Homeಮುಖಪುಟ29 ವರ್ಷಗಳ ಹಿಂದಿನ ನಕಲಿ ಎನ್‌ಕೌಂಟರ್; ಸುಧೀರ್ಘ ಕಾನೂನು ಹೋರಾಟ ನಡೆಸಿ ನ್ಯಾಯ ಪಡೆದ ಮೃತನ...

29 ವರ್ಷಗಳ ಹಿಂದಿನ ನಕಲಿ ಎನ್‌ಕೌಂಟರ್; ಸುಧೀರ್ಘ ಕಾನೂನು ಹೋರಾಟ ನಡೆಸಿ ನ್ಯಾಯ ಪಡೆದ ಮೃತನ ಪತ್ನಿ

- Advertisement -
- Advertisement -

1994ರಲ್ಲಿ ಪಂಜಾಬ್ ಪೊಲೀಸರು ಉಗ್ರ ಎಂದು ನಡೆಸಿದ ಎನ್‌ಕೌಂಟರ್‌ನಲ್ಲಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿ, ಸತ್ತಿರುವವನು ಭಯೋತ್ಪಾದಕನೆಂದು ಅಣೆಪಟ್ಟಿ ಕಟ್ಟಿದ್ದರು. ಆ ಸಂದರ್ಭದಲ್ಲಿ ಆತನ ಪತ್ನಿ ದಲ್ಬೀರ್ ಕೌರ್ ಕೇವಲ 19 ವರ್ಷ ಪ್ರಾಯದವರಾಗಿದ್ದು, ಎರಡು ತಿಂಗಳ ಗರ್ಭಿಣಿಯಾಗಿದ್ದಳು.

ಆದರೆ, ಎನ್‌ಕೌಂಟರ್ ನಡೆದ ನಾಲ್ಕು ವರ್ಷಗಳ ನಂತರ ಪೊಲೀಸರು ಹತ್ಯೆ ಮಾಡಿದ್ದೇವೆ ಎಂದು ಹೇಳಿದ್ದ ಭಯೋತ್ಪಾದಕ ಜೀವಂತವಾಗಿ ಪತ್ತೆಯಾಗಿದ್ದ. ಆ ನಂತರ, ಕೌರ್ ಮತ್ತು ಆಕೆಯ ಅತ್ತೆ ಪ್ರಯಾಸಕರವಾದ ಸುದೀರ್ಘ ಕಾನೂನು ಹೋರಾಟ ನಡೆಸಬೇಕಾಯಿತು. ಅಂತಿಮವಾಗಿ 29 ವರ್ಷಗಳ ನಂತರ ವಿಶೇಷ ತನಿಖಾ ತಂಡವು ಎನ್‌ಕೌಂಟರ್ ನಕಲಿ ಎಂದು ಹೈಕೋರ್ಟಿಗೆ ತಿಳಿಸಿದ್ದು, ಮಾಜಿ ಇನ್ಸ್ಪೆಕ್ಟರ್ ಜನರಲ್ ಮತ್ತು ಇತರ ಪೊಲೀಸ್ ಅಧಿಕಾರಿಗಳ ವಿರುದ್ಧ ಈಗ ಪ್ರಕರಣ ದಾಖಲಾಗಿದೆ.

ಮೃತ ಸುಖಪಾಲ್ ಸಿಂಗ್ ಅವರು ಗುರುದಾಸ್‌ಪುರ ಜಿಲ್ಲೆಯ ಕಲಾ ಆಫ್ಘಾನಾ ಗ್ರಾಮದ ನಿವಾಸಿಯಾಗಿದ್ದು, 1994 ರಲ್ಲಿ ಪೊಲೀಸ್ ಅಧಿಕಾರಿಗಳಿಂದ ಅಪಹರಣಕ್ಕೊಳಗಾಗಿದ್ದರು. ನಂತರ, ಅವರಿಗೆ ಬೇಕಾಗಿದ್ದ ಭಯೋತ್ಪಾದಕ ಗುರ್ನಾಮ್ ಸಿಂಗ್ ಬಂಡಾಲಾಗೆ ಹತ್ಯೆಗೆ ಬಹುಮಾನವನ್ನು ಪಡೆಯಲು ಈತನನ್ನು ಗುಂಡಿಕ್ಕಿ ಕೊಂದರು. ಸುಖಪಾಲ್ ಹತ್ಯೆ ನಂತರ ಕೌರ್ ಮತ್ತು ಅವರ ಕುಟುಂಬಕ್ಕೆ ಅಗ್ನಿಪರೀಕ್ಷೆ ಆರಂಭವಾಗಿತ್ತು.

