Homeಮುಖಪುಟತಮಿಳು ನಾಡು: ಕೋಮುವಾದ ಬಿತ್ತಿದರೂ ಫಲ ನೀಡದ ಬಿಜೆಪಿಗರ ಸಂಕಟ

ತಮಿಳು ನಾಡು: ಕೋಮುವಾದ ಬಿತ್ತಿದರೂ ಫಲ ನೀಡದ ಬಿಜೆಪಿಗರ ಸಂಕಟ

- Advertisement -
- Advertisement -

ಕೋಮವಾದವನ್ನು ಬಿತ್ತಿ ಕೋಮು ಧ್ರುವೀಕರಣದ ಬೆಳೆ ತೆಗೆವ ಬಿಜೆಪಿ ಪಕ್ಷ ಆ ಯೋಜನೆಗಳ ಮೂಲಕವೇ ದೇಶದ ಹಲವೆಡೆ ಅಧಿಕಾರದ ಚುಕ್ಕಾಣಿ ಹಿಡಿದಿರುವುದಕ್ಕೆ ಸಾಕಷ್ಟು ಉದಾಹರಣೆಗಳಿವೆ. 1990 ಸೆಪ್ಟೆಂಬರ್ 25ರಂದು ಲಾಲ್ ಕೃಷ್ಣ ಅಡ್ವಾನಿ ಸೋಮನಾಥದಿಂದ ಅಯೋಧ್ಯೆಯವರೆಗೆ ರಥಯಾತ್ರೆ ಆರಂಭಿಸಿದ್ದರು. ಆ ರಥಯಾತ್ರೆ ನಡೆದ ದಾರಿಯಲ್ಲೆಲ್ಲ ರಕ್ತದ ಕಲೆಗಳಿವೆ ಎಂಬುದನ್ನು ಬಿಡಿಸಿ ಹೇಳಬೇಕಿಲ್ಲ. ರಥಯಾತ್ರೆಯ ಬೆನ್ನಿಗೆ 1992ರ ಬಾಬರಿ ಮಸೀದಿ ಧ್ವಂಸ ಹಾಗೂ ನಂತರ ನಡೆದ ಗಲಭೆಗಳ ರಕ್ತಪಾತದಲ್ಲಿ ಮೃತಪಟ್ಟವರ ಸಂಖ್ಯೆ 10,000ಕ್ಕೂ ಹೆಚ್ಚು ಎನ್ನುತ್ತವೆ ಹಲವು ವರದಿಗಳು. ಇನ್ನು ಗಾಯಗೊಂಡವರ ಮತ್ತು ಆಸ್ತಿಪಾಸ್ತಿ ಕಳೆದುಕೊಂಡವರ ಸಂಖ್ಯೆ ಅಸಂಖ್ಯಾತ.

2002ರ ಗುಜರಾತಿನ ಗೋದ್ರಾ ಹತ್ಯಾಕಾಂಡವನ್ನು ಈ ದೇಶ ಅಷ್ಟು ಸುಲಭಕ್ಕೆ ಮರೆಯಲು ಸಾಧ್ಯವೇ? ಈ ಎರಡೂ ಹತ್ಯಾಕಾಂಡಕ್ಕೆ ಕಾರಣವಾದದ್ದು ಬಿಜೆಪಿಯ ಕೋಮುವಾದ ಎಂಬ ಏಕೈಕ ಅಜೆಂಡ ಮತ್ತು ಈ ಅಜೆಂಡ ನೀಡಿದ ಫಲವೇ ಇಂದು ಉತ್ತರಪ್ರದೇಶ ಮತ್ತು ಗುಜರಾತಿನಲ್ಲಿ ದೀರ್ಘಾವಧಿಯ ಅಧಿಕಾರದ ಚುಕ್ಕಾಣಿ. 2017ರ ಉತ್ತರಪ್ರದೇಶ ಚುನಾವಣೆಗೆ ಪೂರ್ವಭಾವಿಯಾಗಿ 2013ರಲ್ಲೇ ಬಿಜೆಪಿಯಿಂದ ಪ್ರಯೋಜಿಸಲ್ಪಟ್ಟಿದ್ದ, 80 ಜನರ ಸಾವಿಗೆ ಕಾರಣವಾಗಿದ್ದ ಮುಜಫರ್ ನಗರದ ಕೋಮುಗಲಭೆಯನ್ನೂ ಇಲ್ಲಿ ಸ್ಮರಿಸಬಹುದು.

