಲಂಕೇಶರನ್ನ ಸುಳ್ಳುಸುಳ್ಳೇ ಯಡಿಯೂರಪ್ಪನ ಅಭಿಮಾನಿ ಮಾಡಿಬಿಟ್ಟರು. ಇದಕ್ಕಿಂತ ಮೊದಲು “ಲಂಕೇಶರಿಗೆ ನಮ್ಮ ಜನ ಕಂಡ್ರೆ ಭಾಳ ಪ್ರೀತಿ, ನನ್ನ ತಮ್ಮನಿಗೆ ಎಮ್ಮೆಲ್ಲೆ ಟಿಕೆಟ್ ಕೊಡಿಸಿದ್ರು” ಎಂದಿದ್ದರು. “ನನ್ನ ತಮ್ಮನಿಗೆ ಟಿಕೆಟ್ ಕೊಡಿಸಲು ಸಹಾಯ ಮಾಡಲಿಲ್ಲ, ಮೆಚ್ಚಿ ಬರೆಯಲಿಲ್ಲ. ನಮ್ಮ ಏಳಿಗೆನ ಸಹಿಸಲ್ಲ ನೀವು” ಎಂದು ಟೀಕಿಸಿ ಬರೆದ ಪತ್ರ ಲಂಕೇಶರ ಟೇಬಲ್ ಮೇಲಿದ್ದುದನ್ನ ನಾನು ನೋಡಿದ್ದೆ.

ಅದೇನಾದರೂ ಆಗಲಿ, ನಿನ್ನೆ ಮೊನ್ನೆಯವರೆಗೂ ಚೆನ್ನಾಗಿದ್ದ ಶಂಕರಪ್ಪನವರು ಬಿಜೆಪಿ ಸೇರಿದ ಕೂಡಲೇ ಸುಳ್ಳುಬುರುಕನಾಗಿ ಬದಲಾದದ್ದು ನಮಗಂತೂ ಆಶ್ಚರ್ಯ ಹುಟ್ಟಸಲಿಲ್ಲ. ಆದರೆ ಈತ ’ಯಡಿಯೂರಪ್ಪ ಒಮ್ಮೆ ಮುಖ್ಯಮಂತ್ರಿಯಾಗಬೇಕು ಅಂತ ಲಂಕೇಶ್ ಹೇಳಿದ್ದರು’ ಎಂಬ ಮಾತನ್ನ ಖಂಡಿಸಬೇಕಿದೆ. ಲಂಕೇಶ್ ಎಂದೂ ಯಡಿಯೂರಪ್ಪನ ಪರ ಮಾತನಾಡಿದ್ದಾಗಲಿ, ಒಂದು ಸಾಲನ್ನು ಬರೆದಿದ್ದಾಗಲಿ ಇಲ್ಲ. ಶಂಕರಪ್ಪ ಕನ್ನಡದ ಪ್ರಜ್ಞಾವಂತರ ಮನಸ್ಸಿನ ಒಂದು ಎಚ್ಚರವಾಗಿರುವ ಲಂಕೇಶರ ಬಗ್ಗೆ ಸುಳ್ಳುಗಳನ್ನ ನಿಲ್ಲಿಸುವುದು
ಅವರಿಗೇ ಒಳ್ಳೆಯದು.

ಬಿ. ಚಂದ್ರೇಗೌಡ

ಬಿ. ಚಂದ್ರೇಗೌಡ
ಲಂಕೇಶರ ಪತ್ರಿಕೆಯಲ್ಲಿ ಬಯಲುಸೀಮೆಯ ಕಟ್ಟೆ ಪುರಾಣದ ಮೂಲಕ ಕನ್ನಡಿಗರೆಲ್ಲರ ಗಮನಕ್ಕೆ ಬಂದ ಚಂದ್ರೇಗೌಡರು, ನಾಟಕಕಾರರು, ನಟರಷ್ಟೇ ಅಲ್ಲ ವಿಶಿಷ್ಟ ರಾಜಕೀಯ ನೋಟವುಳ್ಳವರೂ ಸಹಾ.
ಕರ್ನಾಟಕದ ಸಾಂಸ್ಕೃತಿಕ ಹಾಗೂ ರಾಜಕೀಯ ಇತಿಹಾಸದ ಆಗುಹೋಗುಗಳು ಅವರಲ್ಲಿ ದಾಖಲಾಗಿರುವ ಬಗೆಯೂ ವಿಶಿಷ್ಟವೇ..


ಇದನ್ನೂ ಓದಿ: ಜಾತಿ ದುರಹಂಕಾರ ಮತ್ತು ಮೀಸಲಾತಿ ಬಗ್ಗೆ ಗೌರಿ ಲಂಕೇಶ್‌ ಬರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...