Homeಮುಖಪುಟರೈತರ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಸಂಸದರಿಗೆ ಘೇರಾವ್- ಹಿಂಸಾಚಾರ

ರೈತರ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಸಂಸದರಿಗೆ ಘೇರಾವ್- ಹಿಂಸಾಚಾರ

ಒಬ್ಬ ರೈತನ ಸ್ಥಿತಿ ಗಂಭೀರವಾಗಿದ್ದು ಇಬ್ಬರು ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -
- Advertisement -

ರೈತರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ರಾಜ್ಯಸಭಾ ಸದಸ್ಯ ರಾಮ್ ಚಂದರ್ ಜಾಂಗ್ರಾರವರಿಗೆ ಹರಿಯಾಣದ ಹಿಸಾರ್ ನಲ್ಲಿ ರೈತರು ಘೇರಾವ್ ಹಾಕಿದ್ದು ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಒಬ್ಬ ರೈತನ ಸ್ಥಿತಿ ಗಂಭೀರವಾಗಿದ್ದು ಇಬ್ಬರು ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೈತರ ಮೇಲೆ ಹಲ್ಲೆ ಖಂಡಿಸಿ ಮತ್ತು ರೈತರ ಬಿಡುಗಡೆಗೆ ಒತ್ತಾಯಿಸಿ ರೈತರಲು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

ಸಂಸದರು ಹಿಸಾರ್ ಜಿಲ್ಲೆಯ ನಾರ್ನಾಂಡ್‌ನಲ್ಲಿ ಧರ್ಮಶಾಲೆಯನ್ನು ಉದ್ಘಾಟಿಸಲು ಆಗಮಿಸುತ್ತಿದ್ದ ವೇಳೆ, ಅವರ ವಿರುದ್ದ ರೈತರು ಘೋಷಣೆಗಳನ್ನು ಕೂಗಿ, ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ. ಈ ಸಮಯದಲ್ಲಿ ಪೊಲೀಸರು ಮತ್ತು ರೈತರ ನಡುವೆ ಮಾರಾಮಾರಿ ನಡೆದಿದ್ದು, ಜಂಗ್ರಾ ಅವರ ಕಾರಿನ ಗಾಜು ಪುಡಿಪುಡಿಯಾಗಿದೆ. ಪೊಲೀಸರು ನಡೆಸಿದ ಲಾಠಿ ಚಾರ್ಜ್‌ನಲ್ಲಿ ಹಲವಾರು ರೈತರು ಗಾಯಗೊಂಡಿದ್ದಾರೆ.

ಜಾಂಗ್ರಾ ಅವರು ನಿನ್ನೆ ರೋಹ್ಟಕ್‌ನ ಗೋಶಾಲೆಯಲ್ಲಿ ಆಯೋಜಿಸಿದ್ದ ದೀಪಾವಳಿ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದ್ದರು. ಆಗಲೂ ರೈತರಿಂದ ಇದೇ ರೀತಿಯ ಪ್ರತಿಭಟನೆಯನ್ನು ಎದುರಿಸಿದ್ದರು. ಕಾರ್ಯಕ್ರಮದ ನಂತರ ಪ್ರತಿಭಟನಾ ನಿರತ ರೈತರನ್ನ ಉದ್ಯೋಗವಿಲ್ಲದ ಮದ್ಯವ್ಯಸನಿಗಳು ಎಂದು ಕರೆದಿದ್ದರು. ಹಾಗಾಗಿ ಕ್ರೋಧಗೊಂಡ ರೈತರು ಇಂದು ಹಿಸಾರ್‌ನಲ್ಲಿ ಅವರ ವಿರುದ್ಧ ಪ್ರತಿಭಟನೆ ನಡೆಸಲು ಕಾರಣವಾಗಿದೆ ಎನ್ನಲಾಗಿದೆ.