ಇನ್ನು ಕರ್ನಾಟಕದಲ್ಲೂ ಹುಬ್ಬಳ್ಳಿಯ ಈದ್ಗಾ ಮೈದಾನದ ಗಲಾಟೆ, ಚಿಕ್ಕಮಗಳೂರಿನ ದತ್ತಪೀಠ ವಿವಾದ ಬಿಜೆಪಿ ಪಾಲಿಗೆ ಚಿನ್ನದ ಗಣಿ ಎನ್ನಲು ಅಡ್ಡಿ ಇಲ್ಲ. ಈ ವಿವಾದಗಳು ಹುಟ್ಟಿದ ವರ್ಷಗಳನ್ನೂ ಹಾಗೂ ಕರ್ನಾಟಕದಲ್ಲಿ ಬಿಜೆಪಿಯ ಅಧಿಕಾರದ ಹಿಡಿದು ಗಟ್ಟಿಯಾಗುತ್ತಾ ಸಾಗಿದ್ದನ್ನು ತುಲನೆ ಮಾಡಿ ಗಮನಿಸಿದರೆ ಕೋಮುಗಲಭೆ ಮತ್ತು ಅಧಿಕಾರದ ಜೊತೆಗಿನ ಬಿಜೆಪಿಯ ನಯವಾದ ಆಟ ಸ್ಪಷ್ಟವಾಗಿ ಅರ್ಥವಾಗುತ್ತದೆ. ಬಿಜೆಪಿಯ ಈ ತಂತ್ರಗಾರಿಕೆ ಹಲವು ರಾಜ್ಯಗಳಲ್ಲಿ ಅವರ ಕೈಹಿಡಿದಿದೆ ನಿಜ. ಆದರೆ, ತಮಿಳುನಾಡು ಮಾತ್ರ ಜಪ್ಪಯ್ಯ ಎಂದರೂ ಇವರ ಆಟಕ್ಕೆ ಜಗ್ಗುತ್ತಿಲ್ಲ.

2020ರಲ್ಲಿ ಅಣ್ಣಾಮಲೈ ಎಂಬ ಮಾಜಿ ಐಪಿಎಸ್ ಅಧಿಕಾರಿಯನ್ನು ತಮಿಳುನಾಡಿನ ಬಿಜೆಪಿಗೆ ರಾಜ್ಯಾದ್ಯಕ್ಷನನ್ನಾಗಿ ನೇಮಕ ಮಾಡಲಾಗಿತ್ತು. ಬಿಜೆಪಿಯ ಸಾಂಪ್ರದಾಯಿಕ ಅಸ್ತ್ರವನ್ನೇ ಅಲ್ಲೂ ಪ್ರಯೋಗಿಸಿದ್ದ ಅಣ್ಣಾಮಲೈ 2021ರಲ್ಲಿ ಕ್ರೈಸ್ತರ ಶಾಲೆಯೊಂದರಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣವನ್ನೇ ಮುಂದಿಟ್ಟು, ಇದೊಂದು ಕೊಲೆ ಎಂದು ಜನಾಭಿಪ್ರಾಯ ರೂಪಿಸಿ ಧ್ರುವೀಕರಣ ಮಾಡಲು ಮುಂದಾಗಿ ಕೊನೆಗೆ ಜನರಿಂದಲೇ ಛೀಮಾರಿ ಹಾಕಿಸಿಕೊಂಡಿದ್ದರು. ಇದರ ಬೆನ್ನಿಗೆ ಸಾಲುಸಾಲು ಕೋಮುವಾದಿ ಗಲಭೆಗಳಿಗೆ ಅವರು ಬೀಜ ಬಿತ್ತಿದ್ದರೇನೋ ನಿಜ; ಆದರೆ, ಅದ್ಯಾವುದೂ ನಿರೀಕ್ಷಿತ ಫಲ ಕೊಡಲಿಲ್ಲ. ಪರಿಣಾಮ ಅಣ್ಣಾಮಲೈ ಇದೀಗ ಬಿಜೆಪಿಯ ಮತ್ತೊಂದು ಪ್ರಮುಖ ಅಸ್ತ್ರವಾದ ಸುಳ್ಳು ಸುದ್ದಿಯ ಮೊರೆ ಹೋಗಿದ್ದಾರೆ. ತಮಿಳರಿಂದ ಬಿಹಾರಿ ಕಾರ್ಮಿಕರ ಮೇಲೆ ದಾಳಿ ಎಂಬ ಬುರುಡೆ (ಸುಳ್ಸುದ್ದಿ) ಬಿಟ್ಟು ತಮಿಳರ ಸ್ವಾಭಿಮಾನವನ್ನು ಕೆಣಕಿ ಪೇಚಿಗೆ ಸಿಲುಕಿದ್ದಾರೆ. ಪರಿಣಾಮ ಇದೀಗ ಅವರ ರಾಜಕೀಯ ಭವಿಷ್ಯವೇ ಡೋಲಾಯಮಾನವಾಗಿದೆ.

