Homeಮುಖಪುಟದುರ್ಬಲ ವರ್ಗಗಳಿಗೆ ಮಾರಕ ಪ್ರಾಯವಾದ ಬಜೆಟ್ : ಪ್ರೊ.ಮಹೇಶಚಂದ್ರ ಗುರು

ದುರ್ಬಲ ವರ್ಗಗಳಿಗೆ ಮಾರಕ ಪ್ರಾಯವಾದ ಬಜೆಟ್ : ಪ್ರೊ.ಮಹೇಶಚಂದ್ರ ಗುರು

ರಾಜ್ಯ ರಾಜಧಾನಿ ಬೆಂಗಳೂರು ನಗರಕ್ಕೆ ಹೆಚ್ಚು ಅನುಕೂಲತೆಗಳನ್ನು ಕಲ್ಪಿಸಿ ಹಿಂದುಳಿದ ಪ್ರದೇಶಗಳ ಅಭಿವೃದ್ಧಿಯನ್ನು ರಾಜ್ಯ ಸರ್ಕಾರ ಕಡೆಗಣಿಸಿರುವುದು ಬಜೆಟ್ ಮಾನವ ಸ್ಪರ್ಶ ಹೊಂದಿಲ್ಲವೆಂದು ತಿಳಿಸುತ್ತದೆ.

- Advertisement -
- Advertisement -

ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ಮಂಡಿಸಿದ 2020-21ನೇ ಸಾಲಿನ ಬಜೆಟ್ ಸಮಾಜದ ದಮನಿತ ಜನವರ್ಗಗಳ ಪಾಲಿಗೆ ಒಳಿತು ಮಾಡುವಂತಹ ಗುಣಲಕ್ಷಣಗಳನ್ನು ಒಳಗೊಂಡಿಲ್ಲ. ‘ಕರ್ನಾಟಕ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯೇ ನಮ್ಮ ಗುರಿ’ ಎಂದು ಮುಖ್ಯಮಂತ್ರಿಗಳು ಮಾಡಿರುವ ಘೋಷಣೆಗೆ ಪ್ರಸ್ತುತ ಬಜೆಟ್ ತದ್ವಿರುದ್ಧವಾಗಿದೆ. ಶಿಕ್ಷಣ, ಆರೋಗ್ಯ, ಆಹಾರ ಭದ್ರತೆ, ಮೂಲ ಸೌಕರ್ಯಗಳ ಅಭಿವೃದ್ಧಿ, ಕೃಷಿ ಕ್ಷೇತ್ರದ ಬೆಳವಣಿಗೆ, ಸೇವಾ ವಲಯದ ಸುಧಾರಣೆ, ಕೈಗಾರಿಕಾಭಿವೃದ್ಧಿ, ಸಾಮಾಜಿಕ ನ್ಯಾಯ ವಿತರಣೆ ಮೊದಲಾದ ಪ್ರಜಾಸತ್ತಾತ್ಮಕ ಹಾಗೂ ವಿತರಣಾತ್ಮಕ ಅಭಿವೃದ್ಧಿ ಆಶಯಗಳಿಗೆ ಪೂರಕವಾದ ಕ್ರಮಗಳನ್ನು ಬಜೆಟ್ ಹೊಂದಿಲ್ಲ.

ಕರ್ನಾಟಕದಿಂದ ಸುಮಾರು 25 ಸಂಸದರನ್ನು ಗೆಲ್ಲಿಸಿರುವ ಯಡಿಯೂರಪ್ಪನವರ ನಾಯಕತ್ವ ಹಾಗೂ ಮತದಾರರ ಆಶಯಗಳಿಗೆ ಕೇಂದ್ರ ಸರ್ಕಾರ ಸುಮಾರು 15 ಸಾವಿರ ಕೋಟಿ ರೂ. ಅನುದಾನ ನೀಡದೇ ಅನ್ಯಾಯವೆಸಗಿರುವುದು ಖಂಡನೀಯ. ರಾಜ್ಯಕ್ಕೆ ನ್ಯಾಯೋಚಿತ ಜಿಎಸ್‍ಟಿ ಪಾಲು ನೀಡದೇ ಇರುವುದು ಪ್ರಸ್ತುತ ಖೋತಾ ಬಜೆಟ್ ಮಂಡನೆಗೆ ಪ್ರಮುಖ ಕಾರಣವಾಗಿದೆ.

