Homeಮುಖಪುಟಗೆಳತಿಗಾಗಿ ಲಿಂಗ ಪರಿವರ್ತನೆಗೆ ಒಳಗಾಗಿದ್ದ ಮಹಿಳಾ ಟೆಕ್ಕಿ.. ಆಕೆಯನ್ನೆ ಕೊಂದಿದ್ಯಾಕೆ?

ಗೆಳತಿಗಾಗಿ ಲಿಂಗ ಪರಿವರ್ತನೆಗೆ ಒಳಗಾಗಿದ್ದ ಮಹಿಳಾ ಟೆಕ್ಕಿ.. ಆಕೆಯನ್ನೆ ಕೊಂದಿದ್ಯಾಕೆ?

- Advertisement -
- Advertisement -

ಮಹಿಳಾ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರನ್ನು ಆಕೆಯ ಹುಟ್ಟುಹಬ್ಬದ ಮುನ್ನಾದಿನವೇ ಬೆಂಕಿಹಚ್ಚಿ ಸಜೀವ ದಹನ ಮಾಡಿರುವ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ. ಆಕೆಯನ್ನು ಮದುವೆಯಾಗಲು ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ (ಹೆಣ್ಣಿನಿಂದ ಗಂಡಾಗಿದ್ದ) ಒಳಗಾಗಿದ್ದ ಆಕೆಯ ಮಾಜಿ ಸಹಪಾಠಿಯೇ ಕೊಲೆ ಮಾಡಿದ್ದು, ಟೆಕ್ಕಿಯನ್ನು ಸರಪಳಿಯಿಂದ ಬಂಧಿಸಿ, ಬ್ಲೇಡ್‌ನಿಂದ ಹಲ್ಲೆ ನಡೆಸಿದ ನಂತರ ಜೀವಂತವಾಗಿ ಸುಟ್ಟು ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಚೆನ್ನೈನ ದಕ್ಷಿಣ ಉಪನಗರವಾದ ಕೆಲಂಬಾಕ್ಕಂ ಬಳಿಯ ತಲಂಬೂರ್ನಲ್ಲಿ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ಪೊಲೀಸ್ ವರದಿಗಳ ಪ್ರಕಾರ, 26 ವರ್ಷದ ವೆಟ್ರಿಮಾರನ್ ಅಲಿಯಾಸ್ ಪಾಂಡಿ ಮಹೇಶ್ವರಿ, ಗೆಳತಿಗೆ ಹುಟ್ಟುಹಬ್ಬದ ಸರ್ಪ್ರೈಸ್ ನೀಡುವ ನೆಪದಲ್ಲಿ, 24 ವರ್ಷದ ಟೆಕ್ಕಿ ಆರ್.ನಂದಿನಿಯ ಕಣ್ಣಿಗೆ ಪಟ್ಟಿ ಕಟ್ಟಿ ಸರಪಳಿಯಿಂದ ಬಿಗಿಯಲಾಗಿದೆ. ನಂತರ, ಆಕೆಯ ಮೇಲೆ ಬ್ಲೇಡ್‌ನಿಂದ ಅಮಾನುಷವಾಗಿ ಹಲ್ಲೆ ನಡೆಸಿ, ಪೆಟ್ರೋಲ್ ಸುರಿದು ಜೀವಂತವಾಗಿ ಸುಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮಧುರೈ ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಮೃತೆ ನಂದಿನಿ, ಚೆನ್ನೈನಲ್ಲಿ ತನ್ನ ಸಂಬಂಧಿಕರೊಂದಿಗೆ ನೆಲೆಸಿದ್ದರು. ಆಕೆಯ ಗೆಳತಿ ಪಾಂಡಿ ಮಹೇಶ್ವರಿ ತನ್ನ ಹೆಸರನ್ನು ಈಗ ವೆಟ್ರಿಮಾರನ್ ಎಂದು ಬದಲಿಸಿಕೊಂಡಿದ್ದಾರೆ. ಹುಟ್ಟುಹಬ್ಬದ ಆಚರಣೆಯ ನೆಪದಲ್ಲಿ ನಂದಿನಿಯನ್ನು ಕರೆಸಿಕೊಂಡು ಚಿತ್ರ ಹಿಂಸೆ ನೀಡಿ ಕೊಲೆ ಮಾಡಿದ್ದಾರೆ.

‘ಅವರು ಕಾಲೇಜು ಓದುವಾಗಲೇ ಸ್ನೇಹಿತರಾಗಿದ್ದರು ಎನ್ನಲಾಗಿದ್ದು, ಚೆನ್ನೈಗೆ ಬಂದು ಕೆಲ ದಿನ ಒಟ್ಟಿಗೆ ವಾಸಿಸುತ್ತಿದ್ದರು. ಕೊಲೆ ಸಂದರ್ಭದಲ್ಲಿ ಯಾವುದೇ ಲೈಂಗಿಕ ದೌರ್ಜನ್ಯದ ಸುಳಿವು ಇನ್ನೂ ಕಂಡುಬಂದಿಲ್ಲ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದ್ದು, ವೆಟ್ರಿಮಾರನ್ ಈ ಹಿಂದೆ ಹಿಂಸಾತ್ಮಕ ಪ್ರವೃತ್ತಿಯನ್ನು ಪ್ರದರ್ಶಿಸಿದ್ದರೆ ಎಂಬ ಬಗ್ಗೆ ತಿಳಿದುಬಂದಿಲ್ಲ; ತನಿಖೆ ನಡೆಯುತ್ತಿದೆ ಎಂದು ತಾಂಬರಂ ಪೊಲೀಸ್ ಕಮಿಷನರ್ ಅಮಲ್ರಾಜ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇಬ್ಬರ ನಡುವಿನ ಸಂಬಂಧ ಹಳಸಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಮಧುರೈನಲ್ಲಿ ಒಟ್ಟಿಗೆ ಓದಿದ ನಂದಿನಿ ಹಾಗೂ ವೆಟ್ರಿಮಾರನ್, ಲಿಂಗ ಬದಲಾವಣೆಯ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರವೂ ಸ್ನೇಹವನ್ನು ಮುಂದುವರಿಸಿದರು. ಇವರಿಬ್ಬರೂ ತೊರೈಪಾಕ್ಕಂನಲ್ಲಿರುವ ಖಾಸಗಿ ಐಟಿ ಸಂಸ್ಥೆಯಲ್ಲಿ ಒಟ್ಟಿಗೆ ಕೆಲಸ ಮಾಡಿದ್ದು, ಅವರ ಸಂಬಂಧವನ್ನು ಮತ್ತಷ್ಟು ಹತ್ತಿರವಾಗಿಸಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ನಂದಿನಿ ಬೇರೆ ಯುವಕರೊಂದಿಗೆ ಆಸಕ್ತಿ ಬೆಳೆಸಿಕೊಂಡಿದ್ದಳು ಎಂದು ವೆಟ್ರಿಮಾರನ್ ಅನುಮಾನಕ್ಕೆ ಒಳಗಾಗಿದ್ದು, ಈ ಭೀಕರ ಕೃತ್ಯದ ಹಿಂದಿನ ಉದ್ದೇಶ ಎನ್ನಲಾಗಿದ್ದು, ವೆಟ್ರಿಮಾರನ್ ಅವರು ನಂದಿನಿಯ ಹುಟ್ಟುಹಬ್ಬದ ಆಚರಣೆಗೆ ಆಹ್ವಾನಿಸಿದ್ದಾರೆ. ವೆಟ್ರಿಮಾರನ್ ಬೆಂಕಿ ಹಚ್ಚಿದ ನಂತರ ನಂದಿನಿ ಇನ್ನೂ ಸರಪಳಿಯಲ್ಲಿ ಸುಡುತ್ತಿರುವುದನ್ನು ಕಂಡ ಸ್ಥಳೀಯ ನಿವಾಸಿಗಳು ತಕ್ಷಣ ಆಸ್ಪತ್ರೆಗೆ ಸಾಗಿಸಿದ್ದು, ಅಲ್ಲಿ ಆಕೆ ಸಾವನ್ನಪ್ಪಿದ್ದಾಳೆ.

ಕೊಲೆ ಆರೋಪ ಎದುರಿಸುತ್ತಿರುವ ವೆಟ್ರಿಮಾರನ್ನನ್ನು ಪೊಲೀಸರು ಕೂಡಕೇ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...