Homeಮುಖಪುಟ29 ವರ್ಷಗಳ ಹಿಂದಿನ ನಕಲಿ ಎನ್‌ಕೌಂಟರ್; ಸುಧೀರ್ಘ ಕಾನೂನು ಹೋರಾಟ ನಡೆಸಿ ನ್ಯಾಯ ಪಡೆದ ಮೃತನ...

29 ವರ್ಷಗಳ ಹಿಂದಿನ ನಕಲಿ ಎನ್‌ಕೌಂಟರ್; ಸುಧೀರ್ಘ ಕಾನೂನು ಹೋರಾಟ ನಡೆಸಿ ನ್ಯಾಯ ಪಡೆದ ಮೃತನ ಪತ್ನಿ

- Advertisement -
- Advertisement -

1994ರಲ್ಲಿ ಪಂಜಾಬ್ ಪೊಲೀಸರು ಉಗ್ರ ಎಂದು ನಡೆಸಿದ ಎನ್‌ಕೌಂಟರ್‌ನಲ್ಲಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿ, ಸತ್ತಿರುವವನು ಭಯೋತ್ಪಾದಕನೆಂದು ಅಣೆಪಟ್ಟಿ ಕಟ್ಟಿದ್ದರು. ಆ ಸಂದರ್ಭದಲ್ಲಿ ಆತನ ಪತ್ನಿ ದಲ್ಬೀರ್ ಕೌರ್ ಕೇವಲ 19 ವರ್ಷ ಪ್ರಾಯದವರಾಗಿದ್ದು, ಎರಡು ತಿಂಗಳ ಗರ್ಭಿಣಿಯಾಗಿದ್ದಳು.

ಆದರೆ, ಎನ್‌ಕೌಂಟರ್ ನಡೆದ ನಾಲ್ಕು ವರ್ಷಗಳ ನಂತರ ಪೊಲೀಸರು ಹತ್ಯೆ ಮಾಡಿದ್ದೇವೆ ಎಂದು ಹೇಳಿದ್ದ ಭಯೋತ್ಪಾದಕ ಜೀವಂತವಾಗಿ ಪತ್ತೆಯಾಗಿದ್ದ. ಆ ನಂತರ, ಕೌರ್ ಮತ್ತು ಆಕೆಯ ಅತ್ತೆ ಪ್ರಯಾಸಕರವಾದ ಸುದೀರ್ಘ ಕಾನೂನು ಹೋರಾಟ ನಡೆಸಬೇಕಾಯಿತು. ಅಂತಿಮವಾಗಿ 29 ವರ್ಷಗಳ ನಂತರ ವಿಶೇಷ ತನಿಖಾ ತಂಡವು ಎನ್‌ಕೌಂಟರ್ ನಕಲಿ ಎಂದು ಹೈಕೋರ್ಟಿಗೆ ತಿಳಿಸಿದ್ದು, ಮಾಜಿ ಇನ್ಸ್ಪೆಕ್ಟರ್ ಜನರಲ್ ಮತ್ತು ಇತರ ಪೊಲೀಸ್ ಅಧಿಕಾರಿಗಳ ವಿರುದ್ಧ ಈಗ ಪ್ರಕರಣ ದಾಖಲಾಗಿದೆ.

ಮೃತ ಸುಖಪಾಲ್ ಸಿಂಗ್ ಅವರು ಗುರುದಾಸ್‌ಪುರ ಜಿಲ್ಲೆಯ ಕಲಾ ಆಫ್ಘಾನಾ ಗ್ರಾಮದ ನಿವಾಸಿಯಾಗಿದ್ದು, 1994 ರಲ್ಲಿ ಪೊಲೀಸ್ ಅಧಿಕಾರಿಗಳಿಂದ ಅಪಹರಣಕ್ಕೊಳಗಾಗಿದ್ದರು. ನಂತರ, ಅವರಿಗೆ ಬೇಕಾಗಿದ್ದ ಭಯೋತ್ಪಾದಕ ಗುರ್ನಾಮ್ ಸಿಂಗ್ ಬಂಡಾಲಾಗೆ ಹತ್ಯೆಗೆ ಬಹುಮಾನವನ್ನು ಪಡೆಯಲು ಈತನನ್ನು ಗುಂಡಿಕ್ಕಿ ಕೊಂದರು. ಸುಖಪಾಲ್ ಹತ್ಯೆ ನಂತರ ಕೌರ್ ಮತ್ತು ಅವರ ಕುಟುಂಬಕ್ಕೆ ಅಗ್ನಿಪರೀಕ್ಷೆ ಆರಂಭವಾಗಿತ್ತು.

‘ನನ್ನ ಅತ್ತೆ ನ್ಯಾಯಕ್ಕಾಗಿ ಬೀದಿಬೀದಿ ಅಲೆದಿದ್ದಾರೆ. ಅವರು ನಡೆಸಿದ ಕಾನೂನು ಹೋರಾಟಕ್ಕೆ ನ್ಯಾಯ ಸಿಗಲು 29 ವರ್ಷ ತೆಗೆದುಕೊಂಡಿದ್ದು, ಅಂತಿಮವಾಗಿ ಈಗ ಎಸ್ಐಟಿ ಎನ್‌ಕೌಂಟರ್ ನಕಲಿ ಎಂದು ಹೇಳಿದೆ. ದುರಾದೃಷ್ಟವೆಂದರೆ ನಾನು ನನ್ನ ಅತ್ತೆಯನ್ನೂ ಕಳೆದುಕೊಂಡಿದ್ದೇನೆ’ ಎಂದು ಹೇಳಿದರು.

ತಂದೆ ಹತ್ಯೆಯಾದಾಗ ಕೌರ್ ಅವರ ಮಗಳು ಕೇವಲ ಒಂದು ವರ್ಷ ವಯಸ್ಸಿನವರಾಗಿದ್ದರು. ತಂದೆಯ ಬಗ್ಗೆ ಅವರಿಗೆ ಯಾವುದೇ ನೆನಪುಗಳಿಲ್ಲ. ‘ತಂದೆ ಇಲ್ಲದೆ ನಾನು ಯಾವ ರೀತಿಯ ಜೀವನವನ್ನು ನಡೆಸಿದ್ದೇನೆ ಎಂದು ನೀವು ಊಹಿಸಬಹುದು. ಅವರ ಬಗ್ಗೆ ನನಗೆ ಯಾರು ಏನೂ ಹೇಳಲಿಲ್ಲ; ಸಮಯ ಕಳೆದಂತೆ ನನಗೆ ಏನಾಯಿತು ಎಂದು ತಿಳಿದಿದೆ’ ಎಂದು ಜೀವನಜ್ಯೋತ್ ಕೌರ್ ಹೇಳಿದರು.

1994ರಲ್ಲಿ ಪಂಜಾಬ್ ಪೊಲೀಸ್ ಅಧಿಕಾರಿಗಳ ತಂಡ ಉಗ್ರ ಬಂದಾಲನನ್ನು ಕೊಂದಿರುವುದಾಗಿ ಹೇಳಿಕೊಂಡಿತು. ಕೆಲವು ಪೊಲೀಸ್ ಅಧಿಕಾರಿಗಳು ಅವರನ್ನು ಅಪಹರಿಸಿ ನಕಲಿ ಎನ್‌ಕೌಂಟರ್‌ನಲ್ಲಿ ಕೊಂದಿದ್ದಾರೆ ಎಂದು ಆರೋಪಿಸಿ ಸುಖಪಾಲ್ ಸಿಂಗ್ ಅವರ ಕುಟುಂಬ ಅದೇ ವರ್ಷ ಜುಲೈ 29 ರಂದು ಪ್ರಕರಣ ದಾಖಲಿಸಿತು. ಆದರೆ ಘಟನೆ ನಡೆದ ನಾಲ್ಕು ವರ್ಷಗಳ ನಂತರ, 1998ರಲ್ಲಿ ಬಂಡಾಲನನ್ನು ಜೀವಂತವಾಗಿ ಹಿಡಿಯಲಾಯಿತು. ‘ನನ್ನ ಮಗ ಎಲ್ಲಿದ್ದಾನೆ ಎಂಬುದರ ಬಗ್ಗೆ ಏನಾದರೂ ತಿಳಿದಿದೆಯೇ ಎಂದು ಕೇಳಲು, ನನ್ನ ಅತ್ತೆ ಭಯೋತ್ಪಾದಕ ಬಂಡಾಲನನ್ನು ಜೈಲಿನಲ್ಲಿ ಭೇಟಿಯಾದರು. ಆದರೆ, ಅವರಿಗೆ ಯಾವುದೇ ಮಾಹಿತಿ ಸಿಗಲಿಲ್ಲ’ ಎಂದು ದಲ್ಬೀರ್ ಕೌರ್ ಹೇಳಿದರು.

‘ಎನ್ಕೌಂಟರ್ ನಡೆದ 13ವರ್ಷಗಳ ನಂತರ 2007ರಲ್ಲಿ ಆಗಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಜೆಪಿ ವಿರ್ದಿ ಅವರ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಯಿತು. 2010ರಲ್ಲಿ ವಿರ್ದಿ ನಿಧನರಾದರು. ಇದು ತನಿಖೆಯ ಹಿನ್ನಡೆಗೆ ಕಾರಣವಾಯಿತು. 2013ರಲ್ಲಿ, ಕೌರ್ ಅವರು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟಿಗೆ ಅರ್ಜಿ ಸಲ್ಲಿಸಿ ಸಿಬಿಐ ತನಿಖೆಗೆ ಮನವಿ ಮಾಡಿದರು. ಈ ಬೇಡಿಕೆಗೆ ಸ್ಪಂದಿಸಿದ ಪಂಜಾಬ್ ಪೊಲೀಸರು, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸಹೋಟಾ ನೇತೃತ್ವದಲ್ಲಿ ಮತ್ತೊಂದು ತನಿಖೆಯನ್ನು ಆರಂಭಿಸಿದರರು. ಅದೇ ವರ್ಷದ ನಂತರ, ಪೊಲೀಸರು ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ಸಹ ರಚಿಸಿದರು.

ಈ ತಂಡ ತನಿಖೆಗೆ 10 ವರ್ಷಗಳನ್ನು ತೆಗೆದುಕೊಂಡಿತು. ಆದರೆ, ಡಿಸೆಂಬರ್ 10, 2023 ರಂದು, ಡಿಜಿಪಿ ಗುರುಪ್ರೀತ್ ಕೌರ್ ಡಿಯೋ ನೇತೃತ್ವದ ಎಸ್ಐಟಿ ತಂಡವು, ಸುಖಪಾಲ್ ಅವರ ಎನ್ಕೌಂಟರ್ ಪ್ರಕರಣದ ಆರಂಭಿಕ ಪೊಲೀಸ್ ಎಫ್ಐಆರ್ ಅನ್ನು ಹಂತ-ಹಂತವಾಗಿ ತಿದ್ದುಪಡಿ ಮಾಡಿ, ಸತ್ಯಾಂಶವನ್ನು ಸುಳ್ಳು ಮಾಡಿ ಪ್ರಕರಣ ದಾಖಲಿಸಲಾಗಿದೆ‘ ಎಂದು ಹೈಕೋರ್ಟಿಗೆ ಅಫಿಡವಿಟ್ ಸಲ್ಲಿಸಿತು.

ಮಾಜಿ ಇನ್ಸ್ಪೆಕ್ಟರ್ ಜನರಲ್ ಪರಮರಾಜ್ ಸಿಂಗ್ ಉಮ್ರಾನಂಗಲ್, ಮೊರಿಂಡಾದ ಅಂದಿನ ಉಪ ಪೊಲೀಸ್ ವರಿಷ್ಠಾಧಿಕಾರಿ ಜಸ್ಪಾಲ್ ಸಿಂಗ್ ಮತ್ತು ಸಹಾಯಕ ಪೊಲೀಸರ ವಿರುದ್ಧ ಅಕ್ಟೋಬರ್‌ನಲ್ಲಿ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಸಾಕ್ಷ್ಯ ನಾಶ ಮತ್ತು ಕಟ್ಟುಕಥೆಗಾಗಿ ಹೊಸ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ. ಆಗ ಸಬ್ ಇನ್ಸ್ಪೆಕ್ಟರ್ ಆಗಿದ್ದ ಗುರುದೇವ್ ಸಿಂಗ್ ಅವರು ಈಗ ನಿಧನರಾಗಿದ್ದಾರೆ.

ಪಂಜಾಬ್ ಮತ್ತು ಹರಿಯಾಣ ಹೈಕೋರ್ಟಿನ ಹಿರಿಯ ವಕೀಲ ಪ್ರದೀಪ್ ವಿರ್ಕ್ ಅವರು ಪ್ರಕರಣವನ್ನು ಪಟ್ಟುಬಿಡದೆ ಮುಂದುವರಿಸಿದ್ದಕ್ಕಾಗಿ ಮೃತನ ಕುಟುಂಬವನ್ನು ಶ್ಲಾಘಿಸಿದ್ದಾರೆ. ‘ಈ ಪ್ರಕರಣವನ್ನು ಮುಂದುವರಿಸಿದ ಕೀರ್ತಿ ಈ ಕುಟುಂಬಕ್ಕೆ ಸಲ್ಲುತ್ತದೆ, ಕುಟುಂಬವು ಹಾಗೆ ಮಾಡಿದಾಗ ಮಾತ್ರ ವಕೀಲರು ಪ್ರಕರಣದಲ್ಲಿ ಹೋರಾಡಬಹುದು. ನೀವು ಪ್ರಕರಣವನ್ನು ಮುಂದುವರಿಸಿದರೆ ದೇವರೂ ನ್ಯಾಯ ನೀಡುತ್ತಾನೆ’ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗುವುದು; ಸಂಸತ್ ಸದಸ್ಯರಿಗೆ ಪತ್ರ ಬರೆದ ಸ್ಪೀಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...