Homeಕರ್ನಾಟಕಮೂಕ-ಕಿವಿ ಕೇಳದ ಅಕ್ಕಿಪಿಕ್ಕಿ ಸಮುದಾಯದ ಬಾಲಕಿ ಅಪಹರಿಸಿ ಕೊಲೆ; ಪೋಷಕರಿಂದ ಅತ್ಯಾಚಾರ ಆರೋಪ

ಮೂಕ-ಕಿವಿ ಕೇಳದ ಅಕ್ಕಿಪಿಕ್ಕಿ ಸಮುದಾಯದ ಬಾಲಕಿ ಅಪಹರಿಸಿ ಕೊಲೆ; ಪೋಷಕರಿಂದ ಅತ್ಯಾಚಾರ ಆರೋಪ

- Advertisement -
- Advertisement -

ಬೆಂಗಳೂರಿನ ಕೆಂಗೇರಿ ಸಮೀಪದ, ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಮಾತು ಬಾರದ ಮತ್ತು ಕಿವಿ ಕೇಳದ ಅಕ್ಕಿಪಿಕ್ಕಿ ಸಮುದಾಯದ ಬಾಲಕಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲ್ಲಲಾಗಿದೆ ಎಂದು ಪೋಷಕರು ಆರೋಪಿಸಿದ್ದು, ಅಧಿಕಾರಿಗಳ ಸಮ್ಮುಖದಲ್ಲಿ ಬುಧವಾರ ಅಂತ್ಯಸಂಸ್ಕಾರ ನಡೆಯಿತು.

“ತಮ್ಮ ಮಗಳ ಮೇಲೆ ಅತ್ಯಾಚಾರ ಎಸಗಿ, ಚಿತ್ರಹಿಂಸೆ ನೀಡಿ ಕ್ರೂರವಾಗಿ ಕೊಲೆ ಮಾಡಲಾಗಿದೆ. ಹಂತಕರನ್ನು ಪೊಲೀಸರು ಬಂಧಿಸುವವರೆಗೆ ಆಕೆಯ ಶವಸಂಸ್ಕಾರ ಮಾಡುವುದಿಲ್ಲ” ಎರಡು ದಿನಗಳಿಂದ ಪೋಷಕರು ಹಠ ಹಿಡಿದ್ದರು. ಕೊನೆಗೆ ಅಧಿಕಾರಿಗಳು ಪಾಲಕರ ಮನವೊಲಿಸಿದ್ದು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸ್ಥಳಕ್ಕೆ ಧಾವಿಸಿದ ಮೇಲೆ ಸ್ಥಳೀಯ ಸ್ಮಶಾನದಲ್ಲಿ ಬಾಲಕಿಯ ಅಂತ್ಯಸಂಸ್ಕಾರ ನಡೆದಿದೆ.

ಕಳೆದ ಭಾನುವಾರ, 14 ವರ್ಷದ ಕಿವುಡ-ಮೂಕ ಬಾಲಕಿಯನ್ನು ಅಪಹರಿಸಲಾಗಿತ್ತು; ಬಳಿಕ ಆಲೆಯ ಕತ್ತು ನುಲುಚಿ, ಬೆನ್ನು ಮೂಳೆ ಮುರಿದು ಕೊಲೆ ಮಾಡಲಾಗಿದೆ. ಬಿಡದಿ ಹೋಬಳಿ ಬಳಿಯ ಭದ್ರಾಪುರ ಹತ್ತಿರದ ರೈಲ್ವೆ ಟ್ರಾಕ್‌ ಬಳಿ ಶವ ಎಸೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಆರೋಪಿಗಳಿಗಾಗಿ ಬಿಡದಿ ಠಾಣೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಮೂರು ದಿನಗಳ ಹಿಂದೆ ಅರೆ ನಗ್ನಾವಸ್ಥೆಯಲ್ಲಿ ಶವವಾಗಿ ಪತ್ತೆಯಾದ ಮಾತು ಬಾರದ ಮತ್ತು ಕಿವಿ ಕೇಳಿಸದ ಬಾಲಕಿ ಹಕ್ಕಿಪಿಕ್ಕಿ ಸಮುದಾಯಕ್ಕೆ ಸೇರಿದ್ದಾಳೆ. ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ ಅವರು, ಗ್ರಾಮಕ್ಕೆ ಬುಧವಾರ ಭೇಟಿ ನೀಡಿದಾಗ ಕುಟುಂಬದವರು ಮತ್ತು ಗ್ರಾಮಸ್ಥರು ತಮ್ಮ ನೋವು ತೋಡಿಕೊಂಡರು.

