Homeಕರೋನಾ ತಲ್ಲಣದೆಹಲಿಯ 17 ಜನರಿರುವ ಕುಟುಂಬ ಒಂದೇ ಮನೆಯಲ್ಲಿದ್ದು ಕೊರೊನಾವನ್ನು ಗೆದ್ದಿತು...!

ದೆಹಲಿಯ 17 ಜನರಿರುವ ಕುಟುಂಬ ಒಂದೇ ಮನೆಯಲ್ಲಿದ್ದು ಕೊರೊನಾವನ್ನು ಗೆದ್ದಿತು…!

ನಾವು ತುಂಬಾ ಜಾಗರೂಕರಾಗಿರುವುದರಿಂದ, ಕೊರೊನಾ ವೈರಸ್ ನಮಗೆ ಬರುವುದಿಲ್ಲ ಎಂದು ನಾವು ವಿಶ್ವಾಸದಿಂದ ಇದ್ದೆವು, ಆದರೆ ಒಂದೊಂದಾಗಿ, ಎಲ್ಲರಿಗೂ ಜ್ವರ ಪ್ರಾರಂಭವಾಯಿತು ಎಂದು ಮೀನಾ ದೇವಿ ಹೇಳುತ್ತಾರೆ.

- Advertisement -
- Advertisement -

ದೆಹಲಿಯ 17 ಜನರಿರುವ ಅವಿಭಜಿತ ಕುಟುಂಬವೊಂದು ಒಂದೇ ಮನೆಯಲ್ಲಿದ್ದು ಕೊರೊನಾ ಸೋಂಕಿನ ವಿರುದ್ದ ಗೆದ್ದಿದ್ದಾರೆ.

ಕುಟುಂಬದ 3  ತಿಂಗಳ ಮಗುವಿನಿಂದ ಹಿಡಿದು 90  ವರ್ಷದ ವರೆಗಿನ ಒಟ್ಟು 17 ಮಂದಿ ಸದಸ್ಯರಲ್ಲಿ ಹೆಚ್ಚನವರು ಕೊರೊನಾ ಪಾಸಿಟಿವ್ ಆಗಿದ್ದರೂ, ಯಾವುದೇ ಜೀವ ಹಾನಿಯಾಗದೇ ಕೊರೊನಾ ವಿರುದ್ದ ಗೆದ್ದಿದ್ದಾರೆ.

ಕುಟುಂಬದ ಜನರಲ್ಲಿ ಒಬ್ಬರು ಕೊರೊನಾ ಪಾಸಿಟಿವ್ ಆದಾಗ ಯಾರನ್ನಾದರೂ ಕಳೆದು ಕೊಳ್ಳುತ್ತೇವೆ ಎಂದು ನಮಗೆ ಖಚಿತವಾಗಿತ್ತು ಎಂದು ಕುಟುಂಬದ ಸದಸ್ಯರಾದ ಮುಕುಲ್ ಗಾರ್ಗ್ ಹೇಳುತ್ತಾರೆ.

ಮಾರ್ಚ್‌ನಲ್ಲಿ ಲಾಕ್‌ಡೌನ್ ಆದಾಗ ಕುಟುಂಬದ ಸದಸ್ಯರು ಎಚ್ಚರಿಕೆಯನ್ನು ಪಾಲಿಸಿದ್ದರೂ ಕುಟುಂಬದ 11 ಸದಸ್ಯರಲ್ಲಿ ಕೊರೊನಾ ಸೋಂಕು ಇರುವುದು ದೃಡಪಟ್ಟಿತು. ಅವರಲ್ಲಿ ಮುಕುಲ್ ಗಾರ್ಗ್‌ ಅವರ 90 ವರ್ಷದ ಹಾಸಿಗೆ ಹಿಡಿದ ಅಜ್ಜ; 87 ವರ್ಷದ ಅಜ್ಜಿ; ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಹೊಂದಿರುವ 62 ವರ್ಷದ ತಂದೆ ಹಾಗೂ 60 ವರ್ಷದ ಚಿಕ್ಕಪ್ಪ ಸೇರಿದ್ದರು.

“ನಾವು ತುಂಬಾ ಜಾಗರೂಕರಾಗಿರುವುದರಿಂದ, ಕೊರೊನಾ ವೈರಸ್ ನಮಗೆ ಬರುವುದಿಲ್ಲ ಎಂದು ವಿಶ್ವಾಸದಿಂದ ಇದ್ದೆವು, ಆದರೆ ಒಂದೊಂದಾಗಿ, ಎಲ್ಲರಿಗೂ ಜ್ವರ ಪ್ರಾರಂಭವಾಯಿತು.” ಎಂದು ಮುಕುಲ್ ಅವರ ತಾಯಿ ಮೀನಾ ದೇವಿ ಹೇಳುತ್ತಾರೆ.

ಜ್ವರವೂ ಹೊರಟು ಹೋಗುತ್ತದೆ ಎಂದು ಭಾವಸಿ ಅವರು ಪರೀಕ್ಷೆಗೆ ಹಿಂಜರಿದಿದ್ದರು, ಅಲ್ಲದೆ ಇದೆ ವೇಳೆ ಕೊರೊನಾ ಪಾಸಿಟಿವ್ ಎಂದ ತಿಳಿದು ಬಂದರೆ ಸಮಾಜದಿಂದ ಬಹಿಷ್ಕಾರಕ್ಕೆ ಒಳಗಾಗುತ್ತಾರೆ ಎಂದು ಅವರೆಲ್ಲರೂ ಹೆದರಿದ್ದರಿಂದ ಮನೆಯ ಒಳಗಡೆಯೆ ಸಾಂಸ್ಥಿಕ ಸಂಪರ್ಕತಡೆಯನ್ನು ಮಾಡಿದ್ದರು. ಕುಟುಂಬದ ಪ್ರತಿಯೊಬ್ಬರೂ ತಮ್ಮ ಕೋಣೆಗಳಲ್ಲಿ ತಮ್ಮ ಮಹಡಿಗಳಲ್ಲೇ ಪ್ರತ್ಯೇಕವಾಗಿರಲು ಪ್ರಾರಂಭಿಸಿದ್ದರು.