ಏನಿದು ಸುಳ್ಳು ಸುದ್ದಿ ಪ್ರಕರಣ?

ಮಾರ್ಚ್ 1 ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಹುಟ್ಟುಹಬ್ಬ. ಸ್ಟಾಲಿನ್ ಹುಟ್ಟುಹಬ್ಬಕ್ಕೆ ಶುಭ ಕೋರಲೆಂದು ಬಿಹಾರದ ಉಪಮುಖ್ಯಮಂತ್ರಿ ಹಾಗೂ ಆರ್‌ಜೆಡಿ ಪಕ್ಷದ ನಾಯಕ ತೇಜಸ್ವಿ ಯಾದವ್ ತಮಿಳುನಾಡಿಗೆ ಆಗಮಿಸಿದ್ದರು.

ಆದರೆ, ಇದೇ ದಿನ ಬಿಹಾರದ ಬಿಜೆಪಿ ಪಕ್ಷದ ಅಧಿಕೃತ ಟ್ವಿಟರ್ ಖಾತೆಯಲ್ಲಿ “ತಮಿಳುನಾಡಿನಲ್ಲಿ ಹಿಂದಿ ಮಾತನಾಡಿದ್ದಕ್ಕಾಗಿ 12 ಜನರನ್ನು ಒಂದೇ ಕೋಣೆಯಲ್ಲಿ ಕೂಡಿಹಾಕಿ ನೇಣು ಬಿಗಿದು ಕೊಲ್ಲಲಾಗಿದೆ” ಎಂದು ಒಂದು ವಿಡಿಯೋವನ್ನು ಹಂಚಿಕೊಳ್ಳಲಾಗಿತ್ತು.

ಇದರ ಬೆನ್ನಿಗೆ “ಮನೀಶ್ ಕಶ್ಯಪ್” (Manish Kashyap Son of Bihar) ಎಂಬ ವ್ಯಕ್ತಿಯಂತು ಒಂದು ಹೆಜ್ಜೆ ಮುಂದೆ ಹೋಗಿ ತನ್ನ ಯೂಟ್ಯೂಬ್ ಚಾನೆಲ್ ಮತ್ತು ಫೇಸ್ಬುಕ್ ಅಕೌಂಟ್‌ನಲ್ಲಿ, ’ತಮಿಳುನಾಡಿನಲ್ಲಿ ಬಿಹಾರಿ ಕಾರ್ಮಿಕರನ್ನು ಕಂಡಕಂಡಲ್ಲಿ ಮಚ್ಚಿನಿಂದ ಕೊಚ್ಚಿ ಕೊಲ್ಲಲಾಗುತ್ತಿದೆ’ ಎಂದು ಬಾಯಿಗೆ ಬಂದಂತೆ ಬಡಬಡಿಸತೊಡಗಿದ. ಆತನ ವಿಡಿಯೋವನ್ನು 6 ಮಿಲಿಯನ್ ಜನ ವೀಕ್ಷಿಸಿದ್ದರು. ನೋಡನೋಡುತ್ತಿದ್ದಂತೆ ಆ ವಿಡಿಯೋ ವೈರಲ್ ಆಗಿತ್ತು.