ಮುಖ್ಯಮಂತ್ರಿಗಳು ರಾಜ್ಯದ ಆರ್ಥಿಕತೆಗೆ ಮಾರಕಪ್ರಾಯವಾದ ಬಜೆಟ್ ಮಂಡಿಸಿರುವುದು ಪ್ರಜ್ಞಾವಂತರ ಕೆಂಗಣ್ಣಿಗೆ ಗುರಿಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರು ನಗರಕ್ಕೆ ಹೆಚ್ಚು ಅನುಕೂಲತೆಗಳನ್ನು ಕಲ್ಪಿಸಿ ಹಿಂದುಳಿದ ಪ್ರದೇಶಗಳ ಅಭಿವೃದ್ಧಿಯನ್ನು ರಾಜ್ಯ ಸರ್ಕಾರ ಕಡೆಗಣಿಸಿರುವುದು ಬಜೆಟ್ ಮಾನವ ಸ್ಪರ್ಶ ಹೊಂದಿಲ್ಲವೆಂದು ತಿಳಿಸುತ್ತದೆ.

ಹಿಂದಿನ ಬಜೆಟ್‍ಗಳಿಗೆ ಹೋಲಿಸಿದಾಗ ಈ ಬಾರಿ ಮಂಡನೆಯಾಗಿರುವ ಬಜೆಟ್‍ನಲ್ಲಿ ವಿಶೇಷವಾಗಿ ಹಿಂದುಳಿದ ವರ್ಗಗಳಿಗೆ ಹೆಚ್ಚಿನ ಅನ್ಯಾಯವುಂಟಾಗಿದೆ. ಆಹಾರ ಸಬ್ಸಿಡಿಗೆ ಹಿಂದಿನ ಬಜೆಟ್‍ನಲ್ಲಿ 3555 ಕೋಟಿ ರೂ.ಗಳನ್ನು ಒದಗಿಸಿದ್ದರೆ ಈ ಬಾರಿ 2556 ಕೋಟಿ ರೂ.ಗಳನ್ನು ನೀಡಿರುವುದು ಅನ್ನಭಾಗ್ಯ ಯೋಜನೆಯ ಪರಿಣಾಮಕಾರಿ ಅನುಷ್ಟಾನಕ್ಕೆ ಬಹುದೊಡ್ಡ ಪೆಟ್ಟು ನೀಡಲಿದೆ. ಹಿಂದಿನ ಮುಖ್ಯಮಂತ್ರಿ ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಹಸಿವಿನಿಂದ ಸಾಯುವ ಲಕ್ಷಾಂತರ ಜನರ ಅಮೂಲ್ಯ ಜೀವಗಳನ್ನು ಉಳಿಸಲು ಅನ್ನಭಾಗ್ಯ ಯೋಜನೆಯನ್ನು ಘೋಷಿಸಿ ತಮ್ಮ ಅಧಿಕಾರಾವಧಿಯಲ್ಲಿ ಅಲಕ್ಷಿತ ಜನರ ಹಸಿವನ್ನು ನೀಗಿಸಿ ನಿಜವಾದ ಅರ್ಥದಲ್ಲಿ ‘ಅನ್ನಭಾಗ್ಯವಿಧಾತ’ ಎಂಬ ಗೌರವಕ್ಕೆ ಭಾಜನರಾದರು. ಆದರೆ ಯಡಿಯೂರಪ್ಪನವರು ಆರ್ಥಿಕ ಸಂಪನ್ಮೂಲಗಳ ಕೊರತೆಯ ನೆಪದಲ್ಲಿ ಪ್ರಜೆಗಳ ಆಹಾರ ಭದ್ರತೆಗೆ ವಿರುದ್ಧವಾಗಿ ಬಜೆಟ್ ಮಂಡಿಸಿ ಅಸಂಖ್ಯಾತ ಬಡವರ ಬದುಕುವ ಮೂಲಭೂತ ಹಕ್ಕನ್ನು ಕಸಿದುಕೊಂಡಿದ್ದಾರೆ.

