Homeಕರ್ನಾಟಕಮೈಸೂರು: ದಲಿತ ಹುಡುಗನನ್ನು ಪ್ರೀತಿಸಿದ್ದಕ್ಕೆ ಮಗಳನ್ನೆ ಕತ್ತುಹಿಸುಕಿ ಕೊಂದ ತಂದೆ

ಮೈಸೂರು: ದಲಿತ ಹುಡುಗನನ್ನು ಪ್ರೀತಿಸಿದ್ದಕ್ಕೆ ಮಗಳನ್ನೆ ಕತ್ತುಹಿಸುಕಿ ಕೊಂದ ತಂದೆ

- Advertisement -
- Advertisement -

ದಲಿತ ಸಮುದಾಯದ ಹುಡುಗನನ್ನು ಪ್ರೀತಿಸಿದ್ದಕ್ಕಾಗಿ 17 ವರ್ಷದ ಬಾಲಕಿಯನ್ನು ಆಕೆಯ ತಂದೆಯೆ ಕತ್ತು ಹಿಸುಕಿ ಕೊಂದಿರುವ ಹೀನಾಯ ಘಟನೆ ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದಲ್ಲಿ ಸಂಭವಿಸಿದೆ. ಮಗಳನ್ನು ಕೊಂದ ಬಂತರ ಆರೋಪಿ ಠಾಣೆಗೆ ತೆರಳಿ ಪೊಲೀಸರ ಮುಂದೆ ಶರಣಾಗಿದ್ದಾನೆ.

ಪಿರಿಯಾಪಟ್ಟಣದ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಒಕ್ಕಲಿಗ ಸಮುದಾಯಕ್ಕೆ ಸೇರಿದ ಬಾಲಕಿ, ಪಕ್ಕದ ಮೆಳ್ಳಹಳ್ಳಿ ಗ್ರಾಮದ ದಲಿತ ಸಮುದಾಯದ ಮಂಜು ಎಂಬ ಹುಡುಗನನ್ನು ಪ್ರೀತಿಸುತ್ತಿದ್ದರು. ಆದರೆ ಈ ಸಂಬಂಧಕ್ಕೆ ಹುಡುಗಿಯ ಕುಟುಂಬವು ತೀವ್ರವಾಗಿ ವಿರೋಧಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹುಡುಗನೊಂದಿಗೆ ಯಾವುದೇ ರೀತಿಯಲ್ಲಿ ಸಂಪರ್ಕ ಇಡಬಾರದು ಎಂದು ಕುಟುಂಬವು ಬಾಲಕಿಗೆ ಎಚ್ಚರಿಕೆ ನೀಡಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಬಾಲಕಿಯು ಪೋಷಕರ ವಿರುದ್ಧ ದೂರು ನೀಡಿದ್ದರು. ಹೀಗಾಗಿ ಪಿರಿಯಾಪಟ್ಟಣ ಪೊಲೀಸರು ಒಂದು ತಿಂಗಳ ಹಿಂದೆ ಮೈಸೂರಿನ ಸರ್ಕಾರಿ ಬಾಲಕಿಯರ ನಿಲಯಕ್ಕೆ ಬಾಲಕಿಯನ್ನು ಕಳುಹಿಸಿದ್ದರು.

ಇದನ್ನೂ ಓದಿ: ಉತ್ತರ ಪ್ರದೇಶ: ಪಬ್‌ಜಿ ಆಡುವುದನ್ನು ತಡೆದ ತಾಯಿಯನ್ನು ಕೊಲೆ ಮಾಡಿದ ಬಾಲಕ

ಇದರ ನಂತರ ಪೋಷಕರು ಹದಿನೈದು ದಿನಗಳ ಹಿಂದೆಯಷ್ಟೆ ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ (ಸಿಡಬ್ಲ್ಯುಸಿ) ಬಾಲಕಿತೆ ತೊಂದರೆ ನೀಡುವುದಿಲ್ಲ ಮತ್ತು ಅವರ ಶಿಕ್ಷಣಕ್ಕೆ ಅನುಕೂಲ ಮಾಡಿಕೊಡುವುದಾಗಿ ಭರವಸೆ ನೀಡಿ ಮನೆಗೆ ಕರೆತಂದಿದ್ದರು.

ಬಾಲಕಿಯನ್ನು ಮನೆಗೆ ಕರೆತಂದ ನಂತರ, ತಂದೆ ಸುರೇಶ್ ಮತ್ತು ತಾಯಿ ಬೇಬಿ ಸೇರಿದಂತೆ ಕುಟುಂಬ ಸದಸ್ಯರು ಹುಡುಗನೊಂದಿಗೆ ಯಾವುದೇ ಸಂಬಂಧವನ್ನು ಇಟ್ಟುಕೊಳ್ಳದಂತೆ ಮನವೊಲಿಸಲು ಪ್ರಯತ್ನಿಸಿದ್ದರು. ಆದರೆ ಬಾಲಕಿಯು ಮತ್ತೆ ಹುಡುಗನನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ, ಮಂಗಳವಾರ ಮುಂಜಾನೆ ಬಾಲಕಿ ಮತ್ತು ತಂದೆಯ ನಡುವೆ ಘರ್ಷಣೆ ಸಂಭವಿಸಿ, 2.30-3.00 ಗಂಟೆಯ ಸುಮಾರಿಗೆ ಆಕೆಯ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಬಾಲಕಿಯ ತಾಯಿ ಆಕೆಯ ಮೇಲೆ ನೀರು ಚಿಮುಕಿಸಿ ಬದುಕಿಸಲು ಯತ್ನಿಸಿದರಾದರೂ ಪ್ರಯೋಜನವಾಗಲಿಲ್ಲ. ನಂತರ ಪೋಷಕರು ಆಕೆಯ ಶವವನ್ನು ದ್ವಿಚಕ್ರ ವಾಹನದಲ್ಲಿ ಕೊಂಡೊಯ್ದು ಪಕ್ಕದ ಮೆಳ್ಳಹಳ್ಳಿ ಗ್ರಾಮಕ್ಕೆ ತೆರಳಿ ಶವವನ್ನು ರಸ್ತೆಬದಿ ಇಟ್ಟು ಮನೆಗೆ ಮರಳಿದ್ದಾರೆ.

ಇದನ್ನೂ ಓದಿ: ಕಾನ್ಪುರ ಘರ್ಷಣೆಯ 4 ದಿನಗಳ ನಂತರ ಪ್ರವಾದಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ನಾಯಕನ ಬಂಧನ

ಈ ಘಟನೆಯ ನಂತರ ಬಾಲಕಿಯ ತಂದೆ ಸುರೇಶ್ ಪಿರಿಯಾಪಟ್ಟಣ ಠಾಣೆಗೆ ತೆರಳಿ ಪೊಲೀಸರ ಮುಂದೆ ಶರಣಾಗಿದ್ದಾರೆ. ಪೊಲೀಸರು ಸುರೇಶ್ ಮತ್ತು ಆತನ ಪತ್ನಿ ಬೇಬಿಯನ್ನು ಬಂಧಿಸಿ ವಿಚಾರಣೆ ಮುಂದುವರೆಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ದಲಿತರು ಇನ್ನೆಷ್ಟು ದಿನ ರೋಗ ಪೀಡಿತ ಸಮಾಜದಲ್ಲಿ ನರಳಬೇಕೋ ಏನೋ, ಈ ಜನ ಮನುಷ್ಯರು ಅನ್ನಿಸಿಕೊಳ್ಳೋಕೆ ನಾಲಾಯಕ್ ಅನ್ನಿಸತ್ತೆ, ಒಬ್ಬರಿಗೆ ಜೀವ ಕೊಡಲು ಸಾಧ್ಯವಿಲ್ಲ ವೆಂದಮೇಲೆ ಇವರಿಗೆ ಜೀವ ತೆಗೆಯುವ ಅಧಿಕಾರವೆಲ್ಲಿದೇ? ಆ ಹೆಣ್ಣು ಮಗಳಿಗೆ ಅದ ಸಾವಿಗೆ ಕನಿಷ್ಠ ನ್ಯಾಯ ಅಂದರೆ ಆ ಪಾಪಿಯನ್ನು ಸಹ ಕತ್ತು ಹಿಸುಕಿ ಕೊಲ್ಲುವ ಶಿಕ್ಷೆ ವಿಧಿಸಬೇಕು.

  2. ಎಂಥಾ ಪಾಪಿಗಳು ಇವರು. ಜಾತಿಯ ವಿಷ ಎಷ್ಟರಮಟ್ಟಿಗೆ ಇವರೊಳಗೆ ಹರಿಯುತ್ತಿದೆ ಎಂಬುದನ್ನು ಈ ಘಟನೆ ಸಾಕ್ಷಿಕರೀಸುತ್ತದೆ. ಹೆತ್ತವರು ಕೊಲೆ ಮಾಡುವ ನಿರ್ದಯಿ ಕಾರ್ಯಕ್ಕೆ ಎಂದೂ ಕೈಹಾಕಬಾರದು. ಆಯ್ಕೆ ಮಾಡಿರುವವರನ್ನ ಹರಸಿ ಸುಮ್ಮನಿದ್ದುಬಿಡಬೇಕು.

  3. ಈಗ ಮಗಳನ್ನ ಕಳೆದುಕೊಂಡ ದುಃಖ ಯಾರು ಅನುಭವಿಸಬೇಕು ???

    ನೋವು ಹೆತ್ತ ತಾಯಿಗೆ ತಾನೇ ???

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...