Homeಕರೋನಾ ತಲ್ಲಣದೆಹಲಿಯ 17 ಜನರಿರುವ ಕುಟುಂಬ ಒಂದೇ ಮನೆಯಲ್ಲಿದ್ದು ಕೊರೊನಾವನ್ನು ಗೆದ್ದಿತು...!

ದೆಹಲಿಯ 17 ಜನರಿರುವ ಕುಟುಂಬ ಒಂದೇ ಮನೆಯಲ್ಲಿದ್ದು ಕೊರೊನಾವನ್ನು ಗೆದ್ದಿತು…!

ನಾವು ತುಂಬಾ ಜಾಗರೂಕರಾಗಿರುವುದರಿಂದ, ಕೊರೊನಾ ವೈರಸ್ ನಮಗೆ ಬರುವುದಿಲ್ಲ ಎಂದು ನಾವು ವಿಶ್ವಾಸದಿಂದ ಇದ್ದೆವು, ಆದರೆ ಒಂದೊಂದಾಗಿ, ಎಲ್ಲರಿಗೂ ಜ್ವರ ಪ್ರಾರಂಭವಾಯಿತು ಎಂದು ಮೀನಾ ದೇವಿ ಹೇಳುತ್ತಾರೆ.

- Advertisement -
- Advertisement -

ದೆಹಲಿಯ 17 ಜನರಿರುವ ಅವಿಭಜಿತ ಕುಟುಂಬವೊಂದು ಒಂದೇ ಮನೆಯಲ್ಲಿದ್ದು ಕೊರೊನಾ ಸೋಂಕಿನ ವಿರುದ್ದ ಗೆದ್ದಿದ್ದಾರೆ.

ಕುಟುಂಬದ 3  ತಿಂಗಳ ಮಗುವಿನಿಂದ ಹಿಡಿದು 90  ವರ್ಷದ ವರೆಗಿನ ಒಟ್ಟು 17 ಮಂದಿ ಸದಸ್ಯರಲ್ಲಿ ಹೆಚ್ಚನವರು ಕೊರೊನಾ ಪಾಸಿಟಿವ್ ಆಗಿದ್ದರೂ, ಯಾವುದೇ ಜೀವ ಹಾನಿಯಾಗದೇ ಕೊರೊನಾ ವಿರುದ್ದ ಗೆದ್ದಿದ್ದಾರೆ.

ಕುಟುಂಬದ ಜನರಲ್ಲಿ ಒಬ್ಬರು ಕೊರೊನಾ ಪಾಸಿಟಿವ್ ಆದಾಗ ಯಾರನ್ನಾದರೂ ಕಳೆದು ಕೊಳ್ಳುತ್ತೇವೆ ಎಂದು ನಮಗೆ ಖಚಿತವಾಗಿತ್ತು ಎಂದು ಕುಟುಂಬದ ಸದಸ್ಯರಾದ ಮುಕುಲ್ ಗಾರ್ಗ್ ಹೇಳುತ್ತಾರೆ.

ಮಾರ್ಚ್‌ನಲ್ಲಿ ಲಾಕ್‌ಡೌನ್ ಆದಾಗ ಕುಟುಂಬದ ಸದಸ್ಯರು ಎಚ್ಚರಿಕೆಯನ್ನು ಪಾಲಿಸಿದ್ದರೂ ಕುಟುಂಬದ 11 ಸದಸ್ಯರಲ್ಲಿ ಕೊರೊನಾ ಸೋಂಕು ಇರುವುದು ದೃಡಪಟ್ಟಿತು. ಅವರಲ್ಲಿ ಮುಕುಲ್ ಗಾರ್ಗ್‌ ಅವರ 90 ವರ್ಷದ ಹಾಸಿಗೆ ಹಿಡಿದ ಅಜ್ಜ; 87 ವರ್ಷದ ಅಜ್ಜಿ; ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಹೊಂದಿರುವ 62 ವರ್ಷದ ತಂದೆ ಹಾಗೂ 60 ವರ್ಷದ ಚಿಕ್ಕಪ್ಪ ಸೇರಿದ್ದರು.

“ನಾವು ತುಂಬಾ ಜಾಗರೂಕರಾಗಿರುವುದರಿಂದ, ಕೊರೊನಾ ವೈರಸ್ ನಮಗೆ ಬರುವುದಿಲ್ಲ ಎಂದು ವಿಶ್ವಾಸದಿಂದ ಇದ್ದೆವು, ಆದರೆ ಒಂದೊಂದಾಗಿ, ಎಲ್ಲರಿಗೂ ಜ್ವರ ಪ್ರಾರಂಭವಾಯಿತು.” ಎಂದು ಮುಕುಲ್ ಅವರ ತಾಯಿ ಮೀನಾ ದೇವಿ ಹೇಳುತ್ತಾರೆ.

ಜ್ವರವೂ ಹೊರಟು ಹೋಗುತ್ತದೆ ಎಂದು ಭಾವಸಿ ಅವರು ಪರೀಕ್ಷೆಗೆ ಹಿಂಜರಿದಿದ್ದರು, ಅಲ್ಲದೆ ಇದೆ ವೇಳೆ ಕೊರೊನಾ ಪಾಸಿಟಿವ್ ಎಂದ ತಿಳಿದು ಬಂದರೆ ಸಮಾಜದಿಂದ ಬಹಿಷ್ಕಾರಕ್ಕೆ ಒಳಗಾಗುತ್ತಾರೆ ಎಂದು ಅವರೆಲ್ಲರೂ ಹೆದರಿದ್ದರಿಂದ ಮನೆಯ ಒಳಗಡೆಯೆ ಸಾಂಸ್ಥಿಕ ಸಂಪರ್ಕತಡೆಯನ್ನು ಮಾಡಿದ್ದರು. ಕುಟುಂಬದ ಪ್ರತಿಯೊಬ್ಬರೂ ತಮ್ಮ ಕೋಣೆಗಳಲ್ಲಿ ತಮ್ಮ ಮಹಡಿಗಳಲ್ಲೇ ಪ್ರತ್ಯೇಕವಾಗಿರಲು ಪ್ರಾರಂಭಿಸಿದ್ದರು.

