Homeಕರ್ನಾಟಕಮೂಕ-ಕಿವಿ ಕೇಳದ ಅಕ್ಕಿಪಿಕ್ಕಿ ಸಮುದಾಯದ ಬಾಲಕಿ ಅಪಹರಿಸಿ ಕೊಲೆ; ಪೋಷಕರಿಂದ ಅತ್ಯಾಚಾರ ಆರೋಪ

ಮೂಕ-ಕಿವಿ ಕೇಳದ ಅಕ್ಕಿಪಿಕ್ಕಿ ಸಮುದಾಯದ ಬಾಲಕಿ ಅಪಹರಿಸಿ ಕೊಲೆ; ಪೋಷಕರಿಂದ ಅತ್ಯಾಚಾರ ಆರೋಪ

- Advertisement -
- Advertisement -

ಬೆಂಗಳೂರಿನ ಕೆಂಗೇರಿ ಸಮೀಪದ, ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಮಾತು ಬಾರದ ಮತ್ತು ಕಿವಿ ಕೇಳದ ಅಕ್ಕಿಪಿಕ್ಕಿ ಸಮುದಾಯದ ಬಾಲಕಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲ್ಲಲಾಗಿದೆ ಎಂದು ಪೋಷಕರು ಆರೋಪಿಸಿದ್ದು, ಅಧಿಕಾರಿಗಳ ಸಮ್ಮುಖದಲ್ಲಿ ಬುಧವಾರ ಅಂತ್ಯಸಂಸ್ಕಾರ ನಡೆಯಿತು.

“ತಮ್ಮ ಮಗಳ ಮೇಲೆ ಅತ್ಯಾಚಾರ ಎಸಗಿ, ಚಿತ್ರಹಿಂಸೆ ನೀಡಿ ಕ್ರೂರವಾಗಿ ಕೊಲೆ ಮಾಡಲಾಗಿದೆ. ಹಂತಕರನ್ನು ಪೊಲೀಸರು ಬಂಧಿಸುವವರೆಗೆ ಆಕೆಯ ಶವಸಂಸ್ಕಾರ ಮಾಡುವುದಿಲ್ಲ” ಎರಡು ದಿನಗಳಿಂದ ಪೋಷಕರು ಹಠ ಹಿಡಿದ್ದರು. ಕೊನೆಗೆ ಅಧಿಕಾರಿಗಳು ಪಾಲಕರ ಮನವೊಲಿಸಿದ್ದು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸ್ಥಳಕ್ಕೆ ಧಾವಿಸಿದ ಮೇಲೆ ಸ್ಥಳೀಯ ಸ್ಮಶಾನದಲ್ಲಿ ಬಾಲಕಿಯ ಅಂತ್ಯಸಂಸ್ಕಾರ ನಡೆದಿದೆ.

ಕಳೆದ ಭಾನುವಾರ, 14 ವರ್ಷದ ಕಿವುಡ-ಮೂಕ ಬಾಲಕಿಯನ್ನು ಅಪಹರಿಸಲಾಗಿತ್ತು; ಬಳಿಕ ಆಲೆಯ ಕತ್ತು ನುಲುಚಿ, ಬೆನ್ನು ಮೂಳೆ ಮುರಿದು ಕೊಲೆ ಮಾಡಲಾಗಿದೆ. ಬಿಡದಿ ಹೋಬಳಿ ಬಳಿಯ ಭದ್ರಾಪುರ ಹತ್ತಿರದ ರೈಲ್ವೆ ಟ್ರಾಕ್‌ ಬಳಿ ಶವ ಎಸೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಆರೋಪಿಗಳಿಗಾಗಿ ಬಿಡದಿ ಠಾಣೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಮೂರು ದಿನಗಳ ಹಿಂದೆ ಅರೆ ನಗ್ನಾವಸ್ಥೆಯಲ್ಲಿ ಶವವಾಗಿ ಪತ್ತೆಯಾದ ಮಾತು ಬಾರದ ಮತ್ತು ಕಿವಿ ಕೇಳಿಸದ ಬಾಲಕಿ ಹಕ್ಕಿಪಿಕ್ಕಿ ಸಮುದಾಯಕ್ಕೆ ಸೇರಿದ್ದಾಳೆ. ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ ಅವರು, ಗ್ರಾಮಕ್ಕೆ ಬುಧವಾರ ಭೇಟಿ ನೀಡಿದಾಗ ಕುಟುಂಬದವರು ಮತ್ತು ಗ್ರಾಮಸ್ಥರು ತಮ್ಮ ನೋವು ತೋಡಿಕೊಂಡರು.