ಇದನ್ನೂ ಓದಿ: ‘ನಕಲಿ ಪ್ರಚಾರ’ ಆರೋಪ; ಅಣ್ಣಾಮಲೈ ವಿರುದ್ಧ ಎಫ್‌ಐಆರ್‌ ದಾಖಲು

ಬಿಹಾರದ ವಿಧಾನಸಭೆಯಲ್ಲೂ ಈ ವಿಚಾರವಾಗಿ ಭಾರಿ ಚರ್ಚೆಯಾಗಿತ್ತು. ಅಲ್ಲಿನ ವಿರೋಧ ಪಕ್ಷವಾದ ಬಿಜೆಪಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ರಾಜೀನಾಮೆಗೆ ಪಟ್ಟುಹಿಡಿದಿತ್ತು. ವಿರೋಧ ಪಕ್ಷದ ನಾಯಕ ವಿಜಯ್ ಸಿನ್ಹ ಈ ಮನೀಶ್ ಕಶ್ಯಪ್ ಎಂಬ ವ್ಯಕ್ತಿಯ ಯೂಟ್ಯೂಬ್ ಚಾನೆಲ್‌ಗೆ ಸಂದರ್ಶನ ನೀಡಿ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಮತ್ತು ಅವರ ಹುಟ್ಟುಹಬ್ಬಕ್ಕೆ ಶುಭಕೋರಿದ್ದ ತೇಜಸ್ವಿ ಯಾದವ್ ಬಗ್ಗೆ ಅವಹೇಳನಕಾರಿಯಾದಂತಹ ಮಾತುಗಳನ್ನಾಗಿದ್ದರು. “ಇಂತವರ ಸರ್ಕಾರ ಬಿಹಾರಕ್ಕೆ ಬೇಕೆ? ತೇಜಸ್ವಿ ಯಾದವ್ ಸ್ಟಾಲಿನ್‌ಗೆ ಕೇಕ್ ತಿನ್ನಿಸುವ ದಿನದಲ್ಲೇ ನಮ್ಮ ಬಿಹಾರಿಗಳು ಕೊಲೆಯಾಗುತ್ತಿದ್ದಾರೆ” ಎಂದು ಜನರನ್ನು ಪ್ರಚೋದಿಸಿದ್ದರು.

ಇನ್ನೂ ಟಿಆರ್‌ಪಿ ಗೀಳಿಗೆ ಬಿದ್ದ ದೃಶ್ಯ ಮಾಧ್ಯಮಗಳ ಬಗ್ಗೆ ಕೇಳಬೇಕೆ! ಬಿಜೆಪಿ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದ ವಿಡಿಯೋ ವೈರಲ್ ಆಗಿದ್ದೆ ತಡ ಇಡೀ ದಿನ ಹಿಂದಿ ಮತ್ತು ಆಂಗ್ಲ ದೃಶ್ಯ ಮಾಧ್ಯಮಗಳು ತಮಿಳುನಾಡಿನ ವಿರುದ್ಧ ಸಾಲುಸಾಲು ವರದಿಗಳನ್ನು ಬಿತ್ತರಿಸಿದವು. ತಮಿಳುನಾಡಿನಲ್ಲಿ ಬಿಹಾರಿ ಮತ್ತು ಉತ್ತರಪ್ರದೇಶ ಸೇರಿದಂತೆ ಹಿಂದಿ ಭಾಷಿಕರಿಗೆ ರಕ್ಷಣೆ ಇಲ್ಲ, ಅಲ್ಲಿನ ಸರ್ಕಾರವೇ ತಮಿಳು ಉಗ್ರಗಾಮಿಗಳ ಬೆನ್ನಿಗೆ ನಿಂತಿದೆ ಎಂದು ವಿಷಕಾರಲು ಆರಂಭಿಸಿದವು. ಪರಿಣಾಮ ಪ್ರಕರಣದ ತನಿಖೆಗೆ ಸಿಎಂ ನಿತೀಶ್ ಕುಮಾರ್ ಒಂದು ತಂಡವನ್ನು ರಚಿಸಿ ತಮಿಳುನಾಡಿಗೂ ಕಳಿಸಿದ್ದರು.