ಆದರೆ ಮುಕುಲ್ ಚಿಕ್ಕಮ್ಮ ಅನಿತಾ ಅವರಿಗೆ ಐದು ದಿನಗಳ ಜ್ವರದ ನಂತರ ಉಸಿರಾಡಲು ತೊಂದರೆಯಾಗಿದ್ದರಿಂದ ಅವರು ಕೊರೊನಾ ವೈರಸ್ ಪರೀಕ್ಷೆ ನಡೆಸಿದ್ದರು. ಫಲಿತಾಂಶವು ಕೊರೊನಾ ಪಾಸಿಟಿವ್ ಆಗಿತ್ತು. ನಂತರ ಅನಿತಾ ಸ್ಥಿತಿ ಹದಗೆಟ್ಟಾಗ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಆದರೆ ವಿಶೇಷವೇನೆಂದರೆ ಕುಟುಂಬದ 90 ವರ್ಷದ ಶ್ಯಾಮ್ಲಾಲ್ ಅವರು ಕೊರೊನಾ ಪಾಸಿಟಿವ್ ಆಗಿದ್ದರೂ ಅವರಲ್ಲಿ ಯಾವುದೇ ರೋಗಲಕ್ಷಣಗಳು ಇರಲಿಲ್ಲ. ಅವರ 87 ವರ್ಷದ ಬೀನಾಗೆ ಜ್ವರ, ಕೆಮ್ಮು ಮತ್ತು ತಲೆನೋವು ಒಂದು ತಿಂಗಳು ಮುಂದುವರೆಯಿತು, ಆದರೆ ಅವರನ್ನು ಆಸ್ಪತ್ರೆಗೆ ದಾಖಸಿಸುವ ಹಾಗೆ ಪರಿಸ್ಥಿತಿ ಹದಗೆಡಲಿಲ್ಲ. 6 ವರ್ಷದೊಳಗಿನ ನಾಲ್ಕು ಮಕ್ಕಳಿಗೆ ಕೊರೊನಾ ಸೋಂಕಿರಲಿಲ್ಲ.

ಮುಕುಲ್ ಅವರ ತಾಯಿ ಮೀನಾಗೆ ಕೇವಲ ಜ್ವರ, ಕೆಮ್ಮು, ತಲೆನೋವು ಮತ್ತು ದೇಹದ ಭಾಗಗಳ ನೋವುಗಳು ಒಳಗೊಂಡತ್ತು, ಅದು ಸುಮಾರು ಎರಡು ವಾರಗಳ ಕಾಲ ಇತ್ತು ಎಂದು ತಿಳಿದುಬಂದಿದೆ.

ಮುಕುಲ್ ಅವರ ಚಿಕ್ಕಮ್ಮ ಅನಿತಾ ಅವರು ಆಸ್ಪತ್ರೆಯಲ್ಲಿ 10 ದಿನಗಳಿದ್ದು ಮನೆಗೆ ಮರಳಿದರು. ಅಲ್ಲಿ ಅವರು ಆಮ್ಲಜನಕ ಚಿಕಿತ್ಸೆಯನ್ನು ಪಡೆದಿದ್ದರು.

ಕುಟುಂಬವು ಮೊದಲಿಗೆ ಹೇಗೆ ಸೋಂಕಿಗೆ ಒಳಗಾಯಿತು ಎಂಬುದು ಇನ್ನೂ ನಿಗೂಡವಾಗಿದೆ. ದಿನಸಿ ವಸ್ತುಗಳನ್ನು ಖರೀದಿಸುವಾಗ ಮುಕುಲ್ ಅವರ ಚಿಕ್ಕಪ್ಪ ವೈರಸ್‌ಗೆ ತುತ್ತಾಗಿರಬಹುದು ಎಂದು ಅವರು ಊಹಿಸಿದ್ದಾರೆ. ಅವರು ಅನಾರೋಗ್ಯಕ್ಕೆ ಒಳಗಾದ ಸಮಯದಲ್ಲಿ, ಆ ಪ್ರದೇಶದಲ್ಲಿ ಬೇರೆ ಯಾವುದೇ ಪ್ರಕರಣಗಳು ಇರಲಿಲ್ಲ ಎನ್ನಲಾಗಿದೆ.

ಜೂನ್ ಆರಂಭದಲ್ಲಿ, ಮನೆಯ ಎಲ್ಲರೂ ಕೊರೊನಾ ನೆಗೆಟಿವ್ ಪರೀಕ್ಷಿಸಿದ ನಂತರ ಹಿಂದಿನಂತೆ ಮತ್ತೇ ಒಟ್ಟಿಗೆ ಕೂತು ಊಟ ಮಾಡುವಂತಾಯಿತು ಎಂದು ಕುಟುಂಬದ ಸದಸ್ಯರು ಸಂತೋಷ ವ್ಯಕ್ತಪಡಿಸಿದ್ದಾರೆ.


ಓದಿ: ದೆಹಲಿಯಲ್ಲಿ 1 ಲಕ್ಷ ದಾಟಿದ ಕೊರೊನಾ ಪ್ರಕರಣಗಳು: ಭಯಪಡಬೇಡಿ ಎಂದ ಕೇಜ್ರಿವಾಲ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...