Homeಕರೋನಾ ತಲ್ಲಣದೆಹಲಿಯ 17 ಜನರಿರುವ ಕುಟುಂಬ ಒಂದೇ ಮನೆಯಲ್ಲಿದ್ದು ಕೊರೊನಾವನ್ನು ಗೆದ್ದಿತು...!

ದೆಹಲಿಯ 17 ಜನರಿರುವ ಕುಟುಂಬ ಒಂದೇ ಮನೆಯಲ್ಲಿದ್ದು ಕೊರೊನಾವನ್ನು ಗೆದ್ದಿತು…!

ನಾವು ತುಂಬಾ ಜಾಗರೂಕರಾಗಿರುವುದರಿಂದ, ಕೊರೊನಾ ವೈರಸ್ ನಮಗೆ ಬರುವುದಿಲ್ಲ ಎಂದು ನಾವು ವಿಶ್ವಾಸದಿಂದ ಇದ್ದೆವು, ಆದರೆ ಒಂದೊಂದಾಗಿ, ಎಲ್ಲರಿಗೂ ಜ್ವರ ಪ್ರಾರಂಭವಾಯಿತು ಎಂದು ಮೀನಾ ದೇವಿ ಹೇಳುತ್ತಾರೆ.

- Advertisement -
- Advertisement -

ದೆಹಲಿಯ 17 ಜನರಿರುವ ಅವಿಭಜಿತ ಕುಟುಂಬವೊಂದು ಒಂದೇ ಮನೆಯಲ್ಲಿದ್ದು ಕೊರೊನಾ ಸೋಂಕಿನ ವಿರುದ್ದ ಗೆದ್ದಿದ್ದಾರೆ.

ಕುಟುಂಬದ 3  ತಿಂಗಳ ಮಗುವಿನಿಂದ ಹಿಡಿದು 90  ವರ್ಷದ ವರೆಗಿನ ಒಟ್ಟು 17 ಮಂದಿ ಸದಸ್ಯರಲ್ಲಿ ಹೆಚ್ಚನವರು ಕೊರೊನಾ ಪಾಸಿಟಿವ್ ಆಗಿದ್ದರೂ, ಯಾವುದೇ ಜೀವ ಹಾನಿಯಾಗದೇ ಕೊರೊನಾ ವಿರುದ್ದ ಗೆದ್ದಿದ್ದಾರೆ.

ಕುಟುಂಬದ ಜನರಲ್ಲಿ ಒಬ್ಬರು ಕೊರೊನಾ ಪಾಸಿಟಿವ್ ಆದಾಗ ಯಾರನ್ನಾದರೂ ಕಳೆದು ಕೊಳ್ಳುತ್ತೇವೆ ಎಂದು ನಮಗೆ ಖಚಿತವಾಗಿತ್ತು ಎಂದು ಕುಟುಂಬದ ಸದಸ್ಯರಾದ ಮುಕುಲ್ ಗಾರ್ಗ್ ಹೇಳುತ್ತಾರೆ.

ಮಾರ್ಚ್‌ನಲ್ಲಿ ಲಾಕ್‌ಡೌನ್ ಆದಾಗ ಕುಟುಂಬದ ಸದಸ್ಯರು ಎಚ್ಚರಿಕೆಯನ್ನು ಪಾಲಿಸಿದ್ದರೂ ಕುಟುಂಬದ 11 ಸದಸ್ಯರಲ್ಲಿ ಕೊರೊನಾ ಸೋಂಕು ಇರುವುದು ದೃಡಪಟ್ಟಿತು. ಅವರಲ್ಲಿ ಮುಕುಲ್ ಗಾರ್ಗ್‌ ಅವರ 90 ವರ್ಷದ ಹಾಸಿಗೆ ಹಿಡಿದ ಅಜ್ಜ; 87 ವರ್ಷದ ಅಜ್ಜಿ; ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಹೊಂದಿರುವ 62 ವರ್ಷದ ತಂದೆ ಹಾಗೂ 60 ವರ್ಷದ ಚಿಕ್ಕಪ್ಪ ಸೇರಿದ್ದರು.

“ನಾವು ತುಂಬಾ ಜಾಗರೂಕರಾಗಿರುವುದರಿಂದ, ಕೊರೊನಾ ವೈರಸ್ ನಮಗೆ ಬರುವುದಿಲ್ಲ ಎಂದು ವಿಶ್ವಾಸದಿಂದ ಇದ್ದೆವು, ಆದರೆ ಒಂದೊಂದಾಗಿ, ಎಲ್ಲರಿಗೂ ಜ್ವರ ಪ್ರಾರಂಭವಾಯಿತು.” ಎಂದು ಮುಕುಲ್ ಅವರ ತಾಯಿ ಮೀನಾ ದೇವಿ ಹೇಳುತ್ತಾರೆ.

ಜ್ವರವೂ ಹೊರಟು ಹೋಗುತ್ತದೆ ಎಂದು ಭಾವಸಿ ಅವರು ಪರೀಕ್ಷೆಗೆ ಹಿಂಜರಿದಿದ್ದರು, ಅಲ್ಲದೆ ಇದೆ ವೇಳೆ ಕೊರೊನಾ ಪಾಸಿಟಿವ್ ಎಂದ ತಿಳಿದು ಬಂದರೆ ಸಮಾಜದಿಂದ ಬಹಿಷ್ಕಾರಕ್ಕೆ ಒಳಗಾಗುತ್ತಾರೆ ಎಂದು ಅವರೆಲ್ಲರೂ ಹೆದರಿದ್ದರಿಂದ ಮನೆಯ ಒಳಗಡೆಯೆ ಸಾಂಸ್ಥಿಕ ಸಂಪರ್ಕತಡೆಯನ್ನು ಮಾಡಿದ್ದರು. ಕುಟುಂಬದ ಪ್ರತಿಯೊಬ್ಬರೂ ತಮ್ಮ ಕೋಣೆಗಳಲ್ಲಿ ತಮ್ಮ ಮಹಡಿಗಳಲ್ಲೇ ಪ್ರತ್ಯೇಕವಾಗಿರಲು ಪ್ರಾರಂಭಿಸಿದ್ದರು.