ವಿಡಿಯೋ ಅಸಲಿ ಕಥೆ, ಅಣ್ಣಾಮಲೈ ಎಂಬ ಮತಿಗೇಡಿ

ಈ ಸುಳ್ಳು ಸುದ್ದಿಯ ಬಿಸಿ ಬಿಹಾರದಿಂದ ಅಷ್ಟೇ ಶೀಘ್ರವಾಗಿ ತಮಿಳುನಾಡನ್ನೂ ಮುಟ್ಟಿತ್ತು. ಆದರೆ, ವಿಷಯದ ಸತ್ಯಾಸತ್ಯತೆಯನ್ನು ಪರಿಶೀಲಿಸದ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಿಹಾರಿಗಳ ಮೇಲಿನ ದಾಳಿಯ ’ಸುಳ್ಳು’ ವಿಡಿಯೋವನ್ನು ಹಂಚಿಕೊಂಡಿದ್ದರು. ಅಲ್ಲದೆ, “ಹಿಂದಿ ಭಾಷಿಕರ ಮತ್ತು ಉತ್ತರ ಭಾರತೀಯರ ವಿರುದ್ಧ ತಮಿಳರಲ್ಲಿ ಆಕ್ರೋಶ ಮನೆಮಾಡಲು ಡಿಎಂಕೆ ಪಕ್ಷ ಕಾರಣ” ಎಂದು ಆರೋಪಿಸಿದ್ದರು. ಈ ಬಗ್ಗೆ ಸಾಲುಸಾಲು ಟ್ವೀಟ್ ಮಾಡುತ್ತಾ ಡಿಎಂಕೆ ಪಕ್ಷದ ವಿರುದ್ಧ ದ್ವೇಷ ಪ್ರಚಾರದಲ್ಲಿ ತೊಡಗಿದ್ದರು.

ಮನೀಶ್ ಕಶ್ಯಪ್

ಆದರೆ, ಘಟನೆಯ ಮರುದಿನವೇ ಫ್ಯಾಕ್ಟ್‌ಚೆಕ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಸುಳ್ಳಿನ ಚರ್ಮ ಸುಲಿದಿದ್ದರು, “ಈ ಹಲ್ಲೆ ತಮಿಳುನಾಡಿನಲ್ಲಿ ನಡೆದದ್ದಲ್ಲ. ಇದೊಂದು ಸುಳ್ಳು ಸುದ್ದಿಯಾಗಿದ್ದು, ತಮಿಳುನಾಡಿನಲ್ಲಿ ಯಾವುದೇ ಬಿಹಾರಿ ಕಾರ್ಮಿಕರ ಮೇಲೆ ಹಲ್ಲೆಯಾಗಿಲ್ಲ ಎಂದು ಸಾಕ್ಷಿ ಸಮೇತ ಸರಣಿ ಟ್ವೀಟ್ ಮಾಡಿದ್ದರು.

