Homeಕರೋನಾ ತಲ್ಲಣದೆಹಲಿಯ 17 ಜನರಿರುವ ಕುಟುಂಬ ಒಂದೇ ಮನೆಯಲ್ಲಿದ್ದು ಕೊರೊನಾವನ್ನು ಗೆದ್ದಿತು...!

ದೆಹಲಿಯ 17 ಜನರಿರುವ ಕುಟುಂಬ ಒಂದೇ ಮನೆಯಲ್ಲಿದ್ದು ಕೊರೊನಾವನ್ನು ಗೆದ್ದಿತು…!

ನಾವು ತುಂಬಾ ಜಾಗರೂಕರಾಗಿರುವುದರಿಂದ, ಕೊರೊನಾ ವೈರಸ್ ನಮಗೆ ಬರುವುದಿಲ್ಲ ಎಂದು ನಾವು ವಿಶ್ವಾಸದಿಂದ ಇದ್ದೆವು, ಆದರೆ ಒಂದೊಂದಾಗಿ, ಎಲ್ಲರಿಗೂ ಜ್ವರ ಪ್ರಾರಂಭವಾಯಿತು ಎಂದು ಮೀನಾ ದೇವಿ ಹೇಳುತ್ತಾರೆ.

- Advertisement -
- Advertisement -

ದೆಹಲಿಯ 17 ಜನರಿರುವ ಅವಿಭಜಿತ ಕುಟುಂಬವೊಂದು ಒಂದೇ ಮನೆಯಲ್ಲಿದ್ದು ಕೊರೊನಾ ಸೋಂಕಿನ ವಿರುದ್ದ ಗೆದ್ದಿದ್ದಾರೆ.

ಕುಟುಂಬದ 3  ತಿಂಗಳ ಮಗುವಿನಿಂದ ಹಿಡಿದು 90  ವರ್ಷದ ವರೆಗಿನ ಒಟ್ಟು 17 ಮಂದಿ ಸದಸ್ಯರಲ್ಲಿ ಹೆಚ್ಚನವರು ಕೊರೊನಾ ಪಾಸಿಟಿವ್ ಆಗಿದ್ದರೂ, ಯಾವುದೇ ಜೀವ ಹಾನಿಯಾಗದೇ ಕೊರೊನಾ ವಿರುದ್ದ ಗೆದ್ದಿದ್ದಾರೆ.

ಕುಟುಂಬದ ಜನರಲ್ಲಿ ಒಬ್ಬರು ಕೊರೊನಾ ಪಾಸಿಟಿವ್ ಆದಾಗ ಯಾರನ್ನಾದರೂ ಕಳೆದು ಕೊಳ್ಳುತ್ತೇವೆ ಎಂದು ನಮಗೆ ಖಚಿತವಾಗಿತ್ತು ಎಂದು ಕುಟುಂಬದ ಸದಸ್ಯರಾದ ಮುಕುಲ್ ಗಾರ್ಗ್ ಹೇಳುತ್ತಾರೆ.

ಮಾರ್ಚ್‌ನಲ್ಲಿ ಲಾಕ್‌ಡೌನ್ ಆದಾಗ ಕುಟುಂಬದ ಸದಸ್ಯರು ಎಚ್ಚರಿಕೆಯನ್ನು ಪಾಲಿಸಿದ್ದರೂ ಕುಟುಂಬದ 11 ಸದಸ್ಯರಲ್ಲಿ ಕೊರೊನಾ ಸೋಂಕು ಇರುವುದು ದೃಡಪಟ್ಟಿತು. ಅವರಲ್ಲಿ ಮುಕುಲ್ ಗಾರ್ಗ್‌ ಅವರ 90 ವರ್ಷದ ಹಾಸಿಗೆ ಹಿಡಿದ ಅಜ್ಜ; 87 ವರ್ಷದ ಅಜ್ಜಿ; ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಹೊಂದಿರುವ 62 ವರ್ಷದ ತಂದೆ ಹಾಗೂ 60 ವರ್ಷದ ಚಿಕ್ಕಪ್ಪ ಸೇರಿದ್ದರು.

“ನಾವು ತುಂಬಾ ಜಾಗರೂಕರಾಗಿರುವುದರಿಂದ, ಕೊರೊನಾ ವೈರಸ್ ನಮಗೆ ಬರುವುದಿಲ್ಲ ಎಂದು ವಿಶ್ವಾಸದಿಂದ ಇದ್ದೆವು, ಆದರೆ ಒಂದೊಂದಾಗಿ, ಎಲ್ಲರಿಗೂ ಜ್ವರ ಪ್ರಾರಂಭವಾಯಿತು.” ಎಂದು ಮುಕುಲ್ ಅವರ ತಾಯಿ ಮೀನಾ ದೇವಿ ಹೇಳುತ್ತಾರೆ.

ಜ್ವರವೂ ಹೊರಟು ಹೋಗುತ್ತದೆ ಎಂದು ಭಾವಸಿ ಅವರು ಪರೀಕ್ಷೆಗೆ ಹಿಂಜರಿದಿದ್ದರು, ಅಲ್ಲದೆ ಇದೆ ವೇಳೆ ಕೊರೊನಾ ಪಾಸಿಟಿವ್ ಎಂದ ತಿಳಿದು ಬಂದರೆ ಸಮಾಜದಿಂದ ಬಹಿಷ್ಕಾರಕ್ಕೆ ಒಳಗಾಗುತ್ತಾರೆ ಎಂದು ಅವರೆಲ್ಲರೂ ಹೆದರಿದ್ದರಿಂದ ಮನೆಯ ಒಳಗಡೆಯೆ ಸಾಂಸ್ಥಿಕ ಸಂಪರ್ಕತಡೆಯನ್ನು ಮಾಡಿದ್ದರು. ಕುಟುಂಬದ ಪ್ರತಿಯೊಬ್ಬರೂ ತಮ್ಮ ಕೋಣೆಗಳಲ್ಲಿ ತಮ್ಮ ಮಹಡಿಗಳಲ್ಲೇ ಪ್ರತ್ಯೇಕವಾಗಿರಲು ಪ್ರಾರಂಭಿಸಿದ್ದರು.