ಆದರೆ ಮುಕುಲ್ ಚಿಕ್ಕಮ್ಮ ಅನಿತಾ ಅವರಿಗೆ ಐದು ದಿನಗಳ ಜ್ವರದ ನಂತರ ಉಸಿರಾಡಲು ತೊಂದರೆಯಾಗಿದ್ದರಿಂದ ಅವರು ಕೊರೊನಾ ವೈರಸ್ ಪರೀಕ್ಷೆ ನಡೆಸಿದ್ದರು. ಫಲಿತಾಂಶವು ಕೊರೊನಾ ಪಾಸಿಟಿವ್ ಆಗಿತ್ತು. ನಂತರ ಅನಿತಾ ಸ್ಥಿತಿ ಹದಗೆಟ್ಟಾಗ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಆದರೆ ವಿಶೇಷವೇನೆಂದರೆ ಕುಟುಂಬದ 90 ವರ್ಷದ ಶ್ಯಾಮ್ಲಾಲ್ ಅವರು ಕೊರೊನಾ ಪಾಸಿಟಿವ್ ಆಗಿದ್ದರೂ ಅವರಲ್ಲಿ ಯಾವುದೇ ರೋಗಲಕ್ಷಣಗಳು ಇರಲಿಲ್ಲ. ಅವರ 87 ವರ್ಷದ ಬೀನಾಗೆ ಜ್ವರ, ಕೆಮ್ಮು ಮತ್ತು ತಲೆನೋವು ಒಂದು ತಿಂಗಳು ಮುಂದುವರೆಯಿತು, ಆದರೆ ಅವರನ್ನು ಆಸ್ಪತ್ರೆಗೆ ದಾಖಸಿಸುವ ಹಾಗೆ ಪರಿಸ್ಥಿತಿ ಹದಗೆಡಲಿಲ್ಲ. 6 ವರ್ಷದೊಳಗಿನ ನಾಲ್ಕು ಮಕ್ಕಳಿಗೆ ಕೊರೊನಾ ಸೋಂಕಿರಲಿಲ್ಲ.

ಮುಕುಲ್ ಅವರ ತಾಯಿ ಮೀನಾಗೆ ಕೇವಲ ಜ್ವರ, ಕೆಮ್ಮು, ತಲೆನೋವು ಮತ್ತು ದೇಹದ ಭಾಗಗಳ ನೋವುಗಳು ಒಳಗೊಂಡತ್ತು, ಅದು ಸುಮಾರು ಎರಡು ವಾರಗಳ ಕಾಲ ಇತ್ತು ಎಂದು ತಿಳಿದುಬಂದಿದೆ.

ಮುಕುಲ್ ಅವರ ಚಿಕ್ಕಮ್ಮ ಅನಿತಾ ಅವರು ಆಸ್ಪತ್ರೆಯಲ್ಲಿ 10 ದಿನಗಳಿದ್ದು ಮನೆಗೆ ಮರಳಿದರು. ಅಲ್ಲಿ ಅವರು ಆಮ್ಲಜನಕ ಚಿಕಿತ್ಸೆಯನ್ನು ಪಡೆದಿದ್ದರು.

ಕುಟುಂಬವು ಮೊದಲಿಗೆ ಹೇಗೆ ಸೋಂಕಿಗೆ ಒಳಗಾಯಿತು ಎಂಬುದು ಇನ್ನೂ ನಿಗೂಡವಾಗಿದೆ. ದಿನಸಿ ವಸ್ತುಗಳನ್ನು ಖರೀದಿಸುವಾಗ ಮುಕುಲ್ ಅವರ ಚಿಕ್ಕಪ್ಪ ವೈರಸ್‌ಗೆ ತುತ್ತಾಗಿರಬಹುದು ಎಂದು ಅವರು ಊಹಿಸಿದ್ದಾರೆ. ಅವರು ಅನಾರೋಗ್ಯಕ್ಕೆ ಒಳಗಾದ ಸಮಯದಲ್ಲಿ, ಆ ಪ್ರದೇಶದಲ್ಲಿ ಬೇರೆ ಯಾವುದೇ ಪ್ರಕರಣಗಳು ಇರಲಿಲ್ಲ ಎನ್ನಲಾಗಿದೆ.

ಜೂನ್ ಆರಂಭದಲ್ಲಿ, ಮನೆಯ ಎಲ್ಲರೂ ಕೊರೊನಾ ನೆಗೆಟಿವ್ ಪರೀಕ್ಷಿಸಿದ ನಂತರ ಹಿಂದಿನಂತೆ ಮತ್ತೇ ಒಟ್ಟಿಗೆ ಕೂತು ಊಟ ಮಾಡುವಂತಾಯಿತು ಎಂದು ಕುಟುಂಬದ ಸದಸ್ಯರು ಸಂತೋಷ ವ್ಯಕ್ತಪಡಿಸಿದ್ದಾರೆ.


ಓದಿ: ದೆಹಲಿಯಲ್ಲಿ 1 ಲಕ್ಷ ದಾಟಿದ ಕೊರೊನಾ ಪ್ರಕರಣಗಳು: ಭಯಪಡಬೇಡಿ ಎಂದ ಕೇಜ್ರಿವಾಲ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...