ಈ ಟ್ವೀಟ್ ಮೂಲಕ ಬಿಜೆಪಿಯ ಅಸಲಿ ತಂತ್ರಗಾರಿಕೆ ಜಗಜ್ಜಾಹೀರಾಗಿತ್ತು. ಒಂದೇ ಸುಳ್ಳು ಸುದ್ದಿಯ ಮೂಲಕ ಬಿಹಾರದಲ್ಲಿ ನಿತೀಶ್ ಕುಮಾರ್ ವಿರುದ್ಧ ಜನಾಭಿಪ್ರಾಯ ರೂಪಿಸುವುದು, ಮತ್ತು ಬಿಜೆಪಿಯೇತರ ಸರ್ಕಾರವಿರುವ ತಮಿಳುನಾಡಿನ ವಿರುದ್ಧ ರಾಷ್ಟ್ರೀಯ ಮಟ್ಟದಲ್ಲಿ ಅಪಪ್ರಚಾರ ಮಾಡುವುದು ಬಿಜೆಪಿಯ ಗುರಿಯಾಗಿತ್ತು. ಇದಕ್ಕೆ ಅವರು ಸಿಎಂ ಸ್ಟಾಲಿನ್ ಹುಟ್ಟುದಿನ ಮತ್ತು ತೇಜಸ್ವಿ ಯಾದವ್ ಭೇಟಿಯನ್ನೇ ಬಳಸಿಕೊಂಡು ಒಂದು ಅದ್ಭುತವಾದ ಚಿತ್ರಕಥೆಯನ್ನು ಸಿದ್ಧಪಡಿಸಿದ್ದರು ಎಂಬ ಅಂಶ ಬಟಾಬಯಲಾಗಿತ್ತು.

ತಮಿಳುನಾಡಿನ ದೃಶ್ಯ ಮತ್ತು ಮುದ್ರಣ ಮಾಧ್ಯಮಗಳು ಬಿಜೆಪಿಯ ಈ ಸುಳ್ಳು ಸುದ್ದಿಯ ಬಗ್ಗೆ ಬಿಸಿಬಿಸಿ ಚರ್ಚೆ ಶುರು ಮಾಡುತ್ತಿದ್ದಂತೆ ಅಣ್ಣಾಮಲೈ ತನ್ನ ಖಾಸಗಿ ಟ್ವಿಟರ್ ಖಾತೆಯಿಂದ ಆ ವಿಡಿಯೋವನ್ನು ಡಿಲೀಟ್ ಮಾಡಿದ್ದರೇನೋ ನಿಜ. ಆದರೆ, “ಹಿಂದಿ ಭಾಷಿಕರ ವಿರುದ್ಧ ತಮಿಳರಲ್ಲಿ ಆಕ್ರೋಶ ಇದೆ, ಇದಕ್ಕೆ ಕಾರಣ ಡಿಎಂಕೆ ಪಕ್ಷ” ಎಂಬ ತಮ್ಮ ನಿಲುವನ್ನು ಮತ್ತೆ ಮತ್ತೆ ಸರಣಿ ಟ್ವೀಟ್ ಮೂಲಕ ಸಮರ್ಥಿಸಿಕೊಂಡಿದ್ದರು.

ಬಿಜೆಪಿ ಪ್ರಾಯೋಜಿತ ರಾಷ್ಟ್ರೀಯ ಮಾಧ್ಯಮಗಳು ತಮಿಳುನಾಡಿನ ವಿರುದ್ಧ ಹೀಗೆ ವಿಷಕಾರುವುದು ಹೊಸದೇನಲ್ಲ. ತಮಿಳರಿಗೆ ಅದು ಅಭ್ಯಾಸವಾಗಿಹೋಗಿದೆ. ಆದರೆ, ಈ ಸುಳ್ಳನ್ನೇ ಸತ್ಯ ಎಂದು ಅಲ್ಲಿನ ಜನರನ್ನು ನಂಬಿಸಲು ಸ್ವತಃ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಮುಂದಾದದ್ದು ಮತ್ತು ತಮಿಳರ ವಿರುದ್ಧವೇ ಅಪಪ್ರಚಾರ ಮಾಡಿದ್ದು, ಇದೀಗ ತಮಿಳರ ಆಕ್ರೋಶಕ್ಕೆ ಕಾರಣವಾಗಿದೆ.

ಸುಳ್ಳು ಸುದ್ದಿಯ ಪರಿಣಾಮವೇನು?