ಆದರೆ ಮುಕುಲ್ ಚಿಕ್ಕಮ್ಮ ಅನಿತಾ ಅವರಿಗೆ ಐದು ದಿನಗಳ ಜ್ವರದ ನಂತರ ಉಸಿರಾಡಲು ತೊಂದರೆಯಾಗಿದ್ದರಿಂದ ಅವರು ಕೊರೊನಾ ವೈರಸ್ ಪರೀಕ್ಷೆ ನಡೆಸಿದ್ದರು. ಫಲಿತಾಂಶವು ಕೊರೊನಾ ಪಾಸಿಟಿವ್ ಆಗಿತ್ತು. ನಂತರ ಅನಿತಾ ಸ್ಥಿತಿ ಹದಗೆಟ್ಟಾಗ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು.

ಆದರೆ ವಿಶೇಷವೇನೆಂದರೆ ಕುಟುಂಬದ 90 ವರ್ಷದ ಶ್ಯಾಮ್ಲಾಲ್ ಅವರು ಕೊರೊನಾ ಪಾಸಿಟಿವ್ ಆಗಿದ್ದರೂ ಅವರಲ್ಲಿ ಯಾವುದೇ ರೋಗಲಕ್ಷಣಗಳು ಇರಲಿಲ್ಲ. ಅವರ 87 ವರ್ಷದ ಬೀನಾಗೆ ಜ್ವರ, ಕೆಮ್ಮು ಮತ್ತು ತಲೆನೋವು ಒಂದು ತಿಂಗಳು ಮುಂದುವರೆಯಿತು, ಆದರೆ ಅವರನ್ನು ಆಸ್ಪತ್ರೆಗೆ ದಾಖಸಿಸುವ ಹಾಗೆ ಪರಿಸ್ಥಿತಿ ಹದಗೆಡಲಿಲ್ಲ. 6 ವರ್ಷದೊಳಗಿನ ನಾಲ್ಕು ಮಕ್ಕಳಿಗೆ ಕೊರೊನಾ ಸೋಂಕಿರಲಿಲ್ಲ.

ಮುಕುಲ್ ಅವರ ತಾಯಿ ಮೀನಾಗೆ ಕೇವಲ ಜ್ವರ, ಕೆಮ್ಮು, ತಲೆನೋವು ಮತ್ತು ದೇಹದ ಭಾಗಗಳ ನೋವುಗಳು ಒಳಗೊಂಡತ್ತು, ಅದು ಸುಮಾರು ಎರಡು ವಾರಗಳ ಕಾಲ ಇತ್ತು ಎಂದು ತಿಳಿದುಬಂದಿದೆ.

ಮುಕುಲ್ ಅವರ ಚಿಕ್ಕಮ್ಮ ಅನಿತಾ ಅವರು ಆಸ್ಪತ್ರೆಯಲ್ಲಿ 10 ದಿನಗಳಿದ್ದು ಮನೆಗೆ ಮರಳಿದರು. ಅಲ್ಲಿ ಅವರು ಆಮ್ಲಜನಕ ಚಿಕಿತ್ಸೆಯನ್ನು ಪಡೆದಿದ್ದರು.

ಕುಟುಂಬವು ಮೊದಲಿಗೆ ಹೇಗೆ ಸೋಂಕಿಗೆ ಒಳಗಾಯಿತು ಎಂಬುದು ಇನ್ನೂ ನಿಗೂಡವಾಗಿದೆ. ದಿನಸಿ ವಸ್ತುಗಳನ್ನು ಖರೀದಿಸುವಾಗ ಮುಕುಲ್ ಅವರ ಚಿಕ್ಕಪ್ಪ ವೈರಸ್‌ಗೆ ತುತ್ತಾಗಿರಬಹುದು ಎಂದು ಅವರು ಊಹಿಸಿದ್ದಾರೆ. ಅವರು ಅನಾರೋಗ್ಯಕ್ಕೆ ಒಳಗಾದ ಸಮಯದಲ್ಲಿ, ಆ ಪ್ರದೇಶದಲ್ಲಿ ಬೇರೆ ಯಾವುದೇ ಪ್ರಕರಣಗಳು ಇರಲಿಲ್ಲ ಎನ್ನಲಾಗಿದೆ.

ಜೂನ್ ಆರಂಭದಲ್ಲಿ, ಮನೆಯ ಎಲ್ಲರೂ ಕೊರೊನಾ ನೆಗೆಟಿವ್ ಪರೀಕ್ಷಿಸಿದ ನಂತರ ಹಿಂದಿನಂತೆ ಮತ್ತೇ ಒಟ್ಟಿಗೆ ಕೂತು ಊಟ ಮಾಡುವಂತಾಯಿತು ಎಂದು ಕುಟುಂಬದ ಸದಸ್ಯರು ಸಂತೋಷ ವ್ಯಕ್ತಪಡಿಸಿದ್ದಾರೆ.


ಓದಿ: ದೆಹಲಿಯಲ್ಲಿ 1 ಲಕ್ಷ ದಾಟಿದ ಕೊರೊನಾ ಪ್ರಕರಣಗಳು: ಭಯಪಡಬೇಡಿ ಎಂದ ಕೇಜ್ರಿವಾಲ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...