Homeಕರ್ನಾಟಕಮೈಸೂರು: ದಲಿತ ಹುಡುಗನನ್ನು ಪ್ರೀತಿಸಿದ್ದಕ್ಕೆ ಮಗಳನ್ನೆ ಕತ್ತುಹಿಸುಕಿ ಕೊಂದ ತಂದೆ

ಮೈಸೂರು: ದಲಿತ ಹುಡುಗನನ್ನು ಪ್ರೀತಿಸಿದ್ದಕ್ಕೆ ಮಗಳನ್ನೆ ಕತ್ತುಹಿಸುಕಿ ಕೊಂದ ತಂದೆ

- Advertisement -
- Advertisement -

ದಲಿತ ಸಮುದಾಯದ ಹುಡುಗನನ್ನು ಪ್ರೀತಿಸಿದ್ದಕ್ಕಾಗಿ 17 ವರ್ಷದ ಬಾಲಕಿಯನ್ನು ಆಕೆಯ ತಂದೆಯೆ ಕತ್ತು ಹಿಸುಕಿ ಕೊಂದಿರುವ ಹೀನಾಯ ಘಟನೆ ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದಲ್ಲಿ ಸಂಭವಿಸಿದೆ. ಮಗಳನ್ನು ಕೊಂದ ಬಂತರ ಆರೋಪಿ ಠಾಣೆಗೆ ತೆರಳಿ ಪೊಲೀಸರ ಮುಂದೆ ಶರಣಾಗಿದ್ದಾನೆ.

ಪಿರಿಯಾಪಟ್ಟಣದ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಒಕ್ಕಲಿಗ ಸಮುದಾಯಕ್ಕೆ ಸೇರಿದ ಬಾಲಕಿ, ಪಕ್ಕದ ಮೆಳ್ಳಹಳ್ಳಿ ಗ್ರಾಮದ ದಲಿತ ಸಮುದಾಯದ ಮಂಜು ಎಂಬ ಹುಡುಗನನ್ನು ಪ್ರೀತಿಸುತ್ತಿದ್ದರು. ಆದರೆ ಈ ಸಂಬಂಧಕ್ಕೆ ಹುಡುಗಿಯ ಕುಟುಂಬವು ತೀವ್ರವಾಗಿ ವಿರೋಧಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹುಡುಗನೊಂದಿಗೆ ಯಾವುದೇ ರೀತಿಯಲ್ಲಿ ಸಂಪರ್ಕ ಇಡಬಾರದು ಎಂದು ಕುಟುಂಬವು ಬಾಲಕಿಗೆ ಎಚ್ಚರಿಕೆ ನೀಡಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಬಾಲಕಿಯು ಪೋಷಕರ ವಿರುದ್ಧ ದೂರು ನೀಡಿದ್ದರು. ಹೀಗಾಗಿ ಪಿರಿಯಾಪಟ್ಟಣ ಪೊಲೀಸರು ಒಂದು ತಿಂಗಳ ಹಿಂದೆ ಮೈಸೂರಿನ ಸರ್ಕಾರಿ ಬಾಲಕಿಯರ ನಿಲಯಕ್ಕೆ ಬಾಲಕಿಯನ್ನು ಕಳುಹಿಸಿದ್ದರು.

ಇದನ್ನೂ ಓದಿ: ಉತ್ತರ ಪ್ರದೇಶ: ಪಬ್‌ಜಿ ಆಡುವುದನ್ನು ತಡೆದ ತಾಯಿಯನ್ನು ಕೊಲೆ ಮಾಡಿದ ಬಾಲಕ

ಇದರ ನಂತರ ಪೋಷಕರು ಹದಿನೈದು ದಿನಗಳ ಹಿಂದೆಯಷ್ಟೆ ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ (ಸಿಡಬ್ಲ್ಯುಸಿ) ಬಾಲಕಿತೆ ತೊಂದರೆ ನೀಡುವುದಿಲ್ಲ ಮತ್ತು ಅವರ ಶಿಕ್ಷಣಕ್ಕೆ ಅನುಕೂಲ ಮಾಡಿಕೊಡುವುದಾಗಿ ಭರವಸೆ ನೀಡಿ ಮನೆಗೆ ಕರೆತಂದಿದ್ದರು.

ಬಾಲಕಿಯನ್ನು ಮನೆಗೆ ಕರೆತಂದ ನಂತರ, ತಂದೆ ಸುರೇಶ್ ಮತ್ತು ತಾಯಿ ಬೇಬಿ ಸೇರಿದಂತೆ ಕುಟುಂಬ ಸದಸ್ಯರು ಹುಡುಗನೊಂದಿಗೆ ಯಾವುದೇ ಸಂಬಂಧವನ್ನು ಇಟ್ಟುಕೊಳ್ಳದಂತೆ ಮನವೊಲಿಸಲು ಪ್ರಯತ್ನಿಸಿದ್ದರು. ಆದರೆ ಬಾಲಕಿಯು ಮತ್ತೆ ಹುಡುಗನನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ, ಮಂಗಳವಾರ ಮುಂಜಾನೆ ಬಾಲಕಿ ಮತ್ತು ತಂದೆಯ ನಡುವೆ ಘರ್ಷಣೆ ಸಂಭವಿಸಿ, 2.30-3.00 ಗಂಟೆಯ ಸುಮಾರಿಗೆ ಆಕೆಯ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಬಾಲಕಿಯ ತಾಯಿ ಆಕೆಯ ಮೇಲೆ ನೀರು ಚಿಮುಕಿಸಿ ಬದುಕಿಸಲು ಯತ್ನಿಸಿದರಾದರೂ ಪ್ರಯೋಜನವಾಗಲಿಲ್ಲ. ನಂತರ ಪೋಷಕರು ಆಕೆಯ ಶವವನ್ನು ದ್ವಿಚಕ್ರ ವಾಹನದಲ್ಲಿ ಕೊಂಡೊಯ್ದು ಪಕ್ಕದ ಮೆಳ್ಳಹಳ್ಳಿ ಗ್ರಾಮಕ್ಕೆ ತೆರಳಿ ಶವವನ್ನು ರಸ್ತೆಬದಿ ಇಟ್ಟು ಮನೆಗೆ ಮರಳಿದ್ದಾರೆ.

ಇದನ್ನೂ ಓದಿ: ಕಾನ್ಪುರ ಘರ್ಷಣೆಯ 4 ದಿನಗಳ ನಂತರ ಪ್ರವಾದಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ನಾಯಕನ ಬಂಧನ

ಈ ಘಟನೆಯ ನಂತರ ಬಾಲಕಿಯ ತಂದೆ ಸುರೇಶ್ ಪಿರಿಯಾಪಟ್ಟಣ ಠಾಣೆಗೆ ತೆರಳಿ ಪೊಲೀಸರ ಮುಂದೆ ಶರಣಾಗಿದ್ದಾರೆ. ಪೊಲೀಸರು ಸುರೇಶ್ ಮತ್ತು ಆತನ ಪತ್ನಿ ಬೇಬಿಯನ್ನು ಬಂಧಿಸಿ ವಿಚಾರಣೆ ಮುಂದುವರೆಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ದಲಿತರು ಇನ್ನೆಷ್ಟು ದಿನ ರೋಗ ಪೀಡಿತ ಸಮಾಜದಲ್ಲಿ ನರಳಬೇಕೋ ಏನೋ, ಈ ಜನ ಮನುಷ್ಯರು ಅನ್ನಿಸಿಕೊಳ್ಳೋಕೆ ನಾಲಾಯಕ್ ಅನ್ನಿಸತ್ತೆ, ಒಬ್ಬರಿಗೆ ಜೀವ ಕೊಡಲು ಸಾಧ್ಯವಿಲ್ಲ ವೆಂದಮೇಲೆ ಇವರಿಗೆ ಜೀವ ತೆಗೆಯುವ ಅಧಿಕಾರವೆಲ್ಲಿದೇ? ಆ ಹೆಣ್ಣು ಮಗಳಿಗೆ ಅದ ಸಾವಿಗೆ ಕನಿಷ್ಠ ನ್ಯಾಯ ಅಂದರೆ ಆ ಪಾಪಿಯನ್ನು ಸಹ ಕತ್ತು ಹಿಸುಕಿ ಕೊಲ್ಲುವ ಶಿಕ್ಷೆ ವಿಧಿಸಬೇಕು.

  2. ಎಂಥಾ ಪಾಪಿಗಳು ಇವರು. ಜಾತಿಯ ವಿಷ ಎಷ್ಟರಮಟ್ಟಿಗೆ ಇವರೊಳಗೆ ಹರಿಯುತ್ತಿದೆ ಎಂಬುದನ್ನು ಈ ಘಟನೆ ಸಾಕ್ಷಿಕರೀಸುತ್ತದೆ. ಹೆತ್ತವರು ಕೊಲೆ ಮಾಡುವ ನಿರ್ದಯಿ ಕಾರ್ಯಕ್ಕೆ ಎಂದೂ ಕೈಹಾಕಬಾರದು. ಆಯ್ಕೆ ಮಾಡಿರುವವರನ್ನ ಹರಸಿ ಸುಮ್ಮನಿದ್ದುಬಿಡಬೇಕು.

  3. ಈಗ ಮಗಳನ್ನ ಕಳೆದುಕೊಂಡ ದುಃಖ ಯಾರು ಅನುಭವಿಸಬೇಕು ???

    ನೋವು ಹೆತ್ತ ತಾಯಿಗೆ ತಾನೇ ???

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...