Homeಕರೋನಾ ತಲ್ಲಣದೆಹಲಿಯ 17 ಜನರಿರುವ ಕುಟುಂಬ ಒಂದೇ ಮನೆಯಲ್ಲಿದ್ದು ಕೊರೊನಾವನ್ನು ಗೆದ್ದಿತು...!

ದೆಹಲಿಯ 17 ಜನರಿರುವ ಕುಟುಂಬ ಒಂದೇ ಮನೆಯಲ್ಲಿದ್ದು ಕೊರೊನಾವನ್ನು ಗೆದ್ದಿತು…!

ನಾವು ತುಂಬಾ ಜಾಗರೂಕರಾಗಿರುವುದರಿಂದ, ಕೊರೊನಾ ವೈರಸ್ ನಮಗೆ ಬರುವುದಿಲ್ಲ ಎಂದು ನಾವು ವಿಶ್ವಾಸದಿಂದ ಇದ್ದೆವು, ಆದರೆ ಒಂದೊಂದಾಗಿ, ಎಲ್ಲರಿಗೂ ಜ್ವರ ಪ್ರಾರಂಭವಾಯಿತು ಎಂದು ಮೀನಾ ದೇವಿ ಹೇಳುತ್ತಾರೆ.

- Advertisement -
- Advertisement -

ದೆಹಲಿಯ 17 ಜನರಿರುವ ಅವಿಭಜಿತ ಕುಟುಂಬವೊಂದು ಒಂದೇ ಮನೆಯಲ್ಲಿದ್ದು ಕೊರೊನಾ ಸೋಂಕಿನ ವಿರುದ್ದ ಗೆದ್ದಿದ್ದಾರೆ.

ಕುಟುಂಬದ 3  ತಿಂಗಳ ಮಗುವಿನಿಂದ ಹಿಡಿದು 90  ವರ್ಷದ ವರೆಗಿನ ಒಟ್ಟು 17 ಮಂದಿ ಸದಸ್ಯರಲ್ಲಿ ಹೆಚ್ಚನವರು ಕೊರೊನಾ ಪಾಸಿಟಿವ್ ಆಗಿದ್ದರೂ, ಯಾವುದೇ ಜೀವ ಹಾನಿಯಾಗದೇ ಕೊರೊನಾ ವಿರುದ್ದ ಗೆದ್ದಿದ್ದಾರೆ.

ಕುಟುಂಬದ ಜನರಲ್ಲಿ ಒಬ್ಬರು ಕೊರೊನಾ ಪಾಸಿಟಿವ್ ಆದಾಗ ಯಾರನ್ನಾದರೂ ಕಳೆದು ಕೊಳ್ಳುತ್ತೇವೆ ಎಂದು ನಮಗೆ ಖಚಿತವಾಗಿತ್ತು ಎಂದು ಕುಟುಂಬದ ಸದಸ್ಯರಾದ ಮುಕುಲ್ ಗಾರ್ಗ್ ಹೇಳುತ್ತಾರೆ.

ಮಾರ್ಚ್‌ನಲ್ಲಿ ಲಾಕ್‌ಡೌನ್ ಆದಾಗ ಕುಟುಂಬದ ಸದಸ್ಯರು ಎಚ್ಚರಿಕೆಯನ್ನು ಪಾಲಿಸಿದ್ದರೂ ಕುಟುಂಬದ 11 ಸದಸ್ಯರಲ್ಲಿ ಕೊರೊನಾ ಸೋಂಕು ಇರುವುದು ದೃಡಪಟ್ಟಿತು. ಅವರಲ್ಲಿ ಮುಕುಲ್ ಗಾರ್ಗ್‌ ಅವರ 90 ವರ್ಷದ ಹಾಸಿಗೆ ಹಿಡಿದ ಅಜ್ಜ; 87 ವರ್ಷದ ಅಜ್ಜಿ; ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಹೊಂದಿರುವ 62 ವರ್ಷದ ತಂದೆ ಹಾಗೂ 60 ವರ್ಷದ ಚಿಕ್ಕಪ್ಪ ಸೇರಿದ್ದರು.

“ನಾವು ತುಂಬಾ ಜಾಗರೂಕರಾಗಿರುವುದರಿಂದ, ಕೊರೊನಾ ವೈರಸ್ ನಮಗೆ ಬರುವುದಿಲ್ಲ ಎಂದು ವಿಶ್ವಾಸದಿಂದ ಇದ್ದೆವು, ಆದರೆ ಒಂದೊಂದಾಗಿ, ಎಲ್ಲರಿಗೂ ಜ್ವರ ಪ್ರಾರಂಭವಾಯಿತು.” ಎಂದು ಮುಕುಲ್ ಅವರ ತಾಯಿ ಮೀನಾ ದೇವಿ ಹೇಳುತ್ತಾರೆ.

ಜ್ವರವೂ ಹೊರಟು ಹೋಗುತ್ತದೆ ಎಂದು ಭಾವಸಿ ಅವರು ಪರೀಕ್ಷೆಗೆ ಹಿಂಜರಿದಿದ್ದರು, ಅಲ್ಲದೆ ಇದೆ ವೇಳೆ ಕೊರೊನಾ ಪಾಸಿಟಿವ್ ಎಂದ ತಿಳಿದು ಬಂದರೆ ಸಮಾಜದಿಂದ ಬಹಿಷ್ಕಾರಕ್ಕೆ ಒಳಗಾಗುತ್ತಾರೆ ಎಂದು ಅವರೆಲ್ಲರೂ ಹೆದರಿದ್ದರಿಂದ ಮನೆಯ ಒಳಗಡೆಯೆ ಸಾಂಸ್ಥಿಕ ಸಂಪರ್ಕತಡೆಯನ್ನು ಮಾಡಿದ್ದರು. ಕುಟುಂಬದ ಪ್ರತಿಯೊಬ್ಬರೂ ತಮ್ಮ ಕೋಣೆಗಳಲ್ಲಿ ತಮ್ಮ ಮಹಡಿಗಳಲ್ಲೇ ಪ್ರತ್ಯೇಕವಾಗಿರಲು ಪ್ರಾರಂಭಿಸಿದ್ದರು.