ರೈತರು ಕೃಷಿ ಕಾಯ್ದೆಗಳ ವಿರುದ್ದ ಪ್ರತಿಭಟನೆ ನಡೆಸಿ, ಬಿಜೆಪಿ ಸಂಸದರಿಗೆ ಕಪ್ಪು ಬಾವುಟ ಪ್ರದರ್ಶಿಸಿದ್ದಾರೆ. ಬಿಜೆಪಿ ಸರ್ಕಾರದ ವಿರುದ್ಧವೂ ಘೋಷಣೆ ಕೂಗಿದ್ದಾರೆ. ಕಾರ್ಯಕ್ರಮದ ಭಾಗವಾಗಿ ನಾರ್ನಾಂಡ್‌ನಲ್ಲಿ ಭಾರೀ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿತ್ತು. ರೈತರನ್ನು ತಡೆಯಲು ಪೊಲೀಸರು ಭಾರಿ ಬ್ಯಾರಿಕೇಡ್‌ಗಳನ್ನು ಹಾಕಿದ್ದರು. ಆದರೆ, ಹೆಚ್ಚಿನ ಸಂಖ್ಯೆಯಲ್ಲಿದ್ದ ರೈತರನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ. ರೈತ ಪ್ರತಿಭಟನಾಕಾರರು ಪೊಲೀಸರು ಮತ್ತು ಅರೆಸೈನಿಕ ಪಡೆಗಳೊಂದಿಗೆ ವಾಗ್ವಾದ ನಡೆಸಿದರು. ಇಡೀ ಘಟನೆಯಲ್ಲಿ ಒಬ್ಬ ಅರೆಸೇನಾ ಪಡೆಯ ಸಿಬ್ಬಂದಿ ಕೂಡ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

“ನನ್ನ ಕಾರ್ಯಕ್ರಮವನ್ನು ಮುಗಿಸಿ, ಮತ್ತೊಂದು ಸಮಾರಂಭದಲ್ಲಿ ಭಾಗವಹಿಸಲು ಹೋಗುತ್ತಿದ್ದಾಗ ಕೆಲವರು ನನ್ನ ಕಾರಿನ ಮೇಲೆ ಲಾಠಿಗಳನ್ನು ಎಸೆದರು. ಕಾರನ್ನು ಹಾನಿಗೊಳಿಸಿದರು. ಯಾರಿಗೂ ಗಾಯವಾಗಿಲ್ಲ. ಈ ಘಟನೆಗೆ ಸಂಬಂಧಿಸಿದಂತೆ ನಾನು ಹರಿಯಾಣ ಡಿಜಿಪಿ ಮತ್ತು ಎಸ್ಪಿ ಅವರೊಂದಿಗೆ ಮಾತನಾಡಿದ್ದೇನೆ. ನಾನು ತಪ್ಪಿತಸ್ಥರ ವಿರುದ್ಧ ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಒತ್ತಾಯಿಸಿದ್ದೇನೆ. ಇದು ಸ್ಪಷ್ಟವಾಗಿ ಕೊಲೆ ಯತ್ನವಾಗಿದೆ” ಎಂದು ಜಾಂಗ್ರಾ ಹೇಳಿದ್ದಾರೆ.

ಅಲ್ಲಿ ಪ್ರತಿಭಟಿಸುತ್ತಿರುವವರು ರೈತರಲ್ಲ, ಅವರಿಗೆ ಕೃಷಿ ಕಾಯ್ದೆಗಳ ಬಗ್ಗೆ ತಿಳಿದಿಲ್ಲ. ನಿಹಾಂಗ್ ಗಳು ಒಬ್ಬನನ್ನು ಕೊಂದಿದ್ದಾರೆ. ಅವರು ಉದ್ಯೋಗವಿಲ್ಲದ ಮದ್ಯವ್ಯಸನಿಗಳು ಎಮದು ಜಾಂಗ್ರಾ ನಿನ್ನೆ ಹೇಳಿಕೆ ಕೊಟ್ಟಿದ್ದರು. ಸಿಟ್ಟಿಗೆದ್ದ ರೈತರು ಇಂದು ಪ್ರತಿಭಟನೆ ನಡೆಸಿದ್ದಾರೆ.

ಒಕ್ಕೂಟ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮತ್ತು ಎಂಎಸ್‌ಪಿ ಖಾತ್ರಿಗಾಗಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ 11 ತಿಂಗಳು ತುಂಬಿವೆ. ಇದೇ ನವೆಂಬರ್ 26ರವರೆಗೆ ಒಕ್ಕೂಟ ಸರ್ಕಾರಕ್ಕೆ ಸಮಯ ನೀಡಿರುವ ರೈತರು ತಮ್ಮ ಹಕ್ಕೊತ್ತಾಯಗಳು ಈಡೇರದಿದ್ದರೆ ಪ್ರತಿಭಟನೆ ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ಬಿಜೆಪಿ ಸಚಿವರು, ಶಾಸಕರು, ಸಂಸದರು ಎಲ್ಲೆ ಹೋದರು ಅವರಿಗೆ ಕಪ್ಪು ಬಾವುಟ ತೋರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.


ಇದನ್ನೂ ಓದಿ:ರೈತ ಹೋರಾಟದ ಕಣದಲ್ಲಿ ದೀಪಾವಳಿ ಆಚರಣೆ ಹೀಗಿದೆ? ಫೋಟೊಗಳಲ್ಲಿ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...