ತಮಿಳುನಾಡು ಬಿಜೆಪಿಯಲ್ಲೇ ಅಣ್ಣಾಮಲೈ ಓರ್ವ ವಿವಾದಿತ ವ್ಯಕ್ತಿಯಾಗಿ ಛಾಪು ಮೂಡಿಸಿದ್ದಾರೆ. ಪಕ್ಷದಲ್ಲಿ ತನಗೆ ಪೈಪೋಟಿಯಾಗಿದ್ದ ಹಿರಿಯ ನಾಯಕ ಕೆ.ಟಿ ರಾಘವನ್ ಎಂಬುವವರನ್ನು ಅಶ್ಲೀಲ ಸಿಡಿ ಕೇಸ್‌ನಲ್ಲಿ ಸಿಲುಕಿಸಿ ಅವರ ರಾಜಕೀಯ ಜೀವನವನ್ನೇ ಮುಗಿಸಿದ ಆರೋಪ ಅಣ್ಣಾಮಲೈ ಮೇಲಿದೆ. ಇದಲ್ಲದೆ, ಪಕ್ಷದಲ್ಲಿ ತನಗೆ ಪೈಪೋಟಿಯಾಗಿರುವ ಇತರೆ ಹಿರಿಯ ನಾಯಕರದ್ದೂ ಅಶ್ಲೀಲ ವಿಡಿಯೋ ಮತ್ತು ಆಡಿಯೋ ಮಾಡಿಟ್ಟುಕೊಂಡಿದ್ದಾರೆ ಎನ್ನಲಾಗಿದೆ.

“ಅಣ್ಣಾಮಲೈ ತನ್ನ ವಿಡಿಯೋ ಮಾಡಿಟ್ಟುಕೊಂಡು ಸಾಮಾಜಿಕ ಜಾಲತಾಣ ಪಡೆಯ ಮೂಲಕ ನನ್ನ ಮೇಲೆ ವ್ಯಯಕ್ತಿಕ ದಾಳಿ ನಡೆಸುತ್ತಿದ್ದಾರೆ” ಎಂದು ಆರೋಪಿಸಿ ಬಿಜೆಪಿ ಪಕ್ಷದ ಕಲೆ ಸಾಂಸ್ಕೃತಿಕ ವಿಭಾಗದ ಅಧ್ಯಕ್ಷೆ ಮಾಜಿ ನಟಿ ಗಾಯತ್ರಿ ರಘುರಾಮ್ ಕಳೆದ ವರ್ಷ ಪಕ್ಷದಿಂದಲೇ ಹೊರ ನಡೆದಿದ್ದರು. ಇದೇ ಆರೋಪವನ್ನು ಮುಂದಿಟ್ಟು ಸೂರ್ಯ ಶಿವ ಎಂಬ ಮತ್ತೊಬ್ಬ ಬಿಜೆಪಿ ನಾಯಕನೂ ಇತ್ತೀಚೆಗೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಇಬ್ಬರೂ ಅಣ್ಣಾಮಲೈ ವಿರುದ್ಧ ಸಾರ್ವಜನಿಕವಾಗಿ ಕಿಡಿಕಾರಿದ್ದರು. ಅಂದಿನಿಂದ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷವನ್ನು “ಆಡಿಯೋ ವಿಡಿಯೋ ಪಕ್ಷ” ಎಂದೇ ಕರೆಯಲಾಗುತ್ತಿದೆ.

ತಮಿಳುನಾಡಿನಲ್ಲಿ ಬಿಹಾರಿ ಕಾರ್ಮಿಕರ ಮೇಲೆ ಹಲ್ಲೆ ಎನ್ನಲಾದ ನಕಲಿ ವಿಡಿಯೋ

ಈ ನಡುವೆ ಬಿಹಾರಿ ಕಾರ್ಮಿಕರ ಮೇಲಿನ ದಾಳಿ ಸಂಬಂಧಿಸಿದ ಸುದ್ದಿ ಸುಳ್ಳು ಎಂಬುದು ಜಗಜ್ಜಾಹೀರಾಗುತ್ತಿದ್ದಂತೆ ತಮಿಳುನಾಡಿನ ಬಿಜೆಪಿ ಐಟಿ ವಿಂಗ್ ಮುಖ್ಯಸ್ಥ ಸಿಟಿಆರ್ ನಿರ್ಮಲ್ ಕುಮಾರ್ ಸೇರಿದಂತೆ 11 ಜನ ನಿರ್ವಾಹಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ “ಎಡಿಎಂಕೆ” ಪಕ್ಷಕ್ಕೆ ಸೇರಿದ್ದಾರೆ. ಅಲ್ಲದೆ, ಈ ಸಂದರ್ಭದಲ್ಲಿ ನಿರ್ಮಲ್ ಕುಮಾರ್ ಬಿಡುಗಡೆ ಮಾಡಿರುವ ಹೇಳಿಕೆಯೊಂದು ತಮಿಳುನಾಡು ರಾಜಕೀಯದಲ್ಲಿ ಪ್ರಸ್ತುತ ಸಾಕಷ್ಟು ಸದ್ದು ಮಾಡುತ್ತಿದೆ.

