Homeಮುಖಪುಟ29 ವರ್ಷಗಳ ಹಿಂದಿನ ನಕಲಿ ಎನ್‌ಕೌಂಟರ್; ಸುಧೀರ್ಘ ಕಾನೂನು ಹೋರಾಟ ನಡೆಸಿ ನ್ಯಾಯ ಪಡೆದ ಮೃತನ...

29 ವರ್ಷಗಳ ಹಿಂದಿನ ನಕಲಿ ಎನ್‌ಕೌಂಟರ್; ಸುಧೀರ್ಘ ಕಾನೂನು ಹೋರಾಟ ನಡೆಸಿ ನ್ಯಾಯ ಪಡೆದ ಮೃತನ ಪತ್ನಿ

- Advertisement -
- Advertisement -

1994ರಲ್ಲಿ ಪಂಜಾಬ್ ಪೊಲೀಸರು ಉಗ್ರ ಎಂದು ನಡೆಸಿದ ಎನ್‌ಕೌಂಟರ್‌ನಲ್ಲಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿ, ಸತ್ತಿರುವವನು ಭಯೋತ್ಪಾದಕನೆಂದು ಅಣೆಪಟ್ಟಿ ಕಟ್ಟಿದ್ದರು. ಆ ಸಂದರ್ಭದಲ್ಲಿ ಆತನ ಪತ್ನಿ ದಲ್ಬೀರ್ ಕೌರ್ ಕೇವಲ 19 ವರ್ಷ ಪ್ರಾಯದವರಾಗಿದ್ದು, ಎರಡು ತಿಂಗಳ ಗರ್ಭಿಣಿಯಾಗಿದ್ದಳು.

ಆದರೆ, ಎನ್‌ಕೌಂಟರ್ ನಡೆದ ನಾಲ್ಕು ವರ್ಷಗಳ ನಂತರ ಪೊಲೀಸರು ಹತ್ಯೆ ಮಾಡಿದ್ದೇವೆ ಎಂದು ಹೇಳಿದ್ದ ಭಯೋತ್ಪಾದಕ ಜೀವಂತವಾಗಿ ಪತ್ತೆಯಾಗಿದ್ದ. ಆ ನಂತರ, ಕೌರ್ ಮತ್ತು ಆಕೆಯ ಅತ್ತೆ ಪ್ರಯಾಸಕರವಾದ ಸುದೀರ್ಘ ಕಾನೂನು ಹೋರಾಟ ನಡೆಸಬೇಕಾಯಿತು. ಅಂತಿಮವಾಗಿ 29 ವರ್ಷಗಳ ನಂತರ ವಿಶೇಷ ತನಿಖಾ ತಂಡವು ಎನ್‌ಕೌಂಟರ್ ನಕಲಿ ಎಂದು ಹೈಕೋರ್ಟಿಗೆ ತಿಳಿಸಿದ್ದು, ಮಾಜಿ ಇನ್ಸ್ಪೆಕ್ಟರ್ ಜನರಲ್ ಮತ್ತು ಇತರ ಪೊಲೀಸ್ ಅಧಿಕಾರಿಗಳ ವಿರುದ್ಧ ಈಗ ಪ್ರಕರಣ ದಾಖಲಾಗಿದೆ.

ಮೃತ ಸುಖಪಾಲ್ ಸಿಂಗ್ ಅವರು ಗುರುದಾಸ್‌ಪುರ ಜಿಲ್ಲೆಯ ಕಲಾ ಆಫ್ಘಾನಾ ಗ್ರಾಮದ ನಿವಾಸಿಯಾಗಿದ್ದು, 1994 ರಲ್ಲಿ ಪೊಲೀಸ್ ಅಧಿಕಾರಿಗಳಿಂದ ಅಪಹರಣಕ್ಕೊಳಗಾಗಿದ್ದರು. ನಂತರ, ಅವರಿಗೆ ಬೇಕಾಗಿದ್ದ ಭಯೋತ್ಪಾದಕ ಗುರ್ನಾಮ್ ಸಿಂಗ್ ಬಂಡಾಲಾಗೆ ಹತ್ಯೆಗೆ ಬಹುಮಾನವನ್ನು ಪಡೆಯಲು ಈತನನ್ನು ಗುಂಡಿಕ್ಕಿ ಕೊಂದರು. ಸುಖಪಾಲ್ ಹತ್ಯೆ ನಂತರ ಕೌರ್ ಮತ್ತು ಅವರ ಕುಟುಂಬಕ್ಕೆ ಅಗ್ನಿಪರೀಕ್ಷೆ ಆರಂಭವಾಗಿತ್ತು.

‘ನನ್ನ ಅತ್ತೆ ನ್ಯಾಯಕ್ಕಾಗಿ ಬೀದಿಬೀದಿ ಅಲೆದಿದ್ದಾರೆ. ಅವರು ನಡೆಸಿದ ಕಾನೂನು ಹೋರಾಟಕ್ಕೆ ನ್ಯಾಯ ಸಿಗಲು 29 ವರ್ಷ ತೆಗೆದುಕೊಂಡಿದ್ದು, ಅಂತಿಮವಾಗಿ ಈಗ ಎಸ್ಐಟಿ ಎನ್‌ಕೌಂಟರ್ ನಕಲಿ ಎಂದು ಹೇಳಿದೆ. ದುರಾದೃಷ್ಟವೆಂದರೆ ನಾನು ನನ್ನ ಅತ್ತೆಯನ್ನೂ ಕಳೆದುಕೊಂಡಿದ್ದೇನೆ’ ಎಂದು ಹೇಳಿದರು.

ತಂದೆ ಹತ್ಯೆಯಾದಾಗ ಕೌರ್ ಅವರ ಮಗಳು ಕೇವಲ ಒಂದು ವರ್ಷ ವಯಸ್ಸಿನವರಾಗಿದ್ದರು. ತಂದೆಯ ಬಗ್ಗೆ ಅವರಿಗೆ ಯಾವುದೇ ನೆನಪುಗಳಿಲ್ಲ. ‘ತಂದೆ ಇಲ್ಲದೆ ನಾನು ಯಾವ ರೀತಿಯ ಜೀವನವನ್ನು ನಡೆಸಿದ್ದೇನೆ ಎಂದು ನೀವು ಊಹಿಸಬಹುದು. ಅವರ ಬಗ್ಗೆ ನನಗೆ ಯಾರು ಏನೂ ಹೇಳಲಿಲ್ಲ; ಸಮಯ ಕಳೆದಂತೆ ನನಗೆ ಏನಾಯಿತು ಎಂದು ತಿಳಿದಿದೆ’ ಎಂದು ಜೀವನಜ್ಯೋತ್ ಕೌರ್ ಹೇಳಿದರು.

1994ರಲ್ಲಿ ಪಂಜಾಬ್ ಪೊಲೀಸ್ ಅಧಿಕಾರಿಗಳ ತಂಡ ಉಗ್ರ ಬಂದಾಲನನ್ನು ಕೊಂದಿರುವುದಾಗಿ ಹೇಳಿಕೊಂಡಿತು. ಕೆಲವು ಪೊಲೀಸ್ ಅಧಿಕಾರಿಗಳು ಅವರನ್ನು ಅಪಹರಿಸಿ ನಕಲಿ ಎನ್‌ಕೌಂಟರ್‌ನಲ್ಲಿ ಕೊಂದಿದ್ದಾರೆ ಎಂದು ಆರೋಪಿಸಿ ಸುಖಪಾಲ್ ಸಿಂಗ್ ಅವರ ಕುಟುಂಬ ಅದೇ ವರ್ಷ ಜುಲೈ 29 ರಂದು ಪ್ರಕರಣ ದಾಖಲಿಸಿತು. ಆದರೆ ಘಟನೆ ನಡೆದ ನಾಲ್ಕು ವರ್ಷಗಳ ನಂತರ, 1998ರಲ್ಲಿ ಬಂಡಾಲನನ್ನು ಜೀವಂತವಾಗಿ ಹಿಡಿಯಲಾಯಿತು. ‘ನನ್ನ ಮಗ ಎಲ್ಲಿದ್ದಾನೆ ಎಂಬುದರ ಬಗ್ಗೆ ಏನಾದರೂ ತಿಳಿದಿದೆಯೇ ಎಂದು ಕೇಳಲು, ನನ್ನ ಅತ್ತೆ ಭಯೋತ್ಪಾದಕ ಬಂಡಾಲನನ್ನು ಜೈಲಿನಲ್ಲಿ ಭೇಟಿಯಾದರು. ಆದರೆ, ಅವರಿಗೆ ಯಾವುದೇ ಮಾಹಿತಿ ಸಿಗಲಿಲ್ಲ’ ಎಂದು ದಲ್ಬೀರ್ ಕೌರ್ ಹೇಳಿದರು.

‘ಎನ್ಕೌಂಟರ್ ನಡೆದ 13ವರ್ಷಗಳ ನಂತರ 2007ರಲ್ಲಿ ಆಗಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಜೆಪಿ ವಿರ್ದಿ ಅವರ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಯಿತು. 2010ರಲ್ಲಿ ವಿರ್ದಿ ನಿಧನರಾದರು. ಇದು ತನಿಖೆಯ ಹಿನ್ನಡೆಗೆ ಕಾರಣವಾಯಿತು. 2013ರಲ್ಲಿ, ಕೌರ್ ಅವರು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟಿಗೆ ಅರ್ಜಿ ಸಲ್ಲಿಸಿ ಸಿಬಿಐ ತನಿಖೆಗೆ ಮನವಿ ಮಾಡಿದರು. ಈ ಬೇಡಿಕೆಗೆ ಸ್ಪಂದಿಸಿದ ಪಂಜಾಬ್ ಪೊಲೀಸರು, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಸಹೋಟಾ ನೇತೃತ್ವದಲ್ಲಿ ಮತ್ತೊಂದು ತನಿಖೆಯನ್ನು ಆರಂಭಿಸಿದರರು. ಅದೇ ವರ್ಷದ ನಂತರ, ಪೊಲೀಸರು ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ಸಹ ರಚಿಸಿದರು.

ಈ ತಂಡ ತನಿಖೆಗೆ 10 ವರ್ಷಗಳನ್ನು ತೆಗೆದುಕೊಂಡಿತು. ಆದರೆ, ಡಿಸೆಂಬರ್ 10, 2023 ರಂದು, ಡಿಜಿಪಿ ಗುರುಪ್ರೀತ್ ಕೌರ್ ಡಿಯೋ ನೇತೃತ್ವದ ಎಸ್ಐಟಿ ತಂಡವು, ಸುಖಪಾಲ್ ಅವರ ಎನ್ಕೌಂಟರ್ ಪ್ರಕರಣದ ಆರಂಭಿಕ ಪೊಲೀಸ್ ಎಫ್ಐಆರ್ ಅನ್ನು ಹಂತ-ಹಂತವಾಗಿ ತಿದ್ದುಪಡಿ ಮಾಡಿ, ಸತ್ಯಾಂಶವನ್ನು ಸುಳ್ಳು ಮಾಡಿ ಪ್ರಕರಣ ದಾಖಲಿಸಲಾಗಿದೆ‘ ಎಂದು ಹೈಕೋರ್ಟಿಗೆ ಅಫಿಡವಿಟ್ ಸಲ್ಲಿಸಿತು.

ಮಾಜಿ ಇನ್ಸ್ಪೆಕ್ಟರ್ ಜನರಲ್ ಪರಮರಾಜ್ ಸಿಂಗ್ ಉಮ್ರಾನಂಗಲ್, ಮೊರಿಂಡಾದ ಅಂದಿನ ಉಪ ಪೊಲೀಸ್ ವರಿಷ್ಠಾಧಿಕಾರಿ ಜಸ್ಪಾಲ್ ಸಿಂಗ್ ಮತ್ತು ಸಹಾಯಕ ಪೊಲೀಸರ ವಿರುದ್ಧ ಅಕ್ಟೋಬರ್‌ನಲ್ಲಿ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಸಾಕ್ಷ್ಯ ನಾಶ ಮತ್ತು ಕಟ್ಟುಕಥೆಗಾಗಿ ಹೊಸ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ. ಆಗ ಸಬ್ ಇನ್ಸ್ಪೆಕ್ಟರ್ ಆಗಿದ್ದ ಗುರುದೇವ್ ಸಿಂಗ್ ಅವರು ಈಗ ನಿಧನರಾಗಿದ್ದಾರೆ.

ಪಂಜಾಬ್ ಮತ್ತು ಹರಿಯಾಣ ಹೈಕೋರ್ಟಿನ ಹಿರಿಯ ವಕೀಲ ಪ್ರದೀಪ್ ವಿರ್ಕ್ ಅವರು ಪ್ರಕರಣವನ್ನು ಪಟ್ಟುಬಿಡದೆ ಮುಂದುವರಿಸಿದ್ದಕ್ಕಾಗಿ ಮೃತನ ಕುಟುಂಬವನ್ನು ಶ್ಲಾಘಿಸಿದ್ದಾರೆ. ‘ಈ ಪ್ರಕರಣವನ್ನು ಮುಂದುವರಿಸಿದ ಕೀರ್ತಿ ಈ ಕುಟುಂಬಕ್ಕೆ ಸಲ್ಲುತ್ತದೆ, ಕುಟುಂಬವು ಹಾಗೆ ಮಾಡಿದಾಗ ಮಾತ್ರ ವಕೀಲರು ಪ್ರಕರಣದಲ್ಲಿ ಹೋರಾಡಬಹುದು. ನೀವು ಪ್ರಕರಣವನ್ನು ಮುಂದುವರಿಸಿದರೆ ದೇವರೂ ನ್ಯಾಯ ನೀಡುತ್ತಾನೆ’ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ; ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗುವುದು; ಸಂಸತ್ ಸದಸ್ಯರಿಗೆ ಪತ್ರ ಬರೆದ ಸ್ಪೀಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...