Homeಕರ್ನಾಟಕಮೂಕ-ಕಿವಿ ಕೇಳದ ಅಕ್ಕಿಪಿಕ್ಕಿ ಸಮುದಾಯದ ಬಾಲಕಿ ಅಪಹರಿಸಿ ಕೊಲೆ; ಪೋಷಕರಿಂದ ಅತ್ಯಾಚಾರ ಆರೋಪ

ಮೂಕ-ಕಿವಿ ಕೇಳದ ಅಕ್ಕಿಪಿಕ್ಕಿ ಸಮುದಾಯದ ಬಾಲಕಿ ಅಪಹರಿಸಿ ಕೊಲೆ; ಪೋಷಕರಿಂದ ಅತ್ಯಾಚಾರ ಆರೋಪ

- Advertisement -
- Advertisement -

ಬೆಂಗಳೂರಿನ ಕೆಂಗೇರಿ ಸಮೀಪದ, ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಮಾತು ಬಾರದ ಮತ್ತು ಕಿವಿ ಕೇಳದ ಅಕ್ಕಿಪಿಕ್ಕಿ ಸಮುದಾಯದ ಬಾಲಕಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲ್ಲಲಾಗಿದೆ ಎಂದು ಪೋಷಕರು ಆರೋಪಿಸಿದ್ದು, ಅಧಿಕಾರಿಗಳ ಸಮ್ಮುಖದಲ್ಲಿ ಬುಧವಾರ ಅಂತ್ಯಸಂಸ್ಕಾರ ನಡೆಯಿತು.

“ತಮ್ಮ ಮಗಳ ಮೇಲೆ ಅತ್ಯಾಚಾರ ಎಸಗಿ, ಚಿತ್ರಹಿಂಸೆ ನೀಡಿ ಕ್ರೂರವಾಗಿ ಕೊಲೆ ಮಾಡಲಾಗಿದೆ. ಹಂತಕರನ್ನು ಪೊಲೀಸರು ಬಂಧಿಸುವವರೆಗೆ ಆಕೆಯ ಶವಸಂಸ್ಕಾರ ಮಾಡುವುದಿಲ್ಲ” ಎರಡು ದಿನಗಳಿಂದ ಪೋಷಕರು ಹಠ ಹಿಡಿದ್ದರು. ಕೊನೆಗೆ ಅಧಿಕಾರಿಗಳು ಪಾಲಕರ ಮನವೊಲಿಸಿದ್ದು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸ್ಥಳಕ್ಕೆ ಧಾವಿಸಿದ ಮೇಲೆ ಸ್ಥಳೀಯ ಸ್ಮಶಾನದಲ್ಲಿ ಬಾಲಕಿಯ ಅಂತ್ಯಸಂಸ್ಕಾರ ನಡೆದಿದೆ.

ಕಳೆದ ಭಾನುವಾರ, 14 ವರ್ಷದ ಕಿವುಡ-ಮೂಕ ಬಾಲಕಿಯನ್ನು ಅಪಹರಿಸಲಾಗಿತ್ತು; ಬಳಿಕ ಆಲೆಯ ಕತ್ತು ನುಲುಚಿ, ಬೆನ್ನು ಮೂಳೆ ಮುರಿದು ಕೊಲೆ ಮಾಡಲಾಗಿದೆ. ಬಿಡದಿ ಹೋಬಳಿ ಬಳಿಯ ಭದ್ರಾಪುರ ಹತ್ತಿರದ ರೈಲ್ವೆ ಟ್ರಾಕ್‌ ಬಳಿ ಶವ ಎಸೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಆರೋಪಿಗಳಿಗಾಗಿ ಬಿಡದಿ ಠಾಣೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಮೂರು ದಿನಗಳ ಹಿಂದೆ ಅರೆ ನಗ್ನಾವಸ್ಥೆಯಲ್ಲಿ ಶವವಾಗಿ ಪತ್ತೆಯಾದ ಮಾತು ಬಾರದ ಮತ್ತು ಕಿವಿ ಕೇಳಿಸದ ಬಾಲಕಿ ಹಕ್ಕಿಪಿಕ್ಕಿ ಸಮುದಾಯಕ್ಕೆ ಸೇರಿದ್ದಾಳೆ. ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ ಅವರು, ಗ್ರಾಮಕ್ಕೆ ಬುಧವಾರ ಭೇಟಿ ನೀಡಿದಾಗ ಕುಟುಂಬದವರು ಮತ್ತು ಗ್ರಾಮಸ್ಥರು ತಮ್ಮ ನೋವು ತೋಡಿಕೊಂಡರು.