‘ನನ್ನ ಅತ್ತೆ ನ್ಯಾಯಕ್ಕಾಗಿ ಬೀದಿಬೀದಿ ಅಲೆದಿದ್ದಾರೆ. ಅವರು ನಡೆಸಿದ ಕಾನೂನು ಹೋರಾಟಕ್ಕೆ ನ್ಯಾಯ ಸಿಗಲು 29 ವರ್ಷ ತೆಗೆದುಕೊಂಡಿದ್ದು, ಅಂತಿಮವಾಗಿ ಈಗ ಎಸ್ಐಟಿ ಎನ್‌ಕೌಂಟರ್ ನಕಲಿ ಎಂದು ಹೇಳಿದೆ. ದುರಾದೃಷ್ಟವೆಂದರೆ ನಾನು ನನ್ನ ಅತ್ತೆಯನ್ನೂ ಕಳೆದುಕೊಂಡಿದ್ದೇನೆ’ ಎಂದು ಹೇಳಿದರು.

ತಂದೆ ಹತ್ಯೆಯಾದಾಗ ಕೌರ್ ಅವರ ಮಗಳು ಕೇವಲ ಒಂದು ವರ್ಷ ವಯಸ್ಸಿನವರಾಗಿದ್ದರು. ತಂದೆಯ ಬಗ್ಗೆ ಅವರಿಗೆ ಯಾವುದೇ ನೆನಪುಗಳಿಲ್ಲ. ‘ತಂದೆ ಇಲ್ಲದೆ ನಾನು ಯಾವ ರೀತಿಯ ಜೀವನವನ್ನು ನಡೆಸಿದ್ದೇನೆ ಎಂದು ನೀವು ಊಹಿಸಬಹುದು. ಅವರ ಬಗ್ಗೆ ನನಗೆ ಯಾರು ಏನೂ ಹೇಳಲಿಲ್ಲ; ಸಮಯ ಕಳೆದಂತೆ ನನಗೆ ಏನಾಯಿತು ಎಂದು ತಿಳಿದಿದೆ’ ಎಂದು ಜೀವನಜ್ಯೋತ್ ಕೌರ್ ಹೇಳಿದರು.

1994ರಲ್ಲಿ ಪಂಜಾಬ್ ಪೊಲೀಸ್ ಅಧಿಕಾರಿಗಳ ತಂಡ ಉಗ್ರ ಬಂದಾಲನನ್ನು ಕೊಂದಿರುವುದಾಗಿ ಹೇಳಿಕೊಂಡಿತು. ಕೆಲವು ಪೊಲೀಸ್ ಅಧಿಕಾರಿಗಳು ಅವರನ್ನು ಅಪಹರಿಸಿ ನಕಲಿ ಎನ್‌ಕೌಂಟರ್‌ನಲ್ಲಿ ಕೊಂದಿದ್ದಾರೆ ಎಂದು ಆರೋಪಿಸಿ ಸುಖಪಾಲ್ ಸಿಂಗ್ ಅವರ ಕುಟುಂಬ ಅದೇ ವರ್ಷ ಜುಲೈ 29 ರಂದು ಪ್ರಕರಣ ದಾಖಲಿಸಿತು. ಆದರೆ ಘಟನೆ ನಡೆದ ನಾಲ್ಕು ವರ್ಷಗಳ ನಂತರ, 1998ರಲ್ಲಿ ಬಂಡಾಲನನ್ನು ಜೀವಂತವಾಗಿ ಹಿಡಿಯಲಾಯಿತು. ‘ನನ್ನ ಮಗ ಎಲ್ಲಿದ್ದಾನೆ ಎಂಬುದರ ಬಗ್ಗೆ ಏನಾದರೂ ತಿಳಿದಿದೆಯೇ ಎಂದು ಕೇಳಲು, ನನ್ನ ಅತ್ತೆ ಭಯೋತ್ಪಾದಕ ಬಂಡಾಲನನ್ನು ಜೈಲಿನಲ್ಲಿ ಭೇಟಿಯಾದರು. ಆದರೆ, ಅವರಿಗೆ ಯಾವುದೇ ಮಾಹಿತಿ ಸಿಗಲಿಲ್ಲ’ ಎಂದು ದಲ್ಬೀರ್ ಕೌರ್ ಹೇಳಿದರು.

