Homeಮುಖಪುಟದುರ್ಬಲ ವರ್ಗಗಳಿಗೆ ಮಾರಕ ಪ್ರಾಯವಾದ ಬಜೆಟ್ : ಪ್ರೊ.ಮಹೇಶಚಂದ್ರ ಗುರು

ದುರ್ಬಲ ವರ್ಗಗಳಿಗೆ ಮಾರಕ ಪ್ರಾಯವಾದ ಬಜೆಟ್ : ಪ್ರೊ.ಮಹೇಶಚಂದ್ರ ಗುರು

ರಾಜ್ಯ ರಾಜಧಾನಿ ಬೆಂಗಳೂರು ನಗರಕ್ಕೆ ಹೆಚ್ಚು ಅನುಕೂಲತೆಗಳನ್ನು ಕಲ್ಪಿಸಿ ಹಿಂದುಳಿದ ಪ್ರದೇಶಗಳ ಅಭಿವೃದ್ಧಿಯನ್ನು ರಾಜ್ಯ ಸರ್ಕಾರ ಕಡೆಗಣಿಸಿರುವುದು ಬಜೆಟ್ ಮಾನವ ಸ್ಪರ್ಶ ಹೊಂದಿಲ್ಲವೆಂದು ತಿಳಿಸುತ್ತದೆ.

- Advertisement -
- Advertisement -

ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ಮಂಡಿಸಿದ 2020-21ನೇ ಸಾಲಿನ ಬಜೆಟ್ ಸಮಾಜದ ದಮನಿತ ಜನವರ್ಗಗಳ ಪಾಲಿಗೆ ಒಳಿತು ಮಾಡುವಂತಹ ಗುಣಲಕ್ಷಣಗಳನ್ನು ಒಳಗೊಂಡಿಲ್ಲ. ‘ಕರ್ನಾಟಕ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯೇ ನಮ್ಮ ಗುರಿ’ ಎಂದು ಮುಖ್ಯಮಂತ್ರಿಗಳು ಮಾಡಿರುವ ಘೋಷಣೆಗೆ ಪ್ರಸ್ತುತ ಬಜೆಟ್ ತದ್ವಿರುದ್ಧವಾಗಿದೆ. ಶಿಕ್ಷಣ, ಆರೋಗ್ಯ, ಆಹಾರ ಭದ್ರತೆ, ಮೂಲ ಸೌಕರ್ಯಗಳ ಅಭಿವೃದ್ಧಿ, ಕೃಷಿ ಕ್ಷೇತ್ರದ ಬೆಳವಣಿಗೆ, ಸೇವಾ ವಲಯದ ಸುಧಾರಣೆ, ಕೈಗಾರಿಕಾಭಿವೃದ್ಧಿ, ಸಾಮಾಜಿಕ ನ್ಯಾಯ ವಿತರಣೆ ಮೊದಲಾದ ಪ್ರಜಾಸತ್ತಾತ್ಮಕ ಹಾಗೂ ವಿತರಣಾತ್ಮಕ ಅಭಿವೃದ್ಧಿ ಆಶಯಗಳಿಗೆ ಪೂರಕವಾದ ಕ್ರಮಗಳನ್ನು ಬಜೆಟ್ ಹೊಂದಿಲ್ಲ.

ಕರ್ನಾಟಕದಿಂದ ಸುಮಾರು 25 ಸಂಸದರನ್ನು ಗೆಲ್ಲಿಸಿರುವ ಯಡಿಯೂರಪ್ಪನವರ ನಾಯಕತ್ವ ಹಾಗೂ ಮತದಾರರ ಆಶಯಗಳಿಗೆ ಕೇಂದ್ರ ಸರ್ಕಾರ ಸುಮಾರು 15 ಸಾವಿರ ಕೋಟಿ ರೂ. ಅನುದಾನ ನೀಡದೇ ಅನ್ಯಾಯವೆಸಗಿರುವುದು ಖಂಡನೀಯ. ರಾಜ್ಯಕ್ಕೆ ನ್ಯಾಯೋಚಿತ ಜಿಎಸ್‍ಟಿ ಪಾಲು ನೀಡದೇ ಇರುವುದು ಪ್ರಸ್ತುತ ಖೋತಾ ಬಜೆಟ್ ಮಂಡನೆಗೆ ಪ್ರಮುಖ ಕಾರಣವಾಗಿದೆ.

ಮುಖ್ಯಮಂತ್ರಿಗಳು ರಾಜ್ಯದ ಆರ್ಥಿಕತೆಗೆ ಮಾರಕಪ್ರಾಯವಾದ ಬಜೆಟ್ ಮಂಡಿಸಿರುವುದು ಪ್ರಜ್ಞಾವಂತರ ಕೆಂಗಣ್ಣಿಗೆ ಗುರಿಯಾಗಿದೆ. ರಾಜ್ಯ ರಾಜಧಾನಿ ಬೆಂಗಳೂರು ನಗರಕ್ಕೆ ಹೆಚ್ಚು ಅನುಕೂಲತೆಗಳನ್ನು ಕಲ್ಪಿಸಿ ಹಿಂದುಳಿದ ಪ್ರದೇಶಗಳ ಅಭಿವೃದ್ಧಿಯನ್ನು ರಾಜ್ಯ ಸರ್ಕಾರ ಕಡೆಗಣಿಸಿರುವುದು ಬಜೆಟ್ ಮಾನವ ಸ್ಪರ್ಶ ಹೊಂದಿಲ್ಲವೆಂದು ತಿಳಿಸುತ್ತದೆ.

ಹಿಂದಿನ ಬಜೆಟ್‍ಗಳಿಗೆ ಹೋಲಿಸಿದಾಗ ಈ ಬಾರಿ ಮಂಡನೆಯಾಗಿರುವ ಬಜೆಟ್‍ನಲ್ಲಿ ವಿಶೇಷವಾಗಿ ಹಿಂದುಳಿದ ವರ್ಗಗಳಿಗೆ ಹೆಚ್ಚಿನ ಅನ್ಯಾಯವುಂಟಾಗಿದೆ. ಆಹಾರ ಸಬ್ಸಿಡಿಗೆ ಹಿಂದಿನ ಬಜೆಟ್‍ನಲ್ಲಿ 3555 ಕೋಟಿ ರೂ.ಗಳನ್ನು ಒದಗಿಸಿದ್ದರೆ ಈ ಬಾರಿ 2556 ಕೋಟಿ ರೂ.ಗಳನ್ನು ನೀಡಿರುವುದು ಅನ್ನಭಾಗ್ಯ ಯೋಜನೆಯ ಪರಿಣಾಮಕಾರಿ ಅನುಷ್ಟಾನಕ್ಕೆ ಬಹುದೊಡ್ಡ ಪೆಟ್ಟು ನೀಡಲಿದೆ. ಹಿಂದಿನ ಮುಖ್ಯಮಂತ್ರಿ ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಹಸಿವಿನಿಂದ ಸಾಯುವ ಲಕ್ಷಾಂತರ ಜನರ ಅಮೂಲ್ಯ ಜೀವಗಳನ್ನು ಉಳಿಸಲು ಅನ್ನಭಾಗ್ಯ ಯೋಜನೆಯನ್ನು ಘೋಷಿಸಿ ತಮ್ಮ ಅಧಿಕಾರಾವಧಿಯಲ್ಲಿ ಅಲಕ್ಷಿತ ಜನರ ಹಸಿವನ್ನು ನೀಗಿಸಿ ನಿಜವಾದ ಅರ್ಥದಲ್ಲಿ ‘ಅನ್ನಭಾಗ್ಯವಿಧಾತ’ ಎಂಬ ಗೌರವಕ್ಕೆ ಭಾಜನರಾದರು. ಆದರೆ ಯಡಿಯೂರಪ್ಪನವರು ಆರ್ಥಿಕ ಸಂಪನ್ಮೂಲಗಳ ಕೊರತೆಯ ನೆಪದಲ್ಲಿ ಪ್ರಜೆಗಳ ಆಹಾರ ಭದ್ರತೆಗೆ ವಿರುದ್ಧವಾಗಿ ಬಜೆಟ್ ಮಂಡಿಸಿ ಅಸಂಖ್ಯಾತ ಬಡವರ ಬದುಕುವ ಮೂಲಭೂತ ಹಕ್ಕನ್ನು ಕಸಿದುಕೊಂಡಿದ್ದಾರೆ.

ಹಿಂದಿನ ಸರ್ಕಾರಗಳು ಹಲವಾರು ಇತಿಮಿತಿಗಳ ನಡುವೆಯೂ ಅಸಂಖ್ಯಾತ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಬಡವರಿಗೆ ವಸತಿ ಸೌಲಭ್ಯ ನೀಡುವ ಬದ್ಧತೆ ಹೊಂದಿದ್ದವು. ಹಿಂದಿನ ಬಜೆಟ್‍ನಲ್ಲಿ ವಸತಿ ವಲಯಕ್ಕೆ 2057 ಕೋಟಿ ರೂ.ಗಳನ್ನು ಒದಗಿಸಿದ್ದರೆ ಈ ಬಾರಿ 1250 ಕೋಟಿ ರೂ.ಗಳನ್ನು ನೀಡಿರುವುದು ಸರ್ಕಾರದ ಬೇಜವಾಬ್ದಾರಿತನಕ್ಕೆ ಸಾಕ್ಷಿಯಾಗಿದೆ. ಹಿಂದಿನ ಸರ್ಕಾರಗಳು ದೀನ ದುರ್ಬಲರಿಗೆ ವಿವಿಧ ಕ್ಷೇತ್ರಗಳಲ್ಲಿ ಅನುಕೂಲ ಮಾಡಿಕೊಡಲು 25,688 ಕೋಟಿ ರೂ.ಗಳನ್ನು ಸಬ್ಸಿಡಿಗಾಗಿ ಒದಗಿಸಿದ್ದರೆ ಈ ಬಾರಿ 23,475 ಕೋಟಿ ರೂ. ಗಳನ್ನಷ್ಟೇ ಒದಗಿಸಿರುವುದು ಬಹುಜನರ ಬದುಕನ್ನು ಅತಂತ್ರಗೊಳಿಸಲು ಕಾರಣವಾಗಿದೆ.

ವಿಶೇಷವಾಗಿ ಶಿಕ್ಷಣ ಕ್ಷೇತ್ರಕ್ಕೆ ಹಿಂದಿನ ಸರ್ಕಾರ 538.11 ಕೋಟಿ ರೂ.ಗಳನ್ನು ಒದಗಿಸಿದ್ದರೆ ಈ ಸರ್ಕಾರ ಈ ಬಾರಿ 390.46 ಕೋಟಿ ರೂ.ಗಳನ್ನು ಒದಗಿಸಿರುವುದು ಸರಿಯಲ್ಲ. ಅದೇ ರೀತಿ ಮಹಿಳೆಯರು ಮತ್ತು ಮಕ್ಕಳ ಅಭಿವೃದ್ಧಿಗೆ ಹಿಂದಿನ ಸರ್ಕಾರ 538.11 ಕೋಟಿ ರೂ.ಗಳನ್ನು ಒದಗಿಸಿದ್ದರೆ ಈ ಸರ್ಕಾರ 390.46 ಕೋಟಿ ರೂ.ಗಳನ್ನು ಒದಗಿಸಿರುವುದು ಬಹುಸಂಖ್ಯಾತ ಮಹಿಳೆಯರು ಮತ್ತು ಮಕ್ಕಳನ್ನು ನಿರ್ಲಕ್ಷಿಸಿರುವುದಕ್ಕೆ ಪುರಾವೆಯಾಗಿದೆ.

ಅಸಂಖ್ಯಾತ ರೈತರ ಬದುಕನ್ನು ಹಸನುಗೊಳಿಸುವ ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳಿಗೆ ಹಿಂದಿನ ಸರ್ಕಾರ 2865.59 ಕೋಟಿ ರೂ.ಗಳನ್ನು ಒದಗಿಸಿದ್ದರೆ ಈ ಬಾರಿ ಸರ್ಕಾರ 2661.32 ಕೋಟಿ ರೂ.ಗಳನ್ನು ಒದಗಿಸಿರುವುದು ತರವಲ್ಲ. ವಿಶೇಷವಾಗಿ ಅತ್ಯಂತ ದುರ್ಬಲ ವರ್ಗಗಳಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ಹಿಂದಿನ ಸರ್ಕಾರ 26,930 ಕೋಟಿ ರೂ.ಗಳನ್ನು ಒದಗಿಸಿದ್ದರೆ ಈಗಿನ ಸರ್ಕಾರ 26,131 ಕೋಟಿ ರೂ.ಗಳನ್ನು ಒದಗಿಸಿ ಸುಮಾರು 3250 ಕೋಟಿ ರೂ.ಗಳನ್ನು ಕಡಿತಗೊಳಿಸಿದೆ. ವಿವಿಧ ಕ್ಷೇತ್ರಗಳಲ್ಲಿ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡುತ್ತಿರುವ ಧಾರ್ಮಿಕ ಅಲ್ಪಸಂಖ್ಯಾತರ ಅಭಿವೃದ್ಧಿಯನ್ನು ಈಗಿನ ಸರ್ಕಾರ ಅಮಾನುಷವಾಗಿ ಕಡೆಗಣಿಸಿದೆ. ಕಳಸಾ ಬಂಡೂರಿ ಯೋಜನೆಗೆ 500 ಕೋಟಿ ರೂ.ಗಳು ಮತ್ತು ಮಹದಾಯಿ ಕುಡಿಯುವ ನೀರಿನ ಯೋಜನೆಗೆ 1500 ಕೋಟಿ ರೂ.ಗಳನ್ನು ಸರ್ಕಾರ ಬಜೆಟ್‍ನಲ್ಲಿ ನಿಗಧಿಗೊಳಿಸಿರುವುದು ಯೋಜನೆಗೆ ತಗಲುವ ಒಟ್ಟು ವೆಚ್ಚಕ್ಕೆ ಅನುಗುಣವಾಗಿಲ್ಲ.

ದೀನ ದುರ್ಬಲ ವರ್ಗಗಳ ಶಿಕ್ಷಣ, ಆರೋಗ್ಯ, ಅಭಿವೃದ್ಧಿ, ಸುರಕ್ಷತೆ ಮೊದಲಾದ ವಿಷಯಗಳಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಮಲತಾಯಿ ಧೋರಣೆ ಅನುಸರಿಸಿರುವುದು ಕೇಂದ್ರ ಬಜೆಟ್ ಮತ್ತು ರಾಜ್ಯ ಬಜೆಟ್‍ಗಳಲ್ಲಿ ಸ್ಪಷ್ಟವಾಗಿ ಕಂಡುಬರುತ್ತದೆ. ವಾಸ್ತವವಾಗಿ ಕರ್ನಾಟಕ ರಾಜ್ಯ ಸರ್ಕಾರದ ಧೋರಣೆ, ಆಯವ್ಯಯ ಮತ್ತು ನಡವಳಿಕೆಗಳು ಎಲ್ಲ ಜನವರ್ಗಗಳ ಒಳಗೊಳ್ಳುವ ಅಭಿವೃದ್ಧಿಗೆ ಪೂರಕವಾಗಿಲ್ಲ. ಇವರನ್ನು ನಂಬಿ ಮತ ನೀಡಿದ ದಲಿತರು, ಅಲ್ಪಸಂಖ್ಯಾತರು ಮತ್ತು ಹಿಂದುಳಿದ ಸಮುದಾಯಗಳಿಗೆ ಭಾರಿ ನಿರಾಶೆ ಉಂಟಾಗಿದೆ.

ಪ್ರಸ್ತುತ ಬಜೆಟ್‍ನಲ್ಲಿ ನಗರಾಭಿವೃದ್ಧಿ ಮತ್ತು ಕೈಗಾರಿಕಾಭಿವೃದ್ಧಿ ವಲಯಗಳಿಗೆ 55732 ಕೋಟಿ ರೂ.ಗಳನ್ನು ಒದಗಿಸಿರುವುದು ಪ್ರಸ್ತುತ ಸರ್ಕಾರ ಕೈಗಾರಿಕೋದ್ಯಮಿಗಳು, ವ್ಯಾಪಾರಿಗಳು ಮತ್ತಿತರ ಶ್ರೀಮಂತ ಜನವರ್ಗಗಳ ಪರವಾಗಿರುವುದನ್ನು ಸ್ಪಷ್ಟಪಡಿಸುತ್ತದೆ. ಹೊಸ ಕೃಷಿ ನೀತಿಯೊಂದನ್ನು ರೂಪಿಸಲು ಮುಂದಾಗಿದ್ದರೂ ಸಹ ಬಹುಸಂಖ್ಯಾತ ಕೃಷಿಕರ ಸಬಲೀಕರಣಕ್ಕೆ ಹೆಚ್ಚಿನ ಆರ್ಥಿಕ ಸಂಪನ್ಮೂಲಗಳನ್ನು ಒದಗಿಸಿ ಅನ್ನದಾತರ ಬದುಕನ್ನು ಹಸನಾಗಿಸಲು ಪ್ರಸ್ತುತ ಸರ್ಕಾರ ಮುಂದೆ ಬಂದಿಲ್ಲ.

ಮೊಟ್ಟಮೊದಲ ಬಾರಿಗೆ ಮಕ್ಕಳ ಬಜೆಟ್ ಮಂಡಿಸಿದ್ದರೂ ಸಹ ತಾಯಂದಿರು ಮತ್ತು ಮಕ್ಕಳ ಆಹಾರ, ಪೌಷ್ಟಿಕತೆ, ಶಿಕ್ಷಣ, ಆರೋಗ್ಯ, ಸುರಕ್ಷತೆ ಮೊದಲಾದವುಗಳಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಆರ್ಥಿಕ ನೆರವು ನೀಡದಿರುವುದು ನಿಜಕ್ಕೂ ದುರಂತದ ವಿಷಯವಾಗಿದೆ. ವಿಶೇಷವಾಗಿ ಮಹಿಳೆಯರು ಮತ್ತು ಯುವಜನರ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಅಭಿವೃದ್ಧಿ ಮತ್ತು ಆರ್ಥಿಕಾಭಿವೃದ್ಧಿಗಳ ವಿಷಯಗಳಲ್ಲಿ ಸರ್ಕಾರ ದಿವ್ಯ ಮೌನ ವಹಿಸಿರುವುದು ಪ್ರಸ್ತುತ ಬಜೆಟ್ ಮಾನವ ಸ್ಪರ್ಶರಹಿತವಾಗಿದೆ ಎಂಬುದನ್ನು ಪ್ರಸ್ತುತಪಡಿಸುತ್ತದೆ. ರಾಜ್ಯದ ಅಭಿವೃದ್ಧಿಗಾಗಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವಕ್ಕೆ ಸರ್ಕಾರ ವಿಶೇಷ ಮಹತ್ವ ನೀಡಿದೆಯಾದರೂ ಜನವಿರೋಧಿ ಪ್ರಭುತ್ವ ಮತ್ತು ಬಂಡವಾಳಶಾಹಿಗಳ ಕೂಟದಿಂದ ರಾಜ್ಯದ ಮಹಿಳೆಯರು ಮತ್ತು ದುರ್ಬಲ ವರ್ಗಗಳ ಉದ್ಧಾರ ಸಾಧ್ಯವಿಲ್ಲವೆಂಬ ಅರಿವು ಜನರಲ್ಲಿದೆ.

ರಾಜ್ಯದ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ನಿಜಲಿಂಗಪ್ಪನವರ ಮನೆಯನ್ನು ಸ್ಮಾರಕವನ್ನಾಗಿ ರೂಪಿಸಲು ಸರ್ಕಾರ ಬಜೆಟ್‍ನಲ್ಲಿ 5 ಕೋಟಿ ರೂ.ಗಳನ್ನು ಮೀಸಲಿಟ್ಟಿರುವುದು ಒಂದು ರಾಜಕೀಯ ಗಿಮಿಕ್ ಆಗಿದೆಯೇ ಹೊರತಾಗಿ ಇಂತಹ ಕ್ರಮದಿಂದ ನಿಜಲಿಂಗಪ್ಪನವರ ಆತ್ಮಕ್ಕೆ ನಿಜಕ್ಕೂ ಶಾಂತಿ ಲಭಿಸುವುದಿಲ್ಲ. ಸರ್ಕಾರಕ್ಕೆ ನಿಜಲಿಂಗಪ್ಪನವರ ಬಗ್ಗೆ ಕಳಕಳಿಯಿದ್ದಲ್ಲಿ ಅವರ ಹುಟ್ಟೂರು ಚಿತ್ರದುರ್ಗ ಜಿಲ್ಲೆಯ ದೊಡ್ಡ ಸಿದ್ದವನ ಹಳ್ಳಿಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ಅಲ್ಲಿನ ಸಮಸ್ತ ನಾಗರೀಕರ ಬದುಕನ್ನು ಹಸನುಗೊಳಿಸಿ ಅದನ್ನು ಮಾದರಿ ಗ್ರಾಮವನ್ನಾಗಿ ರೂಪಿಸಬಹುದಿತ್ತು. ಸರ್ದಾರ್ ಪಟೇಲರು ಕೊಳೆಗೇರಿಗಳ ನಡುವೆ ಬಡವರ ಗೋರಿಗಳ ಮೇಲೆ ಅವರ ಭವ್ಯ ಪ್ರತಿಮೆಯನ್ನು ಕೇಂದ್ರ ಸರ್ಕಾರ ಸ್ಥಾಪಿಸಿರುವುದನ್ನು ಕಂಡು ಮೌನವಾಗಿ ರೋಧಿಸುತ್ತಿದ್ದಾರೆ. ಬಸವಣ್ಣ, ಕೆಂಪೇಗೌಡ ಮೊದಲಾದ ಮಹಾಪುರುಷರಿಗೆ ಪ್ರತಿಮೆಗಳು ಮತ್ತು ಸ್ಮಾರಕಗಳನ್ನು ನಿರ್ಮಿಸಲು ಸಾವಿರಾರು ಕೋಟಿ ರೂ.ಗಳನ್ನು ಅನವಶ್ಯಕವಾಗಿ ಖರ್ಚು ಮಾಡುವುದಕ್ಕಿಂತ ಅವರ ಹೆಸರಿನಲ್ಲಿ ಲೋಕಕಲ್ಯಾಣಕ್ಕಾಗಿ ಅಭಿವೃದ್ಧಿ ಯೋಜನೆಗಳನ್ನು ಅನುಷ್ಟಾನಗೊಳಿಸಿದರೆ ನಿಜಕ್ಕೂ ಸಮಾಜಕ್ಕೆ ಲಾಭವುಂಟಾಗುತ್ತದೆ.

ನಿರೀಕ್ಷಿತ ಆದಾಯಕ್ಕೂ ವೆಚ್ಚಕ್ಕೂ ಪ್ರಸ್ತುತ ಬಜೆಟ್‍ನಲ್ಲಿ 4759 ಕೋಟಿ ರೂ.ಗಳ ಅಂತರವಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಮಂಡಿಸಿರುವ ಪ್ರಸ್ತುತ ಖೋತಾ ಬಜೆಟ್ ರಾಜ್ಯದ ಎಲ್ಲ ಜಿಲ್ಲೆಗಳು ಮತ್ತು ಸಮುದಾಯಗಳ ಸಮಗ್ರ ಅಭಿವೃದ್ಧಿಗೆ ಪೂರಕವಾಗಿಲ್ಲ. ಅಸಂಖ್ಯಾತ ಪ್ರವಾಹ ಪೀಡಿತ ಜನರು ಇಂದಿಗೂ ಕೂಡ ಸೂಕ್ತ ಪ್ರಮಾಣದಲ್ಲಿ ಪರಿಹಾರ ಪಡೆಯದೇ ಬೀದಿಯಲ್ಲಿ ನರಳುತ್ತಿದ್ದಾರೆ. ಕೇಂದ್ರ ಸರ್ಕಾರದಿಂದ ನಿರೀಕ್ಷಿತ ಪ್ರಮಾಣದಲ್ಲಿ ಅನುದಾನ ಬರದಿಲ್ಲದಿರುವುದು ಮತ್ತು ವಿತ್ತೀಯ ಕೊರತೆಗಳ ಕಾರಣದಿಂದ ಅನ್ನಭಾಗ್ಯ ಸೇರಿದಂತೆ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಕಡಿಮೆಯಾಗಿರುವುದು ರಾಜ್ಯದ ಮುಂದಿನ ಅಭಿವೃದ್ಧಿ ದೃಷ್ಟಿಯಿಂದ ಆಶಾದಾಯಕ ಬೆಳವಣಿಗೆಯಾಗಿಲ್ಲ.

ಹಿಂದಿನ ಸರ್ಕಾರದ ಹಲವು ಯೋಜನೆಗಳನ್ನು ಯಥಾವತ್ತಾಗಿ ಇಂದಿನ ಸರ್ಕಾರ ಮುಂದುವರೆಸಿದೆಯಾದರೂ ಹೊಸ ಯೋಜನೆಗಳಿಗೆ ಆರ್ಥಿಕ ಸಂಪನ್ಮೂಲಗಳ ಕೊರತೆ ಎದ್ದು ಕಾಣುತ್ತಿದೆ. ಕರ್ನಾಟಕವೆಂದರೆ ಪ್ರಭಾವಶಾಲಿಗಳು ಐಷಾರಾಮಿ ಜೀವನ ನಡೆಸುವ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲ ಎಂಬ ಸತ್ಯವನ್ನು ಸರ್ಕಾರ ಮನಗಾಣಬೇಕು. ಪ್ರವಾಸೋದ್ಯಮದ ಹೆಸರಿನಲ್ಲಿ ಕ್ಯಾಸಿನೊ ಕ್ಲಬ್‍ಗಳನ್ನು ಸ್ಥಾಪಿಸಿ ಜೂಜುಗಾರಿಕೆ ಮತ್ತು ವೇಶ್ಯಾವಾಟಿಕೆಗಳನ್ನು ಪ್ರೋತ್ಸಾಹಿಸುವುದು ನಾಡಿನ ಘನತೆಯನ್ನು ಕುಗ್ಗಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...