“ಮಗಳ ಮೇಲೆ ಅತ್ಯಾಚಾರವಾಗಿದೆ ಎಂದು ಹೇಳಿದರೂ ಪೊಲೀಸರು ನಂಬುತ್ತಿಲ್ಲ. ಮರಣೋತ್ತರ ಪರೀಕ್ಷೆ ವರದಿ ಬಂದರೆ ಗೊತ್ತಾಗುತ್ತದೆ ಎನ್ನುತ್ತಿದ್ದಾರೆ. ಆದರೆ, ನಿನ್ನೆ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದರೂ, ಇನ್ನೂ ವರದಿ ಸಿಕ್ಕಿಲ್ಲ ಎನ್ನುತ್ತಿದ್ದಾರೆ. ವರದಿ ಬಂದು ಯಾವ ರೀತಿ ಕೊಲೆ ಮಾಡಿದ್ದಾರೆ? ಅತ್ಯಾಚಾರ ಆಗಿದೆಯೇ ಇಲ್ಲವೊ ಎಂದು ಖಚಿತವಾಗಿ ಹೇಳುವವರೆಗೆ ನಾವು ಮಗಳನ್ನು ಅಂತ್ಯಸಂಸ್ಕಾರ ಮಾಡುವುದಿಲ್ಲ” ಎಂದು ಬೆಳಿಗ್ಗೆಯಿಂದ ಪಾಲಕರು ಪಟ್ಟು ಹಿಡಿದಿದ್ದರು.

ಘಟನೆ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ವಿವರಿಸುತ್ತಿರುವ ಮೃತ ಬಾಲಕಿ ಪೋಷಕರು.

ಪರಿಹಾರ ವಿತರಣೆ: ಹತ್ಯೆ ಆಗಿರುವ ಅಪ್ರಾಪ್ತ ವಯಸ್ಸಿನ ಬಾಲಕಿ ಖುಷಿ ಅವರ ಪೋಷಕರಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬುಧವಾರ ಸಾಂತ್ವನ ಹೇಳಿ ಜಿಲ್ಲಾಡಳಿತದ ವತಿಯಿಂದ 4,12,500 ರೂ. ಹಾಗೂ ಪಂಚಾಯಿತಿ ವತಿಯಿಂದ 50 ಸಾವಿರ ಪರಿಹಾರದ ಚೆಕ್ ನೀಡಿದರು.

ಕುಣಿಗಲ್ ಶಾಸಕ ಡಾ. ರಂಗನಾಥ್, ಜಿಲ್ಲಾಧಿಕಾರಿ ಯಶವಂತ್ ಗುರುಕರ್, ಎಸ್‌ಪಿ ಶ್ರೀನಿವಾಸಗೌಡ, ಕಾಂಗ್ರೆಸ್ ಮುಖಂಡ ಗಾಣಕಲ್ ನಟರಾಜ್ ಮತ್ತಿತರರು ಉಪಸ್ಥಿತರಿದ್ದರು.

ಬೆಳಗಾವಿ| ಕುರಾನ್-ಹದೀಸ್‌ ಪುಸ್ತಕಗಳನ್ನು ಸುಟ್ಟ ಕಿಡಿಗೇಡಿಗಳು; ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...