ಇದನ್ನೂ ಓದಿ: ಅಣ್ಣಾಮಲೈ ನಾಯಕತ್ವದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ: ಬಿಜೆಪಿ ತೊರೆದ ತಮಿಳು ನಟಿ ಹೇಳಿಕೆ

“ಅಣ್ಣಾಮಲೈ ಪಕ್ಷದ ಅನೇಕ ಹಿರಿಯ ನಾಯಕರ ವಿರುದ್ಧ ಗೂಢಚರ್ಯೆ ನಡೆಸುತ್ತಿದ್ದಾರೆ. ಅಶ್ಲೀಲ ಆಡಿಯೋ ವಿಡಿಯೋ ಮೂಲಕ ಹಲವರನ್ನು ಬ್ಲಾಕ್‌ಮೇಲ್ ಮಾಡಲಾಗುತ್ತಿದೆ. ತಾನೊಬ್ಬನೇ ಏಕಮೇವ ಬಿಜೆಪಿ ನಾಯಕನಾಗಲು ಅವರು ಹೊರಟಿದ್ದು, ಸುಳ್ಳು ಹರಡುವುದೊಂದೆ ಅಣ್ಣಾಮಲೈ ಹಾಗೂ ಬಿಜೆಪಿ ಪಕ್ಷದ ಅಜೆಂಡವಾಗಿದೆ. ಇಂತಹ ಪಕ್ಷ ತಮಿಳರಿಗೆ ಮತ್ತು ತಮಿಳುನಾಡಿಗೆ ಅಪಾಯಕಾರಿಯಾದದ್ದು” ಎಂಬ ಅಂಶಗಳು ನಿರ್ಮಲ್ ಕುಮಾರ್ ಹೇಳಿಕೆಯಲ್ಲಿದ್ದು, ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ಒಂದು ಪಕ್ಷದ ರಾಜ್ಯಾಧ್ಯಕ್ಷನ ವಿರುದ್ಧ ಅದೇ ಪಕ್ಷದವರು ಬಿಡುಗಡೆ ಮಾಡಿರುವ ಅತ್ಯಂತ ಆಘಾತಕಾರಿ ಹೇಳಿಕೆ ಇದಾಗಿದೆ ಎಂದು ತಮಿಳುನಾಡಿನ ಮಾಧ್ಯಮಗಳು ವಿಶ್ಲೇಷಿಸುತ್ತಿವೆ.

ಒಟ್ಟಿನಲ್ಲಿ ದೇಶದ ಹಲವೆಡೆ ಕೆಲಸ ಮಾಡುವ ಬಿಜೆಪಿ ಪಕ್ಷದ ಸುಳ್ಳಿನ ತಂತ್ರಗಾರಿಕೆ ತಮಿಳು ನಾಡಿನಲ್ಲಿ ಕೈಕೊಟ್ಟಿರುವುದು ದೇಶದಲ್ಲಿಂದು ಚರ್ಚೆಗೆ ಗ್ರಾಸವಾಗಿದೆ.

ಅಶೋಕ್ ಕುಮಾರ್

ಅಶೋಕ್ ಕುಮಾರ್
ಮೂಲತಃ ಭದ್ರಾವತಿಯವರಾದ ಅಶೋಕ್, ಹಲವು ಮಾಧ್ಯಮಗಳಲ್ಲಿ ಕೆಲಸ ಮಾಡಿರುವ ಅನುಭವಿ ಯುವ ಪತ್ರಕರ್ತರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...