Homeಮುಖಪುಟರೈತರ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಸಂಸದರಿಗೆ ಘೇರಾವ್- ಹಿಂಸಾಚಾರ

ರೈತರ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಸಂಸದರಿಗೆ ಘೇರಾವ್- ಹಿಂಸಾಚಾರ

ಒಬ್ಬ ರೈತನ ಸ್ಥಿತಿ ಗಂಭೀರವಾಗಿದ್ದು ಇಬ್ಬರು ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -
- Advertisement -

ರೈತರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಸಭಾ ಸದಸ್ಯ ರಾಮ್ ಚಂದರ್ ಜಾಂಗ್ರಾರವರಿಗೆ ಹರಿಯಾಣದ ಹಿಸಾರ್ ನಲ್ಲಿ ರೈತರು ಘೇರಾವ್ ಹಾಕಿದ್ದು ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಒಬ್ಬ ರೈತನ ಸ್ಥಿತಿ ಗಂಭೀರವಾಗಿದ್ದು ಇಬ್ಬರು ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೈತರ ಮೇಲೆ ಹಲ್ಲೆ ಖಂಡಿಸಿ ಮತ್ತು ರೈತರ ಬಿಡುಗಡೆಗೆ ಒತ್ತಾಯಿಸಿ ರೈತರಲು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

ಸಂಸದರು ಹಿಸಾರ್ ಜಿಲ್ಲೆಯ ನಾರ್ನಾಂಡ್‌ನಲ್ಲಿ ಧರ್ಮಶಾಲೆಯನ್ನು ಉದ್ಘಾಟಿಸಲು ಆಗಮಿಸುತ್ತಿದ್ದ ವೇಳೆ, ಅವರ ವಿರುದ್ದ ರೈತರು ಘೋಷಣೆಗಳನ್ನು ಕೂಗಿ, ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ. ಈ ಸಮಯದಲ್ಲಿ ಪೊಲೀಸರು ಮತ್ತು ರೈತರ ನಡುವೆ ಮಾರಾಮಾರಿ ನಡೆದಿದ್ದು, ಜಂಗ್ರಾ ಅವರ ಕಾರಿನ ಗಾಜು ಪುಡಿಪುಡಿಯಾಗಿದೆ. ಪೊಲೀಸರು ನಡೆಸಿದ ಲಾಠಿ ಚಾರ್ಜ್‌ನಲ್ಲಿ ಹಲವಾರು ರೈತರು ಗಾಯಗೊಂಡಿದ್ದಾರೆ.

ಜಾಂಗ್ರಾ ಅವರು ನಿನ್ನೆ ರೋಹ್ಟಕ್‌ನ ಗೋಶಾಲೆಯಲ್ಲಿ ಆಯೋಜಿಸಿದ್ದ ದೀಪಾವಳಿ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದ್ದರು. ಆಗಲೂ ರೈತರಿಂದ ಇದೇ ರೀತಿಯ ಪ್ರತಿಭಟನೆಯನ್ನು ಎದುರಿಸಿದ್ದರು. ಕಾರ್ಯಕ್ರಮದ ನಂತರ ಪ್ರತಿಭಟನಾ ನಿರತ ರೈತರನ್ನ ಉದ್ಯೋಗವಿಲ್ಲದ ಮದ್ಯವ್ಯಸನಿಗಳು ಎಂದು ಕರೆದಿದ್ದರು. ಹಾಗಾಗಿ ಕ್ರೋಧಗೊಂಡ ರೈತರು ಇಂದು ಹಿಸಾರ್‌ನಲ್ಲಿ ಅವರ ವಿರುದ್ಧ ಪ್ರತಿಭಟನೆ ನಡೆಸಲು ಕಾರಣವಾಗಿದೆ ಎನ್ನಲಾಗಿದೆ.

