Homeಕರ್ನಾಟಕಮೈಸೂರು: ದಲಿತ ಹುಡುಗನನ್ನು ಪ್ರೀತಿಸಿದ್ದಕ್ಕೆ ಮಗಳನ್ನೆ ಕತ್ತುಹಿಸುಕಿ ಕೊಂದ ತಂದೆ

ಮೈಸೂರು: ದಲಿತ ಹುಡುಗನನ್ನು ಪ್ರೀತಿಸಿದ್ದಕ್ಕೆ ಮಗಳನ್ನೆ ಕತ್ತುಹಿಸುಕಿ ಕೊಂದ ತಂದೆ

- Advertisement -
- Advertisement -

ದಲಿತ ಸಮುದಾಯದ ಹುಡುಗನನ್ನು ಪ್ರೀತಿಸಿದ್ದಕ್ಕಾಗಿ 17 ವರ್ಷದ ಬಾಲಕಿಯನ್ನು ಆಕೆಯ ತಂದೆಯೆ ಕತ್ತು ಹಿಸುಕಿ ಕೊಂದಿರುವ ಹೀನಾಯ ಘಟನೆ ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದಲ್ಲಿ ಸಂಭವಿಸಿದೆ. ಮಗಳನ್ನು ಕೊಂದ ಬಂತರ ಆರೋಪಿ ಠಾಣೆಗೆ ತೆರಳಿ ಪೊಲೀಸರ ಮುಂದೆ ಶರಣಾಗಿದ್ದಾನೆ.

ಪಿರಿಯಾಪಟ್ಟಣದ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಒಕ್ಕಲಿಗ ಸಮುದಾಯಕ್ಕೆ ಸೇರಿದ ಬಾಲಕಿ, ಪಕ್ಕದ ಮೆಳ್ಳಹಳ್ಳಿ ಗ್ರಾಮದ ದಲಿತ ಸಮುದಾಯದ ಮಂಜು ಎಂಬ ಹುಡುಗನನ್ನು ಪ್ರೀತಿಸುತ್ತಿದ್ದರು. ಆದರೆ ಈ ಸಂಬಂಧಕ್ಕೆ ಹುಡುಗಿಯ ಕುಟುಂಬವು ತೀವ್ರವಾಗಿ ವಿರೋಧಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹುಡುಗನೊಂದಿಗೆ ಯಾವುದೇ ರೀತಿಯಲ್ಲಿ ಸಂಪರ್ಕ ಇಡಬಾರದು ಎಂದು ಕುಟುಂಬವು ಬಾಲಕಿಗೆ ಎಚ್ಚರಿಕೆ ನೀಡಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಬಾಲಕಿಯು ಪೋಷಕರ ವಿರುದ್ಧ ದೂರು ನೀಡಿದ್ದರು. ಹೀಗಾಗಿ ಪಿರಿಯಾಪಟ್ಟಣ ಪೊಲೀಸರು ಒಂದು ತಿಂಗಳ ಹಿಂದೆ ಮೈಸೂರಿನ ಸರ್ಕಾರಿ ಬಾಲಕಿಯರ ನಿಲಯಕ್ಕೆ ಬಾಲಕಿಯನ್ನು ಕಳುಹಿಸಿದ್ದರು.

ಇದನ್ನೂ ಓದಿ: ಉತ್ತರ ಪ್ರದೇಶ: ಪಬ್‌ಜಿ ಆಡುವುದನ್ನು ತಡೆದ ತಾಯಿಯನ್ನು ಕೊಲೆ ಮಾಡಿದ ಬಾಲಕ

ಇದರ ನಂತರ ಪೋಷಕರು ಹದಿನೈದು ದಿನಗಳ ಹಿಂದೆಯಷ್ಟೆ ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ (ಸಿಡಬ್ಲ್ಯುಸಿ) ಬಾಲಕಿತೆ ತೊಂದರೆ ನೀಡುವುದಿಲ್ಲ ಮತ್ತು ಅವರ ಶಿಕ್ಷಣಕ್ಕೆ ಅನುಕೂಲ ಮಾಡಿಕೊಡುವುದಾಗಿ ಭರವಸೆ ನೀಡಿ ಮನೆಗೆ ಕರೆತಂದಿದ್ದರು.

ಬಾಲಕಿಯನ್ನು ಮನೆಗೆ ಕರೆತಂದ ನಂತರ, ತಂದೆ ಸುರೇಶ್ ಮತ್ತು ತಾಯಿ ಬೇಬಿ ಸೇರಿದಂತೆ ಕುಟುಂಬ ಸದಸ್ಯರು ಹುಡುಗನೊಂದಿಗೆ ಯಾವುದೇ ಸಂಬಂಧವನ್ನು ಇಟ್ಟುಕೊಳ್ಳದಂತೆ ಮನವೊಲಿಸಲು ಪ್ರಯತ್ನಿಸಿದ್ದರು. ಆದರೆ ಬಾಲಕಿಯು ಮತ್ತೆ ಹುಡುಗನನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ, ಮಂಗಳವಾರ ಮುಂಜಾನೆ ಬಾಲಕಿ ಮತ್ತು ತಂದೆಯ ನಡುವೆ ಘರ್ಷಣೆ ಸಂಭವಿಸಿ, 2.30-3.00 ಗಂಟೆಯ ಸುಮಾರಿಗೆ ಆಕೆಯ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಬಾಲಕಿಯ ತಾಯಿ ಆಕೆಯ ಮೇಲೆ ನೀರು ಚಿಮುಕಿಸಿ ಬದುಕಿಸಲು ಯತ್ನಿಸಿದರಾದರೂ ಪ್ರಯೋಜನವಾಗಲಿಲ್ಲ. ನಂತರ ಪೋಷಕರು ಆಕೆಯ ಶವವನ್ನು ದ್ವಿಚಕ್ರ ವಾಹನದಲ್ಲಿ ಕೊಂಡೊಯ್ದು ಪಕ್ಕದ ಮೆಳ್ಳಹಳ್ಳಿ ಗ್ರಾಮಕ್ಕೆ ತೆರಳಿ ಶವವನ್ನು ರಸ್ತೆಬದಿ ಇಟ್ಟು ಮನೆಗೆ ಮರಳಿದ್ದಾರೆ.

ಇದನ್ನೂ ಓದಿ: ಕಾನ್ಪುರ ಘರ್ಷಣೆಯ 4 ದಿನಗಳ ನಂತರ ಪ್ರವಾದಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ನಾಯಕನ ಬಂಧನ

ಈ ಘಟನೆಯ ನಂತರ ಬಾಲಕಿಯ ತಂದೆ ಸುರೇಶ್ ಪಿರಿಯಾಪಟ್ಟಣ ಠಾಣೆಗೆ ತೆರಳಿ ಪೊಲೀಸರ ಮುಂದೆ ಶರಣಾಗಿದ್ದಾರೆ. ಪೊಲೀಸರು ಸುರೇಶ್ ಮತ್ತು ಆತನ ಪತ್ನಿ ಬೇಬಿಯನ್ನು ಬಂಧಿಸಿ ವಿಚಾರಣೆ ಮುಂದುವರೆಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ದಲಿತರು ಇನ್ನೆಷ್ಟು ದಿನ ರೋಗ ಪೀಡಿತ ಸಮಾಜದಲ್ಲಿ ನರಳಬೇಕೋ ಏನೋ, ಈ ಜನ ಮನುಷ್ಯರು ಅನ್ನಿಸಿಕೊಳ್ಳೋಕೆ ನಾಲಾಯಕ್ ಅನ್ನಿಸತ್ತೆ, ಒಬ್ಬರಿಗೆ ಜೀವ ಕೊಡಲು ಸಾಧ್ಯವಿಲ್ಲ ವೆಂದಮೇಲೆ ಇವರಿಗೆ ಜೀವ ತೆಗೆಯುವ ಅಧಿಕಾರವೆಲ್ಲಿದೇ? ಆ ಹೆಣ್ಣು ಮಗಳಿಗೆ ಅದ ಸಾವಿಗೆ ಕನಿಷ್ಠ ನ್ಯಾಯ ಅಂದರೆ ಆ ಪಾಪಿಯನ್ನು ಸಹ ಕತ್ತು ಹಿಸುಕಿ ಕೊಲ್ಲುವ ಶಿಕ್ಷೆ ವಿಧಿಸಬೇಕು.

  2. ಎಂಥಾ ಪಾಪಿಗಳು ಇವರು. ಜಾತಿಯ ವಿಷ ಎಷ್ಟರಮಟ್ಟಿಗೆ ಇವರೊಳಗೆ ಹರಿಯುತ್ತಿದೆ ಎಂಬುದನ್ನು ಈ ಘಟನೆ ಸಾಕ್ಷಿಕರೀಸುತ್ತದೆ. ಹೆತ್ತವರು ಕೊಲೆ ಮಾಡುವ ನಿರ್ದಯಿ ಕಾರ್ಯಕ್ಕೆ ಎಂದೂ ಕೈಹಾಕಬಾರದು. ಆಯ್ಕೆ ಮಾಡಿರುವವರನ್ನ ಹರಸಿ ಸುಮ್ಮನಿದ್ದುಬಿಡಬೇಕು.

  3. ಈಗ ಮಗಳನ್ನ ಕಳೆದುಕೊಂಡ ದುಃಖ ಯಾರು ಅನುಭವಿಸಬೇಕು ???

    ನೋವು ಹೆತ್ತ ತಾಯಿಗೆ ತಾನೇ ???

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...