ಆದರೆ ಮುಕುಲ್ ಚಿಕ್ಕಮ್ಮ ಅನಿತಾ ಅವರಿಗೆ ಐದು ದಿನಗಳ ಜ್ವರದ ನಂತರ ಉಸಿರಾಡಲು ತೊಂದರೆಯಾಗಿದ್ದರಿಂದ ಅವರು ಕೊರೊನಾ ವೈರಸ್ ಪರೀಕ್ಷೆ ನಡೆಸಿದ್ದರು. ಫಲಿತಾಂಶವು ಕೊರೊನಾ ಪಾಸಿಟಿವ್ ಆಗಿತ್ತು. ನಂತರ ಅನಿತಾ ಸ್ಥಿತಿ ಹದಗೆಟ್ಟಾಗ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಆದರೆ ವಿಶೇಷವೇನೆಂದರೆ ಕುಟುಂಬದ 90 ವರ್ಷದ ಶ್ಯಾಮ್ಲಾಲ್ ಅವರು ಕೊರೊನಾ ಪಾಸಿಟಿವ್ ಆಗಿದ್ದರೂ ಅವರಲ್ಲಿ ಯಾವುದೇ ರೋಗಲಕ್ಷಣಗಳು ಇರಲಿಲ್ಲ. ಅವರ 87 ವರ್ಷದ ಬೀನಾಗೆ ಜ್ವರ, ಕೆಮ್ಮು ಮತ್ತು ತಲೆನೋವು ಒಂದು ತಿಂಗಳು ಮುಂದುವರೆಯಿತು, ಆದರೆ ಅವರನ್ನು ಆಸ್ಪತ್ರೆಗೆ ದಾಖಸಿಸುವ ಹಾಗೆ ಪರಿಸ್ಥಿತಿ ಹದಗೆಡಲಿಲ್ಲ. 6 ವರ್ಷದೊಳಗಿನ ನಾಲ್ಕು ಮಕ್ಕಳಿಗೆ ಕೊರೊನಾ ಸೋಂಕಿರಲಿಲ್ಲ.

ಮುಕುಲ್ ಅವರ ತಾಯಿ ಮೀನಾಗೆ ಕೇವಲ ಜ್ವರ, ಕೆಮ್ಮು, ತಲೆನೋವು ಮತ್ತು ದೇಹದ ಭಾಗಗಳ ನೋವುಗಳು ಒಳಗೊಂಡತ್ತು, ಅದು ಸುಮಾರು ಎರಡು ವಾರಗಳ ಕಾಲ ಇತ್ತು ಎಂದು ತಿಳಿದುಬಂದಿದೆ.

ಮುಕುಲ್ ಅವರ ಚಿಕ್ಕಮ್ಮ ಅನಿತಾ ಅವರು ಆಸ್ಪತ್ರೆಯಲ್ಲಿ 10 ದಿನಗಳಿದ್ದು ಮನೆಗೆ ಮರಳಿದರು. ಅಲ್ಲಿ ಅವರು ಆಮ್ಲಜನಕ ಚಿಕಿತ್ಸೆಯನ್ನು ಪಡೆದಿದ್ದರು.

ಕುಟುಂಬವು ಮೊದಲಿಗೆ ಹೇಗೆ ಸೋಂಕಿಗೆ ಒಳಗಾಯಿತು ಎಂಬುದು ಇನ್ನೂ ನಿಗೂಡವಾಗಿದೆ. ದಿನಸಿ ವಸ್ತುಗಳನ್ನು ಖರೀದಿಸುವಾಗ ಮುಕುಲ್ ಅವರ ಚಿಕ್ಕಪ್ಪ ವೈರಸ್‌ಗೆ ತುತ್ತಾಗಿರಬಹುದು ಎಂದು ಅವರು ಊಹಿಸಿದ್ದಾರೆ. ಅವರು ಅನಾರೋಗ್ಯಕ್ಕೆ ಒಳಗಾದ ಸಮಯದಲ್ಲಿ, ಆ ಪ್ರದೇಶದಲ್ಲಿ ಬೇರೆ ಯಾವುದೇ ಪ್ರಕರಣಗಳು ಇರಲಿಲ್ಲ ಎನ್ನಲಾಗಿದೆ.

ಜೂನ್ ಆರಂಭದಲ್ಲಿ, ಮನೆಯ ಎಲ್ಲರೂ ಕೊರೊನಾ ನೆಗೆಟಿವ್ ಪರೀಕ್ಷಿಸಿದ ನಂತರ ಹಿಂದಿನಂತೆ ಮತ್ತೇ ಒಟ್ಟಿಗೆ ಕೂತು ಊಟ ಮಾಡುವಂತಾಯಿತು ಎಂದು ಕುಟುಂಬದ ಸದಸ್ಯರು ಸಂತೋಷ ವ್ಯಕ್ತಪಡಿಸಿದ್ದಾರೆ.


ಓದಿ: ದೆಹಲಿಯಲ್ಲಿ 1 ಲಕ್ಷ ದಾಟಿದ ಕೊರೊನಾ ಪ್ರಕರಣಗಳು: ಭಯಪಡಬೇಡಿ ಎಂದ ಕೇಜ್ರಿವಾಲ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...