ರೈತರು ಕೃಷಿ ಕಾಯ್ದೆಗಳ ವಿರುದ್ದ ಪ್ರತಿಭಟನೆ ನಡೆಸಿ, ಬಿಜೆಪಿ ಸಂಸದರಿಗೆ ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ. ಬಿಜೆಪಿ ಸರ್ಕಾರದ ವಿರುದ್ಧವೂ ಘೋಷಣೆ ಕೂಗಿದ್ದಾರೆ. ಕಾರ್ಯಕ್ರಮದ ಭಾಗವಾಗಿ ನಾರ್ನಾಂಡ್‌ನಲ್ಲಿ ಭಾರೀ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿತ್ತು. ರೈತರನ್ನು ತಡೆಯಲು ಪೊಲೀಸರು ಭಾರಿ ಬ್ಯಾರಿಕೇಡ್‌ಗಳನ್ನು ಹಾಕಿದ್ದರು. ಆದರೆ, ಹೆಚ್ಚಿನ ಸಂಖ್ಯೆಯಲ್ಲಿದ್ದ ರೈತರನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ. ರೈತ ಪ್ರತಿಭಟನಾಕಾರರು ಪೊಲೀಸರು ಮತ್ತು ಅರೆಸೈನಿಕ ಪಡೆಗಳೊಂದಿಗೆ ವಾಗ್ವಾದ ನಡೆಸಿದರು. ಇಡೀ ಘಟನೆಯಲ್ಲಿ ಒಬ್ಬ ಅರೆಸೇನಾ ಪಡೆಯ ಸಿಬ್ಬಂದಿ ಕೂಡ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

“ನನ್ನ ಕಾರ್ಯಕ್ರಮವನ್ನು ಮುಗಿಸಿ, ಮತ್ತೊಂದು ಸಮಾರಂಭದಲ್ಲಿ ಭಾಗವಹಿಸಲು ಹೋಗುತ್ತಿದ್ದಾಗ ಕೆಲವರು ನನ್ನ ಕಾರಿನ ಮೇಲೆ ಲಾಠಿಗಳನ್ನು ಎಸೆದರು. ಕಾರನ್ನು ಹಾನಿಗೊಳಿಸಿದರು. ಯಾರಿಗೂ ಗಾಯವಾಗಿಲ್ಲ. ಈ ಘಟನೆಗೆ ಸಂಬಂಧಿಸಿದಂತೆ ನಾನು ಹರಿಯಾಣ ಡಿಜಿಪಿ ಮತ್ತು ಎಸ್ಪಿ ಅವರೊಂದಿಗೆ ಮಾತನಾಡಿದ್ದೇನೆ. ನಾನು ತಪ್ಪಿತಸ್ಥರ ವಿರುದ್ಧ ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಒತ್ತಾಯಿಸಿದ್ದೇನೆ. ಇದು ಸ್ಪಷ್ಟವಾಗಿ ಕೊಲೆ ಯತ್ನವಾಗಿದೆ” ಎಂದು ಜಾಂಗ್ರಾ ಹೇಳಿದ್ದಾರೆ.

ಅಲ್ಲಿ ಪ್ರತಿಭಟಿಸುತ್ತಿರುವವರು ರೈತರಲ್ಲ, ಅವರಿಗೆ ಕೃಷಿ ಕಾಯ್ದೆಗಳ ಬಗ್ಗೆ ತಿಳಿದಿಲ್ಲ. ನಿಹಾಂಗ್ ಗಳು ಒಬ್ಬನನ್ನು ಕೊಂದಿದ್ದಾರೆ. ಅವರು ಉದ್ಯೋಗವಿಲ್ಲದ ಮದ್ಯವ್ಯಸನಿಗಳು ಎಮದು ಜಾಂಗ್ರಾ ನಿನ್ನೆ ಹೇಳಿಕೆ ಕೊಟ್ಟಿದ್ದರು. ಸಿಟ್ಟಿಗೆದ್ದ ರೈತರು ಇಂದು ಪ್ರತಿಭಟನೆ ನಡೆಸಿದ್ದಾರೆ.

ಒಕ್ಕೂಟ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮತ್ತು ಎಂಎಸ್‌ಪಿ ಖಾತ್ರಿಗಾಗಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ 11 ತಿಂಗಳು ತುಂಬಿವೆ. ಇದೇ ನವೆಂಬರ್ 26ರವರೆಗೆ ಒಕ್ಕೂಟ ಸರ್ಕಾರಕ್ಕೆ ಸಮಯ ನೀಡಿರುವ ರೈತರು ತಮ್ಮ ಹಕ್ಕೊತ್ತಾಯಗಳು ಈಡೇರದಿದ್ದರೆ ಪ್ರತಿಭಟನೆ ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ಬಿಜೆಪಿ ಸಚಿವರು, ಶಾಸಕರು, ಸಂಸದರು ಎಲ್ಲೆ ಹೋದರು ಅವರಿಗೆ ಕಪ್ಪು ಬಾವುಟ ತೋರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.


ಇದನ್ನೂ ಓದಿ:ರೈತ ಹೋರಾಟದ ಕಣದಲ್ಲಿ ದೀಪಾವಳಿ ಆಚರಣೆ ಹೀಗಿದೆ? ಫೋಟೊಗಳಲ್ಲಿ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...