Homeಫ್ಯಾಕ್ಟ್‌ಚೆಕ್Fact Check: ರಾಮ ಭಕ್ತರ ಮೇಲೆ ದಾಳಿ ಮಾಡಿದವರನ್ನು ಪೊಲೀಸರು ಮನೆಗೆ ನುಗ್ಗಿ ಎಳೆದೊಯ್ದಿದ್ದಾರೆ ಎಂದು...

Fact Check: ರಾಮ ಭಕ್ತರ ಮೇಲೆ ದಾಳಿ ಮಾಡಿದವರನ್ನು ಪೊಲೀಸರು ಮನೆಗೆ ನುಗ್ಗಿ ಎಳೆದೊಯ್ದಿದ್ದಾರೆ ಎಂದು ಹಳೆಯ ವಿಡಿಯೋ ಹಂಚಿಕೆ

- Advertisement -
- Advertisement -

ಮುಂಬೈನ ಮೀರಾ ರಸ್ತೆಯಲ್ಲಿ ರಾಮ ಮಂದಿರದ ಉದ್ಘಾಟನೆಯಂದು ರ್‍ಯಾಲಿ ನಡೆಸುತ್ತಿದ್ದವರ ಮೇಲೆ ದಾಳಿ ಮಾಡಿದವರನ್ನು ಪೊಲೀಸರು ಮನೆಗೆ ನುಗ್ಗಿ ಎಳೆದೊಯ್ದಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದೆ.

ಹಲವು ಸಾಮಾಜಿಕ ಜಾಲತಾಣ ಬಳಕೆದಾರರು ಈ ವಿಡಿಯೋವನ್ನು ಹಂಚಿಕೊಂಡು “ಮುಂಬೈನ ಮೀರಾ ನಾಯರ್ ಪ್ರದೇಶದಲ್ಲಿ ಜನವರಿ 22ರಂದು ರಾಮ ಯಾತ್ರೆ ಮೇಲೆ ದಾಳಿ ಮಾಡಿದವರನ್ನುಅವರ ಮನೆಯಿಂದ ಎಳೆದೊಯ್ಯಲಾಗಿದೆ. ಇದು ತುಂಬಾ ಹೆಮ್ಮೆಯ ಸಂಗತಿ. ಈಗ ಅವರಿಗೆ ಉತ್ತಮ ಬಹುಮಾನ ಸಿಗಲಿದೆ” ಎಂದು ಬರೆದುಕೊಂಡಿದ್ದಾರೆ.

ಮೀರಾ ರಸ್ತೆಯಲ್ಲಿ ರಾಮ ಭಕ್ತರ ಯಾತ್ರೆ ಮೇಲೆ ದಾಳಿ ಮಾಡಿದವರು ಮುಸ್ಲಿಮರು. ಪೊಲೀಸರು ಮುಸ್ಲಿಮರ ಮನೆಗಳಿಗೆ ನುಗ್ಗಿ ಎಳೆದೊಯ್ದಿದ್ದಾರೆ ಎಂಬರ್ಥದಲ್ಲಿ ಸುದ್ದಿ ಹಂಚಿಕೊಳ್ಳಲಾಗ್ತಿದೆ.

ಫ್ಯಾಕ್ಟ್ ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ಪರಿಶೀಲಿಸಲು ನಾವು ಮೊದಲು ಗೂಗಲ್ ರಿವರ್ಸ್‌ ಇಮೇಜ್‌ನಲ್ಲಿ ಹುಡುಕಾಡಿದ್ದೇವೆ. ಈ ವೇಳೆ ಅನೇಕ ಎಕ್ಸ್‌ ಖಾತೆಗಳಲ್ಲಿ ಈ ವಿಡಿಯೋ ಫೋಸ್ಟ್‌ ಆಗಿರುವುದು ಕಂಡು ಬಂದಿದೆ. ಈ ಪೈಕಿ ಆಗಸ್ಟ್‌ 25,2022ರಂದು ಬೆಳಿಗ್ಗೆ 7:38 ಗಂಟೆಗೆ ಎನ್‌ಡಿಟಿವಿ ಈ ವಿಡಿಯೋ ಪೋಸ್ಟ್ ಮಾಡಿತ್ತು.

ವಿಡಿಯೋದಲ್ಲಿ “ತೆಲಂಗಾಣದ ಬಿಜೆಪಿ ಶಾಸಕ ಟಿ. ರಾಜಾ ಸಿಂಗ್ ಪ್ರವಾದಿ ಮುಹಮ್ಮದರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿರುವುದುನ್ನು ಖಂಡಿಸಿ ಹೈದರಾಬಾದ್‌ನ ಶಾಲಿಬಂದಾದಲ್ಲಿ ಜನರು ಜಮಾಯಿಸಿದ್ದರು. ಅವರನ್ನು ಪೊಲೀಸರು ಚದುರಿಸಿದ್ದಾರೆ” ಎಂದು ಬರೆದುಕೊಂಡಿತ್ತು.

ಒಂದು ವರ್ಷದ ಹಿಂದೆ ಎನ್‌ಡಿವಿಯ ಯೂಟ್ಯೂಬ್‌ ಚಾನೆಲ್‌ನಲ್ಲೂ ಈ ವಿಡಿಯೋ ಅಪ್ಲೋಡ್ ಮಾಡಲಾಗಿತ್ತು. ಅದರಲ್ಲಿಯೂ ಹೈದರಾಬಾದ್‌ನಲ್ಲಿ ರಾಜಾಸಿಂಗ್ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಜನರನ್ನು ಪೊಲೀಸರು ಲಾಠಿಚಾರ್ಜ್‌ ಮಾಡಿ ಚದುರಿಸಿದ್ದಾರೆ ಎಂದು ತಿಳಿಸಿತ್ತು.

ಆಗಸ್ಟ್‌ 25,2022ರಂದಯ ‘Paul Oommen’ಎಂಬ ಎಕ್ಸ್‌ ಖಾತೆಯಲ್ಲೂ ಈ ವಿಡಿಯೋ ಪೋಸ್ಟ್‌ ಮಾಡಿ, “ಹೈದರಾಬಾದ್‌ನ ಓಲ್ಡ್‌ ಸಿಟಿಯಲ್ಲಿ ಹಿಂಸಾತ್ಮಕ ಪೊಲೀಸ್‌ಗಿರಿ ಮುಂದುವರೆದಿದೆ. ಯುವಕರನ್ನು ಅವರ ಮನೆಗೆ ನುಗ್ಗಿ ಎಳೆದೊಯ್ಯಲಾಗಿದೆ” ಎಂದು ಬರೆದುಕೊಳ್ಳಲಾಗಿತ್ತು.

ಇನ್ನೂ ಹೆಚ್ಚಿನ ಸಾಕ್ಷ್ಯ ನೀಡುವುದಾದರೆ, ವೈರಲ್ ವಿಡಿಯೋದಲ್ಲಿ ಕಾಣಿಸಿರುತ್ತಿರುವ ಪೊಲೀಸ್‌ ಜೀಪ್‌ನ ನಂಬರ್‌ ಪ್ಲೇಟ್‌ನಲ್ಲಿ ತೆಲಂಗಾಣದ ‘TS’ನೋಡಬಹುದು.

ನಮ್ಮ ಪರಿಶೀಲನೆಯಿಂದ ವೈರಲ್ ವಿಡಿಯೋ ಮುಂಬೈನ ಮೀರಾ ರಸ್ತೆಯಲ್ಲಿ ರಾಮ ಯಾತ್ರೆಯ ಮೇಲೆ ನಡೆದ ದಾಳಿಯದ್ದಲ್ಲ. ಅದು ಹೈದರಾಬಾದ್‌ನಲ್ಲಿ 2022ರಲ್ಲಿ ನಡೆದ ಘಟನೆಯದ್ದು ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Fact Check: ಮುಂಬೈ ರೈಲ್ವೆ ನಿಲ್ದಾಣಕ್ಕೆ ಬೆಂಕಿ ಹಚ್ಚಲಾಗಿದೆ ಎಂದು ಹಳೆಯ ವಿಡಿಯೋ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...