Homeಮುಖಪುಟ50 ರೂ. ಕದ್ದಿದ್ದಾನೆ ಎಂದು ಆರೋಪಿಸಿ 10 ವರ್ಷದ ಮಗನನ್ನೇ ಥಳಿಸಿ ಕೊಂದ ತಂದೆ

50 ರೂ. ಕದ್ದಿದ್ದಾನೆ ಎಂದು ಆರೋಪಿಸಿ 10 ವರ್ಷದ ಮಗನನ್ನೇ ಥಳಿಸಿ ಕೊಂದ ತಂದೆ

- Advertisement -
- Advertisement -

50 ರೂ. ಕದ್ದಿದ್ದಾನೆ ಎಂದು ಆರೋಪಿಸಿ ತನ್ನ ಹತ್ತು ವರ್ಷದ ಮಗುವನ್ನೇ ಥಳಿಸಿ ಸಾಯಿಸಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ವಾದಲ್ಲಿ ಗುರುವಾರ ನಡೆದಿದೆ ಎಂದು ವರದಿಯಾಗಿದೆ. ಆರೋಪಿಯನ್ನು ಸಂದೀಪ್‌ ಬಬ್ಲು ಓಂಪ್ರಕಾಶ್‌ ಪ್ರಜಾಪತಿ(41) ಎಂದು ಗುರುತಿಸಲಾಗಿದೆ.

ಆರೋಪಿಯು ತನ್ನ 10 ವರ್ಷದ ಮಗನನ್ನು ಮನೆಯಿಂದ 50 ರೂಪಾಯಿ ಕದ್ದಿದ್ದಾನೆ ಎಂದು ಆರೋಪಿಸಿ ಥಳಿಸಿ ಕೊಂದಿದ್ದಾನೆ. ವಘೋಬಾ ನಗರದ ಸ್ಲಂ ಕಾಲೋನಿ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ ನಂತರ ಶುಕ್ರವಾರದಂದು ವ್ಯಕ್ತಿಯನ್ನು ಬಂಧಿಸಲಾಗಿದೆ.

ಇದನ್ನೂ ಓದಿ:ಉತ್ತರ ಕನ್ನಡ: ಜೀವ ವೈವಿಧ್ಯ ಮಂಡಳಿ ಅಧ್ಯಕ್ಷತೆಗೆ ಆಶೀಸರ ರಾಜೀನಾಮೆ; ನಿಗಮ-ಮಂಡಳಿಗೆ ಬಿಜೆಪಿಯಲ್ಲಿ ಪೈಪೋಟಿ

ಬಾಲಕನೂ ನೆಲದ ಮೇಲೆ ಚಲನರಹಿತವಾಗಿ ಬಿದ್ದಿರುವುದು ಕಂಡುಬಂದಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

“ಪೊಲೀಸ್‌ ತಂಡವು ಮಗುವನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಿದೆ. ಆದರೆ ಅಲ್ಲಿನ ವೈದ್ಯರು ಮಗುವನ್ನು ಆಸ್ಪತ್ರೆಗೆ ತರುವುದಕ್ಕಿಂತ ಮುಂಚೆಯೆ ಮೃತಪಟ್ಟಿದೆ ಎಂದು ಹೇಳಿದ್ದಾರೆ. ಮನೆಯಲ್ಲಿದ್ದ ಮಗುವಿನ ಸಹೋದರಿ ಮಗುವಿಗೆ ತಂದೆ ಹೊಡೆದಿದ್ದಾನೆ ಎಂದು ನಮಗೆ ತಿಳಿಸಿದ್ದಾರೆ. ಮಗು ಮನೆಯಲ್ಲಿ 50 ರೂ. ಕದ್ದಿದ್ದಾನೆ ಎಂದು ಆರೋಪಿಸಿ ಹೊಡೆದಿರುವುದನ್ನು ನಾವು ಕಂಡುಕೊಂಡಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಪ್ರಜಾಪತಿ ವಿರುದ್ಧ ಕೊಲೆ ಆರೋಪ ಹೊರಿಸಲಾಗಿದೆ. ಘಟನೆ ನಡೆದಾಗ ಮನೆಯಲ್ಲಿ ಮಗುವಿನ ತಾಯಿ ಇರಲಿಲ್ಲ ಎನ್ನಲಾಗಿದ್ದು, ಅವರನ್ನು ಕೂಡ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಚೀನಾ ಅತಿಕ್ರಮಣ ಪ್ರಶ್ನಿಸಲು ಬೀಜಿಂಗ್‌ ಜನತಾ ಪಾರ್ಟಿಗೆ ಹಿಂಜರಿಕೆ: ಬಿಜೆಪಿ ವಿರುದ್ಧ ಖರ್ಗೆ ವ್ಯಂಗ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಣಿಪುರ ಹಿಂಸಾಚಾರಕ್ಕೆ ಬಲಿಯಾದವರ ಬಗ್ಗೆ ಮೋದಿ ಸರ್ಕಾರಕ್ಕೆ ಸ್ವಲ್ಪವೂ ಸಹಾನುಭೂತಿ ಇಲ್ಲ: ಮಲ್ಲಿಕಾರ್ಜುನ ಖರ್ಗೆ

0
ಮಣಿಪುರದ ಪರಿಸ್ಥಿತಿಯ ಬಗ್ಗೆ ಮೋದಿ ಸರಕಾರ ನಿರಾಸಕ್ತಿಯನ್ನು ಹೊಂದಿದ್ದು, ಪಶ್ಚಾತ್ತಾಪವಿಲ್ಲದಂತೆ ವರ್ತಿಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ನಡೆಸಿದೆ. ಈ ಕುರಿತು ಎಕ್ಸ್‌ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...