Homeಕರ್ನಾಟಕವಿಭಿನ್ನ ಪ್ರತಿಭಟನೆ: ಬಜೆಟ್ ಅಧಿವೇಶಕ್ಕೆ ಕಿವಿಗೆ ಹೂ ಇಟ್ಟುಕೊಂಡು ಬಂದ ಸಿದ್ದರಾಮಯ್ಯ

ವಿಭಿನ್ನ ಪ್ರತಿಭಟನೆ: ಬಜೆಟ್ ಅಧಿವೇಶಕ್ಕೆ ಕಿವಿಗೆ ಹೂ ಇಟ್ಟುಕೊಂಡು ಬಂದ ಸಿದ್ದರಾಮಯ್ಯ

- Advertisement -
- Advertisement -

ರಾಜ್ಯ ಬಜೆಟ್ ಮಂಡಿಸಲು ಬಂದ ಮುಖ್ಯಮಂತ್ರಿ, ಹಣಕಾಸು ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿವಿ ಮೇಲೆ ಹೂವು ಇಟ್ಟುಕೊಂಡು ಸ್ವಾಗತಿಸಿದ್ದಾರೆ. ಇದು, ಸರ್ಕಾರ ಜನರ ಕಿವಿಗೆ ಹೂ ಇಡುವ ಬಜೆಟ್ ಎನ್ನುವುದನ್ನು ಸೂಚಿಸುವ ವಿಭಿನ್ನ ಪ್ರತಿಭಟನೆಯಾಗಿದೆ.

ಬಸವರಾಜ ಬೊಮ್ಮಾಯಿ ಅವರು ಬಜೆಟ್‌ ಭಾಷಣ ಆರಂಭಿಸುತ್ತಿದ್ದಂತೆ ಸಿದ್ದರಾಮಯ್ಯ ಅವರು, ಕಿವಿ ಮೇಲೆ ಹೂವು ಇಟ್ಟುಕೊಂಡು ‘ರಾಜ್ಯದ ಜನತೆಗೆ ಬೊಮ್ಮಾಯಿ ಅವರು ಕಿವಿ ಮೇಲೆ ಹೂವು ಇಡಲು ಬಂದಿದ್ದಾರೆ’ ಎಂದು ವ್ಯಂಗ್ಯವಾಡಿದರು.

ಈ ವೇಳೆ ಸಿದ್ದರಾಮಯ್ಯ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ ಬೊಮ್ಮಾಯಿ, ”ವಿರೋಧ ಪಕ್ಷದ ನಾಯಕರು ಹೀಗೆ ಕಿವಿ ಮೇಲೆ ಹೂವು ಇಟ್ಟುಕೊಳ್ಳುವುದು ಸರಿಯಲ್ಲ ಎಂದು ನಾನು ಹೇಳುತ್ತೇನೆ, ಉಳಿದದ್ದು ನಿಮ್ಮ ಇಚ್ಛೆ. ಇಷ್ಟು ದಿನ ಸಿದ್ದರಾಮಯ್ಯನವರು ಜನರ ಕಿವಿ ಮೇಲೆ ಹೂವು ಇಟ್ಟಿದ್ದರು. ಜನ ಈಗ ಸಿದ್ದರಾಮಯ್ಯ ಅವರ ಕಿವಿ ಮೇಲೆ ಹೂ ಇಟ್ಟಿದ್ದಾರೆ. ಮುಂದಿನ ಸಲವೂ ರಾಜ್ಯದ ಜನತೆ ಅವರ ಕಿವಿ ಮೇಲೆ ಹೂವು ಇಡುವ ಪರಿಸ್ಥಿತಿ ಬರುತ್ತದೆ” ಎಂದು ಬೊಮ್ಮಾಯಿ ಟೀಕಿಸಿದರು.

