Homeಕರ್ನಾಟಕವಿಭಿನ್ನ ಪ್ರತಿಭಟನೆ: ಬಜೆಟ್ ಅಧಿವೇಶಕ್ಕೆ ಕಿವಿಗೆ ಹೂ ಇಟ್ಟುಕೊಂಡು ಬಂದ ಸಿದ್ದರಾಮಯ್ಯ

ವಿಭಿನ್ನ ಪ್ರತಿಭಟನೆ: ಬಜೆಟ್ ಅಧಿವೇಶಕ್ಕೆ ಕಿವಿಗೆ ಹೂ ಇಟ್ಟುಕೊಂಡು ಬಂದ ಸಿದ್ದರಾಮಯ್ಯ

- Advertisement -
- Advertisement -

ರಾಜ್ಯ ಬಜೆಟ್ ಮಂಡಿಸಲು ಬಂದ ಮುಖ್ಯಮಂತ್ರಿ, ಹಣಕಾಸು ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿವಿ ಮೇಲೆ ಹೂವು ಇಟ್ಟುಕೊಂಡು ಸ್ವಾಗತಿಸಿದ್ದಾರೆ. ಇದು, ಸರ್ಕಾರ ಜನರ ಕಿವಿಗೆ ಹೂ ಇಡುವ ಬಜೆಟ್ ಎನ್ನುವುದನ್ನು ಸೂಚಿಸುವ ವಿಭಿನ್ನ ಪ್ರತಿಭಟನೆಯಾಗಿದೆ.

ಬಸವರಾಜ ಬೊಮ್ಮಾಯಿ ಅವರು ಬಜೆಟ್‌ ಭಾಷಣ ಆರಂಭಿಸುತ್ತಿದ್ದಂತೆ ಸಿದ್ದರಾಮಯ್ಯ ಅವರು, ಕಿವಿ ಮೇಲೆ ಹೂವು ಇಟ್ಟುಕೊಂಡು ‘ರಾಜ್ಯದ ಜನತೆಗೆ ಬೊಮ್ಮಾಯಿ ಅವರು ಕಿವಿ ಮೇಲೆ ಹೂವು ಇಡಲು ಬಂದಿದ್ದಾರೆ’ ಎಂದು ವ್ಯಂಗ್ಯವಾಡಿದರು.

ಈ ವೇಳೆ ಸಿದ್ದರಾಮಯ್ಯ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ ಬೊಮ್ಮಾಯಿ, ”ವಿರೋಧ ಪಕ್ಷದ ನಾಯಕರು ಹೀಗೆ ಕಿವಿ ಮೇಲೆ ಹೂವು ಇಟ್ಟುಕೊಳ್ಳುವುದು ಸರಿಯಲ್ಲ ಎಂದು ನಾನು ಹೇಳುತ್ತೇನೆ, ಉಳಿದದ್ದು ನಿಮ್ಮ ಇಚ್ಛೆ. ಇಷ್ಟು ದಿನ ಸಿದ್ದರಾಮಯ್ಯನವರು ಜನರ ಕಿವಿ ಮೇಲೆ ಹೂವು ಇಟ್ಟಿದ್ದರು. ಜನ ಈಗ ಸಿದ್ದರಾಮಯ್ಯ ಅವರ ಕಿವಿ ಮೇಲೆ ಹೂ ಇಟ್ಟಿದ್ದಾರೆ. ಮುಂದಿನ ಸಲವೂ ರಾಜ್ಯದ ಜನತೆ ಅವರ ಕಿವಿ ಮೇಲೆ ಹೂವು ಇಡುವ ಪರಿಸ್ಥಿತಿ ಬರುತ್ತದೆ” ಎಂದು ಬೊಮ್ಮಾಯಿ ಟೀಕಿಸಿದರು.

