Homeರಾಷ್ಟ್ರೀಯನದಿ ನೀರು ಕುಡಿದ ಕೆಲವೇ ದಿನಗಳಲ್ಲಿ ಹೊಟ್ಟೆ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದ ಪಂಜಾಬ್ ಸಿಎಂ

ನದಿ ನೀರು ಕುಡಿದ ಕೆಲವೇ ದಿನಗಳಲ್ಲಿ ಹೊಟ್ಟೆ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದ ಪಂಜಾಬ್ ಸಿಎಂ

- Advertisement -
- Advertisement -

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಹೊಟ್ಟೆಯ ಸೋಂಕಿನಿಂದ ದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ನಡುವೆ ಅವರು ಕುಲುಷಿತ ನೀರನ್ನು ಕುಡಿದ್ದರಿಂದ ಅನಾರೋಗ್ಯಕ್ಕೆ ಈಡಾಗಿದ್ದಾರೆ ಎಂದು ಆರೋಪಗಳನ್ನು ಮಾಡಲಾಗಿದ್ದು, ಅವರು ನದಿಯೊಂದರಿಂದ ನೀರು ಕುಡಿಯುತ್ತಿರುವ ವಿಡಿಯೊ ವೈರಲ್ ಆಗಿದೆ.

ನದಿಯ ನೀರನ್ನು ಲೋಟವೊಂದರಲ್ಲಿ ಎತ್ತಿ ಕುಡಿಯುಯತ್ತಿರುವ ವೀಡಿಯೊವನ್ನು ಆಮ್ ಆದ್ಮಿ ಪಾರ್ಟಿ ಪಂಜಾಬ್ ಟ್ವೀಟ್ ಮಾಡಿದೆ. ಅದರಲ್ಲಿ ಬೆಂಬಲಿಗರ ಜಯಘೋಷಗಳ ನಡುವೆ ಮುಖ್ಯಮಂತ್ರಿ ಮಾನ್‌ ಅವರು ನದಿಯಿಂದ ಒಂದು ಲೋಟ ನೀರನ್ನು ಕುಡಿಯುತ್ತಿರುವುದು ಕಾಣಬಹುದಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆದರೆ ಅವರ ಪಕ್ಷದ ನಾಯಕರು, ಮುಖ್ಯಮಂತ್ರಿ ನದಿಯ ನೀರು ಕುಡಿಯುತ್ತಿರುವುದಕ್ಕೂ, ಅವರ ಆರೋಗ್ಯದ ತೊಂದರೆಗೂ ಯಾವುದೇ ಸಂಬಂಧ ಇಲ್ಲ ಎಂದು ಹೇಳಿದ್ದಾರೆ. ಅವರು ಆಸ್ಪತ್ರೆಗೆ ರೆಗ್ಯುಲರ್‌‌ ತಪಾಸಣೆಗೆಂದು ಹೋಗಿದ್ದರು ಎಂದು ಅವರು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ: ಪಂಜಾಬ್‌: ಉದ್ಯಾನದಲ್ಲಿದ್ದ ಗಾಂಧಿ ಪ್ರತಿಮೆ ಧ್ವಂಸ

ಎಎಪಿಯ ಪಂಜಾಬ್ ಘಟಕವು ಮಾಡಿದ ವೀಡಿಯೊದಲ್ಲಿ,“ಗುರು ನಾನಕ್ ಸಾಹಿಬ್ ಅವರು ಪಾದ ಇಟ್ಟ ನಾಡು ಸುಲ್ತಾನಪುರ ಲೋಧಿಯಲ್ಲಿ ಸಿಎಂ ಭಗವಂತಮಾನ್‌ ಪವಿತ್ರ ನೀರು ಕುಡಿಯುತ್ತಿದ್ದಾರೆ. ರಾಜ್ಯಸಭಾ ಸದಸ್ಯ ಸಂತ ಸಿಚೆವಾಲ್ ಅವರು ಪವಿತ್ರ ಸ್ಥಳವನ್ನು ಸ್ವಚ್ಛಗೊಳಿಸುವ ಕಾರ್ಯವನ್ನು ಕೈಗೊಂಡಿದ್ದಾರೆ” ಎಂದು ಬರೆದಿದೆ.

ವಿವಾದಿತ ವಿಡಿಯೋ ಕಳೆದ ಭಾನುವಾರದ್ದಾಗಿದ್ದು, ಮುಖ್ಯಮಂತ್ರಿ ಮಾನ್ ಅವರು ಖ್ಯಾತ ಪರಿಸರವಾದಿ, ರಾಜ್ಯಸಭಾ ಸಂಸದ ಬಾಬಾ ಬಲ್ಬೀರ್ ಸಿಂಗ್ ಸೀಚೆವಾಲ್ ಅವರು ಆಯೋಜಿಸಿದ್ದ ಕಾಳಿಬೀನ್ ನದಿಯ ಸ್ವಚ್ಛತೆಯ 22 ನೇ ವಾರ್ಷಿಕೋತ್ಸವದಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ಬಿಜೆಪಿ ಸೇರಲಿರುವ ಪಂಜಾಬ್‌ ಮಾಜಿ ಸಿಎಂ ಅಮರಿಂದರ್‌ ಸಿಂಗ್‌!

ಪಂಜಾಬ್‌ನ ಸುಲ್ತಾನ್‌ಪುರ ಲೋಧಿಯಲ್ಲಿರುವ ಈ ನದಿಯು ಸಿಖ್ಖರಿಗೆ ಪವಿತ್ರವಾಗಿದ್ದು, ಅಲ್ಲಿ ಮುಖ್ಯಮಂತ್ರಿ ನದಿಯ ನೀರನ್ನು ಕುಡಿದಿದ್ದರು. ನದಿಗೆ ಪಟ್ಟಣಗಳು ​​ಮತ್ತು ಹಳ್ಳಿಗಳ ಚರಂಡಿಯ ತ್ಯಾಜ್ಯಗಳು ಸೇರುತ್ತದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಈ ನೀರನ್ನು ಪಂಜಾಬ್ ಮುಖ್ಯಮಂತ್ರಿ ಯಾವುದೇ ಹಿಂಜರಿಕೆಯಿಲ್ಲದೆ ಕುಡಿದಿದ್ದರು.

ಇದಾಗಿ ಕೆಲವು ದಿನಗಳ ನಂತರ ಮುಖ್ಯಮಂತ್ರಿ ಮಾನ್ ಅವರು ದೆಹಲಿಯ ಅಪೋಲೋ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ನದಿಗಳು ಮತ್ತು ಚರಂಡಿಗಳನ್ನು ಸ್ವಚ್ಛಗೊಳಿಸಲು ರಾಜ್ಯಾದ್ಯಂತ ಅಭಿಯಾನವನ್ನು ಪ್ರಾರಂಭಿಸುವುದಾಗಿ ಪಂಜಾಬ್ ಘೋಷಿಸಿದೆ.

ಕಾಳಿಬೀನ್ ನದಿಯನ್ನು ಸ್ವಚ್ಛಗೊಳಿಸಲು ಸಂತ ಬಾಬಾ ಬಲ್ಬೀರ್ ಸಿಂಗ್ ಸೀಚೆವಾಲ್ ಮಾಡಿದ ಪ್ರಯತ್ನಗಳನ್ನು ಶ್ಲಾಘಿಸಿದ ಮುಖ್ಯಮಂತ್ರಿ, ಸುಮಾರು 22 ವರ್ಷಗಳ ಹಿಂದೆ ತೆಗೆದುಕೊಂಡ ಐತಿಹಾಸಿಕ ಉಪಕ್ರಮವು ಗುರುನಾನಕ್ ದೇವ್ ಅವರು ಸ್ನಾನ ಮಾಡುತ್ತಿದ್ದ ಪವಿತ್ರ ನದಿಯನ್ನು ಸ್ವಚ್ಛಗೊಳಿಸುವಲ್ಲಿ ಶೀಘ್ರವಾಗಿ ಕಾರ್ಯನಿರ್ವಹಿಸಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ಪಂಜಾಬ್ ಉಪಚುನಾವಣೆ: ಸಿಎಂ ಭಗವಂತ್ ಮಾನ್ ಪ್ರತಿನಿಧಿಸುತ್ತಿದ್ದ ಕ್ಷೇತ್ರ ಕಳೆದುಕೊಂಡ ಆಪ್

ಮಹಾನ್ ಗುರುಗಳ ಪರಂಪರೆಯನ್ನು ಮುಂದುವರಿಸಲು ಇಂತಹ ಪ್ರಯತ್ನಗಳನ್ನು ಸಾಮೂಹಿಕ ಮಟ್ಟದಲ್ಲಿ ಪುನರಾವರ್ತಿಸುವ ಅಗತ್ಯವಿದೆ ಎಂದು ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...