ಹಿಂದಿನ ಸರ್ಕಾರಗಳು ಹಲವಾರು ಇತಿಮಿತಿಗಳ ನಡುವೆಯೂ ಅಸಂಖ್ಯಾತ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಬಡವರಿಗೆ ವಸತಿ ಸೌಲಭ್ಯ ನೀಡುವ ಬದ್ಧತೆ ಹೊಂದಿದ್ದವು. ಹಿಂದಿನ ಬಜೆಟ್‍ನಲ್ಲಿ ವಸತಿ ವಲಯಕ್ಕೆ 2057 ಕೋಟಿ ರೂ.ಗಳನ್ನು ಒದಗಿಸಿದ್ದರೆ ಈ ಬಾರಿ 1250 ಕೋಟಿ ರೂ.ಗಳನ್ನು ನೀಡಿರುವುದು ಸರ್ಕಾರದ ಬೇಜವಾಬ್ದಾರಿತನಕ್ಕೆ ಸಾಕ್ಷಿಯಾಗಿದೆ. ಹಿಂದಿನ ಸರ್ಕಾರಗಳು ದೀನ ದುರ್ಬಲರಿಗೆ ವಿವಿಧ ಕ್ಷೇತ್ರಗಳಲ್ಲಿ ಅನುಕೂಲ ಮಾಡಿಕೊಡಲು 25,688 ಕೋಟಿ ರೂ.ಗಳನ್ನು ಸಬ್ಸಿಡಿಗಾಗಿ ಒದಗಿಸಿದ್ದರೆ ಈ ಬಾರಿ 23,475 ಕೋಟಿ ರೂ. ಗಳನ್ನಷ್ಟೇ ಒದಗಿಸಿರುವುದು ಬಹುಜನರ ಬದುಕನ್ನು ಅತಂತ್ರಗೊಳಿಸಲು ಕಾರಣವಾಗಿದೆ.

ವಿಶೇಷವಾಗಿ ಶಿಕ್ಷಣ ಕ್ಷೇತ್ರಕ್ಕೆ ಹಿಂದಿನ ಸರ್ಕಾರ 538.11 ಕೋಟಿ ರೂ.ಗಳನ್ನು ಒದಗಿಸಿದ್ದರೆ ಈ ಸರ್ಕಾರ ಈ ಬಾರಿ 390.46 ಕೋಟಿ ರೂ.ಗಳನ್ನು ಒದಗಿಸಿರುವುದು ಸರಿಯಲ್ಲ. ಅದೇ ರೀತಿ ಮಹಿಳೆಯರು ಮತ್ತು ಮಕ್ಕಳ ಅಭಿವೃದ್ಧಿಗೆ ಹಿಂದಿನ ಸರ್ಕಾರ 538.11 ಕೋಟಿ ರೂ.ಗಳನ್ನು ಒದಗಿಸಿದ್ದರೆ ಈ ಸರ್ಕಾರ 390.46 ಕೋಟಿ ರೂ.ಗಳನ್ನು ಒದಗಿಸಿರುವುದು ಬಹುಸಂಖ್ಯಾತ ಮಹಿಳೆಯರು ಮತ್ತು ಮಕ್ಕಳನ್ನು ನಿರ್ಲಕ್ಷಿಸಿರುವುದಕ್ಕೆ ಪುರಾವೆಯಾಗಿದೆ.

ಅಸಂಖ್ಯಾತ ರೈತರ ಬದುಕನ್ನು ಹಸನುಗೊಳಿಸುವ ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳಿಗೆ ಹಿಂದಿನ ಸರ್ಕಾರ 2865.59 ಕೋಟಿ ರೂ.ಗಳನ್ನು ಒದಗಿಸಿದ್ದರೆ ಈ ಬಾರಿ ಸರ್ಕಾರ 2661.32 ಕೋಟಿ ರೂ.ಗಳನ್ನು ಒದಗಿಸಿರುವುದು ತರವಲ್ಲ. ವಿಶೇಷವಾಗಿ ಅತ್ಯಂತ ದುರ್ಬಲ ವರ್ಗಗಳಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಹಿಂದಿನ ಸರ್ಕಾರ 26,930 ಕೋಟಿ ರೂ.ಗಳನ್ನು ಒದಗಿಸಿದ್ದರೆ ಈಗಿನ ಸರ್ಕಾರ 26,131 ಕೋಟಿ ರೂ.ಗಳನ್ನು ಒದಗಿಸಿ ಸುಮಾರು 3250 ಕೋಟಿ ರೂ.ಗಳನ್ನು ಕಡಿತಗೊಳಿಸಿದೆ. ವಿವಿಧ ಕ್ಷೇತ್ರಗಳಲ್ಲಿ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡುತ್ತಿರುವ ಧಾರ್ಮಿಕ ಅಲ್ಪಸಂಖ್ಯಾತರ ಅಭಿವೃದ್ಧಿಯನ್ನು ಈಗಿನ ಸರ್ಕಾರ ಅಮಾನುಷವಾಗಿ ಕಡೆಗಣಿಸಿದೆ. ಕಳಸಾ ಬಂಡೂರಿ ಯೋಜನೆಗೆ 500 ಕೋಟಿ ರೂ.ಗಳು ಮತ್ತು ಮಹದಾಯಿ ಕುಡಿಯುವ ನೀರಿನ ಯೋಜನೆಗೆ 1500 ಕೋಟಿ ರೂ.ಗಳನ್ನು ಸರ್ಕಾರ ಬಜೆಟ್‍ನಲ್ಲಿ ನಿಗಧಿಗೊಳಿಸಿರುವುದು ಯೋಜನೆಗೆ ತಗಲುವ ಒಟ್ಟು ವೆಚ್ಚಕ್ಕೆ ಅನುಗುಣವಾಗಿಲ್ಲ.

ದೀನ ದುರ್ಬಲ ವರ್ಗಗಳ ಶಿಕ್ಷಣ, ಆರೋಗ್ಯ, ಅಭಿವೃದ್ಧಿ, ಸುರಕ್ಷತೆ ಮೊದಲಾದ ವಿಷಯಗಳಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಮಲತಾಯಿ ಧೋರಣೆ ಅನುಸರಿಸಿರುವುದು ಕೇಂದ್ರ ಬಜೆಟ್ ಮತ್ತು ರಾಜ್ಯ ಬಜೆಟ್‍ಗಳಲ್ಲಿ ಸ್ಪಷ್ಟವಾಗಿ ಕಂಡುಬರುತ್ತದೆ. ವಾಸ್ತವವಾಗಿ ಕರ್ನಾಟಕ ರಾಜ್ಯ ಸರ್ಕಾರದ ಧೋರಣೆ, ಆಯವ್ಯಯ ಮತ್ತು ನಡವಳಿಕೆಗಳು ಎಲ್ಲ ಜನವರ್ಗಗಳ ಒಳಗೊಳ್ಳುವ ಅಭಿವೃದ್ಧಿಗೆ ಪೂರಕವಾಗಿಲ್ಲ. ಇವರನ್ನು ನಂಬಿ ಮತ ನೀಡಿದ ದಲಿತರು, ಅಲ್ಪಸಂಖ್ಯಾತರು ಮತ್ತು ಹಿಂದುಳಿದ ಸಮುದಾಯಗಳಿಗೆ ಭಾರಿ ನಿರಾಶೆ ಉಂಟಾಗಿದೆ.

ಪ್ರಸ್ತುತ ಬಜೆಟ್‍ನಲ್ಲಿ ನಗರಾಭಿವೃದ್ಧಿ ಮತ್ತು ಕೈಗಾರಿಕಾಭಿವೃದ್ಧಿ ವಲಯಗಳಿಗೆ 55732 ಕೋಟಿ ರೂ.ಗಳನ್ನು ಒದಗಿಸಿರುವುದು ಪ್ರಸ್ತುತ ಸರ್ಕಾರ ಕೈಗಾರಿಕೋದ್ಯಮಿಗಳು, ವ್ಯಾಪಾರಿಗಳು ಮತ್ತಿತರ ಶ್ರೀಮಂತ ಜನವರ್ಗಗಳ ಪರವಾಗಿರುವುದನ್ನು ಸ್ಪಷ್ಟಪಡಿಸುತ್ತದೆ. ಹೊಸ ಕೃಷಿ ನೀತಿಯೊಂದನ್ನು ರೂಪಿಸಲು ಮುಂದಾಗಿದ್ದರೂ ಸಹ ಬಹುಸಂಖ್ಯಾತ ಕೃಷಿಕರ ಸಬಲೀಕರಣಕ್ಕೆ ಹೆಚ್ಚಿನ ಆರ್ಥಿಕ ಸಂಪನ್ಮೂಲಗಳನ್ನು ಒದಗಿಸಿ ಅನ್ನದಾತರ ಬದುಕನ್ನು ಹಸನಾಗಿಸಲು ಪ್ರಸ್ತುತ ಸರ್ಕಾರ ಮುಂದೆ ಬಂದಿಲ್ಲ.

ಮೊಟ್ಟಮೊದಲ ಬಾರಿಗೆ ಮಕ್ಕಳ ಬಜೆಟ್ ಮಂಡಿಸಿದ್ದರೂ ಸಹ ತಾಯಂದಿರು ಮತ್ತು ಮಕ್ಕಳ ಆಹಾರ, ಪೌಷ್ಟಿಕತೆ, ಶಿಕ್ಷಣ, ಆರೋಗ್ಯ, ಸುರಕ್ಷತೆ ಮೊದಲಾದವುಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಆರ್ಥಿಕ ನೆರವು ನೀಡದಿರುವುದು ನಿಜಕ್ಕೂ ದುರಂತದ ವಿಷಯವಾಗಿದೆ. ವಿಶೇಷವಾಗಿ ಮಹಿಳೆಯರು ಮತ್ತು ಯುವಜನರ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಅಭಿವೃದ್ಧಿ ಮತ್ತು ಆರ್ಥಿಕಾಭಿವೃದ್ಧಿಗಳ ವಿಷಯಗಳಲ್ಲಿ ಸರ್ಕಾರ ದಿವ್ಯ ಮೌನ ವಹಿಸಿರುವುದು ಪ್ರಸ್ತುತ ಬಜೆಟ್ ಮಾನವ ಸ್ಪರ್ಶರಹಿತವಾಗಿದೆ ಎಂಬುದನ್ನು ಪ್ರಸ್ತುತಪಡಿಸುತ್ತದೆ. ರಾಜ್ಯದ ಅಭಿವೃದ್ಧಿಗಾಗಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವಕ್ಕೆ ಸರ್ಕಾರ ವಿಶೇಷ ಮಹತ್ವ ನೀಡಿದೆಯಾದರೂ ಜನವಿರೋಧಿ ಪ್ರಭುತ್ವ ಮತ್ತು ಬಂಡವಾಳಶಾಹಿಗಳ ಕೂಟದಿಂದ ರಾಜ್ಯದ ಮಹಿಳೆಯರು ಮತ್ತು ದುರ್ಬಲ ವರ್ಗಗಳ ಉದ್ಧಾರ ಸಾಧ್ಯವಿಲ್ಲವೆಂಬ ಅರಿವು ಜನರಲ್ಲಿದೆ.

ರಾಜ್ಯದ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ನಿಜಲಿಂಗಪ್ಪನವರ ಮನೆಯನ್ನು ಸ್ಮಾರಕವನ್ನಾಗಿ ರೂಪಿಸಲು ಸರ್ಕಾರ ಬಜೆಟ್‍ನಲ್ಲಿ 5 ಕೋಟಿ ರೂ.ಗಳನ್ನು ಮೀಸಲಿಟ್ಟಿರುವುದು ಒಂದು ರಾಜಕೀಯ ಗಿಮಿಕ್ ಆಗಿದೆಯೇ ಹೊರತಾಗಿ ಇಂತಹ ಕ್ರಮದಿಂದ ನಿಜಲಿಂಗಪ್ಪನವರ ಆತ್ಮಕ್ಕೆ ನಿಜಕ್ಕೂ ಶಾಂತಿ ಲಭಿಸುವುದಿಲ್ಲ. ಸರ್ಕಾರಕ್ಕೆ ನಿಜಲಿಂಗಪ್ಪನವರ ಬಗ್ಗೆ ಕಳಕಳಿಯಿದ್ದಲ್ಲಿ ಅವರ ಹುಟ್ಟೂರು ಚಿತ್ರದುರ್ಗ ಜಿಲ್ಲೆಯ ದೊಡ್ಡ ಸಿದ್ದವನ ಹಳ್ಳಿಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ಅಲ್ಲಿನ ಸಮಸ್ತ ನಾಗರೀಕರ ಬದುಕನ್ನು ಹಸನುಗೊಳಿಸಿ ಅದನ್ನು ಮಾದರಿ ಗ್ರಾಮವನ್ನಾಗಿ ರೂಪಿಸಬಹುದಿತ್ತು. ಸರ್ದಾರ್ ಪಟೇಲರು ಕೊಳೆಗೇರಿಗಳ ನಡುವೆ ಬಡವರ ಗೋರಿಗಳ ಮೇಲೆ ಅವರ ಭವ್ಯ ಪ್ರತಿಮೆಯನ್ನು ಕೇಂದ್ರ ಸರ್ಕಾರ ಸ್ಥಾಪಿಸಿರುವುದನ್ನು ಕಂಡು ಮೌನವಾಗಿ ರೋಧಿಸುತ್ತಿದ್ದಾರೆ. ಬಸವಣ್ಣ, ಕೆಂಪೇಗೌಡ ಮೊದಲಾದ ಮಹಾಪುರುಷರಿಗೆ ಪ್ರತಿಮೆಗಳು ಮತ್ತು ಸ್ಮಾರಕಗಳನ್ನು ನಿರ್ಮಿಸಲು ಸಾವಿರಾರು ಕೋಟಿ ರೂ.ಗಳನ್ನು ಅನವಶ್ಯಕವಾಗಿ ಖರ್ಚು ಮಾಡುವುದಕ್ಕಿಂತ ಅವರ ಹೆಸರಿನಲ್ಲಿ ಲೋಕಕಲ್ಯಾಣಕ್ಕಾಗಿ ಅಭಿವೃದ್ಧಿ ಯೋಜನೆಗಳನ್ನು ಅನುಷ್ಟಾನಗೊಳಿಸಿದರೆ ನಿಜಕ್ಕೂ ಸಮಾಜಕ್ಕೆ ಲಾಭವುಂಟಾಗುತ್ತದೆ.

ನಿರೀಕ್ಷಿತ ಆದಾಯಕ್ಕೂ ವೆಚ್ಚಕ್ಕೂ ಪ್ರಸ್ತುತ ಬಜೆಟ್‍ನಲ್ಲಿ 4759 ಕೋಟಿ ರೂ.ಗಳ ಅಂತರವಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಮಂಡಿಸಿರುವ ಪ್ರಸ್ತುತ ಖೋತಾ ಬಜೆಟ್ ರಾಜ್ಯದ ಎಲ್ಲ ಜಿಲ್ಲೆಗಳು ಮತ್ತು ಸಮುದಾಯಗಳ ಸಮಗ್ರ ಅಭಿವೃದ್ಧಿಗೆ ಪೂರಕವಾಗಿಲ್ಲ. ಅಸಂಖ್ಯಾತ ಪ್ರವಾಹ ಪೀಡಿತ ಜನರು ಇಂದಿಗೂ ಕೂಡ ಸೂಕ್ತ ಪ್ರಮಾಣದಲ್ಲಿ ಪರಿಹಾರ ಪಡೆಯದೇ ಬೀದಿಯಲ್ಲಿ ನರಳುತ್ತಿದ್ದಾರೆ. ಕೇಂದ್ರ ಸರ್ಕಾರದಿಂದ ನಿರೀಕ್ಷಿತ ಪ್ರಮಾಣದಲ್ಲಿ ಅನುದಾನ ಬರದಿಲ್ಲದಿರುವುದು ಮತ್ತು ವಿತ್ತೀಯ ಕೊರತೆಗಳ ಕಾರಣದಿಂದ ಅನ್ನಭಾಗ್ಯ ಸೇರಿದಂತೆ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಕಡಿಮೆಯಾಗಿರುವುದು ರಾಜ್ಯದ ಮುಂದಿನ ಅಭಿವೃದ್ಧಿ ದೃಷ್ಟಿಯಿಂದ ಆಶಾದಾಯಕ ಬೆಳವಣಿಗೆಯಾಗಿಲ್ಲ.

ಹಿಂದಿನ ಸರ್ಕಾರದ ಹಲವು ಯೋಜನೆಗಳನ್ನು ಯಥಾವತ್ತಾಗಿ ಇಂದಿನ ಸರ್ಕಾರ ಮುಂದುವರೆಸಿದೆಯಾದರೂ ಹೊಸ ಯೋಜನೆಗಳಿಗೆ ಆರ್ಥಿಕ ಸಂಪನ್ಮೂಲಗಳ ಕೊರತೆ ಎದ್ದು ಕಾಣುತ್ತಿದೆ. ಕರ್ನಾಟಕವೆಂದರೆ ಪ್ರಭಾವಶಾಲಿಗಳು ಐಷಾರಾಮಿ ಜೀವನ ನಡೆಸುವ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲ ಎಂಬ ಸತ್ಯವನ್ನು ಸರ್ಕಾರ ಮನಗಾಣಬೇಕು. ಪ್ರವಾಸೋದ್ಯಮದ ಹೆಸರಿನಲ್ಲಿ ಕ್ಯಾಸಿನೊ ಕ್ಲಬ್‍ಗಳನ್ನು ಸ್ಥಾಪಿಸಿ ಜೂಜುಗಾರಿಕೆ ಮತ್ತು ವೇಶ್ಯಾವಾಟಿಕೆಗಳನ್ನು ಪ್ರೋತ್ಸಾಹಿಸುವುದು ನಾಡಿನ ಘನತೆಯನ್ನು ಕುಗ್ಗಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...