“ಮಗಳ ಮೇಲೆ ಅತ್ಯಾಚಾರವಾಗಿದೆ ಎಂದು ಹೇಳಿದರೂ ಪೊಲೀಸರು ನಂಬುತ್ತಿಲ್ಲ. ಮರಣೋತ್ತರ ಪರೀಕ್ಷೆ ವರದಿ ಬಂದರೆ ಗೊತ್ತಾಗುತ್ತದೆ ಎನ್ನುತ್ತಿದ್ದಾರೆ. ಆದರೆ, ನಿನ್ನೆ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದರೂ, ಇನ್ನೂ ವರದಿ ಸಿಕ್ಕಿಲ್ಲ ಎನ್ನುತ್ತಿದ್ದಾರೆ. ವರದಿ ಬಂದು ಯಾವ ರೀತಿ ಕೊಲೆ ಮಾಡಿದ್ದಾರೆ? ಅತ್ಯಾಚಾರ ಆಗಿದೆಯೇ ಇಲ್ಲವೊ ಎಂದು ಖಚಿತವಾಗಿ ಹೇಳುವವರೆಗೆ ನಾವು ಮಗಳನ್ನು ಅಂತ್ಯಸಂಸ್ಕಾರ ಮಾಡುವುದಿಲ್ಲ” ಎಂದು ಬೆಳಿಗ್ಗೆಯಿಂದ ಪಾಲಕರು ಪಟ್ಟು ಹಿಡಿದಿದ್ದರು.

ಘಟನೆ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ವಿವರಿಸುತ್ತಿರುವ ಮೃತ ಬಾಲಕಿ ಪೋಷಕರು.

ಪರಿಹಾರ ವಿತರಣೆ: ಹತ್ಯೆ ಆಗಿರುವ ಅಪ್ರಾಪ್ತ ವಯಸ್ಸಿನ ಬಾಲಕಿ ಖುಷಿ ಅವರ ಪೋಷಕರಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬುಧವಾರ ಸಾಂತ್ವನ ಹೇಳಿ ಜಿಲ್ಲಾಡಳಿತದ ವತಿಯಿಂದ 4,12,500 ರೂ. ಹಾಗೂ ಪಂಚಾಯಿತಿ ವತಿಯಿಂದ 50 ಸಾವಿರ ಪರಿಹಾರದ ಚೆಕ್ ನೀಡಿದರು.

ಕುಣಿಗಲ್ ಶಾಸಕ ಡಾ. ರಂಗನಾಥ್, ಜಿಲ್ಲಾಧಿಕಾರಿ ಯಶವಂತ್ ಗುರುಕರ್, ಎಸ್‌ಪಿ ಶ್ರೀನಿವಾಸಗೌಡ, ಕಾಂಗ್ರೆಸ್ ಮುಖಂಡ ಗಾಣಕಲ್ ನಟರಾಜ್ ಮತ್ತಿತರರು ಉಪಸ್ಥಿತರಿದ್ದರು.

ಬೆಳಗಾವಿ| ಕುರಾನ್-ಹದೀಸ್‌ ಪುಸ್ತಕಗಳನ್ನು ಸುಟ್ಟ ಕಿಡಿಗೇಡಿಗಳು; ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...