ಇದನ್ನೂ ಓದಿ: ದೂರದೃಷ್ಟಿಯಿಲ್ಲದ, ಕೃಷಿಕರ ಪರವಿಲ್ಲದ ಗುಮಾಸ್ತ ತಯಾರಿಸಿದ ಲೆಕ್ಕಾಚಾರದ ಬಜೆಟ್: ಬಡಗಲಪುರ ನಾಗೇಂದ್ರ

ಅದಕ್ಕೆ ಸಿದ್ದರಾಮಯ್ಯ, ”ನಾವು ಕಿವಿ ಮೇಲೆ ಹೂವು ಇಟ್ಟುಕೊಂಡಿರುವುದು, ಈ ಬಜೆಟ್‌ ಮೂಲಕ ಇಡೀ ರಾಜ್ಯದ ಏಳು ಕೋಟಿ ಜನರ ಕಿವಿ ಮೇಲೆ ಹೂವು ಇಡಲು ಹೊರಟಿದ್ದಾರೆ ಎನ್ನುವುದನ್ನು ತಿಳಿಸಲು” ಎಂದರು.

ಸಿದ್ದರಾಮಯ್ಯ ಮಾತಿಗೆ ಎದ್ದು ನಿಂತ ಸಚಿವ ಶ್ರೀರಾಮುಲು, ಆರ್‌ ಅಶೋಕ ಅವರು, ಬಜೆಟ್ ಮಂಡನೆ ವೇಳೆ  ಈ ರೀತಿಯ ನಡೆದುಕೊಳ್ಳುವುದು ಸಂಪ್ರದಾಯ ಅಲ್ಲ ಎಂದರು. ಆಗ ಸಿದ್ದರಾಮಯ್ಯ, ”ಬಿಜೆಪಿಯವರಿಗೆ ಮಾನ ಮರ್ಯಾದೆಯೇ ಇಲ್ಲ. ಈವರೆಗೂ ಕೊಟ್ಟ 600 ಭರವಸೆಗಳಲ್ಲಿ 51 ಭರವಸೆ ಈಡೇರಿಸಲು ಆಗಿಲ್ಲ ನಿಮ್ಮ ಕೈಯಲ್ಲಿ” ಎಂದು ಅಧಿವೇಶನದಲ್ಲೇ ವಾಗ್ದಾಳಿ ನಡೆಸಿದರು.

ಈ ವೇಳೆ ಕೆಲ ಕಾಲ ಆಡಳಿತ ಮತ್ತು ಪ್ರತಿಪಕ್ಷದ ನಾಯಕರ ನಡುವೆ ಗದ್ದಲ ಏರ್ಪಟ್ಟಿತ್ತು. ಗದ್ದಲದ ನಡುವೆಯೇ ಸಿದ್ದರಾಮಯ್ಯ, ”ಬೊಮ್ಮಾಯಿ ಸುಳ್ಳುಗಳನ್ನು ಹೇಳಲು ಬಂದಿದ್ದಾರೆ. ಬಿಜೆಪಿ ಸುಳ್ಳಿನ ಫ್ಯಾಕ್ಟರಿ” ಎಂದು ಹೇಳಿದರು, ಆಗ ಬೊಮ್ಮಾಯಿ, ಅವರು ಹೂ ಇಟ್ಟುಕೊಂಡರೆ ನಮ್ಮದೇನೂ ಅಭ್ಯಂತರವಿಲ್ಲ ಎಂದರು.

ಈ ಗಲಾಟೆಯನ್ನು ನಿಲ್ಲಿಸಲು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹರಸಾಹಸಪಟ್ಟರು.  ಸಿದ್ದರಾಮಯ್ಯ ನಡೆಗೆ ಸಭಾಧ್ಯಕ್ಷರು ಪ್ರತಿಕ್ರಿಯಿಸಿ, ”ನಾವು ನೀವೆಲ್ಲ ಸಂತೋಷ ಪಡಬೇಕು. ಸಿದ್ದರಾಮಯ್ಯ ಅವರು ಕೇಸರಿ ಬಣ್ಣದ ಹೂವನ್ನೇ ಇಟ್ಟುಕೊಂಡು ಬಂದಿದ್ದಾರೆ. ಹಾಗಾಗಿ ಬಿಜೆಪಿಯವರು ಸಂತೋಷ ಪಡಬೇಕು” ಎಂದರು. ಆಗ ಕಾಂಗ್ರೆಸ್ ನಾಯಕರು ಎದ್ದು ನಿಂತು ಕೇಸರಿ ಬಣ್ಣವನ್ನು ಗುತ್ತಿಗೆ ಪಡೆದಿದ್ದೀರಾ ಎಂದು ಕಾಗೇರಿ ಮಾತಿಗೆ ವಿರೋಧ ವ್ಯಕ್ತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...