ಇದನ್ನೂ ಓದಿ: ದೂರದೃಷ್ಟಿಯಿಲ್ಲದ, ಕೃಷಿಕರ ಪರವಿಲ್ಲದ ಗುಮಾಸ್ತ ತಯಾರಿಸಿದ ಲೆಕ್ಕಾಚಾರದ ಬಜೆಟ್: ಬಡಗಲಪುರ ನಾಗೇಂದ್ರ

ಅದಕ್ಕೆ ಸಿದ್ದರಾಮಯ್ಯ, ”ನಾವು ಕಿವಿ ಮೇಲೆ ಹೂವು ಇಟ್ಟುಕೊಂಡಿರುವುದು, ಈ ಬಜೆಟ್‌ ಮೂಲಕ ಇಡೀ ರಾಜ್ಯದ ಏಳು ಕೋಟಿ ಜನರ ಕಿವಿ ಮೇಲೆ ಹೂವು ಇಡಲು ಹೊರಟಿದ್ದಾರೆ ಎನ್ನುವುದನ್ನು ತಿಳಿಸಲು” ಎಂದರು.

ಸಿದ್ದರಾಮಯ್ಯ ಮಾತಿಗೆ ಎದ್ದು ನಿಂತ ಸಚಿವ ಶ್ರೀರಾಮುಲು, ಆರ್‌ ಅಶೋಕ ಅವರು, ಬಜೆಟ್ ಮಂಡನೆ ವೇಳೆ  ಈ ರೀತಿಯ ನಡೆದುಕೊಳ್ಳುವುದು ಸಂಪ್ರದಾಯ ಅಲ್ಲ ಎಂದರು. ಆಗ ಸಿದ್ದರಾಮಯ್ಯ, ”ಬಿಜೆಪಿಯವರಿಗೆ ಮಾನ ಮರ್ಯಾದೆಯೇ ಇಲ್ಲ. ಈವರೆಗೂ ಕೊಟ್ಟ 600 ಭರವಸೆಗಳಲ್ಲಿ 51 ಭರವಸೆ ಈಡೇರಿಸಲು ಆಗಿಲ್ಲ ನಿಮ್ಮ ಕೈಯಲ್ಲಿ” ಎಂದು ಅಧಿವೇಶನದಲ್ಲೇ ವಾಗ್ದಾಳಿ ನಡೆಸಿದರು.

ಈ ವೇಳೆ ಕೆಲ ಕಾಲ ಆಡಳಿತ ಮತ್ತು ಪ್ರತಿಪಕ್ಷದ ನಾಯಕರ ನಡುವೆ ಗದ್ದಲ ಏರ್ಪಟ್ಟಿತ್ತು. ಗದ್ದಲದ ನಡುವೆಯೇ ಸಿದ್ದರಾಮಯ್ಯ, ”ಬೊಮ್ಮಾಯಿ ಸುಳ್ಳುಗಳನ್ನು ಹೇಳಲು ಬಂದಿದ್ದಾರೆ. ಬಿಜೆಪಿ ಸುಳ್ಳಿನ ಫ್ಯಾಕ್ಟರಿ” ಎಂದು ಹೇಳಿದರು, ಆಗ ಬೊಮ್ಮಾಯಿ, ಅವರು ಹೂ ಇಟ್ಟುಕೊಂಡರೆ ನಮ್ಮದೇನೂ ಅಭ್ಯಂತರವಿಲ್ಲ ಎಂದರು.

ಈ ಗಲಾಟೆಯನ್ನು ನಿಲ್ಲಿಸಲು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹರಸಾಹಸಪಟ್ಟರು.  ಸಿದ್ದರಾಮಯ್ಯ ನಡೆಗೆ ಸಭಾಧ್ಯಕ್ಷರು ಪ್ರತಿಕ್ರಿಯಿಸಿ, ”ನಾವು ನೀವೆಲ್ಲ ಸಂತೋಷ ಪಡಬೇಕು. ಸಿದ್ದರಾಮಯ್ಯ ಅವರು ಕೇಸರಿ ಬಣ್ಣದ ಹೂವನ್ನೇ ಇಟ್ಟುಕೊಂಡು ಬಂದಿದ್ದಾರೆ. ಹಾಗಾಗಿ ಬಿಜೆಪಿಯವರು ಸಂತೋಷ ಪಡಬೇಕು” ಎಂದರು. ಆಗ ಕಾಂಗ್ರೆಸ್ ನಾಯಕರು ಎದ್ದು ನಿಂತು ಕೇಸರಿ ಬಣ್ಣವನ್ನು ಗುತ್ತಿಗೆ ಪಡೆದಿದ್ದೀರಾ ಎಂದು ಕಾಗೇರಿ ಮಾತಿಗೆ ವಿರೋಧ ವ್ಯಕ್ತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...