ಆದರೆ ಮುಕುಲ್ ಚಿಕ್ಕಮ್ಮ ಅನಿತಾ ಅವರಿಗೆ ಐದು ದಿನಗಳ ಜ್ವರದ ನಂತರ ಉಸಿರಾಡಲು ತೊಂದರೆಯಾಗಿದ್ದರಿಂದ ಅವರು ಕೊರೊನಾ ವೈರಸ್ ಪರೀಕ್ಷೆ ನಡೆಸಿದ್ದರು. ಫಲಿತಾಂಶವು ಕೊರೊನಾ ಪಾಸಿಟಿವ್ ಆಗಿತ್ತು. ನಂತರ ಅನಿತಾ ಸ್ಥಿತಿ ಹದಗೆಟ್ಟಾಗ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಆದರೆ ವಿಶೇಷವೇನೆಂದರೆ ಕುಟುಂಬದ 90 ವರ್ಷದ ಶ್ಯಾಮ್ಲಾಲ್ ಅವರು ಕೊರೊನಾ ಪಾಸಿಟಿವ್ ಆಗಿದ್ದರೂ ಅವರಲ್ಲಿ ಯಾವುದೇ ರೋಗಲಕ್ಷಣಗಳು ಇರಲಿಲ್ಲ. ಅವರ 87 ವರ್ಷದ ಬೀನಾಗೆ ಜ್ವರ, ಕೆಮ್ಮು ಮತ್ತು ತಲೆನೋವು ಒಂದು ತಿಂಗಳು ಮುಂದುವರೆಯಿತು, ಆದರೆ ಅವರನ್ನು ಆಸ್ಪತ್ರೆಗೆ ದಾಖಸಿಸುವ ಹಾಗೆ ಪರಿಸ್ಥಿತಿ ಹದಗೆಡಲಿಲ್ಲ. 6 ವರ್ಷದೊಳಗಿನ ನಾಲ್ಕು ಮಕ್ಕಳಿಗೆ ಕೊರೊನಾ ಸೋಂಕಿರಲಿಲ್ಲ.

ಮುಕುಲ್ ಅವರ ತಾಯಿ ಮೀನಾಗೆ ಕೇವಲ ಜ್ವರ, ಕೆಮ್ಮು, ತಲೆನೋವು ಮತ್ತು ದೇಹದ ಭಾಗಗಳ ನೋವುಗಳು ಒಳಗೊಂಡತ್ತು, ಅದು ಸುಮಾರು ಎರಡು ವಾರಗಳ ಕಾಲ ಇತ್ತು ಎಂದು ತಿಳಿದುಬಂದಿದೆ.

ಮುಕುಲ್ ಅವರ ಚಿಕ್ಕಮ್ಮ ಅನಿತಾ ಅವರು ಆಸ್ಪತ್ರೆಯಲ್ಲಿ 10 ದಿನಗಳಿದ್ದು ಮನೆಗೆ ಮರಳಿದರು. ಅಲ್ಲಿ ಅವರು ಆಮ್ಲಜನಕ ಚಿಕಿತ್ಸೆಯನ್ನು ಪಡೆದಿದ್ದರು.

ಕುಟುಂಬವು ಮೊದಲಿಗೆ ಹೇಗೆ ಸೋಂಕಿಗೆ ಒಳಗಾಯಿತು ಎಂಬುದು ಇನ್ನೂ ನಿಗೂಡವಾಗಿದೆ. ದಿನಸಿ ವಸ್ತುಗಳನ್ನು ಖರೀದಿಸುವಾಗ ಮುಕುಲ್ ಅವರ ಚಿಕ್ಕಪ್ಪ ವೈರಸ್‌ಗೆ ತುತ್ತಾಗಿರಬಹುದು ಎಂದು ಅವರು ಊಹಿಸಿದ್ದಾರೆ. ಅವರು ಅನಾರೋಗ್ಯಕ್ಕೆ ಒಳಗಾದ ಸಮಯದಲ್ಲಿ, ಆ ಪ್ರದೇಶದಲ್ಲಿ ಬೇರೆ ಯಾವುದೇ ಪ್ರಕರಣಗಳು ಇರಲಿಲ್ಲ ಎನ್ನಲಾಗಿದೆ.

ಜೂನ್ ಆರಂಭದಲ್ಲಿ, ಮನೆಯ ಎಲ್ಲರೂ ಕೊರೊನಾ ನೆಗೆಟಿವ್ ಪರೀಕ್ಷಿಸಿದ ನಂತರ ಹಿಂದಿನಂತೆ ಮತ್ತೇ ಒಟ್ಟಿಗೆ ಕೂತು ಊಟ ಮಾಡುವಂತಾಯಿತು ಎಂದು ಕುಟುಂಬದ ಸದಸ್ಯರು ಸಂತೋಷ ವ್ಯಕ್ತಪಡಿಸಿದ್ದಾರೆ.


ಓದಿ: ದೆಹಲಿಯಲ್ಲಿ 1 ಲಕ್ಷ ದಾಟಿದ ಕೊರೊನಾ ಪ್ರಕರಣಗಳು: ಭಯಪಡಬೇಡಿ ಎಂದ ಕೇಜ್ರಿವಾಲ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...