“ಮಗಳ ಮೇಲೆ ಅತ್ಯಾಚಾರವಾಗಿದೆ ಎಂದು ಹೇಳಿದರೂ ಪೊಲೀಸರು ನಂಬುತ್ತಿಲ್ಲ. ಮರಣೋತ್ತರ ಪರೀಕ್ಷೆ ವರದಿ ಬಂದರೆ ಗೊತ್ತಾಗುತ್ತದೆ ಎನ್ನುತ್ತಿದ್ದಾರೆ. ಆದರೆ, ನಿನ್ನೆ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದರೂ, ಇನ್ನೂ ವರದಿ ಸಿಕ್ಕಿಲ್ಲ ಎನ್ನುತ್ತಿದ್ದಾರೆ. ವರದಿ ಬಂದು ಯಾವ ರೀತಿ ಕೊಲೆ ಮಾಡಿದ್ದಾರೆ? ಅತ್ಯಾಚಾರ ಆಗಿದೆಯೇ ಇಲ್ಲವೊ ಎಂದು ಖಚಿತವಾಗಿ ಹೇಳುವವರೆಗೆ ನಾವು ಮಗಳನ್ನು ಅಂತ್ಯಸಂಸ್ಕಾರ ಮಾಡುವುದಿಲ್ಲ” ಎಂದು ಬೆಳಿಗ್ಗೆಯಿಂದ ಪಾಲಕರು ಪಟ್ಟು ಹಿಡಿದಿದ್ದರು.

ಘಟನೆ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ವಿವರಿಸುತ್ತಿರುವ ಮೃತ ಬಾಲಕಿ ಪೋಷಕರು.

ಪರಿಹಾರ ವಿತರಣೆ: ಹತ್ಯೆ ಆಗಿರುವ ಅಪ್ರಾಪ್ತ ವಯಸ್ಸಿನ ಬಾಲಕಿ ಖುಷಿ ಅವರ ಪೋಷಕರಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬುಧವಾರ ಸಾಂತ್ವನ ಹೇಳಿ ಜಿಲ್ಲಾಡಳಿತದ ವತಿಯಿಂದ 4,12,500 ರೂ. ಹಾಗೂ ಪಂಚಾಯಿತಿ ವತಿಯಿಂದ 50 ಸಾವಿರ ಪರಿಹಾರದ ಚೆಕ್ ನೀಡಿದರು.

ಕುಣಿಗಲ್ ಶಾಸಕ ಡಾ. ರಂಗನಾಥ್, ಜಿಲ್ಲಾಧಿಕಾರಿ ಯಶವಂತ್ ಗುರುಕರ್, ಎಸ್‌ಪಿ ಶ್ರೀನಿವಾಸಗೌಡ, ಕಾಂಗ್ರೆಸ್ ಮುಖಂಡ ಗಾಣಕಲ್ ನಟರಾಜ್ ಮತ್ತಿತರರು ಉಪಸ್ಥಿತರಿದ್ದರು.

ಬೆಳಗಾವಿ| ಕುರಾನ್-ಹದೀಸ್‌ ಪುಸ್ತಕಗಳನ್ನು ಸುಟ್ಟ ಕಿಡಿಗೇಡಿಗಳು; ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...