Homeಫ್ಯಾಕ್ಟ್‌ಚೆಕ್Fact Check: ರಾಮ ಭಕ್ತರ ಮೇಲೆ ದಾಳಿ ಮಾಡಿದವರನ್ನು ಪೊಲೀಸರು ಮನೆಗೆ ನುಗ್ಗಿ ಎಳೆದೊಯ್ದಿದ್ದಾರೆ ಎಂದು...

Fact Check: ರಾಮ ಭಕ್ತರ ಮೇಲೆ ದಾಳಿ ಮಾಡಿದವರನ್ನು ಪೊಲೀಸರು ಮನೆಗೆ ನುಗ್ಗಿ ಎಳೆದೊಯ್ದಿದ್ದಾರೆ ಎಂದು ಹಳೆಯ ವಿಡಿಯೋ ಹಂಚಿಕೆ

- Advertisement -
- Advertisement -

ಮುಂಬೈನ ಮೀರಾ ರಸ್ತೆಯಲ್ಲಿ ರಾಮ ಮಂದಿರದ ಉದ್ಘಾಟನೆಯಂದು ರ್‍ಯಾಲಿ ನಡೆಸುತ್ತಿದ್ದವರ ಮೇಲೆ ದಾಳಿ ಮಾಡಿದವರನ್ನು ಪೊಲೀಸರು ಮನೆಗೆ ನುಗ್ಗಿ ಎಳೆದೊಯ್ದಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದೆ.

ಹಲವು ಸಾಮಾಜಿಕ ಜಾಲತಾಣ ಬಳಕೆದಾರರು ಈ ವಿಡಿಯೋವನ್ನು ಹಂಚಿಕೊಂಡು “ಮುಂಬೈನ ಮೀರಾ ನಾಯರ್ ಪ್ರದೇಶದಲ್ಲಿ ಜನವರಿ 22ರಂದು ರಾಮ ಯಾತ್ರೆ ಮೇಲೆ ದಾಳಿ ಮಾಡಿದವರನ್ನುಅವರ ಮನೆಯಿಂದ ಎಳೆದೊಯ್ಯಲಾಗಿದೆ. ಇದು ತುಂಬಾ ಹೆಮ್ಮೆಯ ಸಂಗತಿ. ಈಗ ಅವರಿಗೆ ಉತ್ತಮ ಬಹುಮಾನ ಸಿಗಲಿದೆ” ಎಂದು ಬರೆದುಕೊಂಡಿದ್ದಾರೆ.

ಮೀರಾ ರಸ್ತೆಯಲ್ಲಿ ರಾಮ ಭಕ್ತರ ಯಾತ್ರೆ ಮೇಲೆ ದಾಳಿ ಮಾಡಿದವರು ಮುಸ್ಲಿಮರು. ಪೊಲೀಸರು ಮುಸ್ಲಿಮರ ಮನೆಗಳಿಗೆ ನುಗ್ಗಿ ಎಳೆದೊಯ್ದಿದ್ದಾರೆ ಎಂಬರ್ಥದಲ್ಲಿ ಸುದ್ದಿ ಹಂಚಿಕೊಳ್ಳಲಾಗ್ತಿದೆ.

ಫ್ಯಾಕ್ಟ್ ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ಪರಿಶೀಲಿಸಲು ನಾವು ಮೊದಲು ಗೂಗಲ್ ರಿವರ್ಸ್‌ ಇಮೇಜ್‌ನಲ್ಲಿ ಹುಡುಕಾಡಿದ್ದೇವೆ. ಈ ವೇಳೆ ಅನೇಕ ಎಕ್ಸ್‌ ಖಾತೆಗಳಲ್ಲಿ ಈ ವಿಡಿಯೋ ಫೋಸ್ಟ್‌ ಆಗಿರುವುದು ಕಂಡು ಬಂದಿದೆ. ಈ ಪೈಕಿ ಆಗಸ್ಟ್‌ 25,2022ರಂದು ಬೆಳಿಗ್ಗೆ 7:38 ಗಂಟೆಗೆ ಎನ್‌ಡಿಟಿವಿ ಈ ವಿಡಿಯೋ ಪೋಸ್ಟ್ ಮಾಡಿತ್ತು.

ವಿಡಿಯೋದಲ್ಲಿ “ತೆಲಂಗಾಣದ ಬಿಜೆಪಿ ಶಾಸಕ ಟಿ. ರಾಜಾ ಸಿಂಗ್ ಪ್ರವಾದಿ ಮುಹಮ್ಮದರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿರುವುದುನ್ನು ಖಂಡಿಸಿ ಹೈದರಾಬಾದ್‌ನ ಶಾಲಿಬಂದಾದಲ್ಲಿ ಜನರು ಜಮಾಯಿಸಿದ್ದರು. ಅವರನ್ನು ಪೊಲೀಸರು ಚದುರಿಸಿದ್ದಾರೆ” ಎಂದು ಬರೆದುಕೊಂಡಿತ್ತು.

ಒಂದು ವರ್ಷದ ಹಿಂದೆ ಎನ್‌ಡಿವಿಯ ಯೂಟ್ಯೂಬ್‌ ಚಾನೆಲ್‌ನಲ್ಲೂ ಈ ವಿಡಿಯೋ ಅಪ್ಲೋಡ್ ಮಾಡಲಾಗಿತ್ತು. ಅದರಲ್ಲಿಯೂ ಹೈದರಾಬಾದ್‌ನಲ್ಲಿ ರಾಜಾಸಿಂಗ್ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಜನರನ್ನು ಪೊಲೀಸರು ಲಾಠಿಚಾರ್ಜ್‌ ಮಾಡಿ ಚದುರಿಸಿದ್ದಾರೆ ಎಂದು ತಿಳಿಸಿತ್ತು.

ಆಗಸ್ಟ್‌ 25,2022ರಂದಯ ‘Paul Oommen’ಎಂಬ ಎಕ್ಸ್‌ ಖಾತೆಯಲ್ಲೂ ಈ ವಿಡಿಯೋ ಪೋಸ್ಟ್‌ ಮಾಡಿ, “ಹೈದರಾಬಾದ್‌ನ ಓಲ್ಡ್‌ ಸಿಟಿಯಲ್ಲಿ ಹಿಂಸಾತ್ಮಕ ಪೊಲೀಸ್‌ಗಿರಿ ಮುಂದುವರೆದಿದೆ. ಯುವಕರನ್ನು ಅವರ ಮನೆಗೆ ನುಗ್ಗಿ ಎಳೆದೊಯ್ಯಲಾಗಿದೆ” ಎಂದು ಬರೆದುಕೊಳ್ಳಲಾಗಿತ್ತು.

ಇನ್ನೂ ಹೆಚ್ಚಿನ ಸಾಕ್ಷ್ಯ ನೀಡುವುದಾದರೆ, ವೈರಲ್ ವಿಡಿಯೋದಲ್ಲಿ ಕಾಣಿಸಿರುತ್ತಿರುವ ಪೊಲೀಸ್‌ ಜೀಪ್‌ನ ನಂಬರ್‌ ಪ್ಲೇಟ್‌ನಲ್ಲಿ ತೆಲಂಗಾಣದ ‘TS’ನೋಡಬಹುದು.

ನಮ್ಮ ಪರಿಶೀಲನೆಯಿಂದ ವೈರಲ್ ವಿಡಿಯೋ ಮುಂಬೈನ ಮೀರಾ ರಸ್ತೆಯಲ್ಲಿ ರಾಮ ಯಾತ್ರೆಯ ಮೇಲೆ ನಡೆದ ದಾಳಿಯದ್ದಲ್ಲ. ಅದು ಹೈದರಾಬಾದ್‌ನಲ್ಲಿ 2022ರಲ್ಲಿ ನಡೆದ ಘಟನೆಯದ್ದು ಎಂದು ತಿಳಿದು ಬಂದಿದೆ.

ಇದನ್ನೂ ಓದಿ: Fact Check: ಮುಂಬೈ ರೈಲ್ವೆ ನಿಲ್ದಾಣಕ್ಕೆ ಬೆಂಕಿ ಹಚ್ಚಲಾಗಿದೆ ಎಂದು ಹಳೆಯ ವಿಡಿಯೋ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...