‘ಎನ್ಕೌಂಟರ್ ನಡೆದ 13ವರ್ಷಗಳ ನಂತರ 2007ರಲ್ಲಿ ಆಗಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಜೆಪಿ ವಿರ್ದಿ ಅವರ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಯಿತು. 2010ರಲ್ಲಿ ವಿರ್ದಿ ನಿಧನರಾದರು. ಇದು ತನಿಖೆಯ ಹಿನ್ನಡೆಗೆ ಕಾರಣವಾಯಿತು. 2013ರಲ್ಲಿ, ಕೌರ್ ಅವರು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟಿಗೆ ಅರ್ಜಿ ಸಲ್ಲಿಸಿ ಸಿಬಿಐ ತನಿಖೆಗೆ ಮನವಿ ಮಾಡಿದರು. ಈ ಬೇಡಿಕೆಗೆ ಸ್ಪಂದಿಸಿದ ಪಂಜಾಬ್ ಪೊಲೀಸರು, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸಹೋಟಾ ನೇತೃತ್ವದಲ್ಲಿ ಮತ್ತೊಂದು ತನಿಖೆಯನ್ನು ಆರಂಭಿಸಿದರರು. ಅದೇ ವರ್ಷದ ನಂತರ, ಪೊಲೀಸರು ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ಸಹ ರಚಿಸಿದರು.

ಈ ತಂಡ ತನಿಖೆಗೆ 10 ವರ್ಷಗಳನ್ನು ತೆಗೆದುಕೊಂಡಿತು. ಆದರೆ, ಡಿಸೆಂಬರ್ 10, 2023 ರಂದು, ಡಿಜಿಪಿ ಗುರುಪ್ರೀತ್ ಕೌರ್ ಡಿಯೋ ನೇತೃತ್ವದ ಎಸ್ಐಟಿ ತಂಡವು, ಸುಖಪಾಲ್ ಅವರ ಎನ್ಕೌಂಟರ್ ಪ್ರಕರಣದ ಆರಂಭಿಕ ಪೊಲೀಸ್ ಎಫ್ಐಆರ್ ಅನ್ನು ಹಂತ-ಹಂತವಾಗಿ ತಿದ್ದುಪಡಿ ಮಾಡಿ, ಸತ್ಯಾಂಶವನ್ನು ಸುಳ್ಳು ಮಾಡಿ ಪ್ರಕರಣ ದಾಖಲಿಸಲಾಗಿದೆ‘ ಎಂದು ಹೈಕೋರ್ಟಿಗೆ ಅಫಿಡವಿಟ್ ಸಲ್ಲಿಸಿತು.

ಮಾಜಿ ಇನ್ಸ್ಪೆಕ್ಟರ್ ಜನರಲ್ ಪರಮರಾಜ್ ಸಿಂಗ್ ಉಮ್ರಾನಂಗಲ್, ಮೊರಿಂಡಾದ ಅಂದಿನ ಉಪ ಪೊಲೀಸ್ ವರಿಷ್ಠಾಧಿಕಾರಿ ಜಸ್ಪಾಲ್ ಸಿಂಗ್ ಮತ್ತು ಸಹಾಯಕ ಪೊಲೀಸರ ವಿರುದ್ಧ ಅಕ್ಟೋಬರ್‌ನಲ್ಲಿ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಸಾಕ್ಷ್ಯ ನಾಶ ಮತ್ತು ಕಟ್ಟುಕಥೆಗಾಗಿ ಹೊಸ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ. ಆಗ ಸಬ್ ಇನ್ಸ್ಪೆಕ್ಟರ್ ಆಗಿದ್ದ ಗುರುದೇವ್ ಸಿಂಗ್ ಅವರು ಈಗ ನಿಧನರಾಗಿದ್ದಾರೆ.

ಪಂಜಾಬ್ ಮತ್ತು ಹರಿಯಾಣ ಹೈಕೋರ್ಟಿನ ಹಿರಿಯ ವಕೀಲ ಪ್ರದೀಪ್ ವಿರ್ಕ್ ಅವರು ಪ್ರಕರಣವನ್ನು ಪಟ್ಟುಬಿಡದೆ ಮುಂದುವರಿಸಿದ್ದಕ್ಕಾಗಿ ಮೃತನ ಕುಟುಂಬವನ್ನು ಶ್ಲಾಘಿಸಿದ್ದಾರೆ. ‘ಈ ಪ್ರಕರಣವನ್ನು ಮುಂದುವರಿಸಿದ ಕೀರ್ತಿ ಈ ಕುಟುಂಬಕ್ಕೆ ಸಲ್ಲುತ್ತದೆ, ಕುಟುಂಬವು ಹಾಗೆ ಮಾಡಿದಾಗ ಮಾತ್ರ ವಕೀಲರು ಪ್ರಕರಣದಲ್ಲಿ ಹೋರಾಡಬಹುದು. ನೀವು ಪ್ರಕರಣವನ್ನು ಮುಂದುವರಿಸಿದರೆ ದೇವರೂ ನ್ಯಾಯ ನೀಡುತ್ತಾನೆ’ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗುವುದು; ಸಂಸತ್ ಸದಸ್ಯರಿಗೆ ಪತ್ರ ಬರೆದ ಸ್ಪೀಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...