Homeಮುಖಪುಟ29 ವರ್ಷಗಳ ಹಿಂದಿನ ನಕಲಿ ಎನ್‌ಕೌಂಟರ್; ಸುಧೀರ್ಘ ಕಾನೂನು ಹೋರಾಟ ನಡೆಸಿ ನ್ಯಾಯ ಪಡೆದ ಮೃತನ...

29 ವರ್ಷಗಳ ಹಿಂದಿನ ನಕಲಿ ಎನ್‌ಕೌಂಟರ್; ಸುಧೀರ್ಘ ಕಾನೂನು ಹೋರಾಟ ನಡೆಸಿ ನ್ಯಾಯ ಪಡೆದ ಮೃತನ ಪತ್ನಿ

- Advertisement -
- Advertisement -

1994ರಲ್ಲಿ ಪಂಜಾಬ್ ಪೊಲೀಸರು ಉಗ್ರ ಎಂದು ನಡೆಸಿದ ಎನ್‌ಕೌಂಟರ್‌ನಲ್ಲಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿ, ಸತ್ತಿರುವವನು ಭಯೋತ್ಪಾದಕನೆಂದು ಅಣೆಪಟ್ಟಿ ಕಟ್ಟಿದ್ದರು. ಆ ಸಂದರ್ಭದಲ್ಲಿ ಆತನ ಪತ್ನಿ ದಲ್ಬೀರ್ ಕೌರ್ ಕೇವಲ 19 ವರ್ಷ ಪ್ರಾಯದವರಾಗಿದ್ದು, ಎರಡು ತಿಂಗಳ ಗರ್ಭಿಣಿಯಾಗಿದ್ದಳು.

ಆದರೆ, ಎನ್‌ಕೌಂಟರ್ ನಡೆದ ನಾಲ್ಕು ವರ್ಷಗಳ ನಂತರ ಪೊಲೀಸರು ಹತ್ಯೆ ಮಾಡಿದ್ದೇವೆ ಎಂದು ಹೇಳಿದ್ದ ಭಯೋತ್ಪಾದಕ ಜೀವಂತವಾಗಿ ಪತ್ತೆಯಾಗಿದ್ದ. ಆ ನಂತರ, ಕೌರ್ ಮತ್ತು ಆಕೆಯ ಅತ್ತೆ ಪ್ರಯಾಸಕರವಾದ ಸುದೀರ್ಘ ಕಾನೂನು ಹೋರಾಟ ನಡೆಸಬೇಕಾಯಿತು. ಅಂತಿಮವಾಗಿ 29 ವರ್ಷಗಳ ನಂತರ ವಿಶೇಷ ತನಿಖಾ ತಂಡವು ಎನ್‌ಕೌಂಟರ್ ನಕಲಿ ಎಂದು ಹೈಕೋರ್ಟಿಗೆ ತಿಳಿಸಿದ್ದು, ಮಾಜಿ ಇನ್ಸ್ಪೆಕ್ಟರ್ ಜನರಲ್ ಮತ್ತು ಇತರ ಪೊಲೀಸ್ ಅಧಿಕಾರಿಗಳ ವಿರುದ್ಧ ಈಗ ಪ್ರಕರಣ ದಾಖಲಾಗಿದೆ.

ಮೃತ ಸುಖಪಾಲ್ ಸಿಂಗ್ ಅವರು ಗುರುದಾಸ್‌ಪುರ ಜಿಲ್ಲೆಯ ಕಲಾ ಆಫ್ಘಾನಾ ಗ್ರಾಮದ ನಿವಾಸಿಯಾಗಿದ್ದು, 1994 ರಲ್ಲಿ ಪೊಲೀಸ್ ಅಧಿಕಾರಿಗಳಿಂದ ಅಪಹರಣಕ್ಕೊಳಗಾಗಿದ್ದರು. ನಂತರ, ಅವರಿಗೆ ಬೇಕಾಗಿದ್ದ ಭಯೋತ್ಪಾದಕ ಗುರ್ನಾಮ್ ಸಿಂಗ್ ಬಂಡಾಲಾಗೆ ಹತ್ಯೆಗೆ ಬಹುಮಾನವನ್ನು ಪಡೆಯಲು ಈತನನ್ನು ಗುಂಡಿಕ್ಕಿ ಕೊಂದರು. ಸುಖಪಾಲ್ ಹತ್ಯೆ ನಂತರ ಕೌರ್ ಮತ್ತು ಅವರ ಕುಟುಂಬಕ್ಕೆ ಅಗ್ನಿಪರೀಕ್ಷೆ ಆರಂಭವಾಗಿತ್ತು.

‘ನನ್ನ ಅತ್ತೆ ನ್ಯಾಯಕ್ಕಾಗಿ ಬೀದಿಬೀದಿ ಅಲೆದಿದ್ದಾರೆ. ಅವರು ನಡೆಸಿದ ಕಾನೂನು ಹೋರಾಟಕ್ಕೆ ನ್ಯಾಯ ಸಿಗಲು 29 ವರ್ಷ ತೆಗೆದುಕೊಂಡಿದ್ದು, ಅಂತಿಮವಾಗಿ ಈಗ ಎಸ್ಐಟಿ ಎನ್‌ಕೌಂಟರ್ ನಕಲಿ ಎಂದು ಹೇಳಿದೆ. ದುರಾದೃಷ್ಟವೆಂದರೆ ನಾನು ನನ್ನ ಅತ್ತೆಯನ್ನೂ ಕಳೆದುಕೊಂಡಿದ್ದೇನೆ’ ಎಂದು ಹೇಳಿದರು.

ತಂದೆ ಹತ್ಯೆಯಾದಾಗ ಕೌರ್ ಅವರ ಮಗಳು ಕೇವಲ ಒಂದು ವರ್ಷ ವಯಸ್ಸಿನವರಾಗಿದ್ದರು. ತಂದೆಯ ಬಗ್ಗೆ ಅವರಿಗೆ ಯಾವುದೇ ನೆನಪುಗಳಿಲ್ಲ. ‘ತಂದೆ ಇಲ್ಲದೆ ನಾನು ಯಾವ ರೀತಿಯ ಜೀವನವನ್ನು ನಡೆಸಿದ್ದೇನೆ ಎಂದು ನೀವು ಊಹಿಸಬಹುದು. ಅವರ ಬಗ್ಗೆ ನನಗೆ ಯಾರು ಏನೂ ಹೇಳಲಿಲ್ಲ; ಸಮಯ ಕಳೆದಂತೆ ನನಗೆ ಏನಾಯಿತು ಎಂದು ತಿಳಿದಿದೆ’ ಎಂದು ಜೀವನಜ್ಯೋತ್ ಕೌರ್ ಹೇಳಿದರು.

1994ರಲ್ಲಿ ಪಂಜಾಬ್ ಪೊಲೀಸ್ ಅಧಿಕಾರಿಗಳ ತಂಡ ಉಗ್ರ ಬಂದಾಲನನ್ನು ಕೊಂದಿರುವುದಾಗಿ ಹೇಳಿಕೊಂಡಿತು. ಕೆಲವು ಪೊಲೀಸ್ ಅಧಿಕಾರಿಗಳು ಅವರನ್ನು ಅಪಹರಿಸಿ ನಕಲಿ ಎನ್‌ಕೌಂಟರ್‌ನಲ್ಲಿ ಕೊಂದಿದ್ದಾರೆ ಎಂದು ಆರೋಪಿಸಿ ಸುಖಪಾಲ್ ಸಿಂಗ್ ಅವರ ಕುಟುಂಬ ಅದೇ ವರ್ಷ ಜುಲೈ 29 ರಂದು ಪ್ರಕರಣ ದಾಖಲಿಸಿತು. ಆದರೆ ಘಟನೆ ನಡೆದ ನಾಲ್ಕು ವರ್ಷಗಳ ನಂತರ, 1998ರಲ್ಲಿ ಬಂಡಾಲನನ್ನು ಜೀವಂತವಾಗಿ ಹಿಡಿಯಲಾಯಿತು. ‘ನನ್ನ ಮಗ ಎಲ್ಲಿದ್ದಾನೆ ಎಂಬುದರ ಬಗ್ಗೆ ಏನಾದರೂ ತಿಳಿದಿದೆಯೇ ಎಂದು ಕೇಳಲು, ನನ್ನ ಅತ್ತೆ ಭಯೋತ್ಪಾದಕ ಬಂಡಾಲನನ್ನು ಜೈಲಿನಲ್ಲಿ ಭೇಟಿಯಾದರು. ಆದರೆ, ಅವರಿಗೆ ಯಾವುದೇ ಮಾಹಿತಿ ಸಿಗಲಿಲ್ಲ’ ಎಂದು ದಲ್ಬೀರ್ ಕೌರ್ ಹೇಳಿದರು.

‘ಎನ್ಕೌಂಟರ್ ನಡೆದ 13ವರ್ಷಗಳ ನಂತರ 2007ರಲ್ಲಿ ಆಗಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಜೆಪಿ ವಿರ್ದಿ ಅವರ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಯಿತು. 2010ರಲ್ಲಿ ವಿರ್ದಿ ನಿಧನರಾದರು. ಇದು ತನಿಖೆಯ ಹಿನ್ನಡೆಗೆ ಕಾರಣವಾಯಿತು. 2013ರಲ್ಲಿ, ಕೌರ್ ಅವರು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟಿಗೆ ಅರ್ಜಿ ಸಲ್ಲಿಸಿ ಸಿಬಿಐ ತನಿಖೆಗೆ ಮನವಿ ಮಾಡಿದರು. ಈ ಬೇಡಿಕೆಗೆ ಸ್ಪಂದಿಸಿದ ಪಂಜಾಬ್ ಪೊಲೀಸರು, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸಹೋಟಾ ನೇತೃತ್ವದಲ್ಲಿ ಮತ್ತೊಂದು ತನಿಖೆಯನ್ನು ಆರಂಭಿಸಿದರರು. ಅದೇ ವರ್ಷದ ನಂತರ, ಪೊಲೀಸರು ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ಸಹ ರಚಿಸಿದರು.

ಈ ತಂಡ ತನಿಖೆಗೆ 10 ವರ್ಷಗಳನ್ನು ತೆಗೆದುಕೊಂಡಿತು. ಆದರೆ, ಡಿಸೆಂಬರ್ 10, 2023 ರಂದು, ಡಿಜಿಪಿ ಗುರುಪ್ರೀತ್ ಕೌರ್ ಡಿಯೋ ನೇತೃತ್ವದ ಎಸ್ಐಟಿ ತಂಡವು, ಸುಖಪಾಲ್ ಅವರ ಎನ್ಕೌಂಟರ್ ಪ್ರಕರಣದ ಆರಂಭಿಕ ಪೊಲೀಸ್ ಎಫ್ಐಆರ್ ಅನ್ನು ಹಂತ-ಹಂತವಾಗಿ ತಿದ್ದುಪಡಿ ಮಾಡಿ, ಸತ್ಯಾಂಶವನ್ನು ಸುಳ್ಳು ಮಾಡಿ ಪ್ರಕರಣ ದಾಖಲಿಸಲಾಗಿದೆ‘ ಎಂದು ಹೈಕೋರ್ಟಿಗೆ ಅಫಿಡವಿಟ್ ಸಲ್ಲಿಸಿತು.

ಮಾಜಿ ಇನ್ಸ್ಪೆಕ್ಟರ್ ಜನರಲ್ ಪರಮರಾಜ್ ಸಿಂಗ್ ಉಮ್ರಾನಂಗಲ್, ಮೊರಿಂಡಾದ ಅಂದಿನ ಉಪ ಪೊಲೀಸ್ ವರಿಷ್ಠಾಧಿಕಾರಿ ಜಸ್ಪಾಲ್ ಸಿಂಗ್ ಮತ್ತು ಸಹಾಯಕ ಪೊಲೀಸರ ವಿರುದ್ಧ ಅಕ್ಟೋಬರ್‌ನಲ್ಲಿ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಸಾಕ್ಷ್ಯ ನಾಶ ಮತ್ತು ಕಟ್ಟುಕಥೆಗಾಗಿ ಹೊಸ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ. ಆಗ ಸಬ್ ಇನ್ಸ್ಪೆಕ್ಟರ್ ಆಗಿದ್ದ ಗುರುದೇವ್ ಸಿಂಗ್ ಅವರು ಈಗ ನಿಧನರಾಗಿದ್ದಾರೆ.

ಪಂಜಾಬ್ ಮತ್ತು ಹರಿಯಾಣ ಹೈಕೋರ್ಟಿನ ಹಿರಿಯ ವಕೀಲ ಪ್ರದೀಪ್ ವಿರ್ಕ್ ಅವರು ಪ್ರಕರಣವನ್ನು ಪಟ್ಟುಬಿಡದೆ ಮುಂದುವರಿಸಿದ್ದಕ್ಕಾಗಿ ಮೃತನ ಕುಟುಂಬವನ್ನು ಶ್ಲಾಘಿಸಿದ್ದಾರೆ. ‘ಈ ಪ್ರಕರಣವನ್ನು ಮುಂದುವರಿಸಿದ ಕೀರ್ತಿ ಈ ಕುಟುಂಬಕ್ಕೆ ಸಲ್ಲುತ್ತದೆ, ಕುಟುಂಬವು ಹಾಗೆ ಮಾಡಿದಾಗ ಮಾತ್ರ ವಕೀಲರು ಪ್ರಕರಣದಲ್ಲಿ ಹೋರಾಡಬಹುದು. ನೀವು ಪ್ರಕರಣವನ್ನು ಮುಂದುವರಿಸಿದರೆ ದೇವರೂ ನ್ಯಾಯ ನೀಡುತ್ತಾನೆ’ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗುವುದು; ಸಂಸತ್ ಸದಸ್ಯರಿಗೆ ಪತ್ರ ಬರೆದ ಸ್ಪೀಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...