Homeಕರೋನಾ ತಲ್ಲಣದೆಹಲಿಯ 17 ಜನರಿರುವ ಕುಟುಂಬ ಒಂದೇ ಮನೆಯಲ್ಲಿದ್ದು ಕೊರೊನಾವನ್ನು ಗೆದ್ದಿತು...!

ದೆಹಲಿಯ 17 ಜನರಿರುವ ಕುಟುಂಬ ಒಂದೇ ಮನೆಯಲ್ಲಿದ್ದು ಕೊರೊನಾವನ್ನು ಗೆದ್ದಿತು…!

ನಾವು ತುಂಬಾ ಜಾಗರೂಕರಾಗಿರುವುದರಿಂದ, ಕೊರೊನಾ ವೈರಸ್ ನಮಗೆ ಬರುವುದಿಲ್ಲ ಎಂದು ನಾವು ವಿಶ್ವಾಸದಿಂದ ಇದ್ದೆವು, ಆದರೆ ಒಂದೊಂದಾಗಿ, ಎಲ್ಲರಿಗೂ ಜ್ವರ ಪ್ರಾರಂಭವಾಯಿತು ಎಂದು ಮೀನಾ ದೇವಿ ಹೇಳುತ್ತಾರೆ.

- Advertisement -
- Advertisement -

ದೆಹಲಿಯ 17 ಜನರಿರುವ ಅವಿಭಜಿತ ಕುಟುಂಬವೊಂದು ಒಂದೇ ಮನೆಯಲ್ಲಿದ್ದು ಕೊರೊನಾ ಸೋಂಕಿನ ವಿರುದ್ದ ಗೆದ್ದಿದ್ದಾರೆ.

ಕುಟುಂಬದ 3  ತಿಂಗಳ ಮಗುವಿನಿಂದ ಹಿಡಿದು 90  ವರ್ಷದ ವರೆಗಿನ ಒಟ್ಟು 17 ಮಂದಿ ಸದಸ್ಯರಲ್ಲಿ ಹೆಚ್ಚನವರು ಕೊರೊನಾ ಪಾಸಿಟಿವ್ ಆಗಿದ್ದರೂ, ಯಾವುದೇ ಜೀವ ಹಾನಿಯಾಗದೇ ಕೊರೊನಾ ವಿರುದ್ದ ಗೆದ್ದಿದ್ದಾರೆ.

ಕುಟುಂಬದ ಜನರಲ್ಲಿ ಒಬ್ಬರು ಕೊರೊನಾ ಪಾಸಿಟಿವ್ ಆದಾಗ ಯಾರನ್ನಾದರೂ ಕಳೆದು ಕೊಳ್ಳುತ್ತೇವೆ ಎಂದು ನಮಗೆ ಖಚಿತವಾಗಿತ್ತು ಎಂದು ಕುಟುಂಬದ ಸದಸ್ಯರಾದ ಮುಕುಲ್ ಗಾರ್ಗ್ ಹೇಳುತ್ತಾರೆ.

ಮಾರ್ಚ್‌ನಲ್ಲಿ ಲಾಕ್‌ಡೌನ್ ಆದಾಗ ಕುಟುಂಬದ ಸದಸ್ಯರು ಎಚ್ಚರಿಕೆಯನ್ನು ಪಾಲಿಸಿದ್ದರೂ ಕುಟುಂಬದ 11 ಸದಸ್ಯರಲ್ಲಿ ಕೊರೊನಾ ಸೋಂಕು ಇರುವುದು ದೃಡಪಟ್ಟಿತು. ಅವರಲ್ಲಿ ಮುಕುಲ್ ಗಾರ್ಗ್‌ ಅವರ 90 ವರ್ಷದ ಹಾಸಿಗೆ ಹಿಡಿದ ಅಜ್ಜ; 87 ವರ್ಷದ ಅಜ್ಜಿ; ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಹೊಂದಿರುವ 62 ವರ್ಷದ ತಂದೆ ಹಾಗೂ 60 ವರ್ಷದ ಚಿಕ್ಕಪ್ಪ ಸೇರಿದ್ದರು.

“ನಾವು ತುಂಬಾ ಜಾಗರೂಕರಾಗಿರುವುದರಿಂದ, ಕೊರೊನಾ ವೈರಸ್ ನಮಗೆ ಬರುವುದಿಲ್ಲ ಎಂದು ವಿಶ್ವಾಸದಿಂದ ಇದ್ದೆವು, ಆದರೆ ಒಂದೊಂದಾಗಿ, ಎಲ್ಲರಿಗೂ ಜ್ವರ ಪ್ರಾರಂಭವಾಯಿತು.” ಎಂದು ಮುಕುಲ್ ಅವರ ತಾಯಿ ಮೀನಾ ದೇವಿ ಹೇಳುತ್ತಾರೆ.

ಜ್ವರವೂ ಹೊರಟು ಹೋಗುತ್ತದೆ ಎಂದು ಭಾವಸಿ ಅವರು ಪರೀಕ್ಷೆಗೆ ಹಿಂಜರಿದಿದ್ದರು, ಅಲ್ಲದೆ ಇದೆ ವೇಳೆ ಕೊರೊನಾ ಪಾಸಿಟಿವ್ ಎಂದ ತಿಳಿದು ಬಂದರೆ ಸಮಾಜದಿಂದ ಬಹಿಷ್ಕಾರಕ್ಕೆ ಒಳಗಾಗುತ್ತಾರೆ ಎಂದು ಅವರೆಲ್ಲರೂ ಹೆದರಿದ್ದರಿಂದ ಮನೆಯ ಒಳಗಡೆಯೆ ಸಾಂಸ್ಥಿಕ ಸಂಪರ್ಕತಡೆಯನ್ನು ಮಾಡಿದ್ದರು. ಕುಟುಂಬದ ಪ್ರತಿಯೊಬ್ಬರೂ ತಮ್ಮ ಕೋಣೆಗಳಲ್ಲಿ ತಮ್ಮ ಮಹಡಿಗಳಲ್ಲೇ ಪ್ರತ್ಯೇಕವಾಗಿರಲು ಪ್ರಾರಂಭಿಸಿದ್ದರು.

ಆದರೆ ಮುಕುಲ್ ಚಿಕ್ಕಮ್ಮ ಅನಿತಾ ಅವರಿಗೆ ಐದು ದಿನಗಳ ಜ್ವರದ ನಂತರ ಉಸಿರಾಡಲು ತೊಂದರೆಯಾಗಿದ್ದರಿಂದ ಅವರು ಕೊರೊನಾ ವೈರಸ್ ಪರೀಕ್ಷೆ ನಡೆಸಿದ್ದರು. ಫಲಿತಾಂಶವು ಕೊರೊನಾ ಪಾಸಿಟಿವ್ ಆಗಿತ್ತು. ನಂತರ ಅನಿತಾ ಸ್ಥಿತಿ ಹದಗೆಟ್ಟಾಗ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಆದರೆ ವಿಶೇಷವೇನೆಂದರೆ ಕುಟುಂಬದ 90 ವರ್ಷದ ಶ್ಯಾಮ್ಲಾಲ್ ಅವರು ಕೊರೊನಾ ಪಾಸಿಟಿವ್ ಆಗಿದ್ದರೂ ಅವರಲ್ಲಿ ಯಾವುದೇ ರೋಗಲಕ್ಷಣಗಳು ಇರಲಿಲ್ಲ. ಅವರ 87 ವರ್ಷದ ಬೀನಾಗೆ ಜ್ವರ, ಕೆಮ್ಮು ಮತ್ತು ತಲೆನೋವು ಒಂದು ತಿಂಗಳು ಮುಂದುವರೆಯಿತು, ಆದರೆ ಅವರನ್ನು ಆಸ್ಪತ್ರೆಗೆ ದಾಖಸಿಸುವ ಹಾಗೆ ಪರಿಸ್ಥಿತಿ ಹದಗೆಡಲಿಲ್ಲ. 6 ವರ್ಷದೊಳಗಿನ ನಾಲ್ಕು ಮಕ್ಕಳಿಗೆ ಕೊರೊನಾ ಸೋಂಕಿರಲಿಲ್ಲ.

ಮುಕುಲ್ ಅವರ ತಾಯಿ ಮೀನಾಗೆ ಕೇವಲ ಜ್ವರ, ಕೆಮ್ಮು, ತಲೆನೋವು ಮತ್ತು ದೇಹದ ಭಾಗಗಳ ನೋವುಗಳು ಒಳಗೊಂಡತ್ತು, ಅದು ಸುಮಾರು ಎರಡು ವಾರಗಳ ಕಾಲ ಇತ್ತು ಎಂದು ತಿಳಿದುಬಂದಿದೆ.

ಮುಕುಲ್ ಅವರ ಚಿಕ್ಕಮ್ಮ ಅನಿತಾ ಅವರು ಆಸ್ಪತ್ರೆಯಲ್ಲಿ 10 ದಿನಗಳಿದ್ದು ಮನೆಗೆ ಮರಳಿದರು. ಅಲ್ಲಿ ಅವರು ಆಮ್ಲಜನಕ ಚಿಕಿತ್ಸೆಯನ್ನು ಪಡೆದಿದ್ದರು.

ಕುಟುಂಬವು ಮೊದಲಿಗೆ ಹೇಗೆ ಸೋಂಕಿಗೆ ಒಳಗಾಯಿತು ಎಂಬುದು ಇನ್ನೂ ನಿಗೂಡವಾಗಿದೆ. ದಿನಸಿ ವಸ್ತುಗಳನ್ನು ಖರೀದಿಸುವಾಗ ಮುಕುಲ್ ಅವರ ಚಿಕ್ಕಪ್ಪ ವೈರಸ್‌ಗೆ ತುತ್ತಾಗಿರಬಹುದು ಎಂದು ಅವರು ಊಹಿಸಿದ್ದಾರೆ. ಅವರು ಅನಾರೋಗ್ಯಕ್ಕೆ ಒಳಗಾದ ಸಮಯದಲ್ಲಿ, ಆ ಪ್ರದೇಶದಲ್ಲಿ ಬೇರೆ ಯಾವುದೇ ಪ್ರಕರಣಗಳು ಇರಲಿಲ್ಲ ಎನ್ನಲಾಗಿದೆ.

ಜೂನ್ ಆರಂಭದಲ್ಲಿ, ಮನೆಯ ಎಲ್ಲರೂ ಕೊರೊನಾ ನೆಗೆಟಿವ್ ಪರೀಕ್ಷಿಸಿದ ನಂತರ ಹಿಂದಿನಂತೆ ಮತ್ತೇ ಒಟ್ಟಿಗೆ ಕೂತು ಊಟ ಮಾಡುವಂತಾಯಿತು ಎಂದು ಕುಟುಂಬದ ಸದಸ್ಯರು ಸಂತೋಷ ವ್ಯಕ್ತಪಡಿಸಿದ್ದಾರೆ.


ಓದಿ: ದೆಹಲಿಯಲ್ಲಿ 1 ಲಕ್ಷ ದಾಟಿದ ಕೊರೊನಾ ಪ್ರಕರಣಗಳು: ಭಯಪಡಬೇಡಿ ಎಂದ ಕೇಜ